Homeಮುಖಪುಟಹೈದರಾಬಾದ್: ಪಿಯುಸಿಯಲ್ಲಿ 80% ಗಳಿಸಿದರೂ ಕಾಲೇಜು ಶುಲ್ಕ ಕಟ್ಟಲಾಗದೇ ಕೂಲಿ ಕಾರ್ಮಿಕಳಾದ ವಿದ್ಯಾರ್ಥಿನಿ

ಹೈದರಾಬಾದ್: ಪಿಯುಸಿಯಲ್ಲಿ 80% ಗಳಿಸಿದರೂ ಕಾಲೇಜು ಶುಲ್ಕ ಕಟ್ಟಲಾಗದೇ ಕೂಲಿ ಕಾರ್ಮಿಕಳಾದ ವಿದ್ಯಾರ್ಥಿನಿ

- Advertisement -
- Advertisement -

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 80 ರಷ್ಟು ಅಂಕಗಳನ್ನು ಗಳಿಸಿ, ಕಾಲೇಜಿನ ಮ್ಯಾಗಜಿನ್‌ನ ಮುಖಪುಟದಲ್ಲಿ ಮೂರನೇ ರ್‍ಯಾಂಕ್ ಹೋಲ್ಡರ್ ಆಗಿ ಕಾಣಿಸಿಕೊಂಡಿದ್ದ ವಿದ್ಯಾರ್ಥಿನಿ ಇಂದು ಕೂಲಿ ಕೆಲಸ ಮಾಡುತ್ತಿರುವ ಘಟನೆ ಹೈದರಾಬಾದ್‌ನಲ್ಲಿ ವರದಿಯಾಗಿದೆ.

ಹೈದರಾಬಾದ್‌ನ ಜವಾಹರನಗರದ ಡಂಪ್ ಯಾರ್ಡ್ ಬಳಿಯಿರುವ ಗಿರಿ ಪ್ರಸಾದ್ ನಗರದ ನಿವಾಸಿ 17 ವರ್ಷದ ತಿರುಪತಮ್ಮ, ಕಷ್ಟಗಳ ನಡುವೆಯೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 80 ರಷ್ಟು ಅಂಕ ಗಳಿಸಿದ್ದಾರೆ. ಆದರೆ, ಕಾಲೇಜು ಶುಲ್ಕ ಕಟ್ಟಲಾಗದೇ ಕೆಲವೇ ದಿನಗಳಲ್ಲಿ ವಿದ್ಯಾಭ್ಯಾಸ ಬಿಟ್ಟು ಕೂಲಿ ಕೆಲಸಕ್ಕೆ ಇಳಿದಿದ್ದಾರೆ.

ಡ್ರೈ ಫ್ರೂಟ್ಸ್ ಪ್ಯಾಕಿಂಗ್ ಕಂಪನಿಯಲ್ಲಿ ದಿನಗೂಲಿ ಕೆಲಸ ಮಾಡುತ್ತಿರುವ ತಿರುಪತಮ್ಮ ಕಾಲೇಜಿನಲ್ಲಿ ಇನ್ನೂ 8,000 ರೂಪಾಯಿ ಶುಲ್ಕ ಬಾಕಿ ಉಳಿಸಿಕೊಂಡಿರುವುದರಿಂದ ಆಕೆಯ ಪ್ರಮಾಣಪತ್ರಗಳನ್ನು ನೀಡಲು ನಗರಂನಲ್ಲಿರುವ ಖಾಸಗಿ ಜೂನಿಯರ್ ಕಾಲೇಜು ನಿರಾಕರಿಸಿದೆ. ಈ ಕಾರಣಕ್ಕೆ ಆಕೆ ದಿನಗೂಲಿ ಕಾರ್ಮಿಕರಾಗಿದ್ದಾರೆ.

ಇದನ್ನೂ ಓದಿ: ತಮಿಳುನಾಡು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಾಂಶುಪಾಲೆ, ಶಿಕ್ಷಕನ ಬಂಧನ

“ನಾನು ಇಲ್ಲಿಯವರೆಗೆ ಕಾಲೇಜಿಗೆ 14,000 ರೂ. ಪಾವತಿಸಿದ್ದೇನೆ. ಇನ್ನೂ 8,000 ರೂಪಾಯಿ ಶುಲ್ಕವನ್ನು ಪಾವತಿಸಬೇಕಾಗಿದೆ. ಹೀಗಾಗಿ ಕಾಲೇಜಿನವರು ನನ್ನ ಪ್ರಮಾಣಪತ್ರಗಳನ್ನು ನೀಡುತ್ತಿಲ್ಲ. ಲಾಕ್‌ಡೌನ್, ಕೆಲಸದ ಕೊರತೆ ಮತ್ತು ಅನಾರೋಗ್ಯದ ಕಾರಣದಿಂದಾಗಿ ನನ್ನ ಕುಟುಂಬದವರಿಂದ ಊಟಕ್ಕೆ ಹಣ ಸಂಪಾದಿಸಲು ಕೂಡ ಸಾಧ್ಯವಾಗುತ್ತಿಲ್ಲ” ಎಂದು ತಿರುಪತಮ್ಮ ಹೇಳಿದ್ದಾರೆ.

ನಗರಂನಲ್ಲಿರುವ ಖಾಸಗಿ ಜೂನಿಯರ್ ಕಾಲೇಜು ತಿರುಪತಮ್ಮಗೆ ವರ್ಗಾವಣೆ ಮತ್ತು ನಡವಳಿಕೆ ಪ್ರಮಾಣಪತ್ರಗಳು ಮತ್ತು 10 ನೇ ತರಗತಿಯ ಅಂಕಪಟ್ಟಿ ನೀಡಲು ನಿರಾಕರಿಸಿದೆ.

ತಿರುಪತಮ್ಮ ಅವರ ತಂದೆ ಮತ್ತು 21 ವರ್ಷದ ಸಹೋದರ ದಿನಗೂಲಿ ಕೆಲಸ ಮಾಡುತ್ತಿದ್ದಾರೆ. ಲಾಕ್‌ಡೌನ್ ಸಮಯದಲ್ಲಿ ಇತರ ಅನೇಕ ಬಡ ಕಾರ್ಮಿಕರಂತೆ ಇವರು ಕೆಲಸವಿಲ್ಲದೆ ನಿರುದ್ಯೋಗಿಗಳಾಗಿದ್ದರು. ಈಗ ಇಬ್ಬರೂ ಈಗ ಅನಾರೋಗ್ಯಕ್ಕೆ ತುತ್ತಾಗಿದ್ದು, ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿದ್ಯಾರ್ಥಿನಿಯ ತಾಯಿ ಮತ್ತು ಆಕೆ ಕೆಲಸಕ್ಕೆ ಹೋಗುತ್ತಿದ್ದಾರೆ.

“ಈಗ ನಾನು ಮತ್ತು ನನ್ನ ತಾಯಿ ಇಬ್ಬರೂ ಕೆಲಸ ಮಾಡದಿದ್ದರೆ ನಮಗೆ ಊಟವಿಲ್ಲ ಎಂಬ ಹಂತಕ್ಕೆ ಬಂದಿದೆ. ನನ್ನ ಅಣ್ಣನ ಆರೋಗ್ಯ ಚೆನ್ನಾಗಿದ್ದಿದ್ದರೇ ಆತ ಎರಡು ತಿಂಗಳಲ್ಲಿ 8,000 ರೂ.ವರೆಗೆ ಸಂಪಾದಿಸಿ ನನ್ನ ಪ್ರಮಾಣಪತ್ರಗಳನ್ನು ತಂದುಕೊಡುತ್ತಿದ್ದರು” ಎಂದು ವಿದ್ಯಾರ್ಥಿನಿ ನೋವಿನಲ್ಲಿ ಹೇಳಿದ್ದಾರೆ.

ವಿದ್ಯಾರ್ಥಿನಿ ತಿರುಪತಮ್ಮ ಶೀಘ್ರದಲ್ಲೇ ಪ್ರಮಾಣಪತ್ರಗಳನ್ನು ಪಡೆಯದಿದ್ದರೆ ಆಕೆ ಬಿಎಸ್ಸಿ ನರ್ಸಿಂಗ್‌ಗೆ ಸೇರಲು ಸಾಧ್ಯವಾಗುವುದಿಲ್ಲ. ಜೊತೆಗೆ ಆಕೆಯ ಒಂದು ವರ್ಷ ಹಾಳಾಗಿ ಆಕೆ ಶಾಶ್ವತವಾಗಿ ಕೂಲಿ ಕಾರ್ಮಿಕಳಾಗಿಯೇ ಉಳಿಯಬಹುದು.

“ನಾವು ನಮ್ಮ ಗಮನಕ್ಕೆ ಬಂದ ವೈಯಕ್ತಿಕ ಪ್ರಕರಣಗಳನ್ನು ಪರಿಹರಿಸುತ್ತಿದ್ದೇವೆ. ನಾವು ಈ ಪ್ರಕರಣವನ್ನೂ ಸಹ ಪರಿಶೀಲಿಸುತ್ತೇವೆ.” ಎಂದು ಮೇಡ್ಚಲ್ ಶಿಕ್ಷಣ ಕಚೇರಿಯ ಅಧಿಕಾರಿಯೊಬ್ಬರನ್ನು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಉಲ್ಲೇಖಿಸಿದೆ.


ಇದನ್ನೂ ಓದಿ: ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....