Homeಮುಖಪುಟಹೈದರಾಬಾದ್ - 6 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ; ಆರೋಪಿ ಪರಾರಿ

ಹೈದರಾಬಾದ್ – 6 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ; ಆರೋಪಿ ಪರಾರಿ

ಆರೋಪಿಯ ಬಗ್ಗೆ ಸುಳಿವು ನೀಡಿದವರಿಗೆ ಪೊಲೀಸರು 10 ಲಕ್ಷ ಬಹುಮಾನ ಘೋಷಿಸಿದ್ದಾರೆ.

- Advertisement -
- Advertisement -

ಸೆಪ್ಟೆಂಬರ್‌ 9 ರ ಗುರುವಾರದಂದು ಹೈದರಾಬಾದ್‌ನ ಸೈದಾಬಾದ್‌ನಲ್ಲಿ 6 ವರ್ಷದ ಬಾಲಕಿಯನ್ನು ನೆರೆಮನೆಯ ವ್ಯಕ್ತಿಯೊಬ್ಬ ಅತ್ಯಚಾರ ಮಾಡಿ ಕೊಲೆ ಮಾಡಿರುವ ಘಟನೆ ನಡೆದಿದೆ. ಗುರುವಾರ ಸಂಜೆಯಿಂದ ಕಾಣೆಯಾಗಿದ್ದ ಬಾಲಕಿಯನ್ನು, ಪೋಷಕರು ರಾತ್ರಿವರೆಗೂ ಹುಡುಕಾಡಿದರೂ ಪತ್ತೆಯಾಗದೆ ಇದ್ದದ್ದರಿಂದ ಸೈದಾಬಾದ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು.

ಪೊಲೀಸರಿಗೆ ದೂರು ನೀಡಿದ ನಂತರ, ನೆರೆ ಮನೆಯ ವ್ಯಕ್ತಿ ಕೂಡಾ ಕಾಣೆಯಾಗಿದ್ದು ಅನುಮಾನ ಬಂದಿದ್ದರಿಂದ, ಪೊಲೀಸರೊಂದಿಗೆ ಹೋಗಿ ಅಲ್ಲಿ ಹುಡುಕಾಡಿದ್ದಾರೆ. ಈ ವೇಳೆ ಬಾಲಕಿಯ ಮೃತದೇಹ ಬೆಡ್‌ಶೀಟ್‌ನಲ್ಲಿ ಸುತ್ತಿರುವುದನ್ನು ಕಂಡುಬಂದಿದೆ. ಪೊಲೀಸರು ಆರೋಪಿಯ ವಿರುದ್ದ ಪೋಕ್ಸೊ ಕಾಯ್ದೆಯಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಇದುವರೆಗೂ ಆರೋಪಿಯ ಬಂಧನ ನಡೆದಿಲ್ಲ.

ಇದನ್ನೂ ಓದಿ: ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ – ಸಂಪೂರ್ಣ ವಿವರ

ಒಸ್ಮಾನಿಯಾ ಜನರಲ್ ಆಸ್ಪತ್ರೆಯಲ್ಲಿ ನಡೆದ ಶವಪರೀಕ್ಷೆಯಲ್ಲಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಖಚಿಪಟ್ಟಿದೆ. ಜೊತೆಗೆ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪರೀಕ್ಷೆಯಲ್ಲಿ ತಿಳಿದುಬಂದಿದೆ.

ಈ ಘಟನೆಯ ನಂತರ, ಭಾರೀ ಪ್ರತಿಭಟನೆಗಳು ಭುಗಿಲೆದ್ದು, ಕಲ್ಲು ತೂರಾಟವೂ ನಡೆದಿತ್ತು. ನಂತರ ಪರಿಸ್ಥಿತಿಯನ್ನು ಹತೋಟಿಗೆ ತರಲು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಆರೋಪಿಯು ಕೃತ್ಯವನ್ನು ಎಸಗಿ ಅಲ್ಲಿಂದ ಪರಾರಿಯಾಗಿದ್ದಾನೆ.

ಅಪರಾಧ ನಡೆದ ಐದು ದಿನಗಳು ಕಳೆದರೂ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಟೀಕೆಗಳು ಹೆಚ್ಚಾಗುತ್ತಿದ್ದಂತೆ, ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಎಂ ಮಹೇಂದರ್ ರೆಡ್ಡಿ ಅವರು ಹೈದರಾಬಾದ್, ರಾಚಕೊಂಡ ಮತ್ತು ಸೈಬರಾಬಾದ್‌ನ ಎಲ್ಲಾ ಹಿತಿಯ ಪೊಲೀಸ್ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ್ದಾರೆ.

ಆರೋಪಿಯ ಬಗ್ಗೆ ಸುಳಿವು ನೀಡಿದವರಿಗೆ ಪೊಲೀಸರು 10 ಲಕ್ಷ ಬಹುಮಾನ ಘೋಷಿಸಿದ್ದಾರೆ. ಆರೋಪಿಯ ಪತ್ತೆಗೆ ಮೂರು ಪೊಲೀಸ್ ಕಮಿಷನರೇಟ್‌ಗಳಾದ್ಯಂತ ಸಾವಿರಾರು ಪೊಲೀಸರು ತೀವ್ರ ಅನ್ವೇಷಣೆಯಲ್ಲಿದ್ದಾರೆ.

ಇದನ್ನೂ ಓದಿ: ನಮ್ಮ ಆಡಳಿತದಲ್ಲಿ ‘ಎಮ್ಮೆ-ಗೂಳಿ-ಮಹಿಳೆ’ ಸುರಕ್ಷಿತ: ಆದಿತ್ಯನಾಥ್

“ಆರೋಪಿ ವೈನ್ ಶಾಪ್‌ನಲ್ಲಿ ಮದ್ಯ ಸೇವಿಸಿದ್ದಾನೆ ಎಂದು ತಿಳಿದ ನಂತರ, ಸೋಮವಾರದಿಂದ ಹೈದರಾಬಾದ್, ರಾಚಕೊಂಡ, ಸೈಬರಾಬಾದ್ ಮತ್ತು ಸುತ್ತಮುತ್ತಲಿನ ಎಲ್ಲಾ ಮದ್ಯದಂಗಡಿಗಳಲ್ಲಿ ಕಣ್ಗಾವಲು ಹೆಚ್ಚಿಸಲಾಗಿದೆ. ಅಂತೆಯೇ, ಎಲ್ಲಾ ಬಸ್ ನಿಲ್ದಾಣಗಳು ಮತ್ತು ಬಸ್ ತಂಗುದಾಣಗಳಲ್ಲಿ ರಾತ್ರಿ ಸಮಯದಲ್ಲಿ ನಿರಂತರವಾಗಿ ಶೋಧಿಸಲಾಗಿದೆ. ಇಲ್ಲಿಯವರೆಗೆ ಯಾವುದೇ ಯಶಸ್ಸು ಸಿಕ್ಕಿಲ್ಲ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆಮದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಶೋಧ ಕಾರ್ಯಾಚರಣೆಯನ್ನು ಸಂಘಟಿಸಲು ಹೈದರಾಬಾದ್ ಪೊಲೀಸರ ಬಳಿ ತನ್ನ ವಿಶೇಷ ಕಾರ್ಯಾಚರಣೆ ತಂಡವನ್ನು (ಎಸ್‌ಒಟಿ) ಸಂಪೂರ್ಣವಾಗಿ ಇರಿಸುವಂತೆ ಡಿಜಿಪಿ ಎಂ ಮಹೇಂದರ್ ರೆಡ್ಡಿ ಅವರು ರಾಚಕೊಂಡ ಆಯುಕ್ತ ಮಹೇಶ್ ಭಾಗವತ್ ಅವರಿಗೆ ಸೂಚಿಸಿದ್ದಾರೆ. ಅಲ್ಲದೇ, ಸೈಬರಾಬಾದ್ ಪೊಲೀಸರು ಮತ್ತು ಐದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಹ ಜಾಗರೂಕರಾಗಿರಬೇಕು, ತಲೆಮರೆಸಿಕೊಂಡಿರುವ ಶಂಕಿತನ ಬಗ್ಗೆ ನಿಗಾವಹಿಸಬೇಕು ಎಂದು ಸೂಚಿಸಿದ್ದಾರೆ.

ಆರೋಪಿಯ ಛಾಯಾಚಿತ್ರವನ್ನು ಎಲ್ಲಾ ಪೊಲೀಸರಿಗೆ ಹಂಚಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಆರೋಪಿಯ ಎರಡು ಕೈಗಳಲ್ಲಿ ‘ಮೌನಿಕಾ’ ಎಂಬ ಹೆಸರಿನ ಟ್ಯಾಟೂ ಇದೆ ಎಂದು ಪೊಲೀಸರು ಹೇಳಿದ್ದಾರೆ. ಐದರಿಂದ ಆರು ಅಡಿ ಎತ್ತರವಿರುವ ವ್ಯಕ್ತಿಯೂ ಉದ್ದ ಕೂದಲನ್ನು ಬಿಟ್ಟಿದ್ದು, ಅದನ್ನು ರಬ್ಬರ್‌ ಬ್ಯಾಂಡ್‌ ಅಲ್ಲಿ ಕಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಯಾದಗಿರಿ – ದಲಿತ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ; 4 ಮಂದಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....