Homeಮುಖಪುಟಹೈದ್ರಾಬಾದ್ ಅತ್ಯಾಚಾರ ಪ್ರಕರಣ: ಆರೋಪಿಗಳನ್ನು ವಯಸ್ಕರಂತೆ ಪರಿಗಣಿಸಲು ತೆಲಂಗಾಣ ಪೊಲೀಸರ ಚಿಂತನೆ

ಹೈದ್ರಾಬಾದ್ ಅತ್ಯಾಚಾರ ಪ್ರಕರಣ: ಆರೋಪಿಗಳನ್ನು ವಯಸ್ಕರಂತೆ ಪರಿಗಣಿಸಲು ತೆಲಂಗಾಣ ಪೊಲೀಸರ ಚಿಂತನೆ

- Advertisement -
- Advertisement -

ಸಾಮೂಹಿಕ ಅತ್ಯಾಚಾರ ಪ್ರಕರಣದ ವಿಚಾರಣೆಯ ಸಮಯದಲ್ಲಿ ಐವರು ಸಿಸಿಎಲ್‌ಗಳನ್ನು (ಕಾನೂನಿನ ಪ್ರಕ್ರಿಯೆಯಲ್ಲಿ ತೊಡಗಿರುವ ಮಕ್ಕಳು) ವಯಸ್ಕರಂತೆ ಪರಿಗಣಿಸುವಂತೆ ಬಾಲ ನ್ಯಾಯ ಮಂಡಳಿಗೆ ತೆಲಂಗಾಣ ಪೊಲೀಸರು ಅರ್ಜಿ ಸಲ್ಲಿಸಲು ಚಿಂತನೆ ನಡೆಸುತ್ತಿದ್ದಾರೆ.

ಆರೋಪಿಗಳಿಗೆ ಗರಿಷ್ಠ ಶಿಕ್ಷೆಯಾಗುವುದನ್ನು ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಸಚಿವ ಕೆ.ಟಿ.ರಾಮರಾವ್ ಪೊಲೀಸರನ್ನು ಅಭಿನಂದಿಸಿದ್ದಾರೆ. ಮೇ 28 ರಂದು 17 ವರ್ಷದ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಐವರು ಬಾಲಾಪರಾಧಿಗಳು ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ. ಒಬ್ಬ ಬಾಲಾಪರಾಧಿ ಸಂತ್ರಸ್ತೆಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಆದರೆ ಅಪರಾಧದಲ್ಲಿ ಆತ ಭಾಗಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೈದರಾಬಾದ್ ಪೊಲೀಸ್ ಕಮಿಷನರ್ ಸಿ.ವಿ.ಆನಂದ್ ಪಿಟಿಐಗೆ ತಿಳಿಸಿದ್ದು, “ಆರೋಪಿಗಳಿಗೆ ಗರಿಷ್ಠ ಶಿಕ್ಷೆಯನ್ನು ಖಾತ್ರಿಪಡಿಸಿಕೊಳ್ಳಲು ಐವರನ್ನೂ ವಯಸ್ಕರಂತೆ ಪರಿಗಣಿಸಲು ಮಂಡಳಿಯ ಮುಂದೆ ಮನವಿ ಸಲ್ಲಿಸಲು ಮುಂದಾಗಿದ್ದೇವೆ. ಘೋರ ಅಪರಾಧದಲ್ಲಿ ಭಾಗಿಯಾದವರ ವಿರುದ್ಧ ಕಾನೂನಿನ ಕಠಿಣ ಸೆಕ್ಷನ್‌ಗಳನ್ನು ಅನ್ವಯಿಸಲಾಗಿದೆ. ಈ ಕಾನೂನಿನ ಶಿಕ್ಷೆಯ ಪ್ರಕಾರ ಸಾಯುವವರೆಗೂ ಜೈಲಿನಲ್ಲಿರುಬಹುದು ಅಥವಾ ಮರಣದಂಡನೆಯಾಗಬಹುದು” ಎಂದಿದ್ದಾರೆ.

ಪ್ರಕರಣವು ಈಗ ತನಿಖೆಯಲ್ಲಿದೆ. ಚಾರ್ಜ್‌ಶೀಟ್ ಸಲ್ಲಿಸಿದ ನಂತರ, ಐವರು ಸಿಸಿಎಲ್‌ಗಳನ್ನು ವಯಸ್ಕರಂತೆ ವಿಚಾರಣೆಗೆ ಒಳಪಡಿಸುವಂತೆ ಶಿಫಾರಸು ಮಾಡಲು ಬಾಲ ನ್ಯಾಯ ಮಂಡಳಿಗೆ (ಜೆಜೆಬಿ) ವಿನಂತಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. “ಇಲ್ಲದಿದ್ದರೆ ಅವರು ಬಾಲಾಪರಾಧಿಗಳಾಗಿ ಉಳಿಯುತ್ತಾರೆ. ಕೇವಲ ಮೂರು ವರ್ಷಗಳ ಶಿಕ್ಷೆಗೆ ಒಳಗಾಗುತ್ತಾರೆ” ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿರಿ: ಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

ತೆಲಂಗಾಣ ರಾಷ್ಟ್ರರಕ್ಷಣಾ ಸಮಿತಿ ಪಕ್ಷದ ಕಾರ್ಯಾಧ್ಯಕ್ಷ  ಕೆ.ಟಿ.ರಾಮರಾವ್‌ ಟ್ವೀಟ್ ಮಾಡಿದ್ದು, “ನಾನು ತೆಲಂಗಾಣ ಪೊಲೀಸರ ನಿಲುವನ್ನು ಸ್ವಾಗತಿಸುತ್ತೇನೆ ಹಾಗೂ ಬೆಂಬಲಿಸುತ್ತೇನೆ. ಅತ್ಯಾಚಾರದಂತಹ ಘೋರ ಅಪರಾಧವನ್ನು ಮಾಡುವಷ್ಟು ವಯಸ್ಕರಾಗಿದ್ದರೆ, ಅವರನ್ನು ವಯಸ್ಕರಂತೆ ಶಿಕ್ಷಿಸಬೇಕು. ಆದರೆ ಬಾಲಾಪರಾಧಿಯಾಗಿ ಪರಿಗಣಿಸಬಾರದು” ಎಂದಿದ್ದಾರೆ.

ಸ್ಥಳೀಯ ನ್ಯಾಯಾಲಯವು ಕಸ್ಟಡಿಗೆ ನೀಡಿದ ನಂತರ ಸೆರೆಮನೆಯಲ್ಲಿದ್ದ ವಯಸ್ಕ ಆರೋಪಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಅಪರಾಧದ ದೃಶ್ಯವನ್ನು ಮರುಸೃಷ್ಟಿ ಮಾಡುವುದು ಸೇರಿದಂತೆ ಪ್ರಕರಣದ ಹೆಚ್ಚಿನ ತನಿಖೆಯ ಭಾಗವಾಗಿ ಆರೋಪಿಯನ್ನು ಕಸ್ಟಡಿ ವಿಚಾರಣೆಗೆ ಒಳಪಡಿಸಲು ಪೊಲೀಸರು ಕೋರಿದ್ದಾರೆ.

ಸಂಬಂಧಿತ ಬೆಳವಣಿಗೆಯಲ್ಲಿ, ಜುವೆನೈಲ್ ಜಸ್ಟಿಸ್ ಬೋರ್ಡ್ ಪ್ರತಿಕ್ರಿಯೆ ನೀಡಿದ್ದು, ಜೂನ್ 10 ರಿಂದ ನಾಲ್ಕು ದಿನಗಳ ಕಾಲ ವಿಚಾರಣೆಗಾಗಿ ಮೂವರು ಸಿಸಿಎಲ್‌ಗಳನ್ನು ಪೊಲೀಸ್ ಕಸ್ಟಡಿಗೆ ನೀಡಲು ಒಪ್ಪಿಗೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...