Homeಮುಖಪುಟಹೈದ್ರಾಬಾದ್: ಜೊತೆಗಾತಿಯ ಕೊಂದು ತುಂಡುತುಂಡಾಗಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ ಆರೋಪಿ ಅರೆಸ್ಟ್‌

ಹೈದ್ರಾಬಾದ್: ಜೊತೆಗಾತಿಯ ಕೊಂದು ತುಂಡುತುಂಡಾಗಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ ಆರೋಪಿ ಅರೆಸ್ಟ್‌

ಆರೋಪಿ ಬಿ.ಚಂದ್ರ ಮೋಹನ್‌ನನ್ನು ಹೈದ್ರಾಬಾದ್ ಪೊಲೀಸರು ಬಂಧಿಸಿದ್ದು, ಶ್ರದ್ಧಾ ವಾಕರ್‌, ನಿಕ್ಕಿ ಯಾದವ್‌ ಪ್ರಕರಣಗಳಿಗೆ ಈ ಕೇಸ್‌ ಸಾಮ್ಯತೆ ಹೊಂದಿದೆ

- Advertisement -
- Advertisement -

ತನ್ನ ಲಿವ್‌ ಇನ್‌ ಪಾರ್ಟರ್‌ (ಸಂಗಾತಿ)ಅನ್ನು ಕೊಂದ ವ್ಯಕ್ತಿಯು, ಆಕೆಯ ದೇಹವನ್ನು ಕಲ್ಲು ಕತ್ತರಿಸುವ ಯಂತ್ರದಲ್ಲಿ ತುಂಡರಿಸಿ, ವಿವಿಧ ಸ್ಥಳಗಳಿಗೆ ವಿಲೇವಾರಿ ಮಾಡಿರುವ ಘಟನೆ ಹೈದ್ರಾಬಾದ್‌ನಲ್ಲಿ ನಡೆದಿದೆ.

ಆರೋಪಿಯು ತನ್ನ ಸಂಗಾತಿಯ ಕೈ ಮತ್ತು ಕಾಲುಗಳನ್ನು ಮನೆಯ ರೆಫ್ರಿಜರೇಟರ್‌ನಲ್ಲಿ ಇಟ್ಟಕೊಂಡಿದ್ದನು. ದುರ್ವಾಸನೆ ತಪ್ಪಿಸಲು ಸೋಂಕುನಿವಾರಕ ಮತ್ತು ಸುಗಂಧ ದ್ರವ್ಯಗಳನ್ನು ಸಿಂಪಡಿಸುತ್ತಿದ್ದನು.

ಕತ್ತರಿಸಿದ ಸ್ಥಿತಿಯಲ್ಲಿ ಮಹಿಳೆಯ ತಲೆ ಮೇ 17ರಂದು ನಗರದ ಮೂಸಿ ನದಿಯ ಬಳಿ ಪತ್ತೆಯಾಗಿತ್ತು. ಅದನ್ನು ಬೆನ್ನು ಹತ್ತಿದ ಹೈದರಾಬಾದ್ ಪೊಲೀಸರು ಪ್ರಕರಣವನ್ನು ಬಯಲಿಗೆಳೆದಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಈ ಪ್ರಕರಣವು ದೆಹಲಿಯ ಶ್ರದ್ದಾ ವಾಕರ್ ಮತ್ತು ನಿಕ್ಕಿ ಯಾದವ್ ಹತ್ಯೆ ಪ್ರಕರಣಗಳಿಗೆ ಸಾಮ್ಯತೆ ಹೊಂದಿದೆ. ತಮ್ಮ ಸಂಗಾತಿಯನ್ನು ಕೊಲೆ ಮಾಡಿದ ಬಳಿಕ ಆರೋಪಿಯು, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ದೇಹದ ಭಾಗಗಳನ್ನು ವಿಲೇವಾರಿ ಮಾಡಲು ರೆಫ್ರಿಜರೇಟರ್‌ಗಳಲ್ಲಿ ಸಂಗ್ರಹಿಸಿರುವ ಕ್ರಮಬದ್ಧತೆಯನ್ನು ಈ ಮೂರು ಪ್ರಕರಣಗಳಲ್ಲಿಯೂ ಗುರುತಿಸಬಹುದು.

ಹೈದ್ರಾಬಾದ್‌ ಆಗ್ನೇಯ ವಲಯದ ಉಪ ಪೊಲೀಸ್ ಆಯುಕ್ತ ರೂಪೇಶ್ ಚೆನ್ನೂರಿ ಮಾತನಾಡಿ, “ಷೇರು ಮಾರುಕಟ್ಟೆಯಲ್ಲಿ ಆನ್‌ಲೈನ್ ವಹಿವಾಟು ನಡೆಸುತ್ತಿದ್ದ, ಬ್ಯಾಚೂಲರ್‌ ಆಗಿದ್ದ ಬಿ.ಚಂದ್ರ ಮೋಹನ್‌ನನ್ನು ಪೊಲೀಸರು ಬಂಧಿಸಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

48ರ ವರ್ಷದ ಚಂದ್ರ ಮೋಹನ್‌, 55 ವರ್ಷದ ಯರ್ರಂ ಅನುರಾಧಾ ರೆಡ್ಡಿ ಅವರ ಜೊತೆಯಲ್ಲಿ ಕಳೆದ 15 ವರ್ಷಗಳಿಂದ ವಿವಾಹೇತರ ಸಂಬಂಧ ಹೊಂದಿದ್ದನು.

ಬಹಳ ಹಿಂದೆಯೇ ಪತಿಯಿಂದ ಬೇರ್ಪಟ್ಟಿದ್ದ ಅನುರಾಧಾ ಅವರು, ಚಂದ್ರಮೋಹನ್ ಜೊತೆಯಲ್ಲಿ ದಿಲ್‌ಸುಖ್‌ನಗರದ ಚೈತನ್ಯಪುರಿ ಕಾಲೋನಿಯಲ್ಲಿ ಆತನ ಮನೆಯಲ್ಲಿ ವಾಸವಿದ್ದರು.

ಅನುರಾಧ ಅವರು ಬಡ್ಡಿ ವ್ಯವಹಾರವನ್ನು 2018ರಿಂದಲೂ ನಡೆಸುತ್ತಿದ್ದರು. ಅಗತ್ಯವಿರುವವರಿಗೆ ಬಡ್ಡಿಯ ಮೇಲೆ ಸಾಲ ನೀಡುತ್ತಿದ್ದರು. ಆನ್‌ಲೈನ್‌ನಲ್ಲಿ ವ್ಯಾಪಾರ ಮಾಡಲು ಅನುರಾಧ ಅವರಿಂದ ಸುಮಾರು 7 ಲಕ್ಷ ರೂಪಾಯಿಗಳನ್ನು ತೆಗೆದುಕೊಂಡ ಮೋಹನ್, ಆಕೆಗೆ ಹಣವನ್ನು ಹಿಂತಿರುಗಿಸಿರಲಿಲ್ಲ. ಪದೇ ಪದೇ ಕೇಳಿದರೂ ಹಣ ವಾಪಸ್ ನೀಡುವಲ್ಲಿ ವಿಫಲನಾಗಿದ್ದನು. ಇದರಿಂದ ಇಬ್ಬರ ನಡುವೆ ಮನಸ್ತಾಪ ಉಂಟಾಗಿತ್ತು.

ಹಣ ವಾಪಸ್ ಕೊಡುವಂತೆ ಅನುರಾಧ ಅವರು ಆತನ ಮೇಲೆ ಒತ್ತಡ ಹೇರುತ್ತಿದ್ದರಿಂದ ಕೊಲೆ ಮಾಡಲು ಆತ ಸಂಚು ರೂಪಿಸಿದ್ದನು. ಮೇ 12 ರಂದು ಮೋಹನ್‌, ಅನುರಾಧ ಜೊತೆಯಲ್ಲಿ ಜಗಳ ಮಾಡಿಕೊಂಡು ಚಾಕುವಿನಿಂದ ಹಲ್ಲೆ ನಡೆಸಿದ್ದನು.

ಅನುರಾಧ ಅವರ ಎದೆ ಮತ್ತು ಹೊಟ್ಟೆಗೆ ಚಾಕುವಿನಿಂದ ಚುಕ್ಕಿದ್ದನು. ಇದರಿಂದಾಗಿ ಅವರು ಸಾವನ್ನಪ್ಪಿದ್ದರು. ಕೊಲೆ ಮಾಡಿದ ನಂತರ, ಆಕೆಯ ದೇಹವನ್ನು ತುಂಡುತುಂಡಾಗಿ ಕತ್ತರಿಸಿ ವಿಲೇವಾರಿ ಮಾಡಲೆಂದು ಕಲ್ಲು ಕತ್ತರಿಸುವ ಎರಡು ಸಣ್ಣ ಯಂತ್ರಗಳನ್ನು ಆರೋಪಿ ಖರೀದಿಸಿದ್ದನು.

ತಲೆ ಕತ್ತರಿಸಿ ಕಪ್ಪು ಪಾಲಿಥಿನ್ ಕವರ್‌ನಲ್ಲಿಟ್ಟಿದ್ದನು. ನಂತರ ಕಾಲುಗಳು ಮತ್ತು ಕೈಗಳನ್ನು ಬೇರ್ಪಡಿಸಿದನು. ಅವುಗಳನ್ನು ರೆಫ್ರಿಜರೇಟರ್‌ನಲ್ಲಿ ಸುರಕ್ಷಿತವಾಗಿ ಇಟ್ಟಿದ್ದನು. ದೇಹದ ಭಾಗಗಳನ್ನು ವಿಲೇವಾರಿ ಮಾಡಲು ಸೂಟ್‌ಕೇಸ್ ಬಳಸುತ್ತಿದ್ದನು.

ಮೇ 15ರಂದು ತಲೆಯನ್ನು ಆಟೊರಿಕ್ಷಾದಲ್ಲಿ ತಂದು ‘ಮೂಸಿ ನದಿ’ ಬಳಿ ಎಸೆದಿದ್ದನು. ಫಿನಾಯ್ಲ್‌, ಡೆಟಾಲ್, ಸುಗಂಧ ದ್ರವ್ಯ, ಅಗರಬತ್ತಿ ಮತ್ತು ಕರ್ಪೂರವನ್ನು ಖರೀದಿಸಿ ದೇಹದ ಇತರ ಭಾಗಗಳಿಗೆ ನಿಯಮಿತವಾಗಿ ಸಿಂಪಡಿಸುತ್ತಿದ್ದನು. ಸುತ್ತಮುತ್ತ ದುರ್ವಾಸನೆ ಹರಡದಂತೆ ನೋಡಿಕೊಂಡಿದ್ದನು.

ಇದನ್ನೂ ಓದಿರಿ: ಅಫ್ತಾಬ್-ಶ್ರದ್ಧಾ 2019ರಿಂದಲೂ ಜೊತೆಯಲ್ಲಿದ್ದರು; ಮುಂಬೈ ತೊರೆದು ದೆಹಲಿಗೆ ಹೋದರು: ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು ಹೀಗೆ…

ದೇಹದ ಭಾಗಗಳನ್ನು ಹೇಗೆ ವಿಲೇವಾರಿ ಮಾಡಬೇಕು ಎಂಬ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಿಸಿದ್ದನು. ಮೃತಳ ಸೆಲ್ ಫೋನ್ ಬಳಸಿ, “ಆಕೆ ಜೀವಂತವಾಗಿದ್ದಾಳೆ ಮತ್ತು ಬೇರೆಡೆ ಇದ್ದಾಳೆ” ಎಂದು ನಂಬುವಂತೆ ಆಕೆಯ ಪರಿಚಿತರಿಗೆ ಸಂದೇಶಗಳನ್ನು ಕಳುಹಿಸುತ್ತಿದ್ದನು.

ಮೇ 17ರಂದು ಮೂಸಿ ನದಿಯ ಬಳಿಯ ಅಫ್ಜಲ್ ನಗರದ ಸಮುದಾಯ ಭವನದ ಎದುರು ಕಸ ಸುರಿಯುವ ಸ್ಥಳದಲ್ಲಿ ಪೌರಕಾರ್ಮಿಕರು ಮಹಿಳೆಯ ತಲೆಯನ್ನು ಪತ್ತೆ ಹಚ್ಚಿದ್ದರು. ಮಲಕಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಪ್ರಕರಣ ಭೇದಿಸಲು ಎಂಟು ತಂಡಗಳನ್ನು ರಚಿಸಿದ್ದರು.

ಸಿಸಿಟಿವಿ ದೃಶ್ಯಾವಳಿಗಳು, ಇತರ ತಂತ್ರಜ್ಞಾನವನ್ನು ಬಳಸಿದ ತನಿಖಾಧಿಕಾರಿಗಳು ಆರೋಪಿಯನ್ನು ಗುರುತಿಸುವಲ್ಲಿ ಸಫಲರಾಗಿದ್ದಾರೆ. ಸಂತ್ರಸ್ತೆಯ ದೇಹದ ಇತರ ಭಾಗಗಳನ್ನು ಆರೋಪಿಯ ಮನೆಯಿಂದ ವಶಪಡಿಸಿಕೊಂಡ ಪೊಲೀಸರು ಅವುಗಳನ್ನು ಶವಪರೀಕ್ಷೆಗೆ ಕಳುಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...