Homeಮುಖಪುಟಹೈದರಾಬಾದ್ ಅವಳಿ ಬಾಂಬ್ ಸ್ಪೋಟ: ಐವರು ಅಪರಾಧಿಗಳ ಮರಣದಂಡನೆ ಎತ್ತಿ ಹಿಡಿದ ತೆಲಂಗಾಣ ಹೈಕೋರ್ಟ್

ಹೈದರಾಬಾದ್ ಅವಳಿ ಬಾಂಬ್ ಸ್ಪೋಟ: ಐವರು ಅಪರಾಧಿಗಳ ಮರಣದಂಡನೆ ಎತ್ತಿ ಹಿಡಿದ ತೆಲಂಗಾಣ ಹೈಕೋರ್ಟ್

- Advertisement -
- Advertisement -

ಹೈದರಾಬಾದ್‌ನ ದಿಲ್‌ಸುಖ್‌ನಗರ ಅವಳಿ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿಗಳಾದ ​ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ​ಐವರು ಸದಸ್ಯರಿಗೆ ಎನ್‌ಐಎ ನ್ಯಾಯಾಲಯ 2016ರಲ್ಲಿ ವಿಧಿಸಿದ್ದ ಮರಣದಂಡನೆಯನ್ನು ತೆಲಂಗಾಣ ಹೈಕೋರ್ಟ್ ಮಂಗಳವಾರ (ಏಪ್ರಿಲ್ 8) ಎತ್ತಿಹಿಡಿದಿದೆ.

2013ರಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ 18 ಜನರ ಸಾವಿಗೀಡಾಗಿದ್ದರು ಮತ್ತು 121 ಜನರು ಗಾಯಗೊಂಡಿದ್ದರು.

ನ್ಯಾಯಮೂರ್ತಿಗಳಾದ ಕೆ. ಲಕ್ಷ್ಮಣ್ ಮತ್ತು ಪಿ. ಶ್ರೀ ಸುಧಾ ಅವರಿದ್ದ ಹೈಕೋರ್ಟ್‌ ವಿಭಾಗೀಯ ಪೀಠ, ಸೆಷನ್ಸ್ ನ್ಯಾಯಾಧೀಶರು ಮರಣದಂಡನೆಯನ್ನು ದೃಢಪಡಿಸುವಂತೆ ಮಾಡಿದ ಉಲ್ಲೇಖದ ಮೇರೆಗೆ ಮತ್ತು ಆರೋಪಿಗಳಾದ ಅಸದುಲ್ಲಾ ಅಖ್ತರ್ ಹದ್ದಿ ತಬ್ರೆಜ್ ಡ್ಯಾನಿಯಲ್ ಅಸಾದ್, ಜಿಯಾ ಉರ್ ರೆಹಮಾನ್, ಮೊಹಮ್ಮದ್ ತಹ್ಸೀನ್ ಅಖ್ತರ್ ಹಸನ್, ಮೊಹಮ್ಮದ್ ಅಹ್ಮದ್ ಸಿದ್ದಿಬಾಪ ಅಲಿಯಾಸ್ ಯಾಸಿನ್ ಭಟ್ಕಳ್ ಮತ್ತು ಅಜಾಜ್ ಶೇಖ್ ಸಮರ್ ಅರ್ಮಾನ್ ಸಲ್ಲಿಸಿದ ಮೇಲ್ಮನವಿ ವಿಚಾರಣೆ ನಡೆಸಿ ಆದೇಶ ಹೊರಡಿಸಿದೆ.

ಎನ್‌ಐಎ ಆರೋಪಪಟ್ಟಿಯ ಪ್ರಕಾರ 6 ಜನರನ್ನು ಬಾಂಬ್ ಸ್ಪೋಟದ ಹೊಣೆಗಾರರನ್ನಾಗಿ ಮಾಡಲಾಗಿದ್ದರೂ, ಸ್ಪೋಟದ ಹಿಂದಿನ ಮಾಸ್ಟರ್ ಮೈಂಡ್ ಎಂದು ಹೇಳಲಾದ ರಿಯಾಜ್ ಭಟ್ಕಳ್ ಪಾಕಿಸ್ತಾನಕ್ಕೆ ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಹೀಗಾಗಿ, ಬಂಧನದಲ್ಲಿರುವ ಐವರು ಆರೋಪಿಗಳ ವಿರುದ್ಧ ಮಾತ್ರ ವಿಚಾರಣೆ ನಡೆಸಲಾಗಿದೆ.

“ಬಾಂಬ್ ಸ್ಫೋಟಗಳನ್ನು ಇಂಡಿಯನ್ ಮುಜಾಹಿದ್ದೀನ್ ಸಂಘಟನೆ ಯೋಜಿಸಿತ್ತು ಮತ್ತು ಭಾರತದ ವಿರುದ್ಧ ಯುದ್ಧ ನಡೆಸಲು ಉನ್ನತ ಮಟ್ಟದ ಪಿತೂರಿ ನಡೆಸಲಾಗಿತ್ತು. ಆ ಪಿತೂರಿಯ ಪ್ರಕಾರ ಜನರ ಮನಸ್ಸಿನಲ್ಲಿ ಭಯ ಸೃಷ್ಟಿಸಲು ಹೈದರಾಬಾದ್‌ನಲ್ಲಿ ಬಾಂಬ್ ಸ್ಫೋಟಗಳನ್ನು ನಡೆಸಲು ಅಪರಾಧಿಗಳು ನಿರ್ಧರಿಸಿದ್ದರು” ಎನ್‌ಐಎ ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿದ್ದಾಗಿ ಲೈವ್‌ ಲಾ ವರದಿ ಮಾಡಿದೆ.

ಫೆಬ್ರವರಿ 21,2013ರಂದು ಸಂಜೆ 7 ಗಂಟೆ ಸುಮಾರಿಗೆ ಹೈದರಾಬಾದ್‌ನ ದಿಲ್‌ಸುಖ್‌ನಗರ ಮಾರುಕಟ್ಟೆಯಲ್ಲಿ ಅವಳಿ ಬಾಂಬ್ ಸ್ಫೋಟಗಳು ಸಂಭವಿಸಿದ್ದವು. ಘಟನೆಯಲ್ಲಿ ತಾಯಿಯ ಗರ್ಭದಲ್ಲಿದ್ದ ಒಂದು ಮಗು ಸೇರಿದಂತೆ 18 ಜನರು ಸಾವಿಗೀಡಾಗಿದ್ದರು ಮತ್ತು 131 ಜನರು ಗಾಯಗೊಂಡಿದ್ದರು. ಮೊದಲ ಸ್ಫೋಟ ಸಂಜೆ 7 ಗಂಟೆ ಸುಮಾರಿಗೆ ದಿಲ್‌ಸುಖ್‌ನಗರದ 107 ಬಸ್ ನಿಲ್ದಾಣದ ಬಳಿ ಸಂಭವಿಸಿತ್ತು. ಇದಾಗಿ, ಕೆಲವು ಸೆಕೆಂಡುಗಳ ನಂತರ ಎರಡನೇ ಸ್ಫೋಟ ದಿಲ್‌ಸುಖ್‌ನಗರದ ಎ -1 ಮಿರ್ಚಿ ಸೆಂಟರ್ ಅಂಗಡಿಯ ಬಳಿ ಸಂಭವಿಸಿತ್ತು.

ಈ ಕುರಿತ ತನಿಖೆಯಲ್ಲಿ ಬಾಂಬ್ ಸ್ಫೋಟಗಳು ಮತ್ತು ಆರೋಪಿಗಳ ನಡುವೆ ಸಂಪರ್ಕವಿದೆ ಎಂದು ಅಧಿಕಾರಿಗಳು ಹೇಳಿದ್ದರು. ಹೆಚ್ಚುವರಿಯಾಗಿ, ತನಿಖಾಧಿಕಾರಿಗಳು ಅಮೋನಿಯಂ ನೈಟ್ರೇಟ್, ಡಯೋಡ್‌ಗಳು, ಸಂಪರ್ಕಿತ ತಂತಿಗಳು, ಟೈಮರ್‌ಗಳು, ಬ್ಯಾಟರಿಗಳು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಇವುಗಳನ್ನು ಬಳಸಿ ಹೆಚ್ಚಿನ ದಾಳಿ ನಡೆಸುವ ಸಾಧ್ಯತೆ ಇತ್ತು ಎಂದಿದ್ದರು.

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮದರಸಾ ಶಿಕ್ಷಕನಿಗೆ 187 ವರ್ಷಗಳ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...