Homeಮುಖಪುಟಹೈದರಾಬಾದ್ - 6 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ; ಆರೋಪಿ ಪರಾರಿ

ಹೈದರಾಬಾದ್ – 6 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ; ಆರೋಪಿ ಪರಾರಿ

ಆರೋಪಿಯ ಬಗ್ಗೆ ಸುಳಿವು ನೀಡಿದವರಿಗೆ ಪೊಲೀಸರು 10 ಲಕ್ಷ ಬಹುಮಾನ ಘೋಷಿಸಿದ್ದಾರೆ.

- Advertisement -
- Advertisement -

ಸೆಪ್ಟೆಂಬರ್‌ 9 ರ ಗುರುವಾರದಂದು ಹೈದರಾಬಾದ್‌ನ ಸೈದಾಬಾದ್‌ನಲ್ಲಿ 6 ವರ್ಷದ ಬಾಲಕಿಯನ್ನು ನೆರೆಮನೆಯ ವ್ಯಕ್ತಿಯೊಬ್ಬ ಅತ್ಯಚಾರ ಮಾಡಿ ಕೊಲೆ ಮಾಡಿರುವ ಘಟನೆ ನಡೆದಿದೆ. ಗುರುವಾರ ಸಂಜೆಯಿಂದ ಕಾಣೆಯಾಗಿದ್ದ ಬಾಲಕಿಯನ್ನು, ಪೋಷಕರು ರಾತ್ರಿವರೆಗೂ ಹುಡುಕಾಡಿದರೂ ಪತ್ತೆಯಾಗದೆ ಇದ್ದದ್ದರಿಂದ ಸೈದಾಬಾದ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು.

ಪೊಲೀಸರಿಗೆ ದೂರು ನೀಡಿದ ನಂತರ, ನೆರೆ ಮನೆಯ ವ್ಯಕ್ತಿ ಕೂಡಾ ಕಾಣೆಯಾಗಿದ್ದು ಅನುಮಾನ ಬಂದಿದ್ದರಿಂದ, ಪೊಲೀಸರೊಂದಿಗೆ ಹೋಗಿ ಅಲ್ಲಿ ಹುಡುಕಾಡಿದ್ದಾರೆ. ಈ ವೇಳೆ ಬಾಲಕಿಯ ಮೃತದೇಹ ಬೆಡ್‌ಶೀಟ್‌ನಲ್ಲಿ ಸುತ್ತಿರುವುದನ್ನು ಕಂಡುಬಂದಿದೆ. ಪೊಲೀಸರು ಆರೋಪಿಯ ವಿರುದ್ದ ಪೋಕ್ಸೊ ಕಾಯ್ದೆಯಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಇದುವರೆಗೂ ಆರೋಪಿಯ ಬಂಧನ ನಡೆದಿಲ್ಲ.

ಇದನ್ನೂ ಓದಿ: ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ – ಸಂಪೂರ್ಣ ವಿವರ

ಒಸ್ಮಾನಿಯಾ ಜನರಲ್ ಆಸ್ಪತ್ರೆಯಲ್ಲಿ ನಡೆದ ಶವಪರೀಕ್ಷೆಯಲ್ಲಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಖಚಿಪಟ್ಟಿದೆ. ಜೊತೆಗೆ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪರೀಕ್ಷೆಯಲ್ಲಿ ತಿಳಿದುಬಂದಿದೆ.

ಈ ಘಟನೆಯ ನಂತರ, ಭಾರೀ ಪ್ರತಿಭಟನೆಗಳು ಭುಗಿಲೆದ್ದು, ಕಲ್ಲು ತೂರಾಟವೂ ನಡೆದಿತ್ತು. ನಂತರ ಪರಿಸ್ಥಿತಿಯನ್ನು ಹತೋಟಿಗೆ ತರಲು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಆರೋಪಿಯು ಕೃತ್ಯವನ್ನು ಎಸಗಿ ಅಲ್ಲಿಂದ ಪರಾರಿಯಾಗಿದ್ದಾನೆ.

ಅಪರಾಧ ನಡೆದ ಐದು ದಿನಗಳು ಕಳೆದರೂ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಟೀಕೆಗಳು ಹೆಚ್ಚಾಗುತ್ತಿದ್ದಂತೆ, ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಎಂ ಮಹೇಂದರ್ ರೆಡ್ಡಿ ಅವರು ಹೈದರಾಬಾದ್, ರಾಚಕೊಂಡ ಮತ್ತು ಸೈಬರಾಬಾದ್‌ನ ಎಲ್ಲಾ ಹಿತಿಯ ಪೊಲೀಸ್ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ್ದಾರೆ.

ಆರೋಪಿಯ ಬಗ್ಗೆ ಸುಳಿವು ನೀಡಿದವರಿಗೆ ಪೊಲೀಸರು 10 ಲಕ್ಷ ಬಹುಮಾನ ಘೋಷಿಸಿದ್ದಾರೆ. ಆರೋಪಿಯ ಪತ್ತೆಗೆ ಮೂರು ಪೊಲೀಸ್ ಕಮಿಷನರೇಟ್‌ಗಳಾದ್ಯಂತ ಸಾವಿರಾರು ಪೊಲೀಸರು ತೀವ್ರ ಅನ್ವೇಷಣೆಯಲ್ಲಿದ್ದಾರೆ.

ಇದನ್ನೂ ಓದಿ: ನಮ್ಮ ಆಡಳಿತದಲ್ಲಿ ‘ಎಮ್ಮೆ-ಗೂಳಿ-ಮಹಿಳೆ’ ಸುರಕ್ಷಿತ: ಆದಿತ್ಯನಾಥ್

“ಆರೋಪಿ ವೈನ್ ಶಾಪ್‌ನಲ್ಲಿ ಮದ್ಯ ಸೇವಿಸಿದ್ದಾನೆ ಎಂದು ತಿಳಿದ ನಂತರ, ಸೋಮವಾರದಿಂದ ಹೈದರಾಬಾದ್, ರಾಚಕೊಂಡ, ಸೈಬರಾಬಾದ್ ಮತ್ತು ಸುತ್ತಮುತ್ತಲಿನ ಎಲ್ಲಾ ಮದ್ಯದಂಗಡಿಗಳಲ್ಲಿ ಕಣ್ಗಾವಲು ಹೆಚ್ಚಿಸಲಾಗಿದೆ. ಅಂತೆಯೇ, ಎಲ್ಲಾ ಬಸ್ ನಿಲ್ದಾಣಗಳು ಮತ್ತು ಬಸ್ ತಂಗುದಾಣಗಳಲ್ಲಿ ರಾತ್ರಿ ಸಮಯದಲ್ಲಿ ನಿರಂತರವಾಗಿ ಶೋಧಿಸಲಾಗಿದೆ. ಇಲ್ಲಿಯವರೆಗೆ ಯಾವುದೇ ಯಶಸ್ಸು ಸಿಕ್ಕಿಲ್ಲ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆಮದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಶೋಧ ಕಾರ್ಯಾಚರಣೆಯನ್ನು ಸಂಘಟಿಸಲು ಹೈದರಾಬಾದ್ ಪೊಲೀಸರ ಬಳಿ ತನ್ನ ವಿಶೇಷ ಕಾರ್ಯಾಚರಣೆ ತಂಡವನ್ನು (ಎಸ್‌ಒಟಿ) ಸಂಪೂರ್ಣವಾಗಿ ಇರಿಸುವಂತೆ ಡಿಜಿಪಿ ಎಂ ಮಹೇಂದರ್ ರೆಡ್ಡಿ ಅವರು ರಾಚಕೊಂಡ ಆಯುಕ್ತ ಮಹೇಶ್ ಭಾಗವತ್ ಅವರಿಗೆ ಸೂಚಿಸಿದ್ದಾರೆ. ಅಲ್ಲದೇ, ಸೈಬರಾಬಾದ್ ಪೊಲೀಸರು ಮತ್ತು ಐದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಹ ಜಾಗರೂಕರಾಗಿರಬೇಕು, ತಲೆಮರೆಸಿಕೊಂಡಿರುವ ಶಂಕಿತನ ಬಗ್ಗೆ ನಿಗಾವಹಿಸಬೇಕು ಎಂದು ಸೂಚಿಸಿದ್ದಾರೆ.

ಆರೋಪಿಯ ಛಾಯಾಚಿತ್ರವನ್ನು ಎಲ್ಲಾ ಪೊಲೀಸರಿಗೆ ಹಂಚಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಆರೋಪಿಯ ಎರಡು ಕೈಗಳಲ್ಲಿ ‘ಮೌನಿಕಾ’ ಎಂಬ ಹೆಸರಿನ ಟ್ಯಾಟೂ ಇದೆ ಎಂದು ಪೊಲೀಸರು ಹೇಳಿದ್ದಾರೆ. ಐದರಿಂದ ಆರು ಅಡಿ ಎತ್ತರವಿರುವ ವ್ಯಕ್ತಿಯೂ ಉದ್ದ ಕೂದಲನ್ನು ಬಿಟ್ಟಿದ್ದು, ಅದನ್ನು ರಬ್ಬರ್‌ ಬ್ಯಾಂಡ್‌ ಅಲ್ಲಿ ಕಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಯಾದಗಿರಿ – ದಲಿತ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ; 4 ಮಂದಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...