Homeಮುಖಪುಟಹೈದರಾಬಾದ್: ಉಚ್ಛಾಟಿತ ಬಿಜೆಪಿ ಶಾಸಕನ ರಾಮನವಮಿ ರ್ಯಾಲಿಯಲ್ಲಿ ನಾಥೂರಾಂ ಗೋಡ್ಸೆ ಚಿತ್ರ ಪ್ರತ್ಯಕ್ಷ

ಹೈದರಾಬಾದ್: ಉಚ್ಛಾಟಿತ ಬಿಜೆಪಿ ಶಾಸಕನ ರಾಮನವಮಿ ರ್ಯಾಲಿಯಲ್ಲಿ ನಾಥೂರಾಂ ಗೋಡ್ಸೆ ಚಿತ್ರ ಪ್ರತ್ಯಕ್ಷ

- Advertisement -
- Advertisement -

ತೆಲಂಗಾಣದ ಉಚ್ಛಾಟಿತ ಬಿಜೆಪಿ ಶಾಸಕ ರಾಜಾ ಸಿಂಗ್ ನೇತೃತ್ವದ ರಾಮನವಮಿ ರ್ಯಾಲಿಯಲ್ಲಿ ಮಹಾತ್ಮ ಗಾಂಧಿಯವರನ್ನು ಕೊಂದ ನಾಥೂರಾಂ ಗೋಡ್ಸೆಯ ಚಿತ್ರ ಇದ್ದುದ್ದು ಹೊಸ ವಿವಾದಕ್ಕೆ ಕಾರಣವಾಗಿದೆ.

ರಾಜಾ ಸಿಂಗ್ ಅವರು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರವಾದ ಗೋಶಾಮಹಲ್‌ನ ಸೀತಾರಾಂಬಾಗ್‌ನ ದೇವಸ್ಥಾನದಿಂದ ಆರಂಭವಾದ ಶೋಭಾ ಯಾತ್ರೆಯಲ್ಲಿ ನೂರಾರು ಜನರು ಭಾಗವಹಿಸಿದ್ದರು. ಯಾತ್ರೆ ಭಾಗವಾಗಿ ಹಾಡಿಗೆ ನೃತ್ಯ ಮಾಡುವಾಗ ಮತ್ತು ಕೇಸರಿ ಧ್ವಜಗಳನ್ನು ಬೀಸುವಾಗ ಗೋಡ್ಸೆಯ ಚಿತ್ರವನ್ನು ಹೊತ್ತುಕೊಂಡಿರುವುದು ಕಂಡುಬಂದಿದೆ.

ಕಳೆದ ವರ್ಷ ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಪ್ರಸ್ತುತ ಅಮಾನತುಗೊಂಡಿರುವ ಬಿಜೆಪಿ ಶಾಸಕ ರಾಜಾ ಸಿಂಗ್ ಗೋಡ್ಸೆ ಫೋಟೊ ತಂದಿದ್ದನ್ನು ಸಮರ್ಥಿಸಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋ ಬಿಡುಗಡೆ ಮಾಡಿ ಮಾತನಾಡಿರುವ ಅವರು, ಶೋಭಾ ಯಾತ್ರೆಯಲ್ಲಿ ಭಾಗವಹಿಸಿದ್ದವರು ಸ್ವಾತಂತ್ರ್ಯ ಹೋರಾಟಗಾರರಾದ ಛತ್ರಪತಿ ಶಿವಾಜಿ, ಮಹಾರಾಣಾ ಪ್ರತಾಪ್, ದಾಮೋದರ್ ಸಾರ್ವರ್ಕರ್ ಮತ್ತು ಇತರ ರಾಷ್ಟ್ರೀಯ ನಾಯಕರ ಛಾಯಾಚಿತ್ರಗಳನ್ನು ತಂದಿದ್ದರು. ಕೆಲವರು ನಾಥೂರಾಂ ಗೋಡ್ಸೆಯ ಫೋಟೋವನ್ನು ತಂದಿರಬಹುದು. ಇದು ಅವರು ನಂಬಿದ ಸಿದ್ಧಾಂತವನ್ನು ಅವಲಂಬಿಸಿರುತ್ತದೆ” ಎಂದಿದ್ದಾರೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ರಾಜಾ ಸಿಂಗ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದರು. ಪೊಲೀಸ್ ಕಮಿಷನರ್ ಪ್ರಿವೆಂಟಿವ್ ಡಿಟೆನ್ಶನ್ (ಪಿಡಿ) ಕಾಯ್ದೆಯನ್ನು ಜಾರಿಗೊಳಿಸಿದ ನಂತರ ಅವರನ್ನು ಆಗಸ್ಟ್ 25 ರಂದು ಜೈಲಿಗೆ ಕಳುಹಿಸಲಾಯಿತು. ಬಿಜೆಪಿ ಕೂಡ ಅವರನ್ನು ಪಕ್ಷದಿಂದ ಅಮಾನತುಗೊಳಿಸಿತ್ತು. ಪಿಡಿ ಆಕ್ಟ್ ಅಡಿಯಲ್ಲಿ ಬಂಧನಕ್ಕೊಳಗಾಗಿ ಎರಡು ತಿಂಗಳು ಜೈಲಿನಲ್ಲಿ ಕಳೆದ ನಂತರ ರಾಜಾ ಸಿಂಗ್ ಕಳೆದ ವರ್ಷ ನವೆಂಬರ್ 9 ರಂದು ಜೈಲಿನಿಂದ ಬಿಡುಗಡೆಯಾಗಿದ್ದರು.

ತೆಲಂಗಾಣ ಹೈಕೋರ್ಟ್ ಪೊಲೀಸ್ ಆಯುಕ್ತರ ಆದೇಶವನ್ನು ತಳ್ಳಿಹಾಕಿ ಶಾಸಕರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿತ್ತು, ಆದರೆ ಸಮುದಾಯಗಳ ನಡುವೆ ದ್ವೇಷವನ್ನುಂಟುಮಾಡುವ ಯಾವುದೇ ಭಾಷಣ ಮಾಡದಂತೆ ಸೂಚಿಸಿದೆ.

ಇದನ್ನೂ ಓದಿ: ಸಂಬಂಧ ಬಹಿರಂಗಪಡಿಸದಿರಲು ನೀಲಿಚಿತ್ರ ನಟಿಗೆ ಹಣ ಪಾವತಿ ಪ್ರಕರಣ: ಡೊನಾಲ್ಡ್ ಟಂಪ್‌ಗೆ ಬಂಧನ ಭೀತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...