Homeಮುಖಪುಟಹೈದ್ರಾಬಾದ್: ಜೊತೆಗಾತಿಯ ಕೊಂದು ತುಂಡುತುಂಡಾಗಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ ಆರೋಪಿ ಅರೆಸ್ಟ್‌

ಹೈದ್ರಾಬಾದ್: ಜೊತೆಗಾತಿಯ ಕೊಂದು ತುಂಡುತುಂಡಾಗಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ ಆರೋಪಿ ಅರೆಸ್ಟ್‌

ಆರೋಪಿ ಬಿ.ಚಂದ್ರ ಮೋಹನ್‌ನನ್ನು ಹೈದ್ರಾಬಾದ್ ಪೊಲೀಸರು ಬಂಧಿಸಿದ್ದು, ಶ್ರದ್ಧಾ ವಾಕರ್‌, ನಿಕ್ಕಿ ಯಾದವ್‌ ಪ್ರಕರಣಗಳಿಗೆ ಈ ಕೇಸ್‌ ಸಾಮ್ಯತೆ ಹೊಂದಿದೆ

- Advertisement -
- Advertisement -

ತನ್ನ ಲಿವ್‌ ಇನ್‌ ಪಾರ್ಟರ್‌ (ಸಂಗಾತಿ)ಅನ್ನು ಕೊಂದ ವ್ಯಕ್ತಿಯು, ಆಕೆಯ ದೇಹವನ್ನು ಕಲ್ಲು ಕತ್ತರಿಸುವ ಯಂತ್ರದಲ್ಲಿ ತುಂಡರಿಸಿ, ವಿವಿಧ ಸ್ಥಳಗಳಿಗೆ ವಿಲೇವಾರಿ ಮಾಡಿರುವ ಘಟನೆ ಹೈದ್ರಾಬಾದ್‌ನಲ್ಲಿ ನಡೆದಿದೆ.

ಆರೋಪಿಯು ತನ್ನ ಸಂಗಾತಿಯ ಕೈ ಮತ್ತು ಕಾಲುಗಳನ್ನು ಮನೆಯ ರೆಫ್ರಿಜರೇಟರ್‌ನಲ್ಲಿ ಇಟ್ಟಕೊಂಡಿದ್ದನು. ದುರ್ವಾಸನೆ ತಪ್ಪಿಸಲು ಸೋಂಕುನಿವಾರಕ ಮತ್ತು ಸುಗಂಧ ದ್ರವ್ಯಗಳನ್ನು ಸಿಂಪಡಿಸುತ್ತಿದ್ದನು.

ಕತ್ತರಿಸಿದ ಸ್ಥಿತಿಯಲ್ಲಿ ಮಹಿಳೆಯ ತಲೆ ಮೇ 17ರಂದು ನಗರದ ಮೂಸಿ ನದಿಯ ಬಳಿ ಪತ್ತೆಯಾಗಿತ್ತು. ಅದನ್ನು ಬೆನ್ನು ಹತ್ತಿದ ಹೈದರಾಬಾದ್ ಪೊಲೀಸರು ಪ್ರಕರಣವನ್ನು ಬಯಲಿಗೆಳೆದಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಈ ಪ್ರಕರಣವು ದೆಹಲಿಯ ಶ್ರದ್ದಾ ವಾಕರ್ ಮತ್ತು ನಿಕ್ಕಿ ಯಾದವ್ ಹತ್ಯೆ ಪ್ರಕರಣಗಳಿಗೆ ಸಾಮ್ಯತೆ ಹೊಂದಿದೆ. ತಮ್ಮ ಸಂಗಾತಿಯನ್ನು ಕೊಲೆ ಮಾಡಿದ ಬಳಿಕ ಆರೋಪಿಯು, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ದೇಹದ ಭಾಗಗಳನ್ನು ವಿಲೇವಾರಿ ಮಾಡಲು ರೆಫ್ರಿಜರೇಟರ್‌ಗಳಲ್ಲಿ ಸಂಗ್ರಹಿಸಿರುವ ಕ್ರಮಬದ್ಧತೆಯನ್ನು ಈ ಮೂರು ಪ್ರಕರಣಗಳಲ್ಲಿಯೂ ಗುರುತಿಸಬಹುದು.

ಹೈದ್ರಾಬಾದ್‌ ಆಗ್ನೇಯ ವಲಯದ ಉಪ ಪೊಲೀಸ್ ಆಯುಕ್ತ ರೂಪೇಶ್ ಚೆನ್ನೂರಿ ಮಾತನಾಡಿ, “ಷೇರು ಮಾರುಕಟ್ಟೆಯಲ್ಲಿ ಆನ್‌ಲೈನ್ ವಹಿವಾಟು ನಡೆಸುತ್ತಿದ್ದ, ಬ್ಯಾಚೂಲರ್‌ ಆಗಿದ್ದ ಬಿ.ಚಂದ್ರ ಮೋಹನ್‌ನನ್ನು ಪೊಲೀಸರು ಬಂಧಿಸಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

48ರ ವರ್ಷದ ಚಂದ್ರ ಮೋಹನ್‌, 55 ವರ್ಷದ ಯರ್ರಂ ಅನುರಾಧಾ ರೆಡ್ಡಿ ಅವರ ಜೊತೆಯಲ್ಲಿ ಕಳೆದ 15 ವರ್ಷಗಳಿಂದ ವಿವಾಹೇತರ ಸಂಬಂಧ ಹೊಂದಿದ್ದನು.

ಬಹಳ ಹಿಂದೆಯೇ ಪತಿಯಿಂದ ಬೇರ್ಪಟ್ಟಿದ್ದ ಅನುರಾಧಾ ಅವರು, ಚಂದ್ರಮೋಹನ್ ಜೊತೆಯಲ್ಲಿ ದಿಲ್‌ಸುಖ್‌ನಗರದ ಚೈತನ್ಯಪುರಿ ಕಾಲೋನಿಯಲ್ಲಿ ಆತನ ಮನೆಯಲ್ಲಿ ವಾಸವಿದ್ದರು.

ಅನುರಾಧ ಅವರು ಬಡ್ಡಿ ವ್ಯವಹಾರವನ್ನು 2018ರಿಂದಲೂ ನಡೆಸುತ್ತಿದ್ದರು. ಅಗತ್ಯವಿರುವವರಿಗೆ ಬಡ್ಡಿಯ ಮೇಲೆ ಸಾಲ ನೀಡುತ್ತಿದ್ದರು. ಆನ್‌ಲೈನ್‌ನಲ್ಲಿ ವ್ಯಾಪಾರ ಮಾಡಲು ಅನುರಾಧ ಅವರಿಂದ ಸುಮಾರು 7 ಲಕ್ಷ ರೂಪಾಯಿಗಳನ್ನು ತೆಗೆದುಕೊಂಡ ಮೋಹನ್, ಆಕೆಗೆ ಹಣವನ್ನು ಹಿಂತಿರುಗಿಸಿರಲಿಲ್ಲ. ಪದೇ ಪದೇ ಕೇಳಿದರೂ ಹಣ ವಾಪಸ್ ನೀಡುವಲ್ಲಿ ವಿಫಲನಾಗಿದ್ದನು. ಇದರಿಂದ ಇಬ್ಬರ ನಡುವೆ ಮನಸ್ತಾಪ ಉಂಟಾಗಿತ್ತು.

ಹಣ ವಾಪಸ್ ಕೊಡುವಂತೆ ಅನುರಾಧ ಅವರು ಆತನ ಮೇಲೆ ಒತ್ತಡ ಹೇರುತ್ತಿದ್ದರಿಂದ ಕೊಲೆ ಮಾಡಲು ಆತ ಸಂಚು ರೂಪಿಸಿದ್ದನು. ಮೇ 12 ರಂದು ಮೋಹನ್‌, ಅನುರಾಧ ಜೊತೆಯಲ್ಲಿ ಜಗಳ ಮಾಡಿಕೊಂಡು ಚಾಕುವಿನಿಂದ ಹಲ್ಲೆ ನಡೆಸಿದ್ದನು.

ಅನುರಾಧ ಅವರ ಎದೆ ಮತ್ತು ಹೊಟ್ಟೆಗೆ ಚಾಕುವಿನಿಂದ ಚುಕ್ಕಿದ್ದನು. ಇದರಿಂದಾಗಿ ಅವರು ಸಾವನ್ನಪ್ಪಿದ್ದರು. ಕೊಲೆ ಮಾಡಿದ ನಂತರ, ಆಕೆಯ ದೇಹವನ್ನು ತುಂಡುತುಂಡಾಗಿ ಕತ್ತರಿಸಿ ವಿಲೇವಾರಿ ಮಾಡಲೆಂದು ಕಲ್ಲು ಕತ್ತರಿಸುವ ಎರಡು ಸಣ್ಣ ಯಂತ್ರಗಳನ್ನು ಆರೋಪಿ ಖರೀದಿಸಿದ್ದನು.

ತಲೆ ಕತ್ತರಿಸಿ ಕಪ್ಪು ಪಾಲಿಥಿನ್ ಕವರ್‌ನಲ್ಲಿಟ್ಟಿದ್ದನು. ನಂತರ ಕಾಲುಗಳು ಮತ್ತು ಕೈಗಳನ್ನು ಬೇರ್ಪಡಿಸಿದನು. ಅವುಗಳನ್ನು ರೆಫ್ರಿಜರೇಟರ್‌ನಲ್ಲಿ ಸುರಕ್ಷಿತವಾಗಿ ಇಟ್ಟಿದ್ದನು. ದೇಹದ ಭಾಗಗಳನ್ನು ವಿಲೇವಾರಿ ಮಾಡಲು ಸೂಟ್‌ಕೇಸ್ ಬಳಸುತ್ತಿದ್ದನು.

ಮೇ 15ರಂದು ತಲೆಯನ್ನು ಆಟೊರಿಕ್ಷಾದಲ್ಲಿ ತಂದು ‘ಮೂಸಿ ನದಿ’ ಬಳಿ ಎಸೆದಿದ್ದನು. ಫಿನಾಯ್ಲ್‌, ಡೆಟಾಲ್, ಸುಗಂಧ ದ್ರವ್ಯ, ಅಗರಬತ್ತಿ ಮತ್ತು ಕರ್ಪೂರವನ್ನು ಖರೀದಿಸಿ ದೇಹದ ಇತರ ಭಾಗಗಳಿಗೆ ನಿಯಮಿತವಾಗಿ ಸಿಂಪಡಿಸುತ್ತಿದ್ದನು. ಸುತ್ತಮುತ್ತ ದುರ್ವಾಸನೆ ಹರಡದಂತೆ ನೋಡಿಕೊಂಡಿದ್ದನು.

ಇದನ್ನೂ ಓದಿರಿ: ಅಫ್ತಾಬ್-ಶ್ರದ್ಧಾ 2019ರಿಂದಲೂ ಜೊತೆಯಲ್ಲಿದ್ದರು; ಮುಂಬೈ ತೊರೆದು ದೆಹಲಿಗೆ ಹೋದರು: ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು ಹೀಗೆ…

ದೇಹದ ಭಾಗಗಳನ್ನು ಹೇಗೆ ವಿಲೇವಾರಿ ಮಾಡಬೇಕು ಎಂಬ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಿಸಿದ್ದನು. ಮೃತಳ ಸೆಲ್ ಫೋನ್ ಬಳಸಿ, “ಆಕೆ ಜೀವಂತವಾಗಿದ್ದಾಳೆ ಮತ್ತು ಬೇರೆಡೆ ಇದ್ದಾಳೆ” ಎಂದು ನಂಬುವಂತೆ ಆಕೆಯ ಪರಿಚಿತರಿಗೆ ಸಂದೇಶಗಳನ್ನು ಕಳುಹಿಸುತ್ತಿದ್ದನು.

ಮೇ 17ರಂದು ಮೂಸಿ ನದಿಯ ಬಳಿಯ ಅಫ್ಜಲ್ ನಗರದ ಸಮುದಾಯ ಭವನದ ಎದುರು ಕಸ ಸುರಿಯುವ ಸ್ಥಳದಲ್ಲಿ ಪೌರಕಾರ್ಮಿಕರು ಮಹಿಳೆಯ ತಲೆಯನ್ನು ಪತ್ತೆ ಹಚ್ಚಿದ್ದರು. ಮಲಕಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಪ್ರಕರಣ ಭೇದಿಸಲು ಎಂಟು ತಂಡಗಳನ್ನು ರಚಿಸಿದ್ದರು.

ಸಿಸಿಟಿವಿ ದೃಶ್ಯಾವಳಿಗಳು, ಇತರ ತಂತ್ರಜ್ಞಾನವನ್ನು ಬಳಸಿದ ತನಿಖಾಧಿಕಾರಿಗಳು ಆರೋಪಿಯನ್ನು ಗುರುತಿಸುವಲ್ಲಿ ಸಫಲರಾಗಿದ್ದಾರೆ. ಸಂತ್ರಸ್ತೆಯ ದೇಹದ ಇತರ ಭಾಗಗಳನ್ನು ಆರೋಪಿಯ ಮನೆಯಿಂದ ವಶಪಡಿಸಿಕೊಂಡ ಪೊಲೀಸರು ಅವುಗಳನ್ನು ಶವಪರೀಕ್ಷೆಗೆ ಕಳುಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...