Homeಮುಖಪುಟಹೈದರಾಬಾದ್ ಅವಳಿ ಬಾಂಬ್ ಸ್ಪೋಟ: ಐವರು ಅಪರಾಧಿಗಳ ಮರಣದಂಡನೆ ಎತ್ತಿ ಹಿಡಿದ ತೆಲಂಗಾಣ ಹೈಕೋರ್ಟ್

ಹೈದರಾಬಾದ್ ಅವಳಿ ಬಾಂಬ್ ಸ್ಪೋಟ: ಐವರು ಅಪರಾಧಿಗಳ ಮರಣದಂಡನೆ ಎತ್ತಿ ಹಿಡಿದ ತೆಲಂಗಾಣ ಹೈಕೋರ್ಟ್

- Advertisement -
- Advertisement -

ಹೈದರಾಬಾದ್‌ನ ದಿಲ್‌ಸುಖ್‌ನಗರ ಅವಳಿ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿಗಳಾದ ​ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ​ಐವರು ಸದಸ್ಯರಿಗೆ ಎನ್‌ಐಎ ನ್ಯಾಯಾಲಯ 2016ರಲ್ಲಿ ವಿಧಿಸಿದ್ದ ಮರಣದಂಡನೆಯನ್ನು ತೆಲಂಗಾಣ ಹೈಕೋರ್ಟ್ ಮಂಗಳವಾರ (ಏಪ್ರಿಲ್ 8) ಎತ್ತಿಹಿಡಿದಿದೆ.

2013ರಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ 18 ಜನರ ಸಾವಿಗೀಡಾಗಿದ್ದರು ಮತ್ತು 121 ಜನರು ಗಾಯಗೊಂಡಿದ್ದರು.

ನ್ಯಾಯಮೂರ್ತಿಗಳಾದ ಕೆ. ಲಕ್ಷ್ಮಣ್ ಮತ್ತು ಪಿ. ಶ್ರೀ ಸುಧಾ ಅವರಿದ್ದ ಹೈಕೋರ್ಟ್‌ ವಿಭಾಗೀಯ ಪೀಠ, ಸೆಷನ್ಸ್ ನ್ಯಾಯಾಧೀಶರು ಮರಣದಂಡನೆಯನ್ನು ದೃಢಪಡಿಸುವಂತೆ ಮಾಡಿದ ಉಲ್ಲೇಖದ ಮೇರೆಗೆ ಮತ್ತು ಆರೋಪಿಗಳಾದ ಅಸದುಲ್ಲಾ ಅಖ್ತರ್ ಹದ್ದಿ ತಬ್ರೆಜ್ ಡ್ಯಾನಿಯಲ್ ಅಸಾದ್, ಜಿಯಾ ಉರ್ ರೆಹಮಾನ್, ಮೊಹಮ್ಮದ್ ತಹ್ಸೀನ್ ಅಖ್ತರ್ ಹಸನ್, ಮೊಹಮ್ಮದ್ ಅಹ್ಮದ್ ಸಿದ್ದಿಬಾಪ ಅಲಿಯಾಸ್ ಯಾಸಿನ್ ಭಟ್ಕಳ್ ಮತ್ತು ಅಜಾಜ್ ಶೇಖ್ ಸಮರ್ ಅರ್ಮಾನ್ ಸಲ್ಲಿಸಿದ ಮೇಲ್ಮನವಿ ವಿಚಾರಣೆ ನಡೆಸಿ ಆದೇಶ ಹೊರಡಿಸಿದೆ.

ಎನ್‌ಐಎ ಆರೋಪಪಟ್ಟಿಯ ಪ್ರಕಾರ 6 ಜನರನ್ನು ಬಾಂಬ್ ಸ್ಪೋಟದ ಹೊಣೆಗಾರರನ್ನಾಗಿ ಮಾಡಲಾಗಿದ್ದರೂ, ಸ್ಪೋಟದ ಹಿಂದಿನ ಮಾಸ್ಟರ್ ಮೈಂಡ್ ಎಂದು ಹೇಳಲಾದ ರಿಯಾಜ್ ಭಟ್ಕಳ್ ಪಾಕಿಸ್ತಾನಕ್ಕೆ ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಹೀಗಾಗಿ, ಬಂಧನದಲ್ಲಿರುವ ಐವರು ಆರೋಪಿಗಳ ವಿರುದ್ಧ ಮಾತ್ರ ವಿಚಾರಣೆ ನಡೆಸಲಾಗಿದೆ.

“ಬಾಂಬ್ ಸ್ಫೋಟಗಳನ್ನು ಇಂಡಿಯನ್ ಮುಜಾಹಿದ್ದೀನ್ ಸಂಘಟನೆ ಯೋಜಿಸಿತ್ತು ಮತ್ತು ಭಾರತದ ವಿರುದ್ಧ ಯುದ್ಧ ನಡೆಸಲು ಉನ್ನತ ಮಟ್ಟದ ಪಿತೂರಿ ನಡೆಸಲಾಗಿತ್ತು. ಆ ಪಿತೂರಿಯ ಪ್ರಕಾರ ಜನರ ಮನಸ್ಸಿನಲ್ಲಿ ಭಯ ಸೃಷ್ಟಿಸಲು ಹೈದರಾಬಾದ್‌ನಲ್ಲಿ ಬಾಂಬ್ ಸ್ಫೋಟಗಳನ್ನು ನಡೆಸಲು ಅಪರಾಧಿಗಳು ನಿರ್ಧರಿಸಿದ್ದರು” ಎನ್‌ಐಎ ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿದ್ದಾಗಿ ಲೈವ್‌ ಲಾ ವರದಿ ಮಾಡಿದೆ.

ಫೆಬ್ರವರಿ 21,2013ರಂದು ಸಂಜೆ 7 ಗಂಟೆ ಸುಮಾರಿಗೆ ಹೈದರಾಬಾದ್‌ನ ದಿಲ್‌ಸುಖ್‌ನಗರ ಮಾರುಕಟ್ಟೆಯಲ್ಲಿ ಅವಳಿ ಬಾಂಬ್ ಸ್ಫೋಟಗಳು ಸಂಭವಿಸಿದ್ದವು. ಘಟನೆಯಲ್ಲಿ ತಾಯಿಯ ಗರ್ಭದಲ್ಲಿದ್ದ ಒಂದು ಮಗು ಸೇರಿದಂತೆ 18 ಜನರು ಸಾವಿಗೀಡಾಗಿದ್ದರು ಮತ್ತು 131 ಜನರು ಗಾಯಗೊಂಡಿದ್ದರು. ಮೊದಲ ಸ್ಫೋಟ ಸಂಜೆ 7 ಗಂಟೆ ಸುಮಾರಿಗೆ ದಿಲ್‌ಸುಖ್‌ನಗರದ 107 ಬಸ್ ನಿಲ್ದಾಣದ ಬಳಿ ಸಂಭವಿಸಿತ್ತು. ಇದಾಗಿ, ಕೆಲವು ಸೆಕೆಂಡುಗಳ ನಂತರ ಎರಡನೇ ಸ್ಫೋಟ ದಿಲ್‌ಸುಖ್‌ನಗರದ ಎ -1 ಮಿರ್ಚಿ ಸೆಂಟರ್ ಅಂಗಡಿಯ ಬಳಿ ಸಂಭವಿಸಿತ್ತು.

ಈ ಕುರಿತ ತನಿಖೆಯಲ್ಲಿ ಬಾಂಬ್ ಸ್ಫೋಟಗಳು ಮತ್ತು ಆರೋಪಿಗಳ ನಡುವೆ ಸಂಪರ್ಕವಿದೆ ಎಂದು ಅಧಿಕಾರಿಗಳು ಹೇಳಿದ್ದರು. ಹೆಚ್ಚುವರಿಯಾಗಿ, ತನಿಖಾಧಿಕಾರಿಗಳು ಅಮೋನಿಯಂ ನೈಟ್ರೇಟ್, ಡಯೋಡ್‌ಗಳು, ಸಂಪರ್ಕಿತ ತಂತಿಗಳು, ಟೈಮರ್‌ಗಳು, ಬ್ಯಾಟರಿಗಳು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಇವುಗಳನ್ನು ಬಳಸಿ ಹೆಚ್ಚಿನ ದಾಳಿ ನಡೆಸುವ ಸಾಧ್ಯತೆ ಇತ್ತು ಎಂದಿದ್ದರು.

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮದರಸಾ ಶಿಕ್ಷಕನಿಗೆ 187 ವರ್ಷಗಳ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...