Homeಮುಖಪುಟಹೈದರಾಬಾದ್ ಪಾಲಿಕೆ ಚುನಾವಣೆ: TRS-BJP ನಡುವಿನ ಮತಗಳ ವ್ಯತ್ಯಾಸ ಕೇವಲ 11,000!

ಹೈದರಾಬಾದ್ ಪಾಲಿಕೆ ಚುನಾವಣೆ: TRS-BJP ನಡುವಿನ ಮತಗಳ ವ್ಯತ್ಯಾಸ ಕೇವಲ 11,000!

ಬಿಜೆಪಿಯ ಹಿಂದುತ್ವ ರಾಜಕಾರಣದ ಹೊರತಾಗಿಯೂ ಟಿಆರ್‌ಎಸ್‌ ಸರ್ಕಾರದ ಮೇಲಿನ ಆಡಳಿತ ವಿರೋಧಿ ಅಲೆ ಮತ್ತು ಇತ್ತೀಚೆಗೆ ಹೈದರಾಬಾದ್‌ನಲ್ಲಿ ಉಂಟಾದ ಪ್ರವಾಹವು ಜನರು ಟಿಆರ್‌ಎಸ್‌ ವಿರುದ್ಧ ಮತ ಹಾಕುವಂತೆ ಮಾಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

- Advertisement -
- Advertisement -

ಇತ್ತೀಚೆಗೆ ನಡೆದ ಗ್ರೇಟರ್ ಹೈದರಾಬಾದ್ ಮುನಿಸಿಪಾಲ್ ಕಾರ್ಪೋರೇಷನ್ ಚುನಾವಣೆಯಲ್ಲಿ ಬಿಜೆಪಿ ಹೇಗೆ ತನ್ನ ಹಿಂದುತ್ವ ರಾಜಕಾರಣದಿಂದ ಗಮನಾರ್ಹ ಸಾಧನೆ ಮಾಡಿತು ಎಂದು ತಿಳಿದಿದೆ. ಆದರೆ ಚುನಾವಣೆಯಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಸಹ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಟಿಆರ್‌ಎಸ್‌ಗಿಂತ ಕೇವಲ ಒಂದು ಹೆಜ್ಜೆ ಮಾತ್ರ ಹಿಂದಿದೆ ಎಂಬುದನ್ನು ಮತ ಎಣಿಕೆ ನಂತರದ ಅಂಕಿ ಅಂಶಗಳು ತೋರಿಸಿವೆ.

ಪಾಲಿಕೆ ಚುನಾವಣೆಯಲ್ಲಿ ಟಿಆರ್‌ಎಸ್ 55, ಬಿಜೆಪಿ 48, ಎಐಎಂಐಎಂ 44, ಕಾಂಗ್ರೆಸ್ 02 ಮತ್ತು ಪಕ್ಷೇತರ ಅಭ್ಯರ್ಥಿ 1 ಸ್ಥಾನಗಳಲ್ಲಿ ವಿಜಯಿಯಾಗಿವೆ. ಟಿಆರ್‌ಎಸ್‌ ಮತ್ತು ಬಿಜೆಪಿ ನಡುವೆ 7 ಸ್ಥಾನಗಳ ವ್ಯತ್ಯಾಸ ಕಂಡುಬಂದರೆ ಒಟ್ಟಾರೆ ಮತಗಳಿಕೆಯಲ್ಲಿ ಕೇವಲ 11 ಸಾವಿರ ಮತಗಳ ವ್ಯತ್ಯಾಸವಿದೆ. ಒಟ್ಟು ಚಲಾವಣೆಯಾದ ಮತಗಳಲ್ಲಿ ಟಿಆರ್‌ಎಸ್‌ 12.06 ಲಕ್ಷ (35.81%) ಮತಗಳನ್ನು ಪಡೆದರೆ ಬಿಜೆಪಿಯು 11.95 ಲಕ್ಷ (35.56%) ಮತಗಳನ್ನು ತನ್ನದಾಗಿಸಿಕೊಂಡಿದೆ. ಇಬ್ಬರ ನಡುವಿನ ವ್ಯತ್ಯಾಸ 11 ಸಾವಿರ ಮತಗಳು ಮಾತ್ರ.

ಬಿಜೆಪಿ ಹಿಂದುತ್ವದ ರಾಜಕಾರಣವನ್ನು ಯಶಸ್ವಿಯಾಗಿ ನಿರ್ವಹಿಸಿತು. ಮೊದಲು ಅದು ಟಿಆರ್‌ಎಸ್ ಮತ್ತು ಎಐಎಂಐಎಂ ನಡುವೆ ಒಳ ಒಪ್ಪಂದವಾಗಿದೆ ಎಂದು ಪ್ರಚಾರ ಮಾಡಿತು. ಹೈದರಾಬಾದಿನಲ್ಲಿ 30,000-40,000 ರೋಹಿಂಗ್ಯಾ ಮುಸ್ಲಿಮರಿದ್ದಾರೆ ಎಂದು ಅಪಪ್ರಚಾರ ಮಾಡಿತು. ತಾವು ಅಧಿಕಾರಕ್ಕೆ ಬಂದರೆ ಹೈದರಾಬಾದ್ ಬದಲು ಭಾಗ್ಯನಗರ ಎಂದು ಮರುನಾಮಕರಣ ಮಾಡುವುದಾಗಿ ಘೋಷಿಸಿದರು. ಗೃಹ ಸಚಿವ ಅಮಿತ್‌ ಶಾ ಆದಿಯಾಗಿ ಹಿಂದುತ್ವದ ಪ್ರಖರ ಮುಖ ತೇಜಸ್ವಿ ಸೂರ್ಯ ಸೇರಿ ಘಟಾನುಘಟಿಗಳು ಪ್ರಚಾರಕ್ಕೆ ಬಂದು ಹೋದರು.

ಬಿಜೆಪಿಯ ಹಿಂದುತ್ವ ರಾಜಕಾರಣದ ಹೊರತಾಗಿಯೂ ಟಿಆರ್‌ಎಸ್‌ ಸರ್ಕಾರದ ಮೇಲಿನ ಆಡಳಿತ ವಿರೋಧಿ ಅಲೆ ಮತ್ತು ಇತ್ತೀಚೆಗೆ ಹೈದರಾಬಾದ್‌ನಲ್ಲಿ ಉಂಟಾದ ಪ್ರವಾಹವು ಜನರು ಟಿಆರ್‌ಎಸ್‌ ವಿರುದ್ಧ ಮತ ಹಾಕುವಂತೆ ಮಾಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಅದಕ್ಕೆ ಪೂರಕವೆಂಬಂತೆ ಇತ್ತೀಚಿನ ಭಾರಿ ಮಳೆ ಮತ್ತು ಪ್ರವಾಹದ ಸಂದರ್ಭದಲ್ಲಿ ಭಾರಿ ಹಾನಿಗೊಳಗಾದ ಪ್ರದೇಶಗಳಾದ ಸರೂರ್‌ನಗರ, ಹಯಾತ್‌ನಗರ, ಗಡಿಯನ್ನಾರಂ, ನಾಗೋಲ್, ಮೂಸರಂಬಾಗ್, ಅಂಬರ್ಪೆಟ್, ರಾಮಂತಪುರ, ಉಪ್ಪಲ್, ಕವಡಿಗುಡ, ಗಾಂಧಿನಗರ ಮತ್ತು ಮೈಲಾರ್‌ದೇವ್‌ಪಲ್ಲಿ ವಾರ್ಡ್‌ಗಳಲ್ಲಿ ಬಿಜೆಪಿ ಗೆದ್ದಿದೆ.

ಮತ್ತೊಂದು ಕುತೂಹಲಕಾರಿ ಅಂಶವೆಂದರೆ ಪ್ರತ್ಯೇಕ ತೆಲಂಗಾಣದಲ್ಲಿ ನಡೆದ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ತೆಲಂಗಾಣಿಗರು ವಾಸಿಸುವ ರಾಮ್‌ನಗರ, ಗಾಂಧಿನಗರ, ಕಚಿಗುಡ, ನಲ್ಲಕುಂತ, ಬಾಗ್ ಅಂಬರ್‌ಪೇಟೆ, ಮುಶೀರಬಾದ್ ಮುಂತಾದ ಪ್ರದೇಶಗಳಲ್ಲಿನ ಎಲ್ಲಾ ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. ಇದನ್ನು ಟಿಆರ್‌ಎಸ್‌ನ ಭದ್ರಕೋಟೆ ಎಂದೇ ಕರೆಯಲಾಗುತ್ತಿತ್ತು.

ಒಟ್ಟಿನಲ್ಲಿ ತೆಲಂಗಾಣದಲ್ಲಿ 2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಭದ್ರ ಅಡಿಪಾಯ ಹಾಕಿಕೊಂಡಿದೆ. ಈ ಚುನಾವಣೆಯಲ್ಲಿ ಟಿಆರ್‌ಎಸ್-ಎಐಎಂಐಎಂ‌ ಸರ್ಕಾರ ರಚಿಸಿದರೂ ಸಹ ಅಧಿಕೃತವಾಗಿ ಗೆದ್ದಿರುವುದು ಬಿಜೆಪಿ ಎಂತಲೇ ಹೇಳಲಾಗುತ್ತಿದೆ.


ಇದನ್ನೂ ಓದಿ; ಪರಿಷತ್ ಚುನಾವಣೆ: ದಶಕಗಳ ನಂತರ ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಬಿಜೆಪಿಗೆ ಹೀನಾಯ ಸೋಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...