Homeಮುಖಪುಟಹೈದರಾಬಾದ್ ಪಾಲಿಕೆ ಚುನಾವಣೆ: TRS-BJP ನಡುವಿನ ಮತಗಳ ವ್ಯತ್ಯಾಸ ಕೇವಲ 11,000!

ಹೈದರಾಬಾದ್ ಪಾಲಿಕೆ ಚುನಾವಣೆ: TRS-BJP ನಡುವಿನ ಮತಗಳ ವ್ಯತ್ಯಾಸ ಕೇವಲ 11,000!

ಬಿಜೆಪಿಯ ಹಿಂದುತ್ವ ರಾಜಕಾರಣದ ಹೊರತಾಗಿಯೂ ಟಿಆರ್‌ಎಸ್‌ ಸರ್ಕಾರದ ಮೇಲಿನ ಆಡಳಿತ ವಿರೋಧಿ ಅಲೆ ಮತ್ತು ಇತ್ತೀಚೆಗೆ ಹೈದರಾಬಾದ್‌ನಲ್ಲಿ ಉಂಟಾದ ಪ್ರವಾಹವು ಜನರು ಟಿಆರ್‌ಎಸ್‌ ವಿರುದ್ಧ ಮತ ಹಾಕುವಂತೆ ಮಾಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

- Advertisement -
- Advertisement -

ಇತ್ತೀಚೆಗೆ ನಡೆದ ಗ್ರೇಟರ್ ಹೈದರಾಬಾದ್ ಮುನಿಸಿಪಾಲ್ ಕಾರ್ಪೋರೇಷನ್ ಚುನಾವಣೆಯಲ್ಲಿ ಬಿಜೆಪಿ ಹೇಗೆ ತನ್ನ ಹಿಂದುತ್ವ ರಾಜಕಾರಣದಿಂದ ಗಮನಾರ್ಹ ಸಾಧನೆ ಮಾಡಿತು ಎಂದು ತಿಳಿದಿದೆ. ಆದರೆ ಚುನಾವಣೆಯಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಸಹ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಟಿಆರ್‌ಎಸ್‌ಗಿಂತ ಕೇವಲ ಒಂದು ಹೆಜ್ಜೆ ಮಾತ್ರ ಹಿಂದಿದೆ ಎಂಬುದನ್ನು ಮತ ಎಣಿಕೆ ನಂತರದ ಅಂಕಿ ಅಂಶಗಳು ತೋರಿಸಿವೆ.

ಪಾಲಿಕೆ ಚುನಾವಣೆಯಲ್ಲಿ ಟಿಆರ್‌ಎಸ್ 55, ಬಿಜೆಪಿ 48, ಎಐಎಂಐಎಂ 44, ಕಾಂಗ್ರೆಸ್ 02 ಮತ್ತು ಪಕ್ಷೇತರ ಅಭ್ಯರ್ಥಿ 1 ಸ್ಥಾನಗಳಲ್ಲಿ ವಿಜಯಿಯಾಗಿವೆ. ಟಿಆರ್‌ಎಸ್‌ ಮತ್ತು ಬಿಜೆಪಿ ನಡುವೆ 7 ಸ್ಥಾನಗಳ ವ್ಯತ್ಯಾಸ ಕಂಡುಬಂದರೆ ಒಟ್ಟಾರೆ ಮತಗಳಿಕೆಯಲ್ಲಿ ಕೇವಲ 11 ಸಾವಿರ ಮತಗಳ ವ್ಯತ್ಯಾಸವಿದೆ. ಒಟ್ಟು ಚಲಾವಣೆಯಾದ ಮತಗಳಲ್ಲಿ ಟಿಆರ್‌ಎಸ್‌ 12.06 ಲಕ್ಷ (35.81%) ಮತಗಳನ್ನು ಪಡೆದರೆ ಬಿಜೆಪಿಯು 11.95 ಲಕ್ಷ (35.56%) ಮತಗಳನ್ನು ತನ್ನದಾಗಿಸಿಕೊಂಡಿದೆ. ಇಬ್ಬರ ನಡುವಿನ ವ್ಯತ್ಯಾಸ 11 ಸಾವಿರ ಮತಗಳು ಮಾತ್ರ.

ಬಿಜೆಪಿ ಹಿಂದುತ್ವದ ರಾಜಕಾರಣವನ್ನು ಯಶಸ್ವಿಯಾಗಿ ನಿರ್ವಹಿಸಿತು. ಮೊದಲು ಅದು ಟಿಆರ್‌ಎಸ್ ಮತ್ತು ಎಐಎಂಐಎಂ ನಡುವೆ ಒಳ ಒಪ್ಪಂದವಾಗಿದೆ ಎಂದು ಪ್ರಚಾರ ಮಾಡಿತು. ಹೈದರಾಬಾದಿನಲ್ಲಿ 30,000-40,000 ರೋಹಿಂಗ್ಯಾ ಮುಸ್ಲಿಮರಿದ್ದಾರೆ ಎಂದು ಅಪಪ್ರಚಾರ ಮಾಡಿತು. ತಾವು ಅಧಿಕಾರಕ್ಕೆ ಬಂದರೆ ಹೈದರಾಬಾದ್ ಬದಲು ಭಾಗ್ಯನಗರ ಎಂದು ಮರುನಾಮಕರಣ ಮಾಡುವುದಾಗಿ ಘೋಷಿಸಿದರು. ಗೃಹ ಸಚಿವ ಅಮಿತ್‌ ಶಾ ಆದಿಯಾಗಿ ಹಿಂದುತ್ವದ ಪ್ರಖರ ಮುಖ ತೇಜಸ್ವಿ ಸೂರ್ಯ ಸೇರಿ ಘಟಾನುಘಟಿಗಳು ಪ್ರಚಾರಕ್ಕೆ ಬಂದು ಹೋದರು.

ಬಿಜೆಪಿಯ ಹಿಂದುತ್ವ ರಾಜಕಾರಣದ ಹೊರತಾಗಿಯೂ ಟಿಆರ್‌ಎಸ್‌ ಸರ್ಕಾರದ ಮೇಲಿನ ಆಡಳಿತ ವಿರೋಧಿ ಅಲೆ ಮತ್ತು ಇತ್ತೀಚೆಗೆ ಹೈದರಾಬಾದ್‌ನಲ್ಲಿ ಉಂಟಾದ ಪ್ರವಾಹವು ಜನರು ಟಿಆರ್‌ಎಸ್‌ ವಿರುದ್ಧ ಮತ ಹಾಕುವಂತೆ ಮಾಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಅದಕ್ಕೆ ಪೂರಕವೆಂಬಂತೆ ಇತ್ತೀಚಿನ ಭಾರಿ ಮಳೆ ಮತ್ತು ಪ್ರವಾಹದ ಸಂದರ್ಭದಲ್ಲಿ ಭಾರಿ ಹಾನಿಗೊಳಗಾದ ಪ್ರದೇಶಗಳಾದ ಸರೂರ್‌ನಗರ, ಹಯಾತ್‌ನಗರ, ಗಡಿಯನ್ನಾರಂ, ನಾಗೋಲ್, ಮೂಸರಂಬಾಗ್, ಅಂಬರ್ಪೆಟ್, ರಾಮಂತಪುರ, ಉಪ್ಪಲ್, ಕವಡಿಗುಡ, ಗಾಂಧಿನಗರ ಮತ್ತು ಮೈಲಾರ್‌ದೇವ್‌ಪಲ್ಲಿ ವಾರ್ಡ್‌ಗಳಲ್ಲಿ ಬಿಜೆಪಿ ಗೆದ್ದಿದೆ.

ಮತ್ತೊಂದು ಕುತೂಹಲಕಾರಿ ಅಂಶವೆಂದರೆ ಪ್ರತ್ಯೇಕ ತೆಲಂಗಾಣದಲ್ಲಿ ನಡೆದ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ತೆಲಂಗಾಣಿಗರು ವಾಸಿಸುವ ರಾಮ್‌ನಗರ, ಗಾಂಧಿನಗರ, ಕಚಿಗುಡ, ನಲ್ಲಕುಂತ, ಬಾಗ್ ಅಂಬರ್‌ಪೇಟೆ, ಮುಶೀರಬಾದ್ ಮುಂತಾದ ಪ್ರದೇಶಗಳಲ್ಲಿನ ಎಲ್ಲಾ ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. ಇದನ್ನು ಟಿಆರ್‌ಎಸ್‌ನ ಭದ್ರಕೋಟೆ ಎಂದೇ ಕರೆಯಲಾಗುತ್ತಿತ್ತು.

ಒಟ್ಟಿನಲ್ಲಿ ತೆಲಂಗಾಣದಲ್ಲಿ 2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಭದ್ರ ಅಡಿಪಾಯ ಹಾಕಿಕೊಂಡಿದೆ. ಈ ಚುನಾವಣೆಯಲ್ಲಿ ಟಿಆರ್‌ಎಸ್-ಎಐಎಂಐಎಂ‌ ಸರ್ಕಾರ ರಚಿಸಿದರೂ ಸಹ ಅಧಿಕೃತವಾಗಿ ಗೆದ್ದಿರುವುದು ಬಿಜೆಪಿ ಎಂತಲೇ ಹೇಳಲಾಗುತ್ತಿದೆ.


ಇದನ್ನೂ ಓದಿ; ಪರಿಷತ್ ಚುನಾವಣೆ: ದಶಕಗಳ ನಂತರ ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಬಿಜೆಪಿಗೆ ಹೀನಾಯ ಸೋಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...