Homeಮುಖಪುಟಹೈದರಾಬಾದ್: ಮುಸ್ಲಿಂ ಯುವತಿಯನ್ನು ವರಿಸಿದ್ದ ದಲಿತ ಯುವಕನ ಕೊಲೆ - ಇಬ್ಬರ ಬಂಧನ

ಹೈದರಾಬಾದ್: ಮುಸ್ಲಿಂ ಯುವತಿಯನ್ನು ವರಿಸಿದ್ದ ದಲಿತ ಯುವಕನ ಕೊಲೆ – ಇಬ್ಬರ ಬಂಧನ

- Advertisement -
- Advertisement -

ಮುಸ್ಲಿಂ ಯುವತಿಯನ್ನು ಮದುವೆಯಾಗಿದ್ದ ಬಿಲ್ಲಿಪುರಂ ನಾಗರಾಜು ಎಂಬ 26 ವರ್ಷದ ದಲಿತ ಯುವಕನ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ.

ಹೈದರಾಬಾದ್‌ನ ಸರೂರ್‌ನಗರ ಪ್ರದೇಶದಲ್ಲಿ ಮೇ 04 ರಂದು ನಡುರಸ್ತೆಯಲ್ಲಿಯೇ ದಲಿತ ಯುವಕನನ್ನು ಕೊಚ್ಚಿ ಕೊಲ್ಲಲಾದ ಆರೋಪದಲ್ಲಿ ಸಯ್ಯದ್ ಮೊಬಿನ್ ಅಹ್ಮದ್ ಮತ್ತು ಮೊಹಮ್ಮದ್ ಮಸೂದ್ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

5 ವರ್ಷಗಳಿಂದ ಪ್ರೀತಿಸುತ್ತಿದ್ದ ನಾಗರಾಜು ಮತ್ತು ಅಶ್ರಿನ್ ಸುಲ್ತಾನ ಇದೇ ಜನವರಿ 30 ರಂದು ಹಿಂದೂ ಧರ್ಮದ ಅನುಸಾರ ಮದುವೆಯಾಗಿದ್ದರು. ಆದರೆ ಯುವಕ ಬೇರೆ ಧರ್ಮದವನಾದ ಕಾರಣಕ್ಕೆ ಈ ಮದುವೆಗೆ ಸುಲ್ತಾನ ಕುಟುಂಬ ವಿರೋಧ ವ್ಯಕ್ತಪಡಿಸಿತ್ತು.

ಅಶ್ರೀನ್ ಸುಲ್ತಾನನ ಸಹೋದರ ಸಯ್ಯದ್ ಮೊಬಿನ್ ಮತ್ತು ಇತರರು ನಾಗರಾಜುರನ್ನು ಅವರು ಕೆಲಸ ಮಾಡವು ಸ್ಥಳದಲ್ಲಿ ಕೊಲ್ಲಲು ನಿರ್ಧರಿಸಿದ್ದರು. ಅದು ಸಾಧ್ಯವಾಗದಿದ್ದಾಗ ತಮ್ಮ ಸಂಬಂಧಿಗಳ ಮನೆಯಿಂದ ನಾಗರಾಜು ಮತ್ತು ಸುಲ್ತಾನ ಹಿಂತಿರುಗುತ್ತಿದ್ದಾಗ ಸರೂಜ್‌ನಗರದ ನಡುರಸ್ತೆಯಲ್ಲಿ ಹಲ್ಲೆ ನಡೆಸಿ, ಕೊಲೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ನೋವು ವ್ಯಕ್ತಪಡಿಸಿರುವ ಸುಲ್ತಾನ, “ನನ್ನ ಗಂಡನನ್ನು ನನ್ನ ಸಹೋದರರು ನಡುರಸ್ತೆಯಲ್ಲಿ ಕಬ್ಬಿಣದ ರಾಡ್‌ಗಳಿಂದ ಹೊಡೆಯುತ್ತಿದ್ದರು. ತಡೆಯಲು ಮುಂದಾದ ನನ್ನನ್ನು ದೂರಕ್ಕೆ ತಳ್ಳಿದರು. ಆಗ ಸುತ್ತಲು ಜನ ನೋಡುತ್ತಿದ್ದರು ಮತ್ತು ವಿಡಿಯೋ ಮಾಡುತ್ತಿದ್ದರೆ ಹೊರತು ಯಾರೂ ತಡೆಯಲು ಮುಂದಾಗಲಿಲ್ಲ. ನನ್ನ ಕಣ್ಣೆದುರೆ ನನ್ನ ಗಂಡನನ್ನು ಕೊಂದು ಬಿಟ್ಟರು” ಎಂದು ದುಃಖ ತೋಡಿಕೊಂಡಿದ್ದಾರೆ.

ಬೇರೆ ಧರ್ಮದ ಯುವಕನನ್ನು ಮದುವೆಯಾಗಿದ್ದ ಕೊಲೆಗೆ ಕಾರಣ ಎಂದು ಸರೂಜ್ ನಗರ ಪೊಲೀಸ್ ಇನ್ಸ್‌ಪೆಕ್ಟರ್ ಕೆ ಸೀತಾರಾಮ್ ತಿಳಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ಮರ್ಯಾದೆ’ ಮತ್ತು ಮನುಷ್ಯತ್ವದ ಕಂದರವನ್ನು ಶೋಧಿಸುವ ’ಪಾವ ಕದೈಗಳ್’

ಈ ಕೊಲೆಯ ವಿರುದ್ಧ ಬಿಜೆಪಿ ಪಕ್ಷವು ಹೈದರಾಬಾದ್‌ನಲ್ಲಿ ಪ್ರತಿಭಟನೆ ನಡೆಸಿದೆ. “ನಾಗರಾಜು ಮುಸ್ಲಿಂ ಹುಡುಗಿಯನ್ನು ಮದುವೆಯಾಗಿದ್ದ ಕಾರಣಕ್ಕೆ ಕೊಚ್ಚಿ ಕೊಲ್ಲಲಾಗಿದೆ. ಈ ರೀತಿಯ ಘಟನೆಗಳು ಸಾಮಾಜಿಕ ಅವನತಿ ಮತ್ತು ಧಾರ್ಮಿಕ ಗುರುತಿನ ತೀವ್ರ ಅಸಹಿಷ್ಣುತೆಯನ್ನು ತೋರಿಸುತ್ತವೆ. ಇದನ್ನು ಸಹಿಸಲು ಸಾಧ್ಯವಿಲ್ಲ” ಎಂದು ಬಿಜೆಪಿ ಮುಖಂಡ ಕೃಷ್ಣ ಸಾಗರ್ ರಾವ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...