Homeಮುಖಪುಟಹೈದರಾಬಾದ್: ಪಿಯುಸಿಯಲ್ಲಿ 80% ಗಳಿಸಿದರೂ ಕಾಲೇಜು ಶುಲ್ಕ ಕಟ್ಟಲಾಗದೇ ಕೂಲಿ ಕಾರ್ಮಿಕಳಾದ ವಿದ್ಯಾರ್ಥಿನಿ

ಹೈದರಾಬಾದ್: ಪಿಯುಸಿಯಲ್ಲಿ 80% ಗಳಿಸಿದರೂ ಕಾಲೇಜು ಶುಲ್ಕ ಕಟ್ಟಲಾಗದೇ ಕೂಲಿ ಕಾರ್ಮಿಕಳಾದ ವಿದ್ಯಾರ್ಥಿನಿ

- Advertisement -
- Advertisement -

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 80 ರಷ್ಟು ಅಂಕಗಳನ್ನು ಗಳಿಸಿ, ಕಾಲೇಜಿನ ಮ್ಯಾಗಜಿನ್‌ನ ಮುಖಪುಟದಲ್ಲಿ ಮೂರನೇ ರ್‍ಯಾಂಕ್ ಹೋಲ್ಡರ್ ಆಗಿ ಕಾಣಿಸಿಕೊಂಡಿದ್ದ ವಿದ್ಯಾರ್ಥಿನಿ ಇಂದು ಕೂಲಿ ಕೆಲಸ ಮಾಡುತ್ತಿರುವ ಘಟನೆ ಹೈದರಾಬಾದ್‌ನಲ್ಲಿ ವರದಿಯಾಗಿದೆ.

ಹೈದರಾಬಾದ್‌ನ ಜವಾಹರನಗರದ ಡಂಪ್ ಯಾರ್ಡ್ ಬಳಿಯಿರುವ ಗಿರಿ ಪ್ರಸಾದ್ ನಗರದ ನಿವಾಸಿ 17 ವರ್ಷದ ತಿರುಪತಮ್ಮ, ಕಷ್ಟಗಳ ನಡುವೆಯೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 80 ರಷ್ಟು ಅಂಕ ಗಳಿಸಿದ್ದಾರೆ. ಆದರೆ, ಕಾಲೇಜು ಶುಲ್ಕ ಕಟ್ಟಲಾಗದೇ ಕೆಲವೇ ದಿನಗಳಲ್ಲಿ ವಿದ್ಯಾಭ್ಯಾಸ ಬಿಟ್ಟು ಕೂಲಿ ಕೆಲಸಕ್ಕೆ ಇಳಿದಿದ್ದಾರೆ.

ಡ್ರೈ ಫ್ರೂಟ್ಸ್ ಪ್ಯಾಕಿಂಗ್ ಕಂಪನಿಯಲ್ಲಿ ದಿನಗೂಲಿ ಕೆಲಸ ಮಾಡುತ್ತಿರುವ ತಿರುಪತಮ್ಮ ಕಾಲೇಜಿನಲ್ಲಿ ಇನ್ನೂ 8,000 ರೂಪಾಯಿ ಶುಲ್ಕ ಬಾಕಿ ಉಳಿಸಿಕೊಂಡಿರುವುದರಿಂದ ಆಕೆಯ ಪ್ರಮಾಣಪತ್ರಗಳನ್ನು ನೀಡಲು ನಗರಂನಲ್ಲಿರುವ ಖಾಸಗಿ ಜೂನಿಯರ್ ಕಾಲೇಜು ನಿರಾಕರಿಸಿದೆ. ಈ ಕಾರಣಕ್ಕೆ ಆಕೆ ದಿನಗೂಲಿ ಕಾರ್ಮಿಕರಾಗಿದ್ದಾರೆ.

ಇದನ್ನೂ ಓದಿ: ತಮಿಳುನಾಡು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಾಂಶುಪಾಲೆ, ಶಿಕ್ಷಕನ ಬಂಧನ

“ನಾನು ಇಲ್ಲಿಯವರೆಗೆ ಕಾಲೇಜಿಗೆ 14,000 ರೂ. ಪಾವತಿಸಿದ್ದೇನೆ. ಇನ್ನೂ 8,000 ರೂಪಾಯಿ ಶುಲ್ಕವನ್ನು ಪಾವತಿಸಬೇಕಾಗಿದೆ. ಹೀಗಾಗಿ ಕಾಲೇಜಿನವರು ನನ್ನ ಪ್ರಮಾಣಪತ್ರಗಳನ್ನು ನೀಡುತ್ತಿಲ್ಲ. ಲಾಕ್‌ಡೌನ್, ಕೆಲಸದ ಕೊರತೆ ಮತ್ತು ಅನಾರೋಗ್ಯದ ಕಾರಣದಿಂದಾಗಿ ನನ್ನ ಕುಟುಂಬದವರಿಂದ ಊಟಕ್ಕೆ ಹಣ ಸಂಪಾದಿಸಲು ಕೂಡ ಸಾಧ್ಯವಾಗುತ್ತಿಲ್ಲ” ಎಂದು ತಿರುಪತಮ್ಮ ಹೇಳಿದ್ದಾರೆ.

ನಗರಂನಲ್ಲಿರುವ ಖಾಸಗಿ ಜೂನಿಯರ್ ಕಾಲೇಜು ತಿರುಪತಮ್ಮಗೆ ವರ್ಗಾವಣೆ ಮತ್ತು ನಡವಳಿಕೆ ಪ್ರಮಾಣಪತ್ರಗಳು ಮತ್ತು 10 ನೇ ತರಗತಿಯ ಅಂಕಪಟ್ಟಿ ನೀಡಲು ನಿರಾಕರಿಸಿದೆ.

ತಿರುಪತಮ್ಮ ಅವರ ತಂದೆ ಮತ್ತು 21 ವರ್ಷದ ಸಹೋದರ ದಿನಗೂಲಿ ಕೆಲಸ ಮಾಡುತ್ತಿದ್ದಾರೆ. ಲಾಕ್‌ಡೌನ್ ಸಮಯದಲ್ಲಿ ಇತರ ಅನೇಕ ಬಡ ಕಾರ್ಮಿಕರಂತೆ ಇವರು ಕೆಲಸವಿಲ್ಲದೆ ನಿರುದ್ಯೋಗಿಗಳಾಗಿದ್ದರು. ಈಗ ಇಬ್ಬರೂ ಈಗ ಅನಾರೋಗ್ಯಕ್ಕೆ ತುತ್ತಾಗಿದ್ದು, ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿದ್ಯಾರ್ಥಿನಿಯ ತಾಯಿ ಮತ್ತು ಆಕೆ ಕೆಲಸಕ್ಕೆ ಹೋಗುತ್ತಿದ್ದಾರೆ.

“ಈಗ ನಾನು ಮತ್ತು ನನ್ನ ತಾಯಿ ಇಬ್ಬರೂ ಕೆಲಸ ಮಾಡದಿದ್ದರೆ ನಮಗೆ ಊಟವಿಲ್ಲ ಎಂಬ ಹಂತಕ್ಕೆ ಬಂದಿದೆ. ನನ್ನ ಅಣ್ಣನ ಆರೋಗ್ಯ ಚೆನ್ನಾಗಿದ್ದಿದ್ದರೇ ಆತ ಎರಡು ತಿಂಗಳಲ್ಲಿ 8,000 ರೂ.ವರೆಗೆ ಸಂಪಾದಿಸಿ ನನ್ನ ಪ್ರಮಾಣಪತ್ರಗಳನ್ನು ತಂದುಕೊಡುತ್ತಿದ್ದರು” ಎಂದು ವಿದ್ಯಾರ್ಥಿನಿ ನೋವಿನಲ್ಲಿ ಹೇಳಿದ್ದಾರೆ.

ವಿದ್ಯಾರ್ಥಿನಿ ತಿರುಪತಮ್ಮ ಶೀಘ್ರದಲ್ಲೇ ಪ್ರಮಾಣಪತ್ರಗಳನ್ನು ಪಡೆಯದಿದ್ದರೆ ಆಕೆ ಬಿಎಸ್ಸಿ ನರ್ಸಿಂಗ್‌ಗೆ ಸೇರಲು ಸಾಧ್ಯವಾಗುವುದಿಲ್ಲ. ಜೊತೆಗೆ ಆಕೆಯ ಒಂದು ವರ್ಷ ಹಾಳಾಗಿ ಆಕೆ ಶಾಶ್ವತವಾಗಿ ಕೂಲಿ ಕಾರ್ಮಿಕಳಾಗಿಯೇ ಉಳಿಯಬಹುದು.

“ನಾವು ನಮ್ಮ ಗಮನಕ್ಕೆ ಬಂದ ವೈಯಕ್ತಿಕ ಪ್ರಕರಣಗಳನ್ನು ಪರಿಹರಿಸುತ್ತಿದ್ದೇವೆ. ನಾವು ಈ ಪ್ರಕರಣವನ್ನೂ ಸಹ ಪರಿಶೀಲಿಸುತ್ತೇವೆ.” ಎಂದು ಮೇಡ್ಚಲ್ ಶಿಕ್ಷಣ ಕಚೇರಿಯ ಅಧಿಕಾರಿಯೊಬ್ಬರನ್ನು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಉಲ್ಲೇಖಿಸಿದೆ.


ಇದನ್ನೂ ಓದಿ: ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...