Homeಮುಖಪುಟಹೈದರಾಬಾದ್ ಅವಳಿ ಬಾಂಬ್ ಸ್ಪೋಟ: ಐವರು ಅಪರಾಧಿಗಳ ಮರಣದಂಡನೆ ಎತ್ತಿ ಹಿಡಿದ ತೆಲಂಗಾಣ ಹೈಕೋರ್ಟ್

ಹೈದರಾಬಾದ್ ಅವಳಿ ಬಾಂಬ್ ಸ್ಪೋಟ: ಐವರು ಅಪರಾಧಿಗಳ ಮರಣದಂಡನೆ ಎತ್ತಿ ಹಿಡಿದ ತೆಲಂಗಾಣ ಹೈಕೋರ್ಟ್

- Advertisement -
- Advertisement -

ಹೈದರಾಬಾದ್‌ನ ದಿಲ್‌ಸುಖ್‌ನಗರ ಅವಳಿ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿಗಳಾದ ​ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ​ಐವರು ಸದಸ್ಯರಿಗೆ ಎನ್‌ಐಎ ನ್ಯಾಯಾಲಯ 2016ರಲ್ಲಿ ವಿಧಿಸಿದ್ದ ಮರಣದಂಡನೆಯನ್ನು ತೆಲಂಗಾಣ ಹೈಕೋರ್ಟ್ ಮಂಗಳವಾರ (ಏಪ್ರಿಲ್ 8) ಎತ್ತಿಹಿಡಿದಿದೆ.

2013ರಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ 18 ಜನರ ಸಾವಿಗೀಡಾಗಿದ್ದರು ಮತ್ತು 121 ಜನರು ಗಾಯಗೊಂಡಿದ್ದರು.

ನ್ಯಾಯಮೂರ್ತಿಗಳಾದ ಕೆ. ಲಕ್ಷ್ಮಣ್ ಮತ್ತು ಪಿ. ಶ್ರೀ ಸುಧಾ ಅವರಿದ್ದ ಹೈಕೋರ್ಟ್‌ ವಿಭಾಗೀಯ ಪೀಠ, ಸೆಷನ್ಸ್ ನ್ಯಾಯಾಧೀಶರು ಮರಣದಂಡನೆಯನ್ನು ದೃಢಪಡಿಸುವಂತೆ ಮಾಡಿದ ಉಲ್ಲೇಖದ ಮೇರೆಗೆ ಮತ್ತು ಆರೋಪಿಗಳಾದ ಅಸದುಲ್ಲಾ ಅಖ್ತರ್ ಹದ್ದಿ ತಬ್ರೆಜ್ ಡ್ಯಾನಿಯಲ್ ಅಸಾದ್, ಜಿಯಾ ಉರ್ ರೆಹಮಾನ್, ಮೊಹಮ್ಮದ್ ತಹ್ಸೀನ್ ಅಖ್ತರ್ ಹಸನ್, ಮೊಹಮ್ಮದ್ ಅಹ್ಮದ್ ಸಿದ್ದಿಬಾಪ ಅಲಿಯಾಸ್ ಯಾಸಿನ್ ಭಟ್ಕಳ್ ಮತ್ತು ಅಜಾಜ್ ಶೇಖ್ ಸಮರ್ ಅರ್ಮಾನ್ ಸಲ್ಲಿಸಿದ ಮೇಲ್ಮನವಿ ವಿಚಾರಣೆ ನಡೆಸಿ ಆದೇಶ ಹೊರಡಿಸಿದೆ.

ಎನ್‌ಐಎ ಆರೋಪಪಟ್ಟಿಯ ಪ್ರಕಾರ 6 ಜನರನ್ನು ಬಾಂಬ್ ಸ್ಪೋಟದ ಹೊಣೆಗಾರರನ್ನಾಗಿ ಮಾಡಲಾಗಿದ್ದರೂ, ಸ್ಪೋಟದ ಹಿಂದಿನ ಮಾಸ್ಟರ್ ಮೈಂಡ್ ಎಂದು ಹೇಳಲಾದ ರಿಯಾಜ್ ಭಟ್ಕಳ್ ಪಾಕಿಸ್ತಾನಕ್ಕೆ ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಹೀಗಾಗಿ, ಬಂಧನದಲ್ಲಿರುವ ಐವರು ಆರೋಪಿಗಳ ವಿರುದ್ಧ ಮಾತ್ರ ವಿಚಾರಣೆ ನಡೆಸಲಾಗಿದೆ.

“ಬಾಂಬ್ ಸ್ಫೋಟಗಳನ್ನು ಇಂಡಿಯನ್ ಮುಜಾಹಿದ್ದೀನ್ ಸಂಘಟನೆ ಯೋಜಿಸಿತ್ತು ಮತ್ತು ಭಾರತದ ವಿರುದ್ಧ ಯುದ್ಧ ನಡೆಸಲು ಉನ್ನತ ಮಟ್ಟದ ಪಿತೂರಿ ನಡೆಸಲಾಗಿತ್ತು. ಆ ಪಿತೂರಿಯ ಪ್ರಕಾರ ಜನರ ಮನಸ್ಸಿನಲ್ಲಿ ಭಯ ಸೃಷ್ಟಿಸಲು ಹೈದರಾಬಾದ್‌ನಲ್ಲಿ ಬಾಂಬ್ ಸ್ಫೋಟಗಳನ್ನು ನಡೆಸಲು ಅಪರಾಧಿಗಳು ನಿರ್ಧರಿಸಿದ್ದರು” ಎನ್‌ಐಎ ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿದ್ದಾಗಿ ಲೈವ್‌ ಲಾ ವರದಿ ಮಾಡಿದೆ.

ಫೆಬ್ರವರಿ 21,2013ರಂದು ಸಂಜೆ 7 ಗಂಟೆ ಸುಮಾರಿಗೆ ಹೈದರಾಬಾದ್‌ನ ದಿಲ್‌ಸುಖ್‌ನಗರ ಮಾರುಕಟ್ಟೆಯಲ್ಲಿ ಅವಳಿ ಬಾಂಬ್ ಸ್ಫೋಟಗಳು ಸಂಭವಿಸಿದ್ದವು. ಘಟನೆಯಲ್ಲಿ ತಾಯಿಯ ಗರ್ಭದಲ್ಲಿದ್ದ ಒಂದು ಮಗು ಸೇರಿದಂತೆ 18 ಜನರು ಸಾವಿಗೀಡಾಗಿದ್ದರು ಮತ್ತು 131 ಜನರು ಗಾಯಗೊಂಡಿದ್ದರು. ಮೊದಲ ಸ್ಫೋಟ ಸಂಜೆ 7 ಗಂಟೆ ಸುಮಾರಿಗೆ ದಿಲ್‌ಸುಖ್‌ನಗರದ 107 ಬಸ್ ನಿಲ್ದಾಣದ ಬಳಿ ಸಂಭವಿಸಿತ್ತು. ಇದಾಗಿ, ಕೆಲವು ಸೆಕೆಂಡುಗಳ ನಂತರ ಎರಡನೇ ಸ್ಫೋಟ ದಿಲ್‌ಸುಖ್‌ನಗರದ ಎ -1 ಮಿರ್ಚಿ ಸೆಂಟರ್ ಅಂಗಡಿಯ ಬಳಿ ಸಂಭವಿಸಿತ್ತು.

ಈ ಕುರಿತ ತನಿಖೆಯಲ್ಲಿ ಬಾಂಬ್ ಸ್ಫೋಟಗಳು ಮತ್ತು ಆರೋಪಿಗಳ ನಡುವೆ ಸಂಪರ್ಕವಿದೆ ಎಂದು ಅಧಿಕಾರಿಗಳು ಹೇಳಿದ್ದರು. ಹೆಚ್ಚುವರಿಯಾಗಿ, ತನಿಖಾಧಿಕಾರಿಗಳು ಅಮೋನಿಯಂ ನೈಟ್ರೇಟ್, ಡಯೋಡ್‌ಗಳು, ಸಂಪರ್ಕಿತ ತಂತಿಗಳು, ಟೈಮರ್‌ಗಳು, ಬ್ಯಾಟರಿಗಳು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಇವುಗಳನ್ನು ಬಳಸಿ ಹೆಚ್ಚಿನ ದಾಳಿ ನಡೆಸುವ ಸಾಧ್ಯತೆ ಇತ್ತು ಎಂದಿದ್ದರು.

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮದರಸಾ ಶಿಕ್ಷಕನಿಗೆ 187 ವರ್ಷಗಳ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...