Homeರಾಜಕೀಯಹೈ.ಕ.: ಹೈರಾಣಾದ ಜನರು, ಆರಾಮಾಗಿರೋ ಅಧಿಕಾರಸ್ಥರು

ಹೈ.ಕ.: ಹೈರಾಣಾದ ಜನರು, ಆರಾಮಾಗಿರೋ ಅಧಿಕಾರಸ್ಥರು

- Advertisement -
- Advertisement -

 ಭೀಮನಗೌಡ ಕಾಶಿರೆಡ್ಡಿ, ಕಂಪ್ಲಿ |

ಕುರಿತೋದದೆಯುಂ ಕಾವ್ಯ ಪ್ರಯೋಗ ಪರಿಣಿತಮತಿಗಳ್ ಎಂದು ಅಮೋಘ ವರ್ಷನಿಂದ ಬಣ್ಣಿಸಲ್ಪಟ್ಟ ಜನಪದವನ್ನೊಳಗೊಂಡ ಹೈದರಾಬಾದ್ ಕರ್ನಾಟಕದ ವಸ್ತುಸ್ಥಿತಿ ತಿಳಿಯಬೇಕೆಂದರೆ ನಂಜುಡಪ್ಪ ವರದಿಯತ್ತ ಒಮ್ಮೆ ಕಣ್ಣಾಡಿಸಬೇಕು. ಈ ವರದಿಯ ಪ್ರಕಾರ ಹೈ.ಕ.ದ ಒಟ್ಟು 31 ತಾಲೂಕುಗಳಲ್ಲಿ 21 ಅತ್ಯಂತ ಹಿಂದುಳಿದ, 5 ಅತಿ ಹಿಂದುಳಿದ, 2 ಹಿಂದುಳಿದ ಹಾಗು ಕೇವಲ 3 ಮುಂದುವರಿದ ತಾಲೂಕುಗಳಿವೆ. ಈ ಹಿಂದೆ ಹೈದರಾಬಾದ್ ನಿಜಾಮರ ಕಾಲದಲ್ಲಿ ಫ್ಯೂಡಲ್ ಲ್ಯಾಂಡ್ ಲಾರ್ಡ್‍ಗಳ ದಬ್ಬಾಳಿಕೆಗೊಳಗಾಗಿದ್ದ ಈ ಭಾಗದ ಜನ ಸ್ವಾತಂತ್ರ್ಯವನ್ನೂ ಒಂದು ವರ್ಷ ತಡವಾಗಿಯೇ ಪಡೆದರು.ನಂತರ1956 ರಲ್ಲಿ ಕರ್ನಾಟಕ ಏಕೀಕರಣದ ಫಲವಾಗಿ ಮೈಸೂರು ರಾಜ್ಯಕ್ಕೆ ಸೇರ್ಪಡೆಯಾದರು. ಹೈ.ಕರ್ನಾಟಕದ ಆರ್ಥಿಕತೆ ಮುಖ್ಯವಾಗಿ ಕೃಷಿಯನ್ನು ಅವಲಂಬಿಸಿದೆ. ಕೃಷ್ಣಾ ಮತ್ತು ತುಂಗಭದ್ರಾ ನದಿಗಳ ಮಧ್ಯದ ಫಲವತ್ತಾದ ದೋ- ಅಬ್ ಪ್ರದೇಶವನ್ನೊಳಗೊಂಡಿದ್ದರೂ ಮಳೆಯ ಕೊರತೆ, ಸತತ ಬರಗಾಲ ಹಾಗೂ ನೀರಾವರಿ ಯೋಜನೆಗಳ ಕುಂಟುವಿಕೆಯಿಂದಾಗಿ ನಿರೀಕ್ಷಿತ ಪ್ರಮಾಣದ ಕೃಷಿ ಉತ್ಪಾದನೆ ಸಾಧ್ಯವಾಗದೇ ಜನ ಪದೇಪದೇ ಮುಂಬಯಿ, ಪುಣೆ ಹಾಗೂ ಗೋವಾಗಳಿಗೆ ಗುಳೆ ಹೋಗುವಂತಾಗಿದೆ.ಬ್ರಿಟಿಷ್ ಆಳ್ವಿಕೆಯಲ್ಲಿ ಪ್ರಾರಂಭವಾದ ತುಂಗಭದ್ರಾ ಆಣೆಕಟ್ಟು ಹೊರತುಪಡಿಸಿದರೆ ಸ್ವಾತಂತ್ರ್ಯ ಬಂದ ಐದು ದಶಕಗಳಲ್ಲಿ ಒಂದೇ ಒಂದು ನೀರಾವರಿ ಯೋಜನೆಯೂ ಅನುಷ್ಠಾನಕ್ಕೆ ಬರಲಿಲ್ಲ. ಆದರೆ ಹಳೇ ಮೈಸೂರು ಭಾಗದಲ್ಲಿ ಕಬಿನಿ,ಹೇಮಾವತಿಯಂಥಾ ಹಲವಾರು ನೀರಾವರಿ ಯೋಜನೆಗಳು ಯಶಸ್ವಿಯಾಗಿ ಜಾರಿಗೆ ಬಂದವು.ಕಳೆದೆರಡು ದಶಕಗಳಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಅಲ್ಪ ಸ್ವಲ್ಪ ಅನುಷ್ಠಾನದಿಂದಾಗಿ ಐದಾರು ತಾಲ್ಲೂಕಿನ ರೈತರು ಇತ್ತೀಚೆಗೆ ನೀರಾವರಿಯ ರುಚಿ ನೋಡುತ್ತಿದ್ದಾರೆ.
ಇನ್ನು ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದ್ದು , ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವೃತ್ತಿಪರ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಸರ್ಕಾರ ನಿರಾಸಕ್ತಿ ತೋರಿದ ಕಾರಣ ಈ ಭಾಗದ ವಿದ್ಯಾರ್ಥಿಗಳು ಹೆಚ್ಚಿನ ಶಿಕ್ಷಣಕ್ಕಾಗಿ ಹೈದರಾಬಾದ್, ಧಾರವಾಡ, ಬೆಳಗಾವಿ ಹಾಗೂ ಬೆಂಗಳೂರಿಗೆ ಹೋಗುವ ಪರಿಸ್ಥಿತಿ ಇತ್ತೀಚಿನವರೆಗೂ ಇತ್ತು.
ರಾಜಕೀಯವಾಗಿ ಹೇಳುವುದಾದರೆ ವೀರೇಂದ್ರ ಪಾಟೀಲ್ ಹಾಗೂ ಧರಂಸಿಂಗ್ ಈ ಭಾಗದಿಂದ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿಯೂ ಸಹ ಇಲ್ಲಿನ ಜನ ಪ್ರತಿನಿಧಿಗಳ ಇಚ್ಛಾಶಕ್ತಿ ಮತ್ತು ಬದ್ಧತೆಯ ಕೊರತೆಯಿಂದಾಗಿ ಯಾವುದೇ ಮಹತ್ವದ ಯೋಜನೆಗಳನ್ನು ರೂಪಿಸಲಾಗಲಿಲ್ಲ.
ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಎಂಬ ನಾಮಕಾವಸ್ಥೆ ಸಂಸ್ಥೆಯನ್ನು ಸ್ಥಾಪಿಸಿದರೂ ಸರಿಯಾದ ಮಾರ್ಗಸೂಚಿಗಳಿಲ್ಲದೆ ಕೇವಲ ರಸ್ತೆ, ಕಟ್ಟಡಗಳನ್ನು ನಿರ್ಮಿಸುವ ಇನ್ನೊಂದು ಏಜೆನ್ಸಿಯಾಗಿ ಮಾರ್ಪಾಡಾಯಿತು. ರಾಜ್ಯದಲ್ಲಿರುವ ನಾಲ್ಕು ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಎರಡು ಹೈದರಾಬಾದ್ ಕರ್ನಾಟಕದಲ್ಲಿವೆ.(ಬಳ್ಳಾರಿ ಮತ್ತು ರಾಯಚೂರು) ಬೇಸಿಗೆಯಲ್ಲಿ 42 ಡಿಗ್ರಿಗೂ ಅಧಿಕ ತಾಪಮಾನವಿರುವ ಈ ಜಿಲ್ಲೆಗಳಲ್ಲಿ ಇನ್ನೂ ಎರಡು ಉಷ್ಣ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಿದರೂ ಜನರು ಹಲ್ಲು ಕಚ್ಚಿ ಸಹಿಸಿಕೊಂಡು ಹೋಗುತ್ತಾರೆ.( ಮೈಸೂರಿನ ಚಾಮಲಾಪುರದ ಉಷ್ಣ ವಿದ್ಯುತ್ ಸ್ಥಾವರಕ್ಕೆ ಬಂದ ಪ್ರತಿರೋಧವನ್ನು ನೆನಪಿಸಿಕೊಳ್ಳಿ) ಬಹುಶಃ ಕಲ್ಯಾಣ ಕರ್ನಾಟಕದ ಶರಣರು ಮತ್ತು ತತ್ವಪದಕಾರರ ವಾರಸತ್ವದಿಂದಾಗಿ ಈ ಭಾಗದ ಜನರು ಪಡೆದುಕೊಂಡಿರುವ ಸಹಿಷ್ಣುತೆ ಹಾಗೂ ಸ್ಥಿತಪ್ರಜ್ಞತೆಗಳೇ ಇಲ್ಲಿನ ಜನಪ್ರತಿನಿಧಿಗಳಿಗೆ ವರವಾಗಿ ಪರಿಣಮಿಸಿವೆ. ಹಾಗಾಗಿ ಅವರು ಪರ್ಸೆಂಟೇಜ್ ಅಭಿವೃದ್ಧಿಯಲ್ಲಿ ಮುಳುಗಿ ತಮ್ಮ ಮಕ್ಕಳು, ಮೊಮ್ಮಕ್ಕಳು ಹಾಗೂ ಮರಿ ಮೊಮ್ಮಕ್ಕಳಿಗಾಗುವಷ್ಟು ಸಂಪತ್ತು ಗಳಿಸುವುದರಲ್ಲಿ ತಲ್ಲೀನರಾಗಿ ಜನಹಿತವನ್ನೇ ಮರೆತಿದ್ದಾರೆ.ಶೋಷಿತ ಸಮುದಾಯದಿಂದ ಬಂದ ನಾಯಕರುಗಳು ಕೂಡಾ ತಾವು ಬದುಕಿರುವಾಗಲೇ ಮಕ್ಕಳು ಮರಿಗಳಿಗೆ ಎಮ್.ಎಲ್.ಎ, ಎಂ.ಎಲ್.ಸಿ.ಹಾಗೂ ಮಂತ್ರಿ ಪದವಿಗಳನ್ನು ಕೊಡಿಸುವ ಮೂಲಕ ಅವರಿಗೊಂದು ನೆಲೆ ಕಲ್ಪಿಸುವ ಅತ್ಯವಸರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಒಟ್ಟಾರೆ ಹೇಳುವುದಾದರೆ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಚುನಾಯಿತ ಪ್ರತಿನಿಧಿಗಳನ್ನೊಳಗೊಂಡ , (ಶಾಸನ ರಚನೆಯ ಅಧಿಕಾರವನ್ನು ಹೊರತುಪಡಿಸಿ ಹಣಕಾಸು, ಕಾರ್ಯ ನಿರ್ವಾಹಕ, ಆಡಳಿತಾತ್ಮಕ ಹೀಗೆ ಎಲ್ಲಾ ಅಧಿಕಾರಗಳನ್ನೊಳಗೊಂಡ) ಸ್ವಾಯತ್ತ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯನ್ನಾಗಿ ಪುನರ್‍ರಚನೆ ಮಾಡುವುದರ ಮೂಲಕ ಮಾತ್ರ ಈ ಭಾಗದ ಸರ್ವಾಂಗೀಣ ಪ್ರಗತಿ ಸಾಧ್ಯ. ಅದುವರೆಗೂ 371ಜೆ ಎಂಬ ಮೂಗಿಗೆ ಸವರಿದ ತುಪ್ಪದ ವಾಸನೆಯಲ್ಲಿಯೇ ತೃಪ್ತಿ ಪಡಬೇಕಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...