Homeಮುಖಪುಟಹೈದರಾಬಾದ್: ಪಿಯುಸಿಯಲ್ಲಿ 80% ಗಳಿಸಿದರೂ ಕಾಲೇಜು ಶುಲ್ಕ ಕಟ್ಟಲಾಗದೇ ಕೂಲಿ ಕಾರ್ಮಿಕಳಾದ ವಿದ್ಯಾರ್ಥಿನಿ

ಹೈದರಾಬಾದ್: ಪಿಯುಸಿಯಲ್ಲಿ 80% ಗಳಿಸಿದರೂ ಕಾಲೇಜು ಶುಲ್ಕ ಕಟ್ಟಲಾಗದೇ ಕೂಲಿ ಕಾರ್ಮಿಕಳಾದ ವಿದ್ಯಾರ್ಥಿನಿ

- Advertisement -
- Advertisement -

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 80 ರಷ್ಟು ಅಂಕಗಳನ್ನು ಗಳಿಸಿ, ಕಾಲೇಜಿನ ಮ್ಯಾಗಜಿನ್‌ನ ಮುಖಪುಟದಲ್ಲಿ ಮೂರನೇ ರ್‍ಯಾಂಕ್ ಹೋಲ್ಡರ್ ಆಗಿ ಕಾಣಿಸಿಕೊಂಡಿದ್ದ ವಿದ್ಯಾರ್ಥಿನಿ ಇಂದು ಕೂಲಿ ಕೆಲಸ ಮಾಡುತ್ತಿರುವ ಘಟನೆ ಹೈದರಾಬಾದ್‌ನಲ್ಲಿ ವರದಿಯಾಗಿದೆ.

ಹೈದರಾಬಾದ್‌ನ ಜವಾಹರನಗರದ ಡಂಪ್ ಯಾರ್ಡ್ ಬಳಿಯಿರುವ ಗಿರಿ ಪ್ರಸಾದ್ ನಗರದ ನಿವಾಸಿ 17 ವರ್ಷದ ತಿರುಪತಮ್ಮ, ಕಷ್ಟಗಳ ನಡುವೆಯೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 80 ರಷ್ಟು ಅಂಕ ಗಳಿಸಿದ್ದಾರೆ. ಆದರೆ, ಕಾಲೇಜು ಶುಲ್ಕ ಕಟ್ಟಲಾಗದೇ ಕೆಲವೇ ದಿನಗಳಲ್ಲಿ ವಿದ್ಯಾಭ್ಯಾಸ ಬಿಟ್ಟು ಕೂಲಿ ಕೆಲಸಕ್ಕೆ ಇಳಿದಿದ್ದಾರೆ.

ಡ್ರೈ ಫ್ರೂಟ್ಸ್ ಪ್ಯಾಕಿಂಗ್ ಕಂಪನಿಯಲ್ಲಿ ದಿನಗೂಲಿ ಕೆಲಸ ಮಾಡುತ್ತಿರುವ ತಿರುಪತಮ್ಮ ಕಾಲೇಜಿನಲ್ಲಿ ಇನ್ನೂ 8,000 ರೂಪಾಯಿ ಶುಲ್ಕ ಬಾಕಿ ಉಳಿಸಿಕೊಂಡಿರುವುದರಿಂದ ಆಕೆಯ ಪ್ರಮಾಣಪತ್ರಗಳನ್ನು ನೀಡಲು ನಗರಂನಲ್ಲಿರುವ ಖಾಸಗಿ ಜೂನಿಯರ್ ಕಾಲೇಜು ನಿರಾಕರಿಸಿದೆ. ಈ ಕಾರಣಕ್ಕೆ ಆಕೆ ದಿನಗೂಲಿ ಕಾರ್ಮಿಕರಾಗಿದ್ದಾರೆ.

ಇದನ್ನೂ ಓದಿ: ತಮಿಳುನಾಡು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಾಂಶುಪಾಲೆ, ಶಿಕ್ಷಕನ ಬಂಧನ

“ನಾನು ಇಲ್ಲಿಯವರೆಗೆ ಕಾಲೇಜಿಗೆ 14,000 ರೂ. ಪಾವತಿಸಿದ್ದೇನೆ. ಇನ್ನೂ 8,000 ರೂಪಾಯಿ ಶುಲ್ಕವನ್ನು ಪಾವತಿಸಬೇಕಾಗಿದೆ. ಹೀಗಾಗಿ ಕಾಲೇಜಿನವರು ನನ್ನ ಪ್ರಮಾಣಪತ್ರಗಳನ್ನು ನೀಡುತ್ತಿಲ್ಲ. ಲಾಕ್‌ಡೌನ್, ಕೆಲಸದ ಕೊರತೆ ಮತ್ತು ಅನಾರೋಗ್ಯದ ಕಾರಣದಿಂದಾಗಿ ನನ್ನ ಕುಟುಂಬದವರಿಂದ ಊಟಕ್ಕೆ ಹಣ ಸಂಪಾದಿಸಲು ಕೂಡ ಸಾಧ್ಯವಾಗುತ್ತಿಲ್ಲ” ಎಂದು ತಿರುಪತಮ್ಮ ಹೇಳಿದ್ದಾರೆ.

ನಗರಂನಲ್ಲಿರುವ ಖಾಸಗಿ ಜೂನಿಯರ್ ಕಾಲೇಜು ತಿರುಪತಮ್ಮಗೆ ವರ್ಗಾವಣೆ ಮತ್ತು ನಡವಳಿಕೆ ಪ್ರಮಾಣಪತ್ರಗಳು ಮತ್ತು 10 ನೇ ತರಗತಿಯ ಅಂಕಪಟ್ಟಿ ನೀಡಲು ನಿರಾಕರಿಸಿದೆ.

ತಿರುಪತಮ್ಮ ಅವರ ತಂದೆ ಮತ್ತು 21 ವರ್ಷದ ಸಹೋದರ ದಿನಗೂಲಿ ಕೆಲಸ ಮಾಡುತ್ತಿದ್ದಾರೆ. ಲಾಕ್‌ಡೌನ್ ಸಮಯದಲ್ಲಿ ಇತರ ಅನೇಕ ಬಡ ಕಾರ್ಮಿಕರಂತೆ ಇವರು ಕೆಲಸವಿಲ್ಲದೆ ನಿರುದ್ಯೋಗಿಗಳಾಗಿದ್ದರು. ಈಗ ಇಬ್ಬರೂ ಈಗ ಅನಾರೋಗ್ಯಕ್ಕೆ ತುತ್ತಾಗಿದ್ದು, ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿದ್ಯಾರ್ಥಿನಿಯ ತಾಯಿ ಮತ್ತು ಆಕೆ ಕೆಲಸಕ್ಕೆ ಹೋಗುತ್ತಿದ್ದಾರೆ.

“ಈಗ ನಾನು ಮತ್ತು ನನ್ನ ತಾಯಿ ಇಬ್ಬರೂ ಕೆಲಸ ಮಾಡದಿದ್ದರೆ ನಮಗೆ ಊಟವಿಲ್ಲ ಎಂಬ ಹಂತಕ್ಕೆ ಬಂದಿದೆ. ನನ್ನ ಅಣ್ಣನ ಆರೋಗ್ಯ ಚೆನ್ನಾಗಿದ್ದಿದ್ದರೇ ಆತ ಎರಡು ತಿಂಗಳಲ್ಲಿ 8,000 ರೂ.ವರೆಗೆ ಸಂಪಾದಿಸಿ ನನ್ನ ಪ್ರಮಾಣಪತ್ರಗಳನ್ನು ತಂದುಕೊಡುತ್ತಿದ್ದರು” ಎಂದು ವಿದ್ಯಾರ್ಥಿನಿ ನೋವಿನಲ್ಲಿ ಹೇಳಿದ್ದಾರೆ.

ವಿದ್ಯಾರ್ಥಿನಿ ತಿರುಪತಮ್ಮ ಶೀಘ್ರದಲ್ಲೇ ಪ್ರಮಾಣಪತ್ರಗಳನ್ನು ಪಡೆಯದಿದ್ದರೆ ಆಕೆ ಬಿಎಸ್ಸಿ ನರ್ಸಿಂಗ್‌ಗೆ ಸೇರಲು ಸಾಧ್ಯವಾಗುವುದಿಲ್ಲ. ಜೊತೆಗೆ ಆಕೆಯ ಒಂದು ವರ್ಷ ಹಾಳಾಗಿ ಆಕೆ ಶಾಶ್ವತವಾಗಿ ಕೂಲಿ ಕಾರ್ಮಿಕಳಾಗಿಯೇ ಉಳಿಯಬಹುದು.

“ನಾವು ನಮ್ಮ ಗಮನಕ್ಕೆ ಬಂದ ವೈಯಕ್ತಿಕ ಪ್ರಕರಣಗಳನ್ನು ಪರಿಹರಿಸುತ್ತಿದ್ದೇವೆ. ನಾವು ಈ ಪ್ರಕರಣವನ್ನೂ ಸಹ ಪರಿಶೀಲಿಸುತ್ತೇವೆ.” ಎಂದು ಮೇಡ್ಚಲ್ ಶಿಕ್ಷಣ ಕಚೇರಿಯ ಅಧಿಕಾರಿಯೊಬ್ಬರನ್ನು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಉಲ್ಲೇಖಿಸಿದೆ.


ಇದನ್ನೂ ಓದಿ: ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...