Homeಮುಖಪುಟಹೈದರಾಬಾದ್ ಪಾಲಿಕೆ ಚುನಾವಣೆ: TRS-BJP ನಡುವಿನ ಮತಗಳ ವ್ಯತ್ಯಾಸ ಕೇವಲ 11,000!

ಹೈದರಾಬಾದ್ ಪಾಲಿಕೆ ಚುನಾವಣೆ: TRS-BJP ನಡುವಿನ ಮತಗಳ ವ್ಯತ್ಯಾಸ ಕೇವಲ 11,000!

ಬಿಜೆಪಿಯ ಹಿಂದುತ್ವ ರಾಜಕಾರಣದ ಹೊರತಾಗಿಯೂ ಟಿಆರ್‌ಎಸ್‌ ಸರ್ಕಾರದ ಮೇಲಿನ ಆಡಳಿತ ವಿರೋಧಿ ಅಲೆ ಮತ್ತು ಇತ್ತೀಚೆಗೆ ಹೈದರಾಬಾದ್‌ನಲ್ಲಿ ಉಂಟಾದ ಪ್ರವಾಹವು ಜನರು ಟಿಆರ್‌ಎಸ್‌ ವಿರುದ್ಧ ಮತ ಹಾಕುವಂತೆ ಮಾಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

- Advertisement -
- Advertisement -

ಇತ್ತೀಚೆಗೆ ನಡೆದ ಗ್ರೇಟರ್ ಹೈದರಾಬಾದ್ ಮುನಿಸಿಪಾಲ್ ಕಾರ್ಪೋರೇಷನ್ ಚುನಾವಣೆಯಲ್ಲಿ ಬಿಜೆಪಿ ಹೇಗೆ ತನ್ನ ಹಿಂದುತ್ವ ರಾಜಕಾರಣದಿಂದ ಗಮನಾರ್ಹ ಸಾಧನೆ ಮಾಡಿತು ಎಂದು ತಿಳಿದಿದೆ. ಆದರೆ ಚುನಾವಣೆಯಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಸಹ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಟಿಆರ್‌ಎಸ್‌ಗಿಂತ ಕೇವಲ ಒಂದು ಹೆಜ್ಜೆ ಮಾತ್ರ ಹಿಂದಿದೆ ಎಂಬುದನ್ನು ಮತ ಎಣಿಕೆ ನಂತರದ ಅಂಕಿ ಅಂಶಗಳು ತೋರಿಸಿವೆ.

ಪಾಲಿಕೆ ಚುನಾವಣೆಯಲ್ಲಿ ಟಿಆರ್‌ಎಸ್ 55, ಬಿಜೆಪಿ 48, ಎಐಎಂಐಎಂ 44, ಕಾಂಗ್ರೆಸ್ 02 ಮತ್ತು ಪಕ್ಷೇತರ ಅಭ್ಯರ್ಥಿ 1 ಸ್ಥಾನಗಳಲ್ಲಿ ವಿಜಯಿಯಾಗಿವೆ. ಟಿಆರ್‌ಎಸ್‌ ಮತ್ತು ಬಿಜೆಪಿ ನಡುವೆ 7 ಸ್ಥಾನಗಳ ವ್ಯತ್ಯಾಸ ಕಂಡುಬಂದರೆ ಒಟ್ಟಾರೆ ಮತಗಳಿಕೆಯಲ್ಲಿ ಕೇವಲ 11 ಸಾವಿರ ಮತಗಳ ವ್ಯತ್ಯಾಸವಿದೆ. ಒಟ್ಟು ಚಲಾವಣೆಯಾದ ಮತಗಳಲ್ಲಿ ಟಿಆರ್‌ಎಸ್‌ 12.06 ಲಕ್ಷ (35.81%) ಮತಗಳನ್ನು ಪಡೆದರೆ ಬಿಜೆಪಿಯು 11.95 ಲಕ್ಷ (35.56%) ಮತಗಳನ್ನು ತನ್ನದಾಗಿಸಿಕೊಂಡಿದೆ. ಇಬ್ಬರ ನಡುವಿನ ವ್ಯತ್ಯಾಸ 11 ಸಾವಿರ ಮತಗಳು ಮಾತ್ರ.

ಬಿಜೆಪಿ ಹಿಂದುತ್ವದ ರಾಜಕಾರಣವನ್ನು ಯಶಸ್ವಿಯಾಗಿ ನಿರ್ವಹಿಸಿತು. ಮೊದಲು ಅದು ಟಿಆರ್‌ಎಸ್ ಮತ್ತು ಎಐಎಂಐಎಂ ನಡುವೆ ಒಳ ಒಪ್ಪಂದವಾಗಿದೆ ಎಂದು ಪ್ರಚಾರ ಮಾಡಿತು. ಹೈದರಾಬಾದಿನಲ್ಲಿ 30,000-40,000 ರೋಹಿಂಗ್ಯಾ ಮುಸ್ಲಿಮರಿದ್ದಾರೆ ಎಂದು ಅಪಪ್ರಚಾರ ಮಾಡಿತು. ತಾವು ಅಧಿಕಾರಕ್ಕೆ ಬಂದರೆ ಹೈದರಾಬಾದ್ ಬದಲು ಭಾಗ್ಯನಗರ ಎಂದು ಮರುನಾಮಕರಣ ಮಾಡುವುದಾಗಿ ಘೋಷಿಸಿದರು. ಗೃಹ ಸಚಿವ ಅಮಿತ್‌ ಶಾ ಆದಿಯಾಗಿ ಹಿಂದುತ್ವದ ಪ್ರಖರ ಮುಖ ತೇಜಸ್ವಿ ಸೂರ್ಯ ಸೇರಿ ಘಟಾನುಘಟಿಗಳು ಪ್ರಚಾರಕ್ಕೆ ಬಂದು ಹೋದರು.

ಬಿಜೆಪಿಯ ಹಿಂದುತ್ವ ರಾಜಕಾರಣದ ಹೊರತಾಗಿಯೂ ಟಿಆರ್‌ಎಸ್‌ ಸರ್ಕಾರದ ಮೇಲಿನ ಆಡಳಿತ ವಿರೋಧಿ ಅಲೆ ಮತ್ತು ಇತ್ತೀಚೆಗೆ ಹೈದರಾಬಾದ್‌ನಲ್ಲಿ ಉಂಟಾದ ಪ್ರವಾಹವು ಜನರು ಟಿಆರ್‌ಎಸ್‌ ವಿರುದ್ಧ ಮತ ಹಾಕುವಂತೆ ಮಾಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಅದಕ್ಕೆ ಪೂರಕವೆಂಬಂತೆ ಇತ್ತೀಚಿನ ಭಾರಿ ಮಳೆ ಮತ್ತು ಪ್ರವಾಹದ ಸಂದರ್ಭದಲ್ಲಿ ಭಾರಿ ಹಾನಿಗೊಳಗಾದ ಪ್ರದೇಶಗಳಾದ ಸರೂರ್‌ನಗರ, ಹಯಾತ್‌ನಗರ, ಗಡಿಯನ್ನಾರಂ, ನಾಗೋಲ್, ಮೂಸರಂಬಾಗ್, ಅಂಬರ್ಪೆಟ್, ರಾಮಂತಪುರ, ಉಪ್ಪಲ್, ಕವಡಿಗುಡ, ಗಾಂಧಿನಗರ ಮತ್ತು ಮೈಲಾರ್‌ದೇವ್‌ಪಲ್ಲಿ ವಾರ್ಡ್‌ಗಳಲ್ಲಿ ಬಿಜೆಪಿ ಗೆದ್ದಿದೆ.

ಮತ್ತೊಂದು ಕುತೂಹಲಕಾರಿ ಅಂಶವೆಂದರೆ ಪ್ರತ್ಯೇಕ ತೆಲಂಗಾಣದಲ್ಲಿ ನಡೆದ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ತೆಲಂಗಾಣಿಗರು ವಾಸಿಸುವ ರಾಮ್‌ನಗರ, ಗಾಂಧಿನಗರ, ಕಚಿಗುಡ, ನಲ್ಲಕುಂತ, ಬಾಗ್ ಅಂಬರ್‌ಪೇಟೆ, ಮುಶೀರಬಾದ್ ಮುಂತಾದ ಪ್ರದೇಶಗಳಲ್ಲಿನ ಎಲ್ಲಾ ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. ಇದನ್ನು ಟಿಆರ್‌ಎಸ್‌ನ ಭದ್ರಕೋಟೆ ಎಂದೇ ಕರೆಯಲಾಗುತ್ತಿತ್ತು.

ಒಟ್ಟಿನಲ್ಲಿ ತೆಲಂಗಾಣದಲ್ಲಿ 2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಭದ್ರ ಅಡಿಪಾಯ ಹಾಕಿಕೊಂಡಿದೆ. ಈ ಚುನಾವಣೆಯಲ್ಲಿ ಟಿಆರ್‌ಎಸ್-ಎಐಎಂಐಎಂ‌ ಸರ್ಕಾರ ರಚಿಸಿದರೂ ಸಹ ಅಧಿಕೃತವಾಗಿ ಗೆದ್ದಿರುವುದು ಬಿಜೆಪಿ ಎಂತಲೇ ಹೇಳಲಾಗುತ್ತಿದೆ.


ಇದನ್ನೂ ಓದಿ; ಪರಿಷತ್ ಚುನಾವಣೆ: ದಶಕಗಳ ನಂತರ ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಬಿಜೆಪಿಗೆ ಹೀನಾಯ ಸೋಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...