Homeಮುಖಪುಟಹೈದರಾಬಾದ್ ಪಾಲಿಕೆ ಚುನಾವಣೆ: TRS-BJP ನಡುವಿನ ಮತಗಳ ವ್ಯತ್ಯಾಸ ಕೇವಲ 11,000!

ಹೈದರಾಬಾದ್ ಪಾಲಿಕೆ ಚುನಾವಣೆ: TRS-BJP ನಡುವಿನ ಮತಗಳ ವ್ಯತ್ಯಾಸ ಕೇವಲ 11,000!

ಬಿಜೆಪಿಯ ಹಿಂದುತ್ವ ರಾಜಕಾರಣದ ಹೊರತಾಗಿಯೂ ಟಿಆರ್‌ಎಸ್‌ ಸರ್ಕಾರದ ಮೇಲಿನ ಆಡಳಿತ ವಿರೋಧಿ ಅಲೆ ಮತ್ತು ಇತ್ತೀಚೆಗೆ ಹೈದರಾಬಾದ್‌ನಲ್ಲಿ ಉಂಟಾದ ಪ್ರವಾಹವು ಜನರು ಟಿಆರ್‌ಎಸ್‌ ವಿರುದ್ಧ ಮತ ಹಾಕುವಂತೆ ಮಾಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

- Advertisement -
- Advertisement -

ಇತ್ತೀಚೆಗೆ ನಡೆದ ಗ್ರೇಟರ್ ಹೈದರಾಬಾದ್ ಮುನಿಸಿಪಾಲ್ ಕಾರ್ಪೋರೇಷನ್ ಚುನಾವಣೆಯಲ್ಲಿ ಬಿಜೆಪಿ ಹೇಗೆ ತನ್ನ ಹಿಂದುತ್ವ ರಾಜಕಾರಣದಿಂದ ಗಮನಾರ್ಹ ಸಾಧನೆ ಮಾಡಿತು ಎಂದು ತಿಳಿದಿದೆ. ಆದರೆ ಚುನಾವಣೆಯಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಸಹ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಟಿಆರ್‌ಎಸ್‌ಗಿಂತ ಕೇವಲ ಒಂದು ಹೆಜ್ಜೆ ಮಾತ್ರ ಹಿಂದಿದೆ ಎಂಬುದನ್ನು ಮತ ಎಣಿಕೆ ನಂತರದ ಅಂಕಿ ಅಂಶಗಳು ತೋರಿಸಿವೆ.

ಪಾಲಿಕೆ ಚುನಾವಣೆಯಲ್ಲಿ ಟಿಆರ್‌ಎಸ್ 55, ಬಿಜೆಪಿ 48, ಎಐಎಂಐಎಂ 44, ಕಾಂಗ್ರೆಸ್ 02 ಮತ್ತು ಪಕ್ಷೇತರ ಅಭ್ಯರ್ಥಿ 1 ಸ್ಥಾನಗಳಲ್ಲಿ ವಿಜಯಿಯಾಗಿವೆ. ಟಿಆರ್‌ಎಸ್‌ ಮತ್ತು ಬಿಜೆಪಿ ನಡುವೆ 7 ಸ್ಥಾನಗಳ ವ್ಯತ್ಯಾಸ ಕಂಡುಬಂದರೆ ಒಟ್ಟಾರೆ ಮತಗಳಿಕೆಯಲ್ಲಿ ಕೇವಲ 11 ಸಾವಿರ ಮತಗಳ ವ್ಯತ್ಯಾಸವಿದೆ. ಒಟ್ಟು ಚಲಾವಣೆಯಾದ ಮತಗಳಲ್ಲಿ ಟಿಆರ್‌ಎಸ್‌ 12.06 ಲಕ್ಷ (35.81%) ಮತಗಳನ್ನು ಪಡೆದರೆ ಬಿಜೆಪಿಯು 11.95 ಲಕ್ಷ (35.56%) ಮತಗಳನ್ನು ತನ್ನದಾಗಿಸಿಕೊಂಡಿದೆ. ಇಬ್ಬರ ನಡುವಿನ ವ್ಯತ್ಯಾಸ 11 ಸಾವಿರ ಮತಗಳು ಮಾತ್ರ.

ಬಿಜೆಪಿ ಹಿಂದುತ್ವದ ರಾಜಕಾರಣವನ್ನು ಯಶಸ್ವಿಯಾಗಿ ನಿರ್ವಹಿಸಿತು. ಮೊದಲು ಅದು ಟಿಆರ್‌ಎಸ್ ಮತ್ತು ಎಐಎಂಐಎಂ ನಡುವೆ ಒಳ ಒಪ್ಪಂದವಾಗಿದೆ ಎಂದು ಪ್ರಚಾರ ಮಾಡಿತು. ಹೈದರಾಬಾದಿನಲ್ಲಿ 30,000-40,000 ರೋಹಿಂಗ್ಯಾ ಮುಸ್ಲಿಮರಿದ್ದಾರೆ ಎಂದು ಅಪಪ್ರಚಾರ ಮಾಡಿತು. ತಾವು ಅಧಿಕಾರಕ್ಕೆ ಬಂದರೆ ಹೈದರಾಬಾದ್ ಬದಲು ಭಾಗ್ಯನಗರ ಎಂದು ಮರುನಾಮಕರಣ ಮಾಡುವುದಾಗಿ ಘೋಷಿಸಿದರು. ಗೃಹ ಸಚಿವ ಅಮಿತ್‌ ಶಾ ಆದಿಯಾಗಿ ಹಿಂದುತ್ವದ ಪ್ರಖರ ಮುಖ ತೇಜಸ್ವಿ ಸೂರ್ಯ ಸೇರಿ ಘಟಾನುಘಟಿಗಳು ಪ್ರಚಾರಕ್ಕೆ ಬಂದು ಹೋದರು.

ಬಿಜೆಪಿಯ ಹಿಂದುತ್ವ ರಾಜಕಾರಣದ ಹೊರತಾಗಿಯೂ ಟಿಆರ್‌ಎಸ್‌ ಸರ್ಕಾರದ ಮೇಲಿನ ಆಡಳಿತ ವಿರೋಧಿ ಅಲೆ ಮತ್ತು ಇತ್ತೀಚೆಗೆ ಹೈದರಾಬಾದ್‌ನಲ್ಲಿ ಉಂಟಾದ ಪ್ರವಾಹವು ಜನರು ಟಿಆರ್‌ಎಸ್‌ ವಿರುದ್ಧ ಮತ ಹಾಕುವಂತೆ ಮಾಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಅದಕ್ಕೆ ಪೂರಕವೆಂಬಂತೆ ಇತ್ತೀಚಿನ ಭಾರಿ ಮಳೆ ಮತ್ತು ಪ್ರವಾಹದ ಸಂದರ್ಭದಲ್ಲಿ ಭಾರಿ ಹಾನಿಗೊಳಗಾದ ಪ್ರದೇಶಗಳಾದ ಸರೂರ್‌ನಗರ, ಹಯಾತ್‌ನಗರ, ಗಡಿಯನ್ನಾರಂ, ನಾಗೋಲ್, ಮೂಸರಂಬಾಗ್, ಅಂಬರ್ಪೆಟ್, ರಾಮಂತಪುರ, ಉಪ್ಪಲ್, ಕವಡಿಗುಡ, ಗಾಂಧಿನಗರ ಮತ್ತು ಮೈಲಾರ್‌ದೇವ್‌ಪಲ್ಲಿ ವಾರ್ಡ್‌ಗಳಲ್ಲಿ ಬಿಜೆಪಿ ಗೆದ್ದಿದೆ.

ಮತ್ತೊಂದು ಕುತೂಹಲಕಾರಿ ಅಂಶವೆಂದರೆ ಪ್ರತ್ಯೇಕ ತೆಲಂಗಾಣದಲ್ಲಿ ನಡೆದ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ತೆಲಂಗಾಣಿಗರು ವಾಸಿಸುವ ರಾಮ್‌ನಗರ, ಗಾಂಧಿನಗರ, ಕಚಿಗುಡ, ನಲ್ಲಕುಂತ, ಬಾಗ್ ಅಂಬರ್‌ಪೇಟೆ, ಮುಶೀರಬಾದ್ ಮುಂತಾದ ಪ್ರದೇಶಗಳಲ್ಲಿನ ಎಲ್ಲಾ ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. ಇದನ್ನು ಟಿಆರ್‌ಎಸ್‌ನ ಭದ್ರಕೋಟೆ ಎಂದೇ ಕರೆಯಲಾಗುತ್ತಿತ್ತು.

ಒಟ್ಟಿನಲ್ಲಿ ತೆಲಂಗಾಣದಲ್ಲಿ 2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಭದ್ರ ಅಡಿಪಾಯ ಹಾಕಿಕೊಂಡಿದೆ. ಈ ಚುನಾವಣೆಯಲ್ಲಿ ಟಿಆರ್‌ಎಸ್-ಎಐಎಂಐಎಂ‌ ಸರ್ಕಾರ ರಚಿಸಿದರೂ ಸಹ ಅಧಿಕೃತವಾಗಿ ಗೆದ್ದಿರುವುದು ಬಿಜೆಪಿ ಎಂತಲೇ ಹೇಳಲಾಗುತ್ತಿದೆ.


ಇದನ್ನೂ ಓದಿ; ಪರಿಷತ್ ಚುನಾವಣೆ: ದಶಕಗಳ ನಂತರ ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಬಿಜೆಪಿಗೆ ಹೀನಾಯ ಸೋಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...