Homeಮುಖಪುಟಹೈದ್ರಾಬಾದ್: ಜೊತೆಗಾತಿಯ ಕೊಂದು ತುಂಡುತುಂಡಾಗಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ ಆರೋಪಿ ಅರೆಸ್ಟ್‌

ಹೈದ್ರಾಬಾದ್: ಜೊತೆಗಾತಿಯ ಕೊಂದು ತುಂಡುತುಂಡಾಗಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ ಆರೋಪಿ ಅರೆಸ್ಟ್‌

ಆರೋಪಿ ಬಿ.ಚಂದ್ರ ಮೋಹನ್‌ನನ್ನು ಹೈದ್ರಾಬಾದ್ ಪೊಲೀಸರು ಬಂಧಿಸಿದ್ದು, ಶ್ರದ್ಧಾ ವಾಕರ್‌, ನಿಕ್ಕಿ ಯಾದವ್‌ ಪ್ರಕರಣಗಳಿಗೆ ಈ ಕೇಸ್‌ ಸಾಮ್ಯತೆ ಹೊಂದಿದೆ

- Advertisement -
- Advertisement -

ತನ್ನ ಲಿವ್‌ ಇನ್‌ ಪಾರ್ಟರ್‌ (ಸಂಗಾತಿ)ಅನ್ನು ಕೊಂದ ವ್ಯಕ್ತಿಯು, ಆಕೆಯ ದೇಹವನ್ನು ಕಲ್ಲು ಕತ್ತರಿಸುವ ಯಂತ್ರದಲ್ಲಿ ತುಂಡರಿಸಿ, ವಿವಿಧ ಸ್ಥಳಗಳಿಗೆ ವಿಲೇವಾರಿ ಮಾಡಿರುವ ಘಟನೆ ಹೈದ್ರಾಬಾದ್‌ನಲ್ಲಿ ನಡೆದಿದೆ.

ಆರೋಪಿಯು ತನ್ನ ಸಂಗಾತಿಯ ಕೈ ಮತ್ತು ಕಾಲುಗಳನ್ನು ಮನೆಯ ರೆಫ್ರಿಜರೇಟರ್‌ನಲ್ಲಿ ಇಟ್ಟಕೊಂಡಿದ್ದನು. ದುರ್ವಾಸನೆ ತಪ್ಪಿಸಲು ಸೋಂಕುನಿವಾರಕ ಮತ್ತು ಸುಗಂಧ ದ್ರವ್ಯಗಳನ್ನು ಸಿಂಪಡಿಸುತ್ತಿದ್ದನು.

ಕತ್ತರಿಸಿದ ಸ್ಥಿತಿಯಲ್ಲಿ ಮಹಿಳೆಯ ತಲೆ ಮೇ 17ರಂದು ನಗರದ ಮೂಸಿ ನದಿಯ ಬಳಿ ಪತ್ತೆಯಾಗಿತ್ತು. ಅದನ್ನು ಬೆನ್ನು ಹತ್ತಿದ ಹೈದರಾಬಾದ್ ಪೊಲೀಸರು ಪ್ರಕರಣವನ್ನು ಬಯಲಿಗೆಳೆದಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಈ ಪ್ರಕರಣವು ದೆಹಲಿಯ ಶ್ರದ್ದಾ ವಾಕರ್ ಮತ್ತು ನಿಕ್ಕಿ ಯಾದವ್ ಹತ್ಯೆ ಪ್ರಕರಣಗಳಿಗೆ ಸಾಮ್ಯತೆ ಹೊಂದಿದೆ. ತಮ್ಮ ಸಂಗಾತಿಯನ್ನು ಕೊಲೆ ಮಾಡಿದ ಬಳಿಕ ಆರೋಪಿಯು, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ದೇಹದ ಭಾಗಗಳನ್ನು ವಿಲೇವಾರಿ ಮಾಡಲು ರೆಫ್ರಿಜರೇಟರ್‌ಗಳಲ್ಲಿ ಸಂಗ್ರಹಿಸಿರುವ ಕ್ರಮಬದ್ಧತೆಯನ್ನು ಈ ಮೂರು ಪ್ರಕರಣಗಳಲ್ಲಿಯೂ ಗುರುತಿಸಬಹುದು.

ಹೈದ್ರಾಬಾದ್‌ ಆಗ್ನೇಯ ವಲಯದ ಉಪ ಪೊಲೀಸ್ ಆಯುಕ್ತ ರೂಪೇಶ್ ಚೆನ್ನೂರಿ ಮಾತನಾಡಿ, “ಷೇರು ಮಾರುಕಟ್ಟೆಯಲ್ಲಿ ಆನ್‌ಲೈನ್ ವಹಿವಾಟು ನಡೆಸುತ್ತಿದ್ದ, ಬ್ಯಾಚೂಲರ್‌ ಆಗಿದ್ದ ಬಿ.ಚಂದ್ರ ಮೋಹನ್‌ನನ್ನು ಪೊಲೀಸರು ಬಂಧಿಸಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

48ರ ವರ್ಷದ ಚಂದ್ರ ಮೋಹನ್‌, 55 ವರ್ಷದ ಯರ್ರಂ ಅನುರಾಧಾ ರೆಡ್ಡಿ ಅವರ ಜೊತೆಯಲ್ಲಿ ಕಳೆದ 15 ವರ್ಷಗಳಿಂದ ವಿವಾಹೇತರ ಸಂಬಂಧ ಹೊಂದಿದ್ದನು.

ಬಹಳ ಹಿಂದೆಯೇ ಪತಿಯಿಂದ ಬೇರ್ಪಟ್ಟಿದ್ದ ಅನುರಾಧಾ ಅವರು, ಚಂದ್ರಮೋಹನ್ ಜೊತೆಯಲ್ಲಿ ದಿಲ್‌ಸುಖ್‌ನಗರದ ಚೈತನ್ಯಪುರಿ ಕಾಲೋನಿಯಲ್ಲಿ ಆತನ ಮನೆಯಲ್ಲಿ ವಾಸವಿದ್ದರು.

ಅನುರಾಧ ಅವರು ಬಡ್ಡಿ ವ್ಯವಹಾರವನ್ನು 2018ರಿಂದಲೂ ನಡೆಸುತ್ತಿದ್ದರು. ಅಗತ್ಯವಿರುವವರಿಗೆ ಬಡ್ಡಿಯ ಮೇಲೆ ಸಾಲ ನೀಡುತ್ತಿದ್ದರು. ಆನ್‌ಲೈನ್‌ನಲ್ಲಿ ವ್ಯಾಪಾರ ಮಾಡಲು ಅನುರಾಧ ಅವರಿಂದ ಸುಮಾರು 7 ಲಕ್ಷ ರೂಪಾಯಿಗಳನ್ನು ತೆಗೆದುಕೊಂಡ ಮೋಹನ್, ಆಕೆಗೆ ಹಣವನ್ನು ಹಿಂತಿರುಗಿಸಿರಲಿಲ್ಲ. ಪದೇ ಪದೇ ಕೇಳಿದರೂ ಹಣ ವಾಪಸ್ ನೀಡುವಲ್ಲಿ ವಿಫಲನಾಗಿದ್ದನು. ಇದರಿಂದ ಇಬ್ಬರ ನಡುವೆ ಮನಸ್ತಾಪ ಉಂಟಾಗಿತ್ತು.

ಹಣ ವಾಪಸ್ ಕೊಡುವಂತೆ ಅನುರಾಧ ಅವರು ಆತನ ಮೇಲೆ ಒತ್ತಡ ಹೇರುತ್ತಿದ್ದರಿಂದ ಕೊಲೆ ಮಾಡಲು ಆತ ಸಂಚು ರೂಪಿಸಿದ್ದನು. ಮೇ 12 ರಂದು ಮೋಹನ್‌, ಅನುರಾಧ ಜೊತೆಯಲ್ಲಿ ಜಗಳ ಮಾಡಿಕೊಂಡು ಚಾಕುವಿನಿಂದ ಹಲ್ಲೆ ನಡೆಸಿದ್ದನು.

ಅನುರಾಧ ಅವರ ಎದೆ ಮತ್ತು ಹೊಟ್ಟೆಗೆ ಚಾಕುವಿನಿಂದ ಚುಕ್ಕಿದ್ದನು. ಇದರಿಂದಾಗಿ ಅವರು ಸಾವನ್ನಪ್ಪಿದ್ದರು. ಕೊಲೆ ಮಾಡಿದ ನಂತರ, ಆಕೆಯ ದೇಹವನ್ನು ತುಂಡುತುಂಡಾಗಿ ಕತ್ತರಿಸಿ ವಿಲೇವಾರಿ ಮಾಡಲೆಂದು ಕಲ್ಲು ಕತ್ತರಿಸುವ ಎರಡು ಸಣ್ಣ ಯಂತ್ರಗಳನ್ನು ಆರೋಪಿ ಖರೀದಿಸಿದ್ದನು.

ತಲೆ ಕತ್ತರಿಸಿ ಕಪ್ಪು ಪಾಲಿಥಿನ್ ಕವರ್‌ನಲ್ಲಿಟ್ಟಿದ್ದನು. ನಂತರ ಕಾಲುಗಳು ಮತ್ತು ಕೈಗಳನ್ನು ಬೇರ್ಪಡಿಸಿದನು. ಅವುಗಳನ್ನು ರೆಫ್ರಿಜರೇಟರ್‌ನಲ್ಲಿ ಸುರಕ್ಷಿತವಾಗಿ ಇಟ್ಟಿದ್ದನು. ದೇಹದ ಭಾಗಗಳನ್ನು ವಿಲೇವಾರಿ ಮಾಡಲು ಸೂಟ್‌ಕೇಸ್ ಬಳಸುತ್ತಿದ್ದನು.

ಮೇ 15ರಂದು ತಲೆಯನ್ನು ಆಟೊರಿಕ್ಷಾದಲ್ಲಿ ತಂದು ‘ಮೂಸಿ ನದಿ’ ಬಳಿ ಎಸೆದಿದ್ದನು. ಫಿನಾಯ್ಲ್‌, ಡೆಟಾಲ್, ಸುಗಂಧ ದ್ರವ್ಯ, ಅಗರಬತ್ತಿ ಮತ್ತು ಕರ್ಪೂರವನ್ನು ಖರೀದಿಸಿ ದೇಹದ ಇತರ ಭಾಗಗಳಿಗೆ ನಿಯಮಿತವಾಗಿ ಸಿಂಪಡಿಸುತ್ತಿದ್ದನು. ಸುತ್ತಮುತ್ತ ದುರ್ವಾಸನೆ ಹರಡದಂತೆ ನೋಡಿಕೊಂಡಿದ್ದನು.

ಇದನ್ನೂ ಓದಿರಿ: ಅಫ್ತಾಬ್-ಶ್ರದ್ಧಾ 2019ರಿಂದಲೂ ಜೊತೆಯಲ್ಲಿದ್ದರು; ಮುಂಬೈ ತೊರೆದು ದೆಹಲಿಗೆ ಹೋದರು: ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು ಹೀಗೆ…

ದೇಹದ ಭಾಗಗಳನ್ನು ಹೇಗೆ ವಿಲೇವಾರಿ ಮಾಡಬೇಕು ಎಂಬ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಿಸಿದ್ದನು. ಮೃತಳ ಸೆಲ್ ಫೋನ್ ಬಳಸಿ, “ಆಕೆ ಜೀವಂತವಾಗಿದ್ದಾಳೆ ಮತ್ತು ಬೇರೆಡೆ ಇದ್ದಾಳೆ” ಎಂದು ನಂಬುವಂತೆ ಆಕೆಯ ಪರಿಚಿತರಿಗೆ ಸಂದೇಶಗಳನ್ನು ಕಳುಹಿಸುತ್ತಿದ್ದನು.

ಮೇ 17ರಂದು ಮೂಸಿ ನದಿಯ ಬಳಿಯ ಅಫ್ಜಲ್ ನಗರದ ಸಮುದಾಯ ಭವನದ ಎದುರು ಕಸ ಸುರಿಯುವ ಸ್ಥಳದಲ್ಲಿ ಪೌರಕಾರ್ಮಿಕರು ಮಹಿಳೆಯ ತಲೆಯನ್ನು ಪತ್ತೆ ಹಚ್ಚಿದ್ದರು. ಮಲಕಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಪ್ರಕರಣ ಭೇದಿಸಲು ಎಂಟು ತಂಡಗಳನ್ನು ರಚಿಸಿದ್ದರು.

ಸಿಸಿಟಿವಿ ದೃಶ್ಯಾವಳಿಗಳು, ಇತರ ತಂತ್ರಜ್ಞಾನವನ್ನು ಬಳಸಿದ ತನಿಖಾಧಿಕಾರಿಗಳು ಆರೋಪಿಯನ್ನು ಗುರುತಿಸುವಲ್ಲಿ ಸಫಲರಾಗಿದ್ದಾರೆ. ಸಂತ್ರಸ್ತೆಯ ದೇಹದ ಇತರ ಭಾಗಗಳನ್ನು ಆರೋಪಿಯ ಮನೆಯಿಂದ ವಶಪಡಿಸಿಕೊಂಡ ಪೊಲೀಸರು ಅವುಗಳನ್ನು ಶವಪರೀಕ್ಷೆಗೆ ಕಳುಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...