Homeಮುಖಪುಟಹೈದರಾಬಾದ್‌: ಸಂಚಾರ ನಿರ್ವಹಣೆಯಲ್ಲಿ ಹೊಸ ಜೀವನ ಕಂಡುಕೊಂಡ ಟ್ರಾನ್ಸ್‌ಜೆಂಡರ್ ಸಮುದಾಯ

ಹೈದರಾಬಾದ್‌: ಸಂಚಾರ ನಿರ್ವಹಣೆಯಲ್ಲಿ ಹೊಸ ಜೀವನ ಕಂಡುಕೊಂಡ ಟ್ರಾನ್ಸ್‌ಜೆಂಡರ್ ಸಮುದಾಯ

- Advertisement -
- Advertisement -

ಹೈದರಾಬಾದ್‌ನಲ್ಲಿ ಸುಮಾರು 39 ಟ್ರಾನ್ಸ್‌ಜೆಂಡರ್ ವ್ಯಕ್ತಿಗಳು ನಗರದ ರಸ್ತೆಗಳಲ್ಲಿ ಭಿಕ್ಷೆ ಬೇಡುವುದನ್ನು ಬಿಟ್ಟು ತೆಲಂಗಾಣ ಪೊಲೀಸರ ಭಾಗವಾಗಿ ಸಂಚಾರವನ್ನು ನಿರ್ವಹಿಸುವತ್ತ ಸಾಗಿದ್ದಾರೆ. ಪ್ರಾಯೋಗಿಕ ಆಧಾರದ ಮೇಲೆ ಸಂಚಾರ ಸಹಾಯಕರಾಗಿ ನೇಮಕಗೊಂಡಿರುವ ಅವರ ಪ್ರಯಾಣವನ್ನು ಸಬಲೀಕರಣ ಮತ್ತು ಸಾಮಾಜಿಕ ಸ್ವೀಕಾರದ ಸಂಕೇತವೆಂದು ಬಣ್ಣಿಸಲಾಗುತ್ತಿದೆ.

ಟ್ರಾಫಿಕ್ ಸಹಾಯಕರಲ್ಲಿ ಒಬ್ಬರಾದ ನಿಶಾ ಮಾತನಾಡಿ, ಅವಕಾಶಕ್ಕಾಗಿ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರಿಗೆ ಕೃತಜ್ಞತೆ ಸಲ್ಲಿಸಿದರು. “ಹಿಂದೆ ನಾವು ಭಿಕ್ಷೆ ಬೇಡುತ್ತಿದ್ದ ಸ್ಥಳಗಳಲ್ಲಿ ಸಂಚಾರವನ್ನು ನಿರ್ವಹಿಸುವುದು ಅದ್ಭುತವಾಗಿದೆ” ಎಂದು ಅವರು ಸಂತಸ ಹಂಚಿಕೊಂಡಿದ್ದಾರೆ.

“ನನ್ನ ಪೋಷಕರು ನನ್ನನ್ನು ಸ್ವೀಕರಿಸಲಿಲ್ಲ. ಆದರೆ, ಅವರು ಈಗ ನನ್ನನ್ನು ಸ್ವೀಕರಿಸಿದರು. ನನ್ನ ಸ್ನೇಹಿತರು ನನ್ನನ್ನು ತಪ್ಪಿಸುತ್ತಿದ್ದರು. ಆದರೆ, ಈಗ ಅವರು ನನಗೆ ಸಂದೇಶ ಕಳುಹಿಸುತ್ತಾರೆ; ಸಂಪರ್ಕದಲ್ಲಿರುತ್ತಾರೆ. ನಾನು ಕೆಲಸ ಪಡೆದ ನಂತರ, ನನ್ನ ಸಂಬಂಧಿಕರು ಮತ್ತು ಇತರರು ಮೆಚ್ಚುತ್ತಿದ್ದಾರೆ; ಇದು ಅದ್ಭುತ. ನಾನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ” ಎಂದು ನಿಶಾ ಹೇಳಿದರು.

ಮತ್ತೊಬ್ಬ ಟ್ರಾಫಿಕ್ ಸಹಾಯಕರಾದ ಸನಾ ಇದೇ ರೀತಿಯ ಭಾವನೆಗಳನ್ನು ಪ್ರತಿಧ್ವನಿಸಿದರು; ನಾಗರಿಕರಿಂದ ಅವರು ಪಡೆಯುವ ಹೊಸ ಗೌರವವದ ಕುರಿತು ಖುಷಿ ವ್ಯಕ್ತಪಡಿಸಿದರು.

ನವೆಂಬರ್ 2024 ರಲ್ಲಿ, ಸಿಎಂ ರೆಡ್ಡಿ ಅವರು ಹೆಚ್ಚಿನ ದಟ್ಟಣೆಯ ಪ್ರದೇಶಗಳಲ್ಲಿ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳನ್ನು ಸಂಚಾರ ಸ್ವಯಂಸೇವಕರಾಗಿ ನೇಮಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದಾಗ ಈ ಉಪಕ್ರಮ ಪ್ರಾರಂಭವಾಯಿತು. ಅವರಿಗೆ ಗೃಹರಕ್ಷಕರಿಗೆ ಹೋಲುವ ಉದ್ಯೋಗಾವಕಾಶಗಳನ್ನು ಒದಗಿಸುವುದು, ಮೀಸಲಾದ ಡ್ರೆಸ್ ಕೋಡ್ ಮತ್ತು ಸಂಬಳ ಒದಗಿಸುವುದು ಇದರ ಉದ್ದೇಶವಾಗಿತ್ತು.

ಡಿಸೆಂಬರ್ 6, 2024 ರಂದು, ಸಿಎಂ ರೇವಂತ್ ರೆಡ್ಡಿ ಅವರು ಆಯ್ಕೆಯಾದ ಅಭ್ಯರ್ಥಿಗಳಿಗೆ ದಾಖಲಾತಿ ಪತ್ರಗಳನ್ನು ಹಸ್ತಾಂತರಿಸಿದರು. ಡಿಸೆಂಬರ್ 22 ರ ಹೊತ್ತಿಗೆ ಅವರನ್ನು ಔಪಚಾರಿಕವಾಗಿ ಸೇವೆಗೆ ಸೇರಿಸಲಾಯಿತು. 100 ಅರ್ಜಿದಾರರಲ್ಲಿ, ದೈಹಿಕ ಪರೀಕ್ಷೆಗಳು ಸೇರಿದಂತೆ ಕಠಿಣ ಆಯ್ಕೆ ಪ್ರಕ್ರಿಯೆಯ ನಂತರ 44 ಜನರನ್ನು ಶಾರ್ಟ್‌ಲಿಸ್ಟ್ ಮಾಡಲಾಯಿತು. 39 ಜನರು ತಮ್ಮ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು.

ಹೆಚ್ಚುವರಿ ಪೊಲೀಸ್ ಆಯುಕ್ತ (ಟ್ರಾಫಿಕ್) ಪಿ. ವಿಶ್ವ ಪ್ರಸಾದ್, ಟ್ರಾನ್ಸ್‌ಜೆಂಡರ್ ಸಂಚಾರ ಸಹಾಯಕರು ಸೇರ್ಪಡೆಯಾದಾಗಿನಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಗಮನಿಸಿದರು.

“ಟ್ರಾಫಿಕ್ ಸಹಾಯಕರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ವೃತ್ತಿಪರ ಕುಶಾಗ್ರಮತಿ ಪಡೆಯಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಅವರು ಸಮಾಜದೊಂದಿಗೆ ಸಂಯೋಜನೆಗೊಳ್ಳಲು ಮತ್ತು ಉತ್ತಮವಾಗಿ ಕಾರ್ಯನಿರ್ವಹಿಸಲು ಬಯಸುತ್ತಾರೆ” ಎಂದರು.

ಇದನ್ನೂ ಓದಿ; ಸ್ಯಾಮ್ ಪಿತ್ರೋಡಾ ವಿರುದ್ಧ ಅಕ್ರಮ ಭೂ ಒತ್ತುವರಿ ದೂರು ಕೊಟ್ಟ ಬಿಜೆಪಿ ನಾಯಕ ಎನ್.ಆರ್. ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...