Homeರಾಜಕೀಯಹೈ.ಕ.: ಹೈರಾಣಾದ ಜನರು, ಆರಾಮಾಗಿರೋ ಅಧಿಕಾರಸ್ಥರು

ಹೈ.ಕ.: ಹೈರಾಣಾದ ಜನರು, ಆರಾಮಾಗಿರೋ ಅಧಿಕಾರಸ್ಥರು

- Advertisement -
- Advertisement -

 ಭೀಮನಗೌಡ ಕಾಶಿರೆಡ್ಡಿ, ಕಂಪ್ಲಿ |

ಕುರಿತೋದದೆಯುಂ ಕಾವ್ಯ ಪ್ರಯೋಗ ಪರಿಣಿತಮತಿಗಳ್ ಎಂದು ಅಮೋಘ ವರ್ಷನಿಂದ ಬಣ್ಣಿಸಲ್ಪಟ್ಟ ಜನಪದವನ್ನೊಳಗೊಂಡ ಹೈದರಾಬಾದ್ ಕರ್ನಾಟಕದ ವಸ್ತುಸ್ಥಿತಿ ತಿಳಿಯಬೇಕೆಂದರೆ ನಂಜುಡಪ್ಪ ವರದಿಯತ್ತ ಒಮ್ಮೆ ಕಣ್ಣಾಡಿಸಬೇಕು. ಈ ವರದಿಯ ಪ್ರಕಾರ ಹೈ.ಕ.ದ ಒಟ್ಟು 31 ತಾಲೂಕುಗಳಲ್ಲಿ 21 ಅತ್ಯಂತ ಹಿಂದುಳಿದ, 5 ಅತಿ ಹಿಂದುಳಿದ, 2 ಹಿಂದುಳಿದ ಹಾಗು ಕೇವಲ 3 ಮುಂದುವರಿದ ತಾಲೂಕುಗಳಿವೆ. ಈ ಹಿಂದೆ ಹೈದರಾಬಾದ್ ನಿಜಾಮರ ಕಾಲದಲ್ಲಿ ಫ್ಯೂಡಲ್ ಲ್ಯಾಂಡ್ ಲಾರ್ಡ್‍ಗಳ ದಬ್ಬಾಳಿಕೆಗೊಳಗಾಗಿದ್ದ ಈ ಭಾಗದ ಜನ ಸ್ವಾತಂತ್ರ್ಯವನ್ನೂ ಒಂದು ವರ್ಷ ತಡವಾಗಿಯೇ ಪಡೆದರು.ನಂತರ1956 ರಲ್ಲಿ ಕರ್ನಾಟಕ ಏಕೀಕರಣದ ಫಲವಾಗಿ ಮೈಸೂರು ರಾಜ್ಯಕ್ಕೆ ಸೇರ್ಪಡೆಯಾದರು. ಹೈ.ಕರ್ನಾಟಕದ ಆರ್ಥಿಕತೆ ಮುಖ್ಯವಾಗಿ ಕೃಷಿಯನ್ನು ಅವಲಂಬಿಸಿದೆ. ಕೃಷ್ಣಾ ಮತ್ತು ತುಂಗಭದ್ರಾ ನದಿಗಳ ಮಧ್ಯದ ಫಲವತ್ತಾದ ದೋ- ಅಬ್ ಪ್ರದೇಶವನ್ನೊಳಗೊಂಡಿದ್ದರೂ ಮಳೆಯ ಕೊರತೆ, ಸತತ ಬರಗಾಲ ಹಾಗೂ ನೀರಾವರಿ ಯೋಜನೆಗಳ ಕುಂಟುವಿಕೆಯಿಂದಾಗಿ ನಿರೀಕ್ಷಿತ ಪ್ರಮಾಣದ ಕೃಷಿ ಉತ್ಪಾದನೆ ಸಾಧ್ಯವಾಗದೇ ಜನ ಪದೇಪದೇ ಮುಂಬಯಿ, ಪುಣೆ ಹಾಗೂ ಗೋವಾಗಳಿಗೆ ಗುಳೆ ಹೋಗುವಂತಾಗಿದೆ.ಬ್ರಿಟಿಷ್ ಆಳ್ವಿಕೆಯಲ್ಲಿ ಪ್ರಾರಂಭವಾದ ತುಂಗಭದ್ರಾ ಆಣೆಕಟ್ಟು ಹೊರತುಪಡಿಸಿದರೆ ಸ್ವಾತಂತ್ರ್ಯ ಬಂದ ಐದು ದಶಕಗಳಲ್ಲಿ ಒಂದೇ ಒಂದು ನೀರಾವರಿ ಯೋಜನೆಯೂ ಅನುಷ್ಠಾನಕ್ಕೆ ಬರಲಿಲ್ಲ. ಆದರೆ ಹಳೇ ಮೈಸೂರು ಭಾಗದಲ್ಲಿ ಕಬಿನಿ,ಹೇಮಾವತಿಯಂಥಾ ಹಲವಾರು ನೀರಾವರಿ ಯೋಜನೆಗಳು ಯಶಸ್ವಿಯಾಗಿ ಜಾರಿಗೆ ಬಂದವು.ಕಳೆದೆರಡು ದಶಕಗಳಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಅಲ್ಪ ಸ್ವಲ್ಪ ಅನುಷ್ಠಾನದಿಂದಾಗಿ ಐದಾರು ತಾಲ್ಲೂಕಿನ ರೈತರು ಇತ್ತೀಚೆಗೆ ನೀರಾವರಿಯ ರುಚಿ ನೋಡುತ್ತಿದ್ದಾರೆ.
ಇನ್ನು ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದ್ದು , ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವೃತ್ತಿಪರ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಸರ್ಕಾರ ನಿರಾಸಕ್ತಿ ತೋರಿದ ಕಾರಣ ಈ ಭಾಗದ ವಿದ್ಯಾರ್ಥಿಗಳು ಹೆಚ್ಚಿನ ಶಿಕ್ಷಣಕ್ಕಾಗಿ ಹೈದರಾಬಾದ್, ಧಾರವಾಡ, ಬೆಳಗಾವಿ ಹಾಗೂ ಬೆಂಗಳೂರಿಗೆ ಹೋಗುವ ಪರಿಸ್ಥಿತಿ ಇತ್ತೀಚಿನವರೆಗೂ ಇತ್ತು.
ರಾಜಕೀಯವಾಗಿ ಹೇಳುವುದಾದರೆ ವೀರೇಂದ್ರ ಪಾಟೀಲ್ ಹಾಗೂ ಧರಂಸಿಂಗ್ ಈ ಭಾಗದಿಂದ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿಯೂ ಸಹ ಇಲ್ಲಿನ ಜನ ಪ್ರತಿನಿಧಿಗಳ ಇಚ್ಛಾಶಕ್ತಿ ಮತ್ತು ಬದ್ಧತೆಯ ಕೊರತೆಯಿಂದಾಗಿ ಯಾವುದೇ ಮಹತ್ವದ ಯೋಜನೆಗಳನ್ನು ರೂಪಿಸಲಾಗಲಿಲ್ಲ.
ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಎಂಬ ನಾಮಕಾವಸ್ಥೆ ಸಂಸ್ಥೆಯನ್ನು ಸ್ಥಾಪಿಸಿದರೂ ಸರಿಯಾದ ಮಾರ್ಗಸೂಚಿಗಳಿಲ್ಲದೆ ಕೇವಲ ರಸ್ತೆ, ಕಟ್ಟಡಗಳನ್ನು ನಿರ್ಮಿಸುವ ಇನ್ನೊಂದು ಏಜೆನ್ಸಿಯಾಗಿ ಮಾರ್ಪಾಡಾಯಿತು. ರಾಜ್ಯದಲ್ಲಿರುವ ನಾಲ್ಕು ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಎರಡು ಹೈದರಾಬಾದ್ ಕರ್ನಾಟಕದಲ್ಲಿವೆ.(ಬಳ್ಳಾರಿ ಮತ್ತು ರಾಯಚೂರು) ಬೇಸಿಗೆಯಲ್ಲಿ 42 ಡಿಗ್ರಿಗೂ ಅಧಿಕ ತಾಪಮಾನವಿರುವ ಈ ಜಿಲ್ಲೆಗಳಲ್ಲಿ ಇನ್ನೂ ಎರಡು ಉಷ್ಣ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಿದರೂ ಜನರು ಹಲ್ಲು ಕಚ್ಚಿ ಸಹಿಸಿಕೊಂಡು ಹೋಗುತ್ತಾರೆ.( ಮೈಸೂರಿನ ಚಾಮಲಾಪುರದ ಉಷ್ಣ ವಿದ್ಯುತ್ ಸ್ಥಾವರಕ್ಕೆ ಬಂದ ಪ್ರತಿರೋಧವನ್ನು ನೆನಪಿಸಿಕೊಳ್ಳಿ) ಬಹುಶಃ ಕಲ್ಯಾಣ ಕರ್ನಾಟಕದ ಶರಣರು ಮತ್ತು ತತ್ವಪದಕಾರರ ವಾರಸತ್ವದಿಂದಾಗಿ ಈ ಭಾಗದ ಜನರು ಪಡೆದುಕೊಂಡಿರುವ ಸಹಿಷ್ಣುತೆ ಹಾಗೂ ಸ್ಥಿತಪ್ರಜ್ಞತೆಗಳೇ ಇಲ್ಲಿನ ಜನಪ್ರತಿನಿಧಿಗಳಿಗೆ ವರವಾಗಿ ಪರಿಣಮಿಸಿವೆ. ಹಾಗಾಗಿ ಅವರು ಪರ್ಸೆಂಟೇಜ್ ಅಭಿವೃದ್ಧಿಯಲ್ಲಿ ಮುಳುಗಿ ತಮ್ಮ ಮಕ್ಕಳು, ಮೊಮ್ಮಕ್ಕಳು ಹಾಗೂ ಮರಿ ಮೊಮ್ಮಕ್ಕಳಿಗಾಗುವಷ್ಟು ಸಂಪತ್ತು ಗಳಿಸುವುದರಲ್ಲಿ ತಲ್ಲೀನರಾಗಿ ಜನಹಿತವನ್ನೇ ಮರೆತಿದ್ದಾರೆ.ಶೋಷಿತ ಸಮುದಾಯದಿಂದ ಬಂದ ನಾಯಕರುಗಳು ಕೂಡಾ ತಾವು ಬದುಕಿರುವಾಗಲೇ ಮಕ್ಕಳು ಮರಿಗಳಿಗೆ ಎಮ್.ಎಲ್.ಎ, ಎಂ.ಎಲ್.ಸಿ.ಹಾಗೂ ಮಂತ್ರಿ ಪದವಿಗಳನ್ನು ಕೊಡಿಸುವ ಮೂಲಕ ಅವರಿಗೊಂದು ನೆಲೆ ಕಲ್ಪಿಸುವ ಅತ್ಯವಸರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಒಟ್ಟಾರೆ ಹೇಳುವುದಾದರೆ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಚುನಾಯಿತ ಪ್ರತಿನಿಧಿಗಳನ್ನೊಳಗೊಂಡ , (ಶಾಸನ ರಚನೆಯ ಅಧಿಕಾರವನ್ನು ಹೊರತುಪಡಿಸಿ ಹಣಕಾಸು, ಕಾರ್ಯ ನಿರ್ವಾಹಕ, ಆಡಳಿತಾತ್ಮಕ ಹೀಗೆ ಎಲ್ಲಾ ಅಧಿಕಾರಗಳನ್ನೊಳಗೊಂಡ) ಸ್ವಾಯತ್ತ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯನ್ನಾಗಿ ಪುನರ್‍ರಚನೆ ಮಾಡುವುದರ ಮೂಲಕ ಮಾತ್ರ ಈ ಭಾಗದ ಸರ್ವಾಂಗೀಣ ಪ್ರಗತಿ ಸಾಧ್ಯ. ಅದುವರೆಗೂ 371ಜೆ ಎಂಬ ಮೂಗಿಗೆ ಸವರಿದ ತುಪ್ಪದ ವಾಸನೆಯಲ್ಲಿಯೇ ತೃಪ್ತಿ ಪಡಬೇಕಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...