Homeಮುಖಪುಟಹೈದರಾಬಾದ್ - 6 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ; ಆರೋಪಿ ಪರಾರಿ

ಹೈದರಾಬಾದ್ – 6 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ; ಆರೋಪಿ ಪರಾರಿ

ಆರೋಪಿಯ ಬಗ್ಗೆ ಸುಳಿವು ನೀಡಿದವರಿಗೆ ಪೊಲೀಸರು 10 ಲಕ್ಷ ಬಹುಮಾನ ಘೋಷಿಸಿದ್ದಾರೆ.

- Advertisement -
- Advertisement -

ಸೆಪ್ಟೆಂಬರ್‌ 9 ರ ಗುರುವಾರದಂದು ಹೈದರಾಬಾದ್‌ನ ಸೈದಾಬಾದ್‌ನಲ್ಲಿ 6 ವರ್ಷದ ಬಾಲಕಿಯನ್ನು ನೆರೆಮನೆಯ ವ್ಯಕ್ತಿಯೊಬ್ಬ ಅತ್ಯಚಾರ ಮಾಡಿ ಕೊಲೆ ಮಾಡಿರುವ ಘಟನೆ ನಡೆದಿದೆ. ಗುರುವಾರ ಸಂಜೆಯಿಂದ ಕಾಣೆಯಾಗಿದ್ದ ಬಾಲಕಿಯನ್ನು, ಪೋಷಕರು ರಾತ್ರಿವರೆಗೂ ಹುಡುಕಾಡಿದರೂ ಪತ್ತೆಯಾಗದೆ ಇದ್ದದ್ದರಿಂದ ಸೈದಾಬಾದ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು.

ಪೊಲೀಸರಿಗೆ ದೂರು ನೀಡಿದ ನಂತರ, ನೆರೆ ಮನೆಯ ವ್ಯಕ್ತಿ ಕೂಡಾ ಕಾಣೆಯಾಗಿದ್ದು ಅನುಮಾನ ಬಂದಿದ್ದರಿಂದ, ಪೊಲೀಸರೊಂದಿಗೆ ಹೋಗಿ ಅಲ್ಲಿ ಹುಡುಕಾಡಿದ್ದಾರೆ. ಈ ವೇಳೆ ಬಾಲಕಿಯ ಮೃತದೇಹ ಬೆಡ್‌ಶೀಟ್‌ನಲ್ಲಿ ಸುತ್ತಿರುವುದನ್ನು ಕಂಡುಬಂದಿದೆ. ಪೊಲೀಸರು ಆರೋಪಿಯ ವಿರುದ್ದ ಪೋಕ್ಸೊ ಕಾಯ್ದೆಯಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಇದುವರೆಗೂ ಆರೋಪಿಯ ಬಂಧನ ನಡೆದಿಲ್ಲ.

ಇದನ್ನೂ ಓದಿ: ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ – ಸಂಪೂರ್ಣ ವಿವರ

ಒಸ್ಮಾನಿಯಾ ಜನರಲ್ ಆಸ್ಪತ್ರೆಯಲ್ಲಿ ನಡೆದ ಶವಪರೀಕ್ಷೆಯಲ್ಲಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಖಚಿಪಟ್ಟಿದೆ. ಜೊತೆಗೆ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪರೀಕ್ಷೆಯಲ್ಲಿ ತಿಳಿದುಬಂದಿದೆ.

ಈ ಘಟನೆಯ ನಂತರ, ಭಾರೀ ಪ್ರತಿಭಟನೆಗಳು ಭುಗಿಲೆದ್ದು, ಕಲ್ಲು ತೂರಾಟವೂ ನಡೆದಿತ್ತು. ನಂತರ ಪರಿಸ್ಥಿತಿಯನ್ನು ಹತೋಟಿಗೆ ತರಲು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಆರೋಪಿಯು ಕೃತ್ಯವನ್ನು ಎಸಗಿ ಅಲ್ಲಿಂದ ಪರಾರಿಯಾಗಿದ್ದಾನೆ.

ಅಪರಾಧ ನಡೆದ ಐದು ದಿನಗಳು ಕಳೆದರೂ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಟೀಕೆಗಳು ಹೆಚ್ಚಾಗುತ್ತಿದ್ದಂತೆ, ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಎಂ ಮಹೇಂದರ್ ರೆಡ್ಡಿ ಅವರು ಹೈದರಾಬಾದ್, ರಾಚಕೊಂಡ ಮತ್ತು ಸೈಬರಾಬಾದ್‌ನ ಎಲ್ಲಾ ಹಿತಿಯ ಪೊಲೀಸ್ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ್ದಾರೆ.

ಆರೋಪಿಯ ಬಗ್ಗೆ ಸುಳಿವು ನೀಡಿದವರಿಗೆ ಪೊಲೀಸರು 10 ಲಕ್ಷ ಬಹುಮಾನ ಘೋಷಿಸಿದ್ದಾರೆ. ಆರೋಪಿಯ ಪತ್ತೆಗೆ ಮೂರು ಪೊಲೀಸ್ ಕಮಿಷನರೇಟ್‌ಗಳಾದ್ಯಂತ ಸಾವಿರಾರು ಪೊಲೀಸರು ತೀವ್ರ ಅನ್ವೇಷಣೆಯಲ್ಲಿದ್ದಾರೆ.

ಇದನ್ನೂ ಓದಿ: ನಮ್ಮ ಆಡಳಿತದಲ್ಲಿ ‘ಎಮ್ಮೆ-ಗೂಳಿ-ಮಹಿಳೆ’ ಸುರಕ್ಷಿತ: ಆದಿತ್ಯನಾಥ್

“ಆರೋಪಿ ವೈನ್ ಶಾಪ್‌ನಲ್ಲಿ ಮದ್ಯ ಸೇವಿಸಿದ್ದಾನೆ ಎಂದು ತಿಳಿದ ನಂತರ, ಸೋಮವಾರದಿಂದ ಹೈದರಾಬಾದ್, ರಾಚಕೊಂಡ, ಸೈಬರಾಬಾದ್ ಮತ್ತು ಸುತ್ತಮುತ್ತಲಿನ ಎಲ್ಲಾ ಮದ್ಯದಂಗಡಿಗಳಲ್ಲಿ ಕಣ್ಗಾವಲು ಹೆಚ್ಚಿಸಲಾಗಿದೆ. ಅಂತೆಯೇ, ಎಲ್ಲಾ ಬಸ್ ನಿಲ್ದಾಣಗಳು ಮತ್ತು ಬಸ್ ತಂಗುದಾಣಗಳಲ್ಲಿ ರಾತ್ರಿ ಸಮಯದಲ್ಲಿ ನಿರಂತರವಾಗಿ ಶೋಧಿಸಲಾಗಿದೆ. ಇಲ್ಲಿಯವರೆಗೆ ಯಾವುದೇ ಯಶಸ್ಸು ಸಿಕ್ಕಿಲ್ಲ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆಮದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಶೋಧ ಕಾರ್ಯಾಚರಣೆಯನ್ನು ಸಂಘಟಿಸಲು ಹೈದರಾಬಾದ್ ಪೊಲೀಸರ ಬಳಿ ತನ್ನ ವಿಶೇಷ ಕಾರ್ಯಾಚರಣೆ ತಂಡವನ್ನು (ಎಸ್‌ಒಟಿ) ಸಂಪೂರ್ಣವಾಗಿ ಇರಿಸುವಂತೆ ಡಿಜಿಪಿ ಎಂ ಮಹೇಂದರ್ ರೆಡ್ಡಿ ಅವರು ರಾಚಕೊಂಡ ಆಯುಕ್ತ ಮಹೇಶ್ ಭಾಗವತ್ ಅವರಿಗೆ ಸೂಚಿಸಿದ್ದಾರೆ. ಅಲ್ಲದೇ, ಸೈಬರಾಬಾದ್ ಪೊಲೀಸರು ಮತ್ತು ಐದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಹ ಜಾಗರೂಕರಾಗಿರಬೇಕು, ತಲೆಮರೆಸಿಕೊಂಡಿರುವ ಶಂಕಿತನ ಬಗ್ಗೆ ನಿಗಾವಹಿಸಬೇಕು ಎಂದು ಸೂಚಿಸಿದ್ದಾರೆ.

ಆರೋಪಿಯ ಛಾಯಾಚಿತ್ರವನ್ನು ಎಲ್ಲಾ ಪೊಲೀಸರಿಗೆ ಹಂಚಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಆರೋಪಿಯ ಎರಡು ಕೈಗಳಲ್ಲಿ ‘ಮೌನಿಕಾ’ ಎಂಬ ಹೆಸರಿನ ಟ್ಯಾಟೂ ಇದೆ ಎಂದು ಪೊಲೀಸರು ಹೇಳಿದ್ದಾರೆ. ಐದರಿಂದ ಆರು ಅಡಿ ಎತ್ತರವಿರುವ ವ್ಯಕ್ತಿಯೂ ಉದ್ದ ಕೂದಲನ್ನು ಬಿಟ್ಟಿದ್ದು, ಅದನ್ನು ರಬ್ಬರ್‌ ಬ್ಯಾಂಡ್‌ ಅಲ್ಲಿ ಕಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಯಾದಗಿರಿ – ದಲಿತ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ; 4 ಮಂದಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...