Homeಮುಖಪುಟಹೈದರಾಬಾದ್ ಪಾಲಿಕೆ ಚುನಾವಣೆ: TRS-BJP ನಡುವಿನ ಮತಗಳ ವ್ಯತ್ಯಾಸ ಕೇವಲ 11,000!

ಹೈದರಾಬಾದ್ ಪಾಲಿಕೆ ಚುನಾವಣೆ: TRS-BJP ನಡುವಿನ ಮತಗಳ ವ್ಯತ್ಯಾಸ ಕೇವಲ 11,000!

ಬಿಜೆಪಿಯ ಹಿಂದುತ್ವ ರಾಜಕಾರಣದ ಹೊರತಾಗಿಯೂ ಟಿಆರ್‌ಎಸ್‌ ಸರ್ಕಾರದ ಮೇಲಿನ ಆಡಳಿತ ವಿರೋಧಿ ಅಲೆ ಮತ್ತು ಇತ್ತೀಚೆಗೆ ಹೈದರಾಬಾದ್‌ನಲ್ಲಿ ಉಂಟಾದ ಪ್ರವಾಹವು ಜನರು ಟಿಆರ್‌ಎಸ್‌ ವಿರುದ್ಧ ಮತ ಹಾಕುವಂತೆ ಮಾಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

- Advertisement -
- Advertisement -

ಇತ್ತೀಚೆಗೆ ನಡೆದ ಗ್ರೇಟರ್ ಹೈದರಾಬಾದ್ ಮುನಿಸಿಪಾಲ್ ಕಾರ್ಪೋರೇಷನ್ ಚುನಾವಣೆಯಲ್ಲಿ ಬಿಜೆಪಿ ಹೇಗೆ ತನ್ನ ಹಿಂದುತ್ವ ರಾಜಕಾರಣದಿಂದ ಗಮನಾರ್ಹ ಸಾಧನೆ ಮಾಡಿತು ಎಂದು ತಿಳಿದಿದೆ. ಆದರೆ ಚುನಾವಣೆಯಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಸಹ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಟಿಆರ್‌ಎಸ್‌ಗಿಂತ ಕೇವಲ ಒಂದು ಹೆಜ್ಜೆ ಮಾತ್ರ ಹಿಂದಿದೆ ಎಂಬುದನ್ನು ಮತ ಎಣಿಕೆ ನಂತರದ ಅಂಕಿ ಅಂಶಗಳು ತೋರಿಸಿವೆ.

ಪಾಲಿಕೆ ಚುನಾವಣೆಯಲ್ಲಿ ಟಿಆರ್‌ಎಸ್ 55, ಬಿಜೆಪಿ 48, ಎಐಎಂಐಎಂ 44, ಕಾಂಗ್ರೆಸ್ 02 ಮತ್ತು ಪಕ್ಷೇತರ ಅಭ್ಯರ್ಥಿ 1 ಸ್ಥಾನಗಳಲ್ಲಿ ವಿಜಯಿಯಾಗಿವೆ. ಟಿಆರ್‌ಎಸ್‌ ಮತ್ತು ಬಿಜೆಪಿ ನಡುವೆ 7 ಸ್ಥಾನಗಳ ವ್ಯತ್ಯಾಸ ಕಂಡುಬಂದರೆ ಒಟ್ಟಾರೆ ಮತಗಳಿಕೆಯಲ್ಲಿ ಕೇವಲ 11 ಸಾವಿರ ಮತಗಳ ವ್ಯತ್ಯಾಸವಿದೆ. ಒಟ್ಟು ಚಲಾವಣೆಯಾದ ಮತಗಳಲ್ಲಿ ಟಿಆರ್‌ಎಸ್‌ 12.06 ಲಕ್ಷ (35.81%) ಮತಗಳನ್ನು ಪಡೆದರೆ ಬಿಜೆಪಿಯು 11.95 ಲಕ್ಷ (35.56%) ಮತಗಳನ್ನು ತನ್ನದಾಗಿಸಿಕೊಂಡಿದೆ. ಇಬ್ಬರ ನಡುವಿನ ವ್ಯತ್ಯಾಸ 11 ಸಾವಿರ ಮತಗಳು ಮಾತ್ರ.

ಬಿಜೆಪಿ ಹಿಂದುತ್ವದ ರಾಜಕಾರಣವನ್ನು ಯಶಸ್ವಿಯಾಗಿ ನಿರ್ವಹಿಸಿತು. ಮೊದಲು ಅದು ಟಿಆರ್‌ಎಸ್ ಮತ್ತು ಎಐಎಂಐಎಂ ನಡುವೆ ಒಳ ಒಪ್ಪಂದವಾಗಿದೆ ಎಂದು ಪ್ರಚಾರ ಮಾಡಿತು. ಹೈದರಾಬಾದಿನಲ್ಲಿ 30,000-40,000 ರೋಹಿಂಗ್ಯಾ ಮುಸ್ಲಿಮರಿದ್ದಾರೆ ಎಂದು ಅಪಪ್ರಚಾರ ಮಾಡಿತು. ತಾವು ಅಧಿಕಾರಕ್ಕೆ ಬಂದರೆ ಹೈದರಾಬಾದ್ ಬದಲು ಭಾಗ್ಯನಗರ ಎಂದು ಮರುನಾಮಕರಣ ಮಾಡುವುದಾಗಿ ಘೋಷಿಸಿದರು. ಗೃಹ ಸಚಿವ ಅಮಿತ್‌ ಶಾ ಆದಿಯಾಗಿ ಹಿಂದುತ್ವದ ಪ್ರಖರ ಮುಖ ತೇಜಸ್ವಿ ಸೂರ್ಯ ಸೇರಿ ಘಟಾನುಘಟಿಗಳು ಪ್ರಚಾರಕ್ಕೆ ಬಂದು ಹೋದರು.

ಬಿಜೆಪಿಯ ಹಿಂದುತ್ವ ರಾಜಕಾರಣದ ಹೊರತಾಗಿಯೂ ಟಿಆರ್‌ಎಸ್‌ ಸರ್ಕಾರದ ಮೇಲಿನ ಆಡಳಿತ ವಿರೋಧಿ ಅಲೆ ಮತ್ತು ಇತ್ತೀಚೆಗೆ ಹೈದರಾಬಾದ್‌ನಲ್ಲಿ ಉಂಟಾದ ಪ್ರವಾಹವು ಜನರು ಟಿಆರ್‌ಎಸ್‌ ವಿರುದ್ಧ ಮತ ಹಾಕುವಂತೆ ಮಾಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಅದಕ್ಕೆ ಪೂರಕವೆಂಬಂತೆ ಇತ್ತೀಚಿನ ಭಾರಿ ಮಳೆ ಮತ್ತು ಪ್ರವಾಹದ ಸಂದರ್ಭದಲ್ಲಿ ಭಾರಿ ಹಾನಿಗೊಳಗಾದ ಪ್ರದೇಶಗಳಾದ ಸರೂರ್‌ನಗರ, ಹಯಾತ್‌ನಗರ, ಗಡಿಯನ್ನಾರಂ, ನಾಗೋಲ್, ಮೂಸರಂಬಾಗ್, ಅಂಬರ್ಪೆಟ್, ರಾಮಂತಪುರ, ಉಪ್ಪಲ್, ಕವಡಿಗುಡ, ಗಾಂಧಿನಗರ ಮತ್ತು ಮೈಲಾರ್‌ದೇವ್‌ಪಲ್ಲಿ ವಾರ್ಡ್‌ಗಳಲ್ಲಿ ಬಿಜೆಪಿ ಗೆದ್ದಿದೆ.

ಮತ್ತೊಂದು ಕುತೂಹಲಕಾರಿ ಅಂಶವೆಂದರೆ ಪ್ರತ್ಯೇಕ ತೆಲಂಗಾಣದಲ್ಲಿ ನಡೆದ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ತೆಲಂಗಾಣಿಗರು ವಾಸಿಸುವ ರಾಮ್‌ನಗರ, ಗಾಂಧಿನಗರ, ಕಚಿಗುಡ, ನಲ್ಲಕುಂತ, ಬಾಗ್ ಅಂಬರ್‌ಪೇಟೆ, ಮುಶೀರಬಾದ್ ಮುಂತಾದ ಪ್ರದೇಶಗಳಲ್ಲಿನ ಎಲ್ಲಾ ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. ಇದನ್ನು ಟಿಆರ್‌ಎಸ್‌ನ ಭದ್ರಕೋಟೆ ಎಂದೇ ಕರೆಯಲಾಗುತ್ತಿತ್ತು.

ಒಟ್ಟಿನಲ್ಲಿ ತೆಲಂಗಾಣದಲ್ಲಿ 2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಭದ್ರ ಅಡಿಪಾಯ ಹಾಕಿಕೊಂಡಿದೆ. ಈ ಚುನಾವಣೆಯಲ್ಲಿ ಟಿಆರ್‌ಎಸ್-ಎಐಎಂಐಎಂ‌ ಸರ್ಕಾರ ರಚಿಸಿದರೂ ಸಹ ಅಧಿಕೃತವಾಗಿ ಗೆದ್ದಿರುವುದು ಬಿಜೆಪಿ ಎಂತಲೇ ಹೇಳಲಾಗುತ್ತಿದೆ.


ಇದನ್ನೂ ಓದಿ; ಪರಿಷತ್ ಚುನಾವಣೆ: ದಶಕಗಳ ನಂತರ ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಬಿಜೆಪಿಗೆ ಹೀನಾಯ ಸೋಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...