Homeಮುಖಪುಟಹೈದ್ರಾಬಾದ್: ಜೊತೆಗಾತಿಯ ಕೊಂದು ತುಂಡುತುಂಡಾಗಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ ಆರೋಪಿ ಅರೆಸ್ಟ್‌

ಹೈದ್ರಾಬಾದ್: ಜೊತೆಗಾತಿಯ ಕೊಂದು ತುಂಡುತುಂಡಾಗಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ ಆರೋಪಿ ಅರೆಸ್ಟ್‌

ಆರೋಪಿ ಬಿ.ಚಂದ್ರ ಮೋಹನ್‌ನನ್ನು ಹೈದ್ರಾಬಾದ್ ಪೊಲೀಸರು ಬಂಧಿಸಿದ್ದು, ಶ್ರದ್ಧಾ ವಾಕರ್‌, ನಿಕ್ಕಿ ಯಾದವ್‌ ಪ್ರಕರಣಗಳಿಗೆ ಈ ಕೇಸ್‌ ಸಾಮ್ಯತೆ ಹೊಂದಿದೆ

- Advertisement -
- Advertisement -

ತನ್ನ ಲಿವ್‌ ಇನ್‌ ಪಾರ್ಟರ್‌ (ಸಂಗಾತಿ)ಅನ್ನು ಕೊಂದ ವ್ಯಕ್ತಿಯು, ಆಕೆಯ ದೇಹವನ್ನು ಕಲ್ಲು ಕತ್ತರಿಸುವ ಯಂತ್ರದಲ್ಲಿ ತುಂಡರಿಸಿ, ವಿವಿಧ ಸ್ಥಳಗಳಿಗೆ ವಿಲೇವಾರಿ ಮಾಡಿರುವ ಘಟನೆ ಹೈದ್ರಾಬಾದ್‌ನಲ್ಲಿ ನಡೆದಿದೆ.

ಆರೋಪಿಯು ತನ್ನ ಸಂಗಾತಿಯ ಕೈ ಮತ್ತು ಕಾಲುಗಳನ್ನು ಮನೆಯ ರೆಫ್ರಿಜರೇಟರ್‌ನಲ್ಲಿ ಇಟ್ಟಕೊಂಡಿದ್ದನು. ದುರ್ವಾಸನೆ ತಪ್ಪಿಸಲು ಸೋಂಕುನಿವಾರಕ ಮತ್ತು ಸುಗಂಧ ದ್ರವ್ಯಗಳನ್ನು ಸಿಂಪಡಿಸುತ್ತಿದ್ದನು.

ಕತ್ತರಿಸಿದ ಸ್ಥಿತಿಯಲ್ಲಿ ಮಹಿಳೆಯ ತಲೆ ಮೇ 17ರಂದು ನಗರದ ಮೂಸಿ ನದಿಯ ಬಳಿ ಪತ್ತೆಯಾಗಿತ್ತು. ಅದನ್ನು ಬೆನ್ನು ಹತ್ತಿದ ಹೈದರಾಬಾದ್ ಪೊಲೀಸರು ಪ್ರಕರಣವನ್ನು ಬಯಲಿಗೆಳೆದಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಈ ಪ್ರಕರಣವು ದೆಹಲಿಯ ಶ್ರದ್ದಾ ವಾಕರ್ ಮತ್ತು ನಿಕ್ಕಿ ಯಾದವ್ ಹತ್ಯೆ ಪ್ರಕರಣಗಳಿಗೆ ಸಾಮ್ಯತೆ ಹೊಂದಿದೆ. ತಮ್ಮ ಸಂಗಾತಿಯನ್ನು ಕೊಲೆ ಮಾಡಿದ ಬಳಿಕ ಆರೋಪಿಯು, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ದೇಹದ ಭಾಗಗಳನ್ನು ವಿಲೇವಾರಿ ಮಾಡಲು ರೆಫ್ರಿಜರೇಟರ್‌ಗಳಲ್ಲಿ ಸಂಗ್ರಹಿಸಿರುವ ಕ್ರಮಬದ್ಧತೆಯನ್ನು ಈ ಮೂರು ಪ್ರಕರಣಗಳಲ್ಲಿಯೂ ಗುರುತಿಸಬಹುದು.

ಹೈದ್ರಾಬಾದ್‌ ಆಗ್ನೇಯ ವಲಯದ ಉಪ ಪೊಲೀಸ್ ಆಯುಕ್ತ ರೂಪೇಶ್ ಚೆನ್ನೂರಿ ಮಾತನಾಡಿ, “ಷೇರು ಮಾರುಕಟ್ಟೆಯಲ್ಲಿ ಆನ್‌ಲೈನ್ ವಹಿವಾಟು ನಡೆಸುತ್ತಿದ್ದ, ಬ್ಯಾಚೂಲರ್‌ ಆಗಿದ್ದ ಬಿ.ಚಂದ್ರ ಮೋಹನ್‌ನನ್ನು ಪೊಲೀಸರು ಬಂಧಿಸಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

48ರ ವರ್ಷದ ಚಂದ್ರ ಮೋಹನ್‌, 55 ವರ್ಷದ ಯರ್ರಂ ಅನುರಾಧಾ ರೆಡ್ಡಿ ಅವರ ಜೊತೆಯಲ್ಲಿ ಕಳೆದ 15 ವರ್ಷಗಳಿಂದ ವಿವಾಹೇತರ ಸಂಬಂಧ ಹೊಂದಿದ್ದನು.

ಬಹಳ ಹಿಂದೆಯೇ ಪತಿಯಿಂದ ಬೇರ್ಪಟ್ಟಿದ್ದ ಅನುರಾಧಾ ಅವರು, ಚಂದ್ರಮೋಹನ್ ಜೊತೆಯಲ್ಲಿ ದಿಲ್‌ಸುಖ್‌ನಗರದ ಚೈತನ್ಯಪುರಿ ಕಾಲೋನಿಯಲ್ಲಿ ಆತನ ಮನೆಯಲ್ಲಿ ವಾಸವಿದ್ದರು.

ಅನುರಾಧ ಅವರು ಬಡ್ಡಿ ವ್ಯವಹಾರವನ್ನು 2018ರಿಂದಲೂ ನಡೆಸುತ್ತಿದ್ದರು. ಅಗತ್ಯವಿರುವವರಿಗೆ ಬಡ್ಡಿಯ ಮೇಲೆ ಸಾಲ ನೀಡುತ್ತಿದ್ದರು. ಆನ್‌ಲೈನ್‌ನಲ್ಲಿ ವ್ಯಾಪಾರ ಮಾಡಲು ಅನುರಾಧ ಅವರಿಂದ ಸುಮಾರು 7 ಲಕ್ಷ ರೂಪಾಯಿಗಳನ್ನು ತೆಗೆದುಕೊಂಡ ಮೋಹನ್, ಆಕೆಗೆ ಹಣವನ್ನು ಹಿಂತಿರುಗಿಸಿರಲಿಲ್ಲ. ಪದೇ ಪದೇ ಕೇಳಿದರೂ ಹಣ ವಾಪಸ್ ನೀಡುವಲ್ಲಿ ವಿಫಲನಾಗಿದ್ದನು. ಇದರಿಂದ ಇಬ್ಬರ ನಡುವೆ ಮನಸ್ತಾಪ ಉಂಟಾಗಿತ್ತು.

ಹಣ ವಾಪಸ್ ಕೊಡುವಂತೆ ಅನುರಾಧ ಅವರು ಆತನ ಮೇಲೆ ಒತ್ತಡ ಹೇರುತ್ತಿದ್ದರಿಂದ ಕೊಲೆ ಮಾಡಲು ಆತ ಸಂಚು ರೂಪಿಸಿದ್ದನು. ಮೇ 12 ರಂದು ಮೋಹನ್‌, ಅನುರಾಧ ಜೊತೆಯಲ್ಲಿ ಜಗಳ ಮಾಡಿಕೊಂಡು ಚಾಕುವಿನಿಂದ ಹಲ್ಲೆ ನಡೆಸಿದ್ದನು.

ಅನುರಾಧ ಅವರ ಎದೆ ಮತ್ತು ಹೊಟ್ಟೆಗೆ ಚಾಕುವಿನಿಂದ ಚುಕ್ಕಿದ್ದನು. ಇದರಿಂದಾಗಿ ಅವರು ಸಾವನ್ನಪ್ಪಿದ್ದರು. ಕೊಲೆ ಮಾಡಿದ ನಂತರ, ಆಕೆಯ ದೇಹವನ್ನು ತುಂಡುತುಂಡಾಗಿ ಕತ್ತರಿಸಿ ವಿಲೇವಾರಿ ಮಾಡಲೆಂದು ಕಲ್ಲು ಕತ್ತರಿಸುವ ಎರಡು ಸಣ್ಣ ಯಂತ್ರಗಳನ್ನು ಆರೋಪಿ ಖರೀದಿಸಿದ್ದನು.

ತಲೆ ಕತ್ತರಿಸಿ ಕಪ್ಪು ಪಾಲಿಥಿನ್ ಕವರ್‌ನಲ್ಲಿಟ್ಟಿದ್ದನು. ನಂತರ ಕಾಲುಗಳು ಮತ್ತು ಕೈಗಳನ್ನು ಬೇರ್ಪಡಿಸಿದನು. ಅವುಗಳನ್ನು ರೆಫ್ರಿಜರೇಟರ್‌ನಲ್ಲಿ ಸುರಕ್ಷಿತವಾಗಿ ಇಟ್ಟಿದ್ದನು. ದೇಹದ ಭಾಗಗಳನ್ನು ವಿಲೇವಾರಿ ಮಾಡಲು ಸೂಟ್‌ಕೇಸ್ ಬಳಸುತ್ತಿದ್ದನು.

ಮೇ 15ರಂದು ತಲೆಯನ್ನು ಆಟೊರಿಕ್ಷಾದಲ್ಲಿ ತಂದು ‘ಮೂಸಿ ನದಿ’ ಬಳಿ ಎಸೆದಿದ್ದನು. ಫಿನಾಯ್ಲ್‌, ಡೆಟಾಲ್, ಸುಗಂಧ ದ್ರವ್ಯ, ಅಗರಬತ್ತಿ ಮತ್ತು ಕರ್ಪೂರವನ್ನು ಖರೀದಿಸಿ ದೇಹದ ಇತರ ಭಾಗಗಳಿಗೆ ನಿಯಮಿತವಾಗಿ ಸಿಂಪಡಿಸುತ್ತಿದ್ದನು. ಸುತ್ತಮುತ್ತ ದುರ್ವಾಸನೆ ಹರಡದಂತೆ ನೋಡಿಕೊಂಡಿದ್ದನು.

ಇದನ್ನೂ ಓದಿರಿ: ಅಫ್ತಾಬ್-ಶ್ರದ್ಧಾ 2019ರಿಂದಲೂ ಜೊತೆಯಲ್ಲಿದ್ದರು; ಮುಂಬೈ ತೊರೆದು ದೆಹಲಿಗೆ ಹೋದರು: ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು ಹೀಗೆ…

ದೇಹದ ಭಾಗಗಳನ್ನು ಹೇಗೆ ವಿಲೇವಾರಿ ಮಾಡಬೇಕು ಎಂಬ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಿಸಿದ್ದನು. ಮೃತಳ ಸೆಲ್ ಫೋನ್ ಬಳಸಿ, “ಆಕೆ ಜೀವಂತವಾಗಿದ್ದಾಳೆ ಮತ್ತು ಬೇರೆಡೆ ಇದ್ದಾಳೆ” ಎಂದು ನಂಬುವಂತೆ ಆಕೆಯ ಪರಿಚಿತರಿಗೆ ಸಂದೇಶಗಳನ್ನು ಕಳುಹಿಸುತ್ತಿದ್ದನು.

ಮೇ 17ರಂದು ಮೂಸಿ ನದಿಯ ಬಳಿಯ ಅಫ್ಜಲ್ ನಗರದ ಸಮುದಾಯ ಭವನದ ಎದುರು ಕಸ ಸುರಿಯುವ ಸ್ಥಳದಲ್ಲಿ ಪೌರಕಾರ್ಮಿಕರು ಮಹಿಳೆಯ ತಲೆಯನ್ನು ಪತ್ತೆ ಹಚ್ಚಿದ್ದರು. ಮಲಕಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಪ್ರಕರಣ ಭೇದಿಸಲು ಎಂಟು ತಂಡಗಳನ್ನು ರಚಿಸಿದ್ದರು.

ಸಿಸಿಟಿವಿ ದೃಶ್ಯಾವಳಿಗಳು, ಇತರ ತಂತ್ರಜ್ಞಾನವನ್ನು ಬಳಸಿದ ತನಿಖಾಧಿಕಾರಿಗಳು ಆರೋಪಿಯನ್ನು ಗುರುತಿಸುವಲ್ಲಿ ಸಫಲರಾಗಿದ್ದಾರೆ. ಸಂತ್ರಸ್ತೆಯ ದೇಹದ ಇತರ ಭಾಗಗಳನ್ನು ಆರೋಪಿಯ ಮನೆಯಿಂದ ವಶಪಡಿಸಿಕೊಂಡ ಪೊಲೀಸರು ಅವುಗಳನ್ನು ಶವಪರೀಕ್ಷೆಗೆ ಕಳುಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...