Homeಮುಖಪುಟಹೈದರಾಬಾದ್: ಮುಸ್ಲಿಂ ಯುವತಿಯನ್ನು ವರಿಸಿದ್ದ ದಲಿತ ಯುವಕನ ಕೊಲೆ - ಇಬ್ಬರ ಬಂಧನ

ಹೈದರಾಬಾದ್: ಮುಸ್ಲಿಂ ಯುವತಿಯನ್ನು ವರಿಸಿದ್ದ ದಲಿತ ಯುವಕನ ಕೊಲೆ – ಇಬ್ಬರ ಬಂಧನ

- Advertisement -
- Advertisement -

ಮುಸ್ಲಿಂ ಯುವತಿಯನ್ನು ಮದುವೆಯಾಗಿದ್ದ ಬಿಲ್ಲಿಪುರಂ ನಾಗರಾಜು ಎಂಬ 26 ವರ್ಷದ ದಲಿತ ಯುವಕನ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ.

ಹೈದರಾಬಾದ್‌ನ ಸರೂರ್‌ನಗರ ಪ್ರದೇಶದಲ್ಲಿ ಮೇ 04 ರಂದು ನಡುರಸ್ತೆಯಲ್ಲಿಯೇ ದಲಿತ ಯುವಕನನ್ನು ಕೊಚ್ಚಿ ಕೊಲ್ಲಲಾದ ಆರೋಪದಲ್ಲಿ ಸಯ್ಯದ್ ಮೊಬಿನ್ ಅಹ್ಮದ್ ಮತ್ತು ಮೊಹಮ್ಮದ್ ಮಸೂದ್ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

5 ವರ್ಷಗಳಿಂದ ಪ್ರೀತಿಸುತ್ತಿದ್ದ ನಾಗರಾಜು ಮತ್ತು ಅಶ್ರಿನ್ ಸುಲ್ತಾನ ಇದೇ ಜನವರಿ 30 ರಂದು ಹಿಂದೂ ಧರ್ಮದ ಅನುಸಾರ ಮದುವೆಯಾಗಿದ್ದರು. ಆದರೆ ಯುವಕ ಬೇರೆ ಧರ್ಮದವನಾದ ಕಾರಣಕ್ಕೆ ಈ ಮದುವೆಗೆ ಸುಲ್ತಾನ ಕುಟುಂಬ ವಿರೋಧ ವ್ಯಕ್ತಪಡಿಸಿತ್ತು.

ಅಶ್ರೀನ್ ಸುಲ್ತಾನನ ಸಹೋದರ ಸಯ್ಯದ್ ಮೊಬಿನ್ ಮತ್ತು ಇತರರು ನಾಗರಾಜುರನ್ನು ಅವರು ಕೆಲಸ ಮಾಡವು ಸ್ಥಳದಲ್ಲಿ ಕೊಲ್ಲಲು ನಿರ್ಧರಿಸಿದ್ದರು. ಅದು ಸಾಧ್ಯವಾಗದಿದ್ದಾಗ ತಮ್ಮ ಸಂಬಂಧಿಗಳ ಮನೆಯಿಂದ ನಾಗರಾಜು ಮತ್ತು ಸುಲ್ತಾನ ಹಿಂತಿರುಗುತ್ತಿದ್ದಾಗ ಸರೂಜ್‌ನಗರದ ನಡುರಸ್ತೆಯಲ್ಲಿ ಹಲ್ಲೆ ನಡೆಸಿ, ಕೊಲೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ನೋವು ವ್ಯಕ್ತಪಡಿಸಿರುವ ಸುಲ್ತಾನ, “ನನ್ನ ಗಂಡನನ್ನು ನನ್ನ ಸಹೋದರರು ನಡುರಸ್ತೆಯಲ್ಲಿ ಕಬ್ಬಿಣದ ರಾಡ್‌ಗಳಿಂದ ಹೊಡೆಯುತ್ತಿದ್ದರು. ತಡೆಯಲು ಮುಂದಾದ ನನ್ನನ್ನು ದೂರಕ್ಕೆ ತಳ್ಳಿದರು. ಆಗ ಸುತ್ತಲು ಜನ ನೋಡುತ್ತಿದ್ದರು ಮತ್ತು ವಿಡಿಯೋ ಮಾಡುತ್ತಿದ್ದರೆ ಹೊರತು ಯಾರೂ ತಡೆಯಲು ಮುಂದಾಗಲಿಲ್ಲ. ನನ್ನ ಕಣ್ಣೆದುರೆ ನನ್ನ ಗಂಡನನ್ನು ಕೊಂದು ಬಿಟ್ಟರು” ಎಂದು ದುಃಖ ತೋಡಿಕೊಂಡಿದ್ದಾರೆ.

ಬೇರೆ ಧರ್ಮದ ಯುವಕನನ್ನು ಮದುವೆಯಾಗಿದ್ದ ಕೊಲೆಗೆ ಕಾರಣ ಎಂದು ಸರೂಜ್ ನಗರ ಪೊಲೀಸ್ ಇನ್ಸ್‌ಪೆಕ್ಟರ್ ಕೆ ಸೀತಾರಾಮ್ ತಿಳಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ಮರ್ಯಾದೆ’ ಮತ್ತು ಮನುಷ್ಯತ್ವದ ಕಂದರವನ್ನು ಶೋಧಿಸುವ ’ಪಾವ ಕದೈಗಳ್’

ಈ ಕೊಲೆಯ ವಿರುದ್ಧ ಬಿಜೆಪಿ ಪಕ್ಷವು ಹೈದರಾಬಾದ್‌ನಲ್ಲಿ ಪ್ರತಿಭಟನೆ ನಡೆಸಿದೆ. “ನಾಗರಾಜು ಮುಸ್ಲಿಂ ಹುಡುಗಿಯನ್ನು ಮದುವೆಯಾಗಿದ್ದ ಕಾರಣಕ್ಕೆ ಕೊಚ್ಚಿ ಕೊಲ್ಲಲಾಗಿದೆ. ಈ ರೀತಿಯ ಘಟನೆಗಳು ಸಾಮಾಜಿಕ ಅವನತಿ ಮತ್ತು ಧಾರ್ಮಿಕ ಗುರುತಿನ ತೀವ್ರ ಅಸಹಿಷ್ಣುತೆಯನ್ನು ತೋರಿಸುತ್ತವೆ. ಇದನ್ನು ಸಹಿಸಲು ಸಾಧ್ಯವಿಲ್ಲ” ಎಂದು ಬಿಜೆಪಿ ಮುಖಂಡ ಕೃಷ್ಣ ಸಾಗರ್ ರಾವ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...