Homeಮುಖಪುಟಹೈದರಾಬಾದ್ ಅವಳಿ ಬಾಂಬ್ ಸ್ಪೋಟ: ಐವರು ಅಪರಾಧಿಗಳ ಮರಣದಂಡನೆ ಎತ್ತಿ ಹಿಡಿದ ತೆಲಂಗಾಣ ಹೈಕೋರ್ಟ್

ಹೈದರಾಬಾದ್ ಅವಳಿ ಬಾಂಬ್ ಸ್ಪೋಟ: ಐವರು ಅಪರಾಧಿಗಳ ಮರಣದಂಡನೆ ಎತ್ತಿ ಹಿಡಿದ ತೆಲಂಗಾಣ ಹೈಕೋರ್ಟ್

- Advertisement -
- Advertisement -

ಹೈದರಾಬಾದ್‌ನ ದಿಲ್‌ಸುಖ್‌ನಗರ ಅವಳಿ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿಗಳಾದ ​ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ​ಐವರು ಸದಸ್ಯರಿಗೆ ಎನ್‌ಐಎ ನ್ಯಾಯಾಲಯ 2016ರಲ್ಲಿ ವಿಧಿಸಿದ್ದ ಮರಣದಂಡನೆಯನ್ನು ತೆಲಂಗಾಣ ಹೈಕೋರ್ಟ್ ಮಂಗಳವಾರ (ಏಪ್ರಿಲ್ 8) ಎತ್ತಿಹಿಡಿದಿದೆ.

2013ರಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ 18 ಜನರ ಸಾವಿಗೀಡಾಗಿದ್ದರು ಮತ್ತು 121 ಜನರು ಗಾಯಗೊಂಡಿದ್ದರು.

ನ್ಯಾಯಮೂರ್ತಿಗಳಾದ ಕೆ. ಲಕ್ಷ್ಮಣ್ ಮತ್ತು ಪಿ. ಶ್ರೀ ಸುಧಾ ಅವರಿದ್ದ ಹೈಕೋರ್ಟ್‌ ವಿಭಾಗೀಯ ಪೀಠ, ಸೆಷನ್ಸ್ ನ್ಯಾಯಾಧೀಶರು ಮರಣದಂಡನೆಯನ್ನು ದೃಢಪಡಿಸುವಂತೆ ಮಾಡಿದ ಉಲ್ಲೇಖದ ಮೇರೆಗೆ ಮತ್ತು ಆರೋಪಿಗಳಾದ ಅಸದುಲ್ಲಾ ಅಖ್ತರ್ ಹದ್ದಿ ತಬ್ರೆಜ್ ಡ್ಯಾನಿಯಲ್ ಅಸಾದ್, ಜಿಯಾ ಉರ್ ರೆಹಮಾನ್, ಮೊಹಮ್ಮದ್ ತಹ್ಸೀನ್ ಅಖ್ತರ್ ಹಸನ್, ಮೊಹಮ್ಮದ್ ಅಹ್ಮದ್ ಸಿದ್ದಿಬಾಪ ಅಲಿಯಾಸ್ ಯಾಸಿನ್ ಭಟ್ಕಳ್ ಮತ್ತು ಅಜಾಜ್ ಶೇಖ್ ಸಮರ್ ಅರ್ಮಾನ್ ಸಲ್ಲಿಸಿದ ಮೇಲ್ಮನವಿ ವಿಚಾರಣೆ ನಡೆಸಿ ಆದೇಶ ಹೊರಡಿಸಿದೆ.

ಎನ್‌ಐಎ ಆರೋಪಪಟ್ಟಿಯ ಪ್ರಕಾರ 6 ಜನರನ್ನು ಬಾಂಬ್ ಸ್ಪೋಟದ ಹೊಣೆಗಾರರನ್ನಾಗಿ ಮಾಡಲಾಗಿದ್ದರೂ, ಸ್ಪೋಟದ ಹಿಂದಿನ ಮಾಸ್ಟರ್ ಮೈಂಡ್ ಎಂದು ಹೇಳಲಾದ ರಿಯಾಜ್ ಭಟ್ಕಳ್ ಪಾಕಿಸ್ತಾನಕ್ಕೆ ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಹೀಗಾಗಿ, ಬಂಧನದಲ್ಲಿರುವ ಐವರು ಆರೋಪಿಗಳ ವಿರುದ್ಧ ಮಾತ್ರ ವಿಚಾರಣೆ ನಡೆಸಲಾಗಿದೆ.

“ಬಾಂಬ್ ಸ್ಫೋಟಗಳನ್ನು ಇಂಡಿಯನ್ ಮುಜಾಹಿದ್ದೀನ್ ಸಂಘಟನೆ ಯೋಜಿಸಿತ್ತು ಮತ್ತು ಭಾರತದ ವಿರುದ್ಧ ಯುದ್ಧ ನಡೆಸಲು ಉನ್ನತ ಮಟ್ಟದ ಪಿತೂರಿ ನಡೆಸಲಾಗಿತ್ತು. ಆ ಪಿತೂರಿಯ ಪ್ರಕಾರ ಜನರ ಮನಸ್ಸಿನಲ್ಲಿ ಭಯ ಸೃಷ್ಟಿಸಲು ಹೈದರಾಬಾದ್‌ನಲ್ಲಿ ಬಾಂಬ್ ಸ್ಫೋಟಗಳನ್ನು ನಡೆಸಲು ಅಪರಾಧಿಗಳು ನಿರ್ಧರಿಸಿದ್ದರು” ಎನ್‌ಐಎ ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿದ್ದಾಗಿ ಲೈವ್‌ ಲಾ ವರದಿ ಮಾಡಿದೆ.

ಫೆಬ್ರವರಿ 21,2013ರಂದು ಸಂಜೆ 7 ಗಂಟೆ ಸುಮಾರಿಗೆ ಹೈದರಾಬಾದ್‌ನ ದಿಲ್‌ಸುಖ್‌ನಗರ ಮಾರುಕಟ್ಟೆಯಲ್ಲಿ ಅವಳಿ ಬಾಂಬ್ ಸ್ಫೋಟಗಳು ಸಂಭವಿಸಿದ್ದವು. ಘಟನೆಯಲ್ಲಿ ತಾಯಿಯ ಗರ್ಭದಲ್ಲಿದ್ದ ಒಂದು ಮಗು ಸೇರಿದಂತೆ 18 ಜನರು ಸಾವಿಗೀಡಾಗಿದ್ದರು ಮತ್ತು 131 ಜನರು ಗಾಯಗೊಂಡಿದ್ದರು. ಮೊದಲ ಸ್ಫೋಟ ಸಂಜೆ 7 ಗಂಟೆ ಸುಮಾರಿಗೆ ದಿಲ್‌ಸುಖ್‌ನಗರದ 107 ಬಸ್ ನಿಲ್ದಾಣದ ಬಳಿ ಸಂಭವಿಸಿತ್ತು. ಇದಾಗಿ, ಕೆಲವು ಸೆಕೆಂಡುಗಳ ನಂತರ ಎರಡನೇ ಸ್ಫೋಟ ದಿಲ್‌ಸುಖ್‌ನಗರದ ಎ -1 ಮಿರ್ಚಿ ಸೆಂಟರ್ ಅಂಗಡಿಯ ಬಳಿ ಸಂಭವಿಸಿತ್ತು.

ಈ ಕುರಿತ ತನಿಖೆಯಲ್ಲಿ ಬಾಂಬ್ ಸ್ಫೋಟಗಳು ಮತ್ತು ಆರೋಪಿಗಳ ನಡುವೆ ಸಂಪರ್ಕವಿದೆ ಎಂದು ಅಧಿಕಾರಿಗಳು ಹೇಳಿದ್ದರು. ಹೆಚ್ಚುವರಿಯಾಗಿ, ತನಿಖಾಧಿಕಾರಿಗಳು ಅಮೋನಿಯಂ ನೈಟ್ರೇಟ್, ಡಯೋಡ್‌ಗಳು, ಸಂಪರ್ಕಿತ ತಂತಿಗಳು, ಟೈಮರ್‌ಗಳು, ಬ್ಯಾಟರಿಗಳು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಇವುಗಳನ್ನು ಬಳಸಿ ಹೆಚ್ಚಿನ ದಾಳಿ ನಡೆಸುವ ಸಾಧ್ಯತೆ ಇತ್ತು ಎಂದಿದ್ದರು.

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮದರಸಾ ಶಿಕ್ಷಕನಿಗೆ 187 ವರ್ಷಗಳ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...