Homeರಾಜಕೀಯಹೈ.ಕ.: ಹೈರಾಣಾದ ಜನರು, ಆರಾಮಾಗಿರೋ ಅಧಿಕಾರಸ್ಥರು

ಹೈ.ಕ.: ಹೈರಾಣಾದ ಜನರು, ಆರಾಮಾಗಿರೋ ಅಧಿಕಾರಸ್ಥರು

- Advertisement -
- Advertisement -

 ಭೀಮನಗೌಡ ಕಾಶಿರೆಡ್ಡಿ, ಕಂಪ್ಲಿ |

ಕುರಿತೋದದೆಯುಂ ಕಾವ್ಯ ಪ್ರಯೋಗ ಪರಿಣಿತಮತಿಗಳ್ ಎಂದು ಅಮೋಘ ವರ್ಷನಿಂದ ಬಣ್ಣಿಸಲ್ಪಟ್ಟ ಜನಪದವನ್ನೊಳಗೊಂಡ ಹೈದರಾಬಾದ್ ಕರ್ನಾಟಕದ ವಸ್ತುಸ್ಥಿತಿ ತಿಳಿಯಬೇಕೆಂದರೆ ನಂಜುಡಪ್ಪ ವರದಿಯತ್ತ ಒಮ್ಮೆ ಕಣ್ಣಾಡಿಸಬೇಕು. ಈ ವರದಿಯ ಪ್ರಕಾರ ಹೈ.ಕ.ದ ಒಟ್ಟು 31 ತಾಲೂಕುಗಳಲ್ಲಿ 21 ಅತ್ಯಂತ ಹಿಂದುಳಿದ, 5 ಅತಿ ಹಿಂದುಳಿದ, 2 ಹಿಂದುಳಿದ ಹಾಗು ಕೇವಲ 3 ಮುಂದುವರಿದ ತಾಲೂಕುಗಳಿವೆ. ಈ ಹಿಂದೆ ಹೈದರಾಬಾದ್ ನಿಜಾಮರ ಕಾಲದಲ್ಲಿ ಫ್ಯೂಡಲ್ ಲ್ಯಾಂಡ್ ಲಾರ್ಡ್‍ಗಳ ದಬ್ಬಾಳಿಕೆಗೊಳಗಾಗಿದ್ದ ಈ ಭಾಗದ ಜನ ಸ್ವಾತಂತ್ರ್ಯವನ್ನೂ ಒಂದು ವರ್ಷ ತಡವಾಗಿಯೇ ಪಡೆದರು.ನಂತರ1956 ರಲ್ಲಿ ಕರ್ನಾಟಕ ಏಕೀಕರಣದ ಫಲವಾಗಿ ಮೈಸೂರು ರಾಜ್ಯಕ್ಕೆ ಸೇರ್ಪಡೆಯಾದರು. ಹೈ.ಕರ್ನಾಟಕದ ಆರ್ಥಿಕತೆ ಮುಖ್ಯವಾಗಿ ಕೃಷಿಯನ್ನು ಅವಲಂಬಿಸಿದೆ. ಕೃಷ್ಣಾ ಮತ್ತು ತುಂಗಭದ್ರಾ ನದಿಗಳ ಮಧ್ಯದ ಫಲವತ್ತಾದ ದೋ- ಅಬ್ ಪ್ರದೇಶವನ್ನೊಳಗೊಂಡಿದ್ದರೂ ಮಳೆಯ ಕೊರತೆ, ಸತತ ಬರಗಾಲ ಹಾಗೂ ನೀರಾವರಿ ಯೋಜನೆಗಳ ಕುಂಟುವಿಕೆಯಿಂದಾಗಿ ನಿರೀಕ್ಷಿತ ಪ್ರಮಾಣದ ಕೃಷಿ ಉತ್ಪಾದನೆ ಸಾಧ್ಯವಾಗದೇ ಜನ ಪದೇಪದೇ ಮುಂಬಯಿ, ಪುಣೆ ಹಾಗೂ ಗೋವಾಗಳಿಗೆ ಗುಳೆ ಹೋಗುವಂತಾಗಿದೆ.ಬ್ರಿಟಿಷ್ ಆಳ್ವಿಕೆಯಲ್ಲಿ ಪ್ರಾರಂಭವಾದ ತುಂಗಭದ್ರಾ ಆಣೆಕಟ್ಟು ಹೊರತುಪಡಿಸಿದರೆ ಸ್ವಾತಂತ್ರ್ಯ ಬಂದ ಐದು ದಶಕಗಳಲ್ಲಿ ಒಂದೇ ಒಂದು ನೀರಾವರಿ ಯೋಜನೆಯೂ ಅನುಷ್ಠಾನಕ್ಕೆ ಬರಲಿಲ್ಲ. ಆದರೆ ಹಳೇ ಮೈಸೂರು ಭಾಗದಲ್ಲಿ ಕಬಿನಿ,ಹೇಮಾವತಿಯಂಥಾ ಹಲವಾರು ನೀರಾವರಿ ಯೋಜನೆಗಳು ಯಶಸ್ವಿಯಾಗಿ ಜಾರಿಗೆ ಬಂದವು.ಕಳೆದೆರಡು ದಶಕಗಳಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಅಲ್ಪ ಸ್ವಲ್ಪ ಅನುಷ್ಠಾನದಿಂದಾಗಿ ಐದಾರು ತಾಲ್ಲೂಕಿನ ರೈತರು ಇತ್ತೀಚೆಗೆ ನೀರಾವರಿಯ ರುಚಿ ನೋಡುತ್ತಿದ್ದಾರೆ.
ಇನ್ನು ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದ್ದು , ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವೃತ್ತಿಪರ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಸರ್ಕಾರ ನಿರಾಸಕ್ತಿ ತೋರಿದ ಕಾರಣ ಈ ಭಾಗದ ವಿದ್ಯಾರ್ಥಿಗಳು ಹೆಚ್ಚಿನ ಶಿಕ್ಷಣಕ್ಕಾಗಿ ಹೈದರಾಬಾದ್, ಧಾರವಾಡ, ಬೆಳಗಾವಿ ಹಾಗೂ ಬೆಂಗಳೂರಿಗೆ ಹೋಗುವ ಪರಿಸ್ಥಿತಿ ಇತ್ತೀಚಿನವರೆಗೂ ಇತ್ತು.
ರಾಜಕೀಯವಾಗಿ ಹೇಳುವುದಾದರೆ ವೀರೇಂದ್ರ ಪಾಟೀಲ್ ಹಾಗೂ ಧರಂಸಿಂಗ್ ಈ ಭಾಗದಿಂದ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿಯೂ ಸಹ ಇಲ್ಲಿನ ಜನ ಪ್ರತಿನಿಧಿಗಳ ಇಚ್ಛಾಶಕ್ತಿ ಮತ್ತು ಬದ್ಧತೆಯ ಕೊರತೆಯಿಂದಾಗಿ ಯಾವುದೇ ಮಹತ್ವದ ಯೋಜನೆಗಳನ್ನು ರೂಪಿಸಲಾಗಲಿಲ್ಲ.
ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಎಂಬ ನಾಮಕಾವಸ್ಥೆ ಸಂಸ್ಥೆಯನ್ನು ಸ್ಥಾಪಿಸಿದರೂ ಸರಿಯಾದ ಮಾರ್ಗಸೂಚಿಗಳಿಲ್ಲದೆ ಕೇವಲ ರಸ್ತೆ, ಕಟ್ಟಡಗಳನ್ನು ನಿರ್ಮಿಸುವ ಇನ್ನೊಂದು ಏಜೆನ್ಸಿಯಾಗಿ ಮಾರ್ಪಾಡಾಯಿತು. ರಾಜ್ಯದಲ್ಲಿರುವ ನಾಲ್ಕು ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಎರಡು ಹೈದರಾಬಾದ್ ಕರ್ನಾಟಕದಲ್ಲಿವೆ.(ಬಳ್ಳಾರಿ ಮತ್ತು ರಾಯಚೂರು) ಬೇಸಿಗೆಯಲ್ಲಿ 42 ಡಿಗ್ರಿಗೂ ಅಧಿಕ ತಾಪಮಾನವಿರುವ ಈ ಜಿಲ್ಲೆಗಳಲ್ಲಿ ಇನ್ನೂ ಎರಡು ಉಷ್ಣ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಿದರೂ ಜನರು ಹಲ್ಲು ಕಚ್ಚಿ ಸಹಿಸಿಕೊಂಡು ಹೋಗುತ್ತಾರೆ.( ಮೈಸೂರಿನ ಚಾಮಲಾಪುರದ ಉಷ್ಣ ವಿದ್ಯುತ್ ಸ್ಥಾವರಕ್ಕೆ ಬಂದ ಪ್ರತಿರೋಧವನ್ನು ನೆನಪಿಸಿಕೊಳ್ಳಿ) ಬಹುಶಃ ಕಲ್ಯಾಣ ಕರ್ನಾಟಕದ ಶರಣರು ಮತ್ತು ತತ್ವಪದಕಾರರ ವಾರಸತ್ವದಿಂದಾಗಿ ಈ ಭಾಗದ ಜನರು ಪಡೆದುಕೊಂಡಿರುವ ಸಹಿಷ್ಣುತೆ ಹಾಗೂ ಸ್ಥಿತಪ್ರಜ್ಞತೆಗಳೇ ಇಲ್ಲಿನ ಜನಪ್ರತಿನಿಧಿಗಳಿಗೆ ವರವಾಗಿ ಪರಿಣಮಿಸಿವೆ. ಹಾಗಾಗಿ ಅವರು ಪರ್ಸೆಂಟೇಜ್ ಅಭಿವೃದ್ಧಿಯಲ್ಲಿ ಮುಳುಗಿ ತಮ್ಮ ಮಕ್ಕಳು, ಮೊಮ್ಮಕ್ಕಳು ಹಾಗೂ ಮರಿ ಮೊಮ್ಮಕ್ಕಳಿಗಾಗುವಷ್ಟು ಸಂಪತ್ತು ಗಳಿಸುವುದರಲ್ಲಿ ತಲ್ಲೀನರಾಗಿ ಜನಹಿತವನ್ನೇ ಮರೆತಿದ್ದಾರೆ.ಶೋಷಿತ ಸಮುದಾಯದಿಂದ ಬಂದ ನಾಯಕರುಗಳು ಕೂಡಾ ತಾವು ಬದುಕಿರುವಾಗಲೇ ಮಕ್ಕಳು ಮರಿಗಳಿಗೆ ಎಮ್.ಎಲ್.ಎ, ಎಂ.ಎಲ್.ಸಿ.ಹಾಗೂ ಮಂತ್ರಿ ಪದವಿಗಳನ್ನು ಕೊಡಿಸುವ ಮೂಲಕ ಅವರಿಗೊಂದು ನೆಲೆ ಕಲ್ಪಿಸುವ ಅತ್ಯವಸರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಒಟ್ಟಾರೆ ಹೇಳುವುದಾದರೆ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಚುನಾಯಿತ ಪ್ರತಿನಿಧಿಗಳನ್ನೊಳಗೊಂಡ , (ಶಾಸನ ರಚನೆಯ ಅಧಿಕಾರವನ್ನು ಹೊರತುಪಡಿಸಿ ಹಣಕಾಸು, ಕಾರ್ಯ ನಿರ್ವಾಹಕ, ಆಡಳಿತಾತ್ಮಕ ಹೀಗೆ ಎಲ್ಲಾ ಅಧಿಕಾರಗಳನ್ನೊಳಗೊಂಡ) ಸ್ವಾಯತ್ತ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯನ್ನಾಗಿ ಪುನರ್‍ರಚನೆ ಮಾಡುವುದರ ಮೂಲಕ ಮಾತ್ರ ಈ ಭಾಗದ ಸರ್ವಾಂಗೀಣ ಪ್ರಗತಿ ಸಾಧ್ಯ. ಅದುವರೆಗೂ 371ಜೆ ಎಂಬ ಮೂಗಿಗೆ ಸವರಿದ ತುಪ್ಪದ ವಾಸನೆಯಲ್ಲಿಯೇ ತೃಪ್ತಿ ಪಡಬೇಕಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...