Homeಮುಖಪುಟಹೈದರಾಬಾದ್: ಪಿಯುಸಿಯಲ್ಲಿ 80% ಗಳಿಸಿದರೂ ಕಾಲೇಜು ಶುಲ್ಕ ಕಟ್ಟಲಾಗದೇ ಕೂಲಿ ಕಾರ್ಮಿಕಳಾದ ವಿದ್ಯಾರ್ಥಿನಿ

ಹೈದರಾಬಾದ್: ಪಿಯುಸಿಯಲ್ಲಿ 80% ಗಳಿಸಿದರೂ ಕಾಲೇಜು ಶುಲ್ಕ ಕಟ್ಟಲಾಗದೇ ಕೂಲಿ ಕಾರ್ಮಿಕಳಾದ ವಿದ್ಯಾರ್ಥಿನಿ

- Advertisement -
- Advertisement -

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 80 ರಷ್ಟು ಅಂಕಗಳನ್ನು ಗಳಿಸಿ, ಕಾಲೇಜಿನ ಮ್ಯಾಗಜಿನ್‌ನ ಮುಖಪುಟದಲ್ಲಿ ಮೂರನೇ ರ್‍ಯಾಂಕ್ ಹೋಲ್ಡರ್ ಆಗಿ ಕಾಣಿಸಿಕೊಂಡಿದ್ದ ವಿದ್ಯಾರ್ಥಿನಿ ಇಂದು ಕೂಲಿ ಕೆಲಸ ಮಾಡುತ್ತಿರುವ ಘಟನೆ ಹೈದರಾಬಾದ್‌ನಲ್ಲಿ ವರದಿಯಾಗಿದೆ.

ಹೈದರಾಬಾದ್‌ನ ಜವಾಹರನಗರದ ಡಂಪ್ ಯಾರ್ಡ್ ಬಳಿಯಿರುವ ಗಿರಿ ಪ್ರಸಾದ್ ನಗರದ ನಿವಾಸಿ 17 ವರ್ಷದ ತಿರುಪತಮ್ಮ, ಕಷ್ಟಗಳ ನಡುವೆಯೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 80 ರಷ್ಟು ಅಂಕ ಗಳಿಸಿದ್ದಾರೆ. ಆದರೆ, ಕಾಲೇಜು ಶುಲ್ಕ ಕಟ್ಟಲಾಗದೇ ಕೆಲವೇ ದಿನಗಳಲ್ಲಿ ವಿದ್ಯಾಭ್ಯಾಸ ಬಿಟ್ಟು ಕೂಲಿ ಕೆಲಸಕ್ಕೆ ಇಳಿದಿದ್ದಾರೆ.

ಡ್ರೈ ಫ್ರೂಟ್ಸ್ ಪ್ಯಾಕಿಂಗ್ ಕಂಪನಿಯಲ್ಲಿ ದಿನಗೂಲಿ ಕೆಲಸ ಮಾಡುತ್ತಿರುವ ತಿರುಪತಮ್ಮ ಕಾಲೇಜಿನಲ್ಲಿ ಇನ್ನೂ 8,000 ರೂಪಾಯಿ ಶುಲ್ಕ ಬಾಕಿ ಉಳಿಸಿಕೊಂಡಿರುವುದರಿಂದ ಆಕೆಯ ಪ್ರಮಾಣಪತ್ರಗಳನ್ನು ನೀಡಲು ನಗರಂನಲ್ಲಿರುವ ಖಾಸಗಿ ಜೂನಿಯರ್ ಕಾಲೇಜು ನಿರಾಕರಿಸಿದೆ. ಈ ಕಾರಣಕ್ಕೆ ಆಕೆ ದಿನಗೂಲಿ ಕಾರ್ಮಿಕರಾಗಿದ್ದಾರೆ.

ಇದನ್ನೂ ಓದಿ: ತಮಿಳುನಾಡು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಾಂಶುಪಾಲೆ, ಶಿಕ್ಷಕನ ಬಂಧನ

“ನಾನು ಇಲ್ಲಿಯವರೆಗೆ ಕಾಲೇಜಿಗೆ 14,000 ರೂ. ಪಾವತಿಸಿದ್ದೇನೆ. ಇನ್ನೂ 8,000 ರೂಪಾಯಿ ಶುಲ್ಕವನ್ನು ಪಾವತಿಸಬೇಕಾಗಿದೆ. ಹೀಗಾಗಿ ಕಾಲೇಜಿನವರು ನನ್ನ ಪ್ರಮಾಣಪತ್ರಗಳನ್ನು ನೀಡುತ್ತಿಲ್ಲ. ಲಾಕ್‌ಡೌನ್, ಕೆಲಸದ ಕೊರತೆ ಮತ್ತು ಅನಾರೋಗ್ಯದ ಕಾರಣದಿಂದಾಗಿ ನನ್ನ ಕುಟುಂಬದವರಿಂದ ಊಟಕ್ಕೆ ಹಣ ಸಂಪಾದಿಸಲು ಕೂಡ ಸಾಧ್ಯವಾಗುತ್ತಿಲ್ಲ” ಎಂದು ತಿರುಪತಮ್ಮ ಹೇಳಿದ್ದಾರೆ.

ನಗರಂನಲ್ಲಿರುವ ಖಾಸಗಿ ಜೂನಿಯರ್ ಕಾಲೇಜು ತಿರುಪತಮ್ಮಗೆ ವರ್ಗಾವಣೆ ಮತ್ತು ನಡವಳಿಕೆ ಪ್ರಮಾಣಪತ್ರಗಳು ಮತ್ತು 10 ನೇ ತರಗತಿಯ ಅಂಕಪಟ್ಟಿ ನೀಡಲು ನಿರಾಕರಿಸಿದೆ.

ತಿರುಪತಮ್ಮ ಅವರ ತಂದೆ ಮತ್ತು 21 ವರ್ಷದ ಸಹೋದರ ದಿನಗೂಲಿ ಕೆಲಸ ಮಾಡುತ್ತಿದ್ದಾರೆ. ಲಾಕ್‌ಡೌನ್ ಸಮಯದಲ್ಲಿ ಇತರ ಅನೇಕ ಬಡ ಕಾರ್ಮಿಕರಂತೆ ಇವರು ಕೆಲಸವಿಲ್ಲದೆ ನಿರುದ್ಯೋಗಿಗಳಾಗಿದ್ದರು. ಈಗ ಇಬ್ಬರೂ ಈಗ ಅನಾರೋಗ್ಯಕ್ಕೆ ತುತ್ತಾಗಿದ್ದು, ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿದ್ಯಾರ್ಥಿನಿಯ ತಾಯಿ ಮತ್ತು ಆಕೆ ಕೆಲಸಕ್ಕೆ ಹೋಗುತ್ತಿದ್ದಾರೆ.

“ಈಗ ನಾನು ಮತ್ತು ನನ್ನ ತಾಯಿ ಇಬ್ಬರೂ ಕೆಲಸ ಮಾಡದಿದ್ದರೆ ನಮಗೆ ಊಟವಿಲ್ಲ ಎಂಬ ಹಂತಕ್ಕೆ ಬಂದಿದೆ. ನನ್ನ ಅಣ್ಣನ ಆರೋಗ್ಯ ಚೆನ್ನಾಗಿದ್ದಿದ್ದರೇ ಆತ ಎರಡು ತಿಂಗಳಲ್ಲಿ 8,000 ರೂ.ವರೆಗೆ ಸಂಪಾದಿಸಿ ನನ್ನ ಪ್ರಮಾಣಪತ್ರಗಳನ್ನು ತಂದುಕೊಡುತ್ತಿದ್ದರು” ಎಂದು ವಿದ್ಯಾರ್ಥಿನಿ ನೋವಿನಲ್ಲಿ ಹೇಳಿದ್ದಾರೆ.

ವಿದ್ಯಾರ್ಥಿನಿ ತಿರುಪತಮ್ಮ ಶೀಘ್ರದಲ್ಲೇ ಪ್ರಮಾಣಪತ್ರಗಳನ್ನು ಪಡೆಯದಿದ್ದರೆ ಆಕೆ ಬಿಎಸ್ಸಿ ನರ್ಸಿಂಗ್‌ಗೆ ಸೇರಲು ಸಾಧ್ಯವಾಗುವುದಿಲ್ಲ. ಜೊತೆಗೆ ಆಕೆಯ ಒಂದು ವರ್ಷ ಹಾಳಾಗಿ ಆಕೆ ಶಾಶ್ವತವಾಗಿ ಕೂಲಿ ಕಾರ್ಮಿಕಳಾಗಿಯೇ ಉಳಿಯಬಹುದು.

“ನಾವು ನಮ್ಮ ಗಮನಕ್ಕೆ ಬಂದ ವೈಯಕ್ತಿಕ ಪ್ರಕರಣಗಳನ್ನು ಪರಿಹರಿಸುತ್ತಿದ್ದೇವೆ. ನಾವು ಈ ಪ್ರಕರಣವನ್ನೂ ಸಹ ಪರಿಶೀಲಿಸುತ್ತೇವೆ.” ಎಂದು ಮೇಡ್ಚಲ್ ಶಿಕ್ಷಣ ಕಚೇರಿಯ ಅಧಿಕಾರಿಯೊಬ್ಬರನ್ನು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಉಲ್ಲೇಖಿಸಿದೆ.


ಇದನ್ನೂ ಓದಿ: ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...