Homeರಾಜಕೀಯಹೈ.ಕ.: ಹೈರಾಣಾದ ಜನರು, ಆರಾಮಾಗಿರೋ ಅಧಿಕಾರಸ್ಥರು

ಹೈ.ಕ.: ಹೈರಾಣಾದ ಜನರು, ಆರಾಮಾಗಿರೋ ಅಧಿಕಾರಸ್ಥರು

- Advertisement -
- Advertisement -

 ಭೀಮನಗೌಡ ಕಾಶಿರೆಡ್ಡಿ, ಕಂಪ್ಲಿ |

ಕುರಿತೋದದೆಯುಂ ಕಾವ್ಯ ಪ್ರಯೋಗ ಪರಿಣಿತಮತಿಗಳ್ ಎಂದು ಅಮೋಘ ವರ್ಷನಿಂದ ಬಣ್ಣಿಸಲ್ಪಟ್ಟ ಜನಪದವನ್ನೊಳಗೊಂಡ ಹೈದರಾಬಾದ್ ಕರ್ನಾಟಕದ ವಸ್ತುಸ್ಥಿತಿ ತಿಳಿಯಬೇಕೆಂದರೆ ನಂಜುಡಪ್ಪ ವರದಿಯತ್ತ ಒಮ್ಮೆ ಕಣ್ಣಾಡಿಸಬೇಕು. ಈ ವರದಿಯ ಪ್ರಕಾರ ಹೈ.ಕ.ದ ಒಟ್ಟು 31 ತಾಲೂಕುಗಳಲ್ಲಿ 21 ಅತ್ಯಂತ ಹಿಂದುಳಿದ, 5 ಅತಿ ಹಿಂದುಳಿದ, 2 ಹಿಂದುಳಿದ ಹಾಗು ಕೇವಲ 3 ಮುಂದುವರಿದ ತಾಲೂಕುಗಳಿವೆ. ಈ ಹಿಂದೆ ಹೈದರಾಬಾದ್ ನಿಜಾಮರ ಕಾಲದಲ್ಲಿ ಫ್ಯೂಡಲ್ ಲ್ಯಾಂಡ್ ಲಾರ್ಡ್‍ಗಳ ದಬ್ಬಾಳಿಕೆಗೊಳಗಾಗಿದ್ದ ಈ ಭಾಗದ ಜನ ಸ್ವಾತಂತ್ರ್ಯವನ್ನೂ ಒಂದು ವರ್ಷ ತಡವಾಗಿಯೇ ಪಡೆದರು.ನಂತರ1956 ರಲ್ಲಿ ಕರ್ನಾಟಕ ಏಕೀಕರಣದ ಫಲವಾಗಿ ಮೈಸೂರು ರಾಜ್ಯಕ್ಕೆ ಸೇರ್ಪಡೆಯಾದರು. ಹೈ.ಕರ್ನಾಟಕದ ಆರ್ಥಿಕತೆ ಮುಖ್ಯವಾಗಿ ಕೃಷಿಯನ್ನು ಅವಲಂಬಿಸಿದೆ. ಕೃಷ್ಣಾ ಮತ್ತು ತುಂಗಭದ್ರಾ ನದಿಗಳ ಮಧ್ಯದ ಫಲವತ್ತಾದ ದೋ- ಅಬ್ ಪ್ರದೇಶವನ್ನೊಳಗೊಂಡಿದ್ದರೂ ಮಳೆಯ ಕೊರತೆ, ಸತತ ಬರಗಾಲ ಹಾಗೂ ನೀರಾವರಿ ಯೋಜನೆಗಳ ಕುಂಟುವಿಕೆಯಿಂದಾಗಿ ನಿರೀಕ್ಷಿತ ಪ್ರಮಾಣದ ಕೃಷಿ ಉತ್ಪಾದನೆ ಸಾಧ್ಯವಾಗದೇ ಜನ ಪದೇಪದೇ ಮುಂಬಯಿ, ಪುಣೆ ಹಾಗೂ ಗೋವಾಗಳಿಗೆ ಗುಳೆ ಹೋಗುವಂತಾಗಿದೆ.ಬ್ರಿಟಿಷ್ ಆಳ್ವಿಕೆಯಲ್ಲಿ ಪ್ರಾರಂಭವಾದ ತುಂಗಭದ್ರಾ ಆಣೆಕಟ್ಟು ಹೊರತುಪಡಿಸಿದರೆ ಸ್ವಾತಂತ್ರ್ಯ ಬಂದ ಐದು ದಶಕಗಳಲ್ಲಿ ಒಂದೇ ಒಂದು ನೀರಾವರಿ ಯೋಜನೆಯೂ ಅನುಷ್ಠಾನಕ್ಕೆ ಬರಲಿಲ್ಲ. ಆದರೆ ಹಳೇ ಮೈಸೂರು ಭಾಗದಲ್ಲಿ ಕಬಿನಿ,ಹೇಮಾವತಿಯಂಥಾ ಹಲವಾರು ನೀರಾವರಿ ಯೋಜನೆಗಳು ಯಶಸ್ವಿಯಾಗಿ ಜಾರಿಗೆ ಬಂದವು.ಕಳೆದೆರಡು ದಶಕಗಳಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಅಲ್ಪ ಸ್ವಲ್ಪ ಅನುಷ್ಠಾನದಿಂದಾಗಿ ಐದಾರು ತಾಲ್ಲೂಕಿನ ರೈತರು ಇತ್ತೀಚೆಗೆ ನೀರಾವರಿಯ ರುಚಿ ನೋಡುತ್ತಿದ್ದಾರೆ.
ಇನ್ನು ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದ್ದು , ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವೃತ್ತಿಪರ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಸರ್ಕಾರ ನಿರಾಸಕ್ತಿ ತೋರಿದ ಕಾರಣ ಈ ಭಾಗದ ವಿದ್ಯಾರ್ಥಿಗಳು ಹೆಚ್ಚಿನ ಶಿಕ್ಷಣಕ್ಕಾಗಿ ಹೈದರಾಬಾದ್, ಧಾರವಾಡ, ಬೆಳಗಾವಿ ಹಾಗೂ ಬೆಂಗಳೂರಿಗೆ ಹೋಗುವ ಪರಿಸ್ಥಿತಿ ಇತ್ತೀಚಿನವರೆಗೂ ಇತ್ತು.
ರಾಜಕೀಯವಾಗಿ ಹೇಳುವುದಾದರೆ ವೀರೇಂದ್ರ ಪಾಟೀಲ್ ಹಾಗೂ ಧರಂಸಿಂಗ್ ಈ ಭಾಗದಿಂದ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿಯೂ ಸಹ ಇಲ್ಲಿನ ಜನ ಪ್ರತಿನಿಧಿಗಳ ಇಚ್ಛಾಶಕ್ತಿ ಮತ್ತು ಬದ್ಧತೆಯ ಕೊರತೆಯಿಂದಾಗಿ ಯಾವುದೇ ಮಹತ್ವದ ಯೋಜನೆಗಳನ್ನು ರೂಪಿಸಲಾಗಲಿಲ್ಲ.
ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಎಂಬ ನಾಮಕಾವಸ್ಥೆ ಸಂಸ್ಥೆಯನ್ನು ಸ್ಥಾಪಿಸಿದರೂ ಸರಿಯಾದ ಮಾರ್ಗಸೂಚಿಗಳಿಲ್ಲದೆ ಕೇವಲ ರಸ್ತೆ, ಕಟ್ಟಡಗಳನ್ನು ನಿರ್ಮಿಸುವ ಇನ್ನೊಂದು ಏಜೆನ್ಸಿಯಾಗಿ ಮಾರ್ಪಾಡಾಯಿತು. ರಾಜ್ಯದಲ್ಲಿರುವ ನಾಲ್ಕು ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಎರಡು ಹೈದರಾಬಾದ್ ಕರ್ನಾಟಕದಲ್ಲಿವೆ.(ಬಳ್ಳಾರಿ ಮತ್ತು ರಾಯಚೂರು) ಬೇಸಿಗೆಯಲ್ಲಿ 42 ಡಿಗ್ರಿಗೂ ಅಧಿಕ ತಾಪಮಾನವಿರುವ ಈ ಜಿಲ್ಲೆಗಳಲ್ಲಿ ಇನ್ನೂ ಎರಡು ಉಷ್ಣ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಿದರೂ ಜನರು ಹಲ್ಲು ಕಚ್ಚಿ ಸಹಿಸಿಕೊಂಡು ಹೋಗುತ್ತಾರೆ.( ಮೈಸೂರಿನ ಚಾಮಲಾಪುರದ ಉಷ್ಣ ವಿದ್ಯುತ್ ಸ್ಥಾವರಕ್ಕೆ ಬಂದ ಪ್ರತಿರೋಧವನ್ನು ನೆನಪಿಸಿಕೊಳ್ಳಿ) ಬಹುಶಃ ಕಲ್ಯಾಣ ಕರ್ನಾಟಕದ ಶರಣರು ಮತ್ತು ತತ್ವಪದಕಾರರ ವಾರಸತ್ವದಿಂದಾಗಿ ಈ ಭಾಗದ ಜನರು ಪಡೆದುಕೊಂಡಿರುವ ಸಹಿಷ್ಣುತೆ ಹಾಗೂ ಸ್ಥಿತಪ್ರಜ್ಞತೆಗಳೇ ಇಲ್ಲಿನ ಜನಪ್ರತಿನಿಧಿಗಳಿಗೆ ವರವಾಗಿ ಪರಿಣಮಿಸಿವೆ. ಹಾಗಾಗಿ ಅವರು ಪರ್ಸೆಂಟೇಜ್ ಅಭಿವೃದ್ಧಿಯಲ್ಲಿ ಮುಳುಗಿ ತಮ್ಮ ಮಕ್ಕಳು, ಮೊಮ್ಮಕ್ಕಳು ಹಾಗೂ ಮರಿ ಮೊಮ್ಮಕ್ಕಳಿಗಾಗುವಷ್ಟು ಸಂಪತ್ತು ಗಳಿಸುವುದರಲ್ಲಿ ತಲ್ಲೀನರಾಗಿ ಜನಹಿತವನ್ನೇ ಮರೆತಿದ್ದಾರೆ.ಶೋಷಿತ ಸಮುದಾಯದಿಂದ ಬಂದ ನಾಯಕರುಗಳು ಕೂಡಾ ತಾವು ಬದುಕಿರುವಾಗಲೇ ಮಕ್ಕಳು ಮರಿಗಳಿಗೆ ಎಮ್.ಎಲ್.ಎ, ಎಂ.ಎಲ್.ಸಿ.ಹಾಗೂ ಮಂತ್ರಿ ಪದವಿಗಳನ್ನು ಕೊಡಿಸುವ ಮೂಲಕ ಅವರಿಗೊಂದು ನೆಲೆ ಕಲ್ಪಿಸುವ ಅತ್ಯವಸರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಒಟ್ಟಾರೆ ಹೇಳುವುದಾದರೆ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಚುನಾಯಿತ ಪ್ರತಿನಿಧಿಗಳನ್ನೊಳಗೊಂಡ , (ಶಾಸನ ರಚನೆಯ ಅಧಿಕಾರವನ್ನು ಹೊರತುಪಡಿಸಿ ಹಣಕಾಸು, ಕಾರ್ಯ ನಿರ್ವಾಹಕ, ಆಡಳಿತಾತ್ಮಕ ಹೀಗೆ ಎಲ್ಲಾ ಅಧಿಕಾರಗಳನ್ನೊಳಗೊಂಡ) ಸ್ವಾಯತ್ತ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯನ್ನಾಗಿ ಪುನರ್‍ರಚನೆ ಮಾಡುವುದರ ಮೂಲಕ ಮಾತ್ರ ಈ ಭಾಗದ ಸರ್ವಾಂಗೀಣ ಪ್ರಗತಿ ಸಾಧ್ಯ. ಅದುವರೆಗೂ 371ಜೆ ಎಂಬ ಮೂಗಿಗೆ ಸವರಿದ ತುಪ್ಪದ ವಾಸನೆಯಲ್ಲಿಯೇ ತೃಪ್ತಿ ಪಡಬೇಕಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಸೋರಿಕೆಯಾದ ಸಂಪೂರ್ಣ ಆಡಿಯೋ ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2023ರ ಜನಾಂಗೀಯ ಹಿಂಸಾಚಾರದಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪಾತ್ರವನ್ನು ಸೂಚಿಸಿರುವ ಅರ್ಜಿಯಲ್ಲಿ ಲಭ್ಯವಿರುವ ಸಂಪೂರ್ಣ ಸೋರಿಕೆಯಾದ ಆಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಲಿಲ್ಲ ಎಂದು...

ಎಸ್‌ಐಆರ್‌ ಭಯಕ್ಕೆ ಮತ್ತೊಂದು ಬಲಿ: ಬಂಗಾಳದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ, ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದ ಭಯದಿಂದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ರಣಘಾಟ್‌ನ...

MGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ 2005ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಮತ್ತು ಅದರಡಿ ರೂಪಿಸಲಾದ ನರೇಗಾ ಯೋಜನೆಯ ಹೆಸರನ್ನು ಬದಲಿಸಲು ಕೇಂದ್ರ...

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್...

‘ಇಂಡಿಯಾ ಬಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ’: ಕಾಂಗ್ರೆಸ್‌ನ ‘ವೋಟ್ ಚೋರಿ’ ಅಭಿಯಾನದ ಬಗ್ಗೆ ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕಾಂಗ್ರೆಸ್‌ನ "ಮತ ಚೋರಿ" ಅಭಿಯಾನದಿಂದ ದೂರ ಉಳಿದಿದ್ದಾರೆ, ಈ ವಿಷಯವು ಒಟ್ಟಾರೆಯಾಗಿ ವಿರೋಧ ಪಕ್ಷದ ಇಂಡಿಯಾ ಬಣದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ...

ಇಂಡಿಗೋ ವಿಮಾನ ರದ್ದತಿಗೆ ಸಂಬಂಧಿಸಿದ ಪಿಐಎಲ್ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನೂರಾರು ಇಂಡಿಗೋ ವಿಮಾನಗಳ ರದ್ದತಿಗೆ ನ್ಯಾಯಾಂಗ ಹಸ್ತಕ್ಷೇಪ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸೋಮವಾರ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿದಾರರು ತಮ್ಮ ದೂರುಗಳೊಂದಿಗೆ ದೆಹಲಿ ಹೈಕೋರ್ಟ್ ಅನ್ನು...

ಹಣ ಅಕ್ರಮ ವರ್ಗಾವಣೆ ಪ್ರಕರಣ : ಪತ್ರಕರ್ತ ಮಹೇಶ್ ಲಾಂಗಾಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ವಂಚನೆ ಆರೋಪದ ಮೇಲೆ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾ ಅವರಿಗೆ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ (ಡಿ.15) ಮಧ್ಯಂತರ ಜಾಮೀನು ನೀಡಿದೆ. ಜಿಎಸ್‌ಟಿ ವಂಚನೆ...

‘ಮಹಿಳೆಯರು ಗಂಡಂದಿರ ಜೊತೆ ಮಲಗಲು ಮಾತ್ರ’: ಸಿಪಿಎಂ ನಾಯಕನ ಅಸೂಕ್ಷ್ಮ ಹೇಳಿಕೆಗೆ ವ್ಯಾಪಕ ಆಕ್ರೋಶ

ಮಲಪ್ಪುರಂ ಜಿಲ್ಲೆಯಲ್ಲಿ ಸಿಪಿಎಂ ಪ್ರಾದೇಶಿಕ ನಾಯಕ ಸಯೀದ್ ಅಲಿ ಮಜೀದ್ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವಾಗ ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡಿದ ನಂತರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.  ಸಯೀದ್ ಅಲಿ ಮಜೀದ್, ತೆನ್ನೆಲಾ ಪಂಚಾಯತ್ ವಾರ್ಡ್ ಅನ್ನು...

ಅಖ್ಲಾಕ್ ಹತ್ಯೆ ಪ್ರಕರಣ ಹಿಂತೆಗೆದುಕೊಳ್ಳುವುದು ನ್ಯಾಯಾಂಗ ಪ್ರಕ್ರಿಯೆ ಹಳಿತಪ್ಪಿಸುವ ಪ್ರಯತ್ನ: ಬೃಂದಾ ಕಾರಟ್

ರಾಜ್ಯಪಾಲರ ಅನುಮತಿಯೊಂದಿಗೆ ಮೊಹಮ್ಮದ್ ಅಖ್ಲಾಕ್ ಅವರ ಕೊಲೆ ಮತ್ತು ಗುಂಪು ಹತ್ಯೆಗೆ ಸಂಬಂಧಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಖಂಡಿಸಿ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಹಿರಿಯ ನಾಯಕಿ ಬೃಂದಾ ಕಾರಟ್...

ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. 2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ...