Homeಮುಖಪುಟಹೈದ್ರಾಬಾದ್: ಜೊತೆಗಾತಿಯ ಕೊಂದು ತುಂಡುತುಂಡಾಗಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ ಆರೋಪಿ ಅರೆಸ್ಟ್‌

ಹೈದ್ರಾಬಾದ್: ಜೊತೆಗಾತಿಯ ಕೊಂದು ತುಂಡುತುಂಡಾಗಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ ಆರೋಪಿ ಅರೆಸ್ಟ್‌

ಆರೋಪಿ ಬಿ.ಚಂದ್ರ ಮೋಹನ್‌ನನ್ನು ಹೈದ್ರಾಬಾದ್ ಪೊಲೀಸರು ಬಂಧಿಸಿದ್ದು, ಶ್ರದ್ಧಾ ವಾಕರ್‌, ನಿಕ್ಕಿ ಯಾದವ್‌ ಪ್ರಕರಣಗಳಿಗೆ ಈ ಕೇಸ್‌ ಸಾಮ್ಯತೆ ಹೊಂದಿದೆ

- Advertisement -
- Advertisement -

ತನ್ನ ಲಿವ್‌ ಇನ್‌ ಪಾರ್ಟರ್‌ (ಸಂಗಾತಿ)ಅನ್ನು ಕೊಂದ ವ್ಯಕ್ತಿಯು, ಆಕೆಯ ದೇಹವನ್ನು ಕಲ್ಲು ಕತ್ತರಿಸುವ ಯಂತ್ರದಲ್ಲಿ ತುಂಡರಿಸಿ, ವಿವಿಧ ಸ್ಥಳಗಳಿಗೆ ವಿಲೇವಾರಿ ಮಾಡಿರುವ ಘಟನೆ ಹೈದ್ರಾಬಾದ್‌ನಲ್ಲಿ ನಡೆದಿದೆ.

ಆರೋಪಿಯು ತನ್ನ ಸಂಗಾತಿಯ ಕೈ ಮತ್ತು ಕಾಲುಗಳನ್ನು ಮನೆಯ ರೆಫ್ರಿಜರೇಟರ್‌ನಲ್ಲಿ ಇಟ್ಟಕೊಂಡಿದ್ದನು. ದುರ್ವಾಸನೆ ತಪ್ಪಿಸಲು ಸೋಂಕುನಿವಾರಕ ಮತ್ತು ಸುಗಂಧ ದ್ರವ್ಯಗಳನ್ನು ಸಿಂಪಡಿಸುತ್ತಿದ್ದನು.

ಕತ್ತರಿಸಿದ ಸ್ಥಿತಿಯಲ್ಲಿ ಮಹಿಳೆಯ ತಲೆ ಮೇ 17ರಂದು ನಗರದ ಮೂಸಿ ನದಿಯ ಬಳಿ ಪತ್ತೆಯಾಗಿತ್ತು. ಅದನ್ನು ಬೆನ್ನು ಹತ್ತಿದ ಹೈದರಾಬಾದ್ ಪೊಲೀಸರು ಪ್ರಕರಣವನ್ನು ಬಯಲಿಗೆಳೆದಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಈ ಪ್ರಕರಣವು ದೆಹಲಿಯ ಶ್ರದ್ದಾ ವಾಕರ್ ಮತ್ತು ನಿಕ್ಕಿ ಯಾದವ್ ಹತ್ಯೆ ಪ್ರಕರಣಗಳಿಗೆ ಸಾಮ್ಯತೆ ಹೊಂದಿದೆ. ತಮ್ಮ ಸಂಗಾತಿಯನ್ನು ಕೊಲೆ ಮಾಡಿದ ಬಳಿಕ ಆರೋಪಿಯು, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ದೇಹದ ಭಾಗಗಳನ್ನು ವಿಲೇವಾರಿ ಮಾಡಲು ರೆಫ್ರಿಜರೇಟರ್‌ಗಳಲ್ಲಿ ಸಂಗ್ರಹಿಸಿರುವ ಕ್ರಮಬದ್ಧತೆಯನ್ನು ಈ ಮೂರು ಪ್ರಕರಣಗಳಲ್ಲಿಯೂ ಗುರುತಿಸಬಹುದು.

ಹೈದ್ರಾಬಾದ್‌ ಆಗ್ನೇಯ ವಲಯದ ಉಪ ಪೊಲೀಸ್ ಆಯುಕ್ತ ರೂಪೇಶ್ ಚೆನ್ನೂರಿ ಮಾತನಾಡಿ, “ಷೇರು ಮಾರುಕಟ್ಟೆಯಲ್ಲಿ ಆನ್‌ಲೈನ್ ವಹಿವಾಟು ನಡೆಸುತ್ತಿದ್ದ, ಬ್ಯಾಚೂಲರ್‌ ಆಗಿದ್ದ ಬಿ.ಚಂದ್ರ ಮೋಹನ್‌ನನ್ನು ಪೊಲೀಸರು ಬಂಧಿಸಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

48ರ ವರ್ಷದ ಚಂದ್ರ ಮೋಹನ್‌, 55 ವರ್ಷದ ಯರ್ರಂ ಅನುರಾಧಾ ರೆಡ್ಡಿ ಅವರ ಜೊತೆಯಲ್ಲಿ ಕಳೆದ 15 ವರ್ಷಗಳಿಂದ ವಿವಾಹೇತರ ಸಂಬಂಧ ಹೊಂದಿದ್ದನು.

ಬಹಳ ಹಿಂದೆಯೇ ಪತಿಯಿಂದ ಬೇರ್ಪಟ್ಟಿದ್ದ ಅನುರಾಧಾ ಅವರು, ಚಂದ್ರಮೋಹನ್ ಜೊತೆಯಲ್ಲಿ ದಿಲ್‌ಸುಖ್‌ನಗರದ ಚೈತನ್ಯಪುರಿ ಕಾಲೋನಿಯಲ್ಲಿ ಆತನ ಮನೆಯಲ್ಲಿ ವಾಸವಿದ್ದರು.

ಅನುರಾಧ ಅವರು ಬಡ್ಡಿ ವ್ಯವಹಾರವನ್ನು 2018ರಿಂದಲೂ ನಡೆಸುತ್ತಿದ್ದರು. ಅಗತ್ಯವಿರುವವರಿಗೆ ಬಡ್ಡಿಯ ಮೇಲೆ ಸಾಲ ನೀಡುತ್ತಿದ್ದರು. ಆನ್‌ಲೈನ್‌ನಲ್ಲಿ ವ್ಯಾಪಾರ ಮಾಡಲು ಅನುರಾಧ ಅವರಿಂದ ಸುಮಾರು 7 ಲಕ್ಷ ರೂಪಾಯಿಗಳನ್ನು ತೆಗೆದುಕೊಂಡ ಮೋಹನ್, ಆಕೆಗೆ ಹಣವನ್ನು ಹಿಂತಿರುಗಿಸಿರಲಿಲ್ಲ. ಪದೇ ಪದೇ ಕೇಳಿದರೂ ಹಣ ವಾಪಸ್ ನೀಡುವಲ್ಲಿ ವಿಫಲನಾಗಿದ್ದನು. ಇದರಿಂದ ಇಬ್ಬರ ನಡುವೆ ಮನಸ್ತಾಪ ಉಂಟಾಗಿತ್ತು.

ಹಣ ವಾಪಸ್ ಕೊಡುವಂತೆ ಅನುರಾಧ ಅವರು ಆತನ ಮೇಲೆ ಒತ್ತಡ ಹೇರುತ್ತಿದ್ದರಿಂದ ಕೊಲೆ ಮಾಡಲು ಆತ ಸಂಚು ರೂಪಿಸಿದ್ದನು. ಮೇ 12 ರಂದು ಮೋಹನ್‌, ಅನುರಾಧ ಜೊತೆಯಲ್ಲಿ ಜಗಳ ಮಾಡಿಕೊಂಡು ಚಾಕುವಿನಿಂದ ಹಲ್ಲೆ ನಡೆಸಿದ್ದನು.

ಅನುರಾಧ ಅವರ ಎದೆ ಮತ್ತು ಹೊಟ್ಟೆಗೆ ಚಾಕುವಿನಿಂದ ಚುಕ್ಕಿದ್ದನು. ಇದರಿಂದಾಗಿ ಅವರು ಸಾವನ್ನಪ್ಪಿದ್ದರು. ಕೊಲೆ ಮಾಡಿದ ನಂತರ, ಆಕೆಯ ದೇಹವನ್ನು ತುಂಡುತುಂಡಾಗಿ ಕತ್ತರಿಸಿ ವಿಲೇವಾರಿ ಮಾಡಲೆಂದು ಕಲ್ಲು ಕತ್ತರಿಸುವ ಎರಡು ಸಣ್ಣ ಯಂತ್ರಗಳನ್ನು ಆರೋಪಿ ಖರೀದಿಸಿದ್ದನು.

ತಲೆ ಕತ್ತರಿಸಿ ಕಪ್ಪು ಪಾಲಿಥಿನ್ ಕವರ್‌ನಲ್ಲಿಟ್ಟಿದ್ದನು. ನಂತರ ಕಾಲುಗಳು ಮತ್ತು ಕೈಗಳನ್ನು ಬೇರ್ಪಡಿಸಿದನು. ಅವುಗಳನ್ನು ರೆಫ್ರಿಜರೇಟರ್‌ನಲ್ಲಿ ಸುರಕ್ಷಿತವಾಗಿ ಇಟ್ಟಿದ್ದನು. ದೇಹದ ಭಾಗಗಳನ್ನು ವಿಲೇವಾರಿ ಮಾಡಲು ಸೂಟ್‌ಕೇಸ್ ಬಳಸುತ್ತಿದ್ದನು.

ಮೇ 15ರಂದು ತಲೆಯನ್ನು ಆಟೊರಿಕ್ಷಾದಲ್ಲಿ ತಂದು ‘ಮೂಸಿ ನದಿ’ ಬಳಿ ಎಸೆದಿದ್ದನು. ಫಿನಾಯ್ಲ್‌, ಡೆಟಾಲ್, ಸುಗಂಧ ದ್ರವ್ಯ, ಅಗರಬತ್ತಿ ಮತ್ತು ಕರ್ಪೂರವನ್ನು ಖರೀದಿಸಿ ದೇಹದ ಇತರ ಭಾಗಗಳಿಗೆ ನಿಯಮಿತವಾಗಿ ಸಿಂಪಡಿಸುತ್ತಿದ್ದನು. ಸುತ್ತಮುತ್ತ ದುರ್ವಾಸನೆ ಹರಡದಂತೆ ನೋಡಿಕೊಂಡಿದ್ದನು.

ಇದನ್ನೂ ಓದಿರಿ: ಅಫ್ತಾಬ್-ಶ್ರದ್ಧಾ 2019ರಿಂದಲೂ ಜೊತೆಯಲ್ಲಿದ್ದರು; ಮುಂಬೈ ತೊರೆದು ದೆಹಲಿಗೆ ಹೋದರು: ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು ಹೀಗೆ…

ದೇಹದ ಭಾಗಗಳನ್ನು ಹೇಗೆ ವಿಲೇವಾರಿ ಮಾಡಬೇಕು ಎಂಬ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಿಸಿದ್ದನು. ಮೃತಳ ಸೆಲ್ ಫೋನ್ ಬಳಸಿ, “ಆಕೆ ಜೀವಂತವಾಗಿದ್ದಾಳೆ ಮತ್ತು ಬೇರೆಡೆ ಇದ್ದಾಳೆ” ಎಂದು ನಂಬುವಂತೆ ಆಕೆಯ ಪರಿಚಿತರಿಗೆ ಸಂದೇಶಗಳನ್ನು ಕಳುಹಿಸುತ್ತಿದ್ದನು.

ಮೇ 17ರಂದು ಮೂಸಿ ನದಿಯ ಬಳಿಯ ಅಫ್ಜಲ್ ನಗರದ ಸಮುದಾಯ ಭವನದ ಎದುರು ಕಸ ಸುರಿಯುವ ಸ್ಥಳದಲ್ಲಿ ಪೌರಕಾರ್ಮಿಕರು ಮಹಿಳೆಯ ತಲೆಯನ್ನು ಪತ್ತೆ ಹಚ್ಚಿದ್ದರು. ಮಲಕಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಪ್ರಕರಣ ಭೇದಿಸಲು ಎಂಟು ತಂಡಗಳನ್ನು ರಚಿಸಿದ್ದರು.

ಸಿಸಿಟಿವಿ ದೃಶ್ಯಾವಳಿಗಳು, ಇತರ ತಂತ್ರಜ್ಞಾನವನ್ನು ಬಳಸಿದ ತನಿಖಾಧಿಕಾರಿಗಳು ಆರೋಪಿಯನ್ನು ಗುರುತಿಸುವಲ್ಲಿ ಸಫಲರಾಗಿದ್ದಾರೆ. ಸಂತ್ರಸ್ತೆಯ ದೇಹದ ಇತರ ಭಾಗಗಳನ್ನು ಆರೋಪಿಯ ಮನೆಯಿಂದ ವಶಪಡಿಸಿಕೊಂಡ ಪೊಲೀಸರು ಅವುಗಳನ್ನು ಶವಪರೀಕ್ಷೆಗೆ ಕಳುಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...