Homeಮುಖಪುಟಹೈದರಾಬಾದ್ ಅವಳಿ ಬಾಂಬ್ ಸ್ಪೋಟ: ಐವರು ಅಪರಾಧಿಗಳ ಮರಣದಂಡನೆ ಎತ್ತಿ ಹಿಡಿದ ತೆಲಂಗಾಣ ಹೈಕೋರ್ಟ್

ಹೈದರಾಬಾದ್ ಅವಳಿ ಬಾಂಬ್ ಸ್ಪೋಟ: ಐವರು ಅಪರಾಧಿಗಳ ಮರಣದಂಡನೆ ಎತ್ತಿ ಹಿಡಿದ ತೆಲಂಗಾಣ ಹೈಕೋರ್ಟ್

- Advertisement -
- Advertisement -

ಹೈದರಾಬಾದ್‌ನ ದಿಲ್‌ಸುಖ್‌ನಗರ ಅವಳಿ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿಗಳಾದ ​ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ​ಐವರು ಸದಸ್ಯರಿಗೆ ಎನ್‌ಐಎ ನ್ಯಾಯಾಲಯ 2016ರಲ್ಲಿ ವಿಧಿಸಿದ್ದ ಮರಣದಂಡನೆಯನ್ನು ತೆಲಂಗಾಣ ಹೈಕೋರ್ಟ್ ಮಂಗಳವಾರ (ಏಪ್ರಿಲ್ 8) ಎತ್ತಿಹಿಡಿದಿದೆ.

2013ರಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ 18 ಜನರ ಸಾವಿಗೀಡಾಗಿದ್ದರು ಮತ್ತು 121 ಜನರು ಗಾಯಗೊಂಡಿದ್ದರು.

ನ್ಯಾಯಮೂರ್ತಿಗಳಾದ ಕೆ. ಲಕ್ಷ್ಮಣ್ ಮತ್ತು ಪಿ. ಶ್ರೀ ಸುಧಾ ಅವರಿದ್ದ ಹೈಕೋರ್ಟ್‌ ವಿಭಾಗೀಯ ಪೀಠ, ಸೆಷನ್ಸ್ ನ್ಯಾಯಾಧೀಶರು ಮರಣದಂಡನೆಯನ್ನು ದೃಢಪಡಿಸುವಂತೆ ಮಾಡಿದ ಉಲ್ಲೇಖದ ಮೇರೆಗೆ ಮತ್ತು ಆರೋಪಿಗಳಾದ ಅಸದುಲ್ಲಾ ಅಖ್ತರ್ ಹದ್ದಿ ತಬ್ರೆಜ್ ಡ್ಯಾನಿಯಲ್ ಅಸಾದ್, ಜಿಯಾ ಉರ್ ರೆಹಮಾನ್, ಮೊಹಮ್ಮದ್ ತಹ್ಸೀನ್ ಅಖ್ತರ್ ಹಸನ್, ಮೊಹಮ್ಮದ್ ಅಹ್ಮದ್ ಸಿದ್ದಿಬಾಪ ಅಲಿಯಾಸ್ ಯಾಸಿನ್ ಭಟ್ಕಳ್ ಮತ್ತು ಅಜಾಜ್ ಶೇಖ್ ಸಮರ್ ಅರ್ಮಾನ್ ಸಲ್ಲಿಸಿದ ಮೇಲ್ಮನವಿ ವಿಚಾರಣೆ ನಡೆಸಿ ಆದೇಶ ಹೊರಡಿಸಿದೆ.

ಎನ್‌ಐಎ ಆರೋಪಪಟ್ಟಿಯ ಪ್ರಕಾರ 6 ಜನರನ್ನು ಬಾಂಬ್ ಸ್ಪೋಟದ ಹೊಣೆಗಾರರನ್ನಾಗಿ ಮಾಡಲಾಗಿದ್ದರೂ, ಸ್ಪೋಟದ ಹಿಂದಿನ ಮಾಸ್ಟರ್ ಮೈಂಡ್ ಎಂದು ಹೇಳಲಾದ ರಿಯಾಜ್ ಭಟ್ಕಳ್ ಪಾಕಿಸ್ತಾನಕ್ಕೆ ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಹೀಗಾಗಿ, ಬಂಧನದಲ್ಲಿರುವ ಐವರು ಆರೋಪಿಗಳ ವಿರುದ್ಧ ಮಾತ್ರ ವಿಚಾರಣೆ ನಡೆಸಲಾಗಿದೆ.

“ಬಾಂಬ್ ಸ್ಫೋಟಗಳನ್ನು ಇಂಡಿಯನ್ ಮುಜಾಹಿದ್ದೀನ್ ಸಂಘಟನೆ ಯೋಜಿಸಿತ್ತು ಮತ್ತು ಭಾರತದ ವಿರುದ್ಧ ಯುದ್ಧ ನಡೆಸಲು ಉನ್ನತ ಮಟ್ಟದ ಪಿತೂರಿ ನಡೆಸಲಾಗಿತ್ತು. ಆ ಪಿತೂರಿಯ ಪ್ರಕಾರ ಜನರ ಮನಸ್ಸಿನಲ್ಲಿ ಭಯ ಸೃಷ್ಟಿಸಲು ಹೈದರಾಬಾದ್‌ನಲ್ಲಿ ಬಾಂಬ್ ಸ್ಫೋಟಗಳನ್ನು ನಡೆಸಲು ಅಪರಾಧಿಗಳು ನಿರ್ಧರಿಸಿದ್ದರು” ಎನ್‌ಐಎ ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿದ್ದಾಗಿ ಲೈವ್‌ ಲಾ ವರದಿ ಮಾಡಿದೆ.

ಫೆಬ್ರವರಿ 21,2013ರಂದು ಸಂಜೆ 7 ಗಂಟೆ ಸುಮಾರಿಗೆ ಹೈದರಾಬಾದ್‌ನ ದಿಲ್‌ಸುಖ್‌ನಗರ ಮಾರುಕಟ್ಟೆಯಲ್ಲಿ ಅವಳಿ ಬಾಂಬ್ ಸ್ಫೋಟಗಳು ಸಂಭವಿಸಿದ್ದವು. ಘಟನೆಯಲ್ಲಿ ತಾಯಿಯ ಗರ್ಭದಲ್ಲಿದ್ದ ಒಂದು ಮಗು ಸೇರಿದಂತೆ 18 ಜನರು ಸಾವಿಗೀಡಾಗಿದ್ದರು ಮತ್ತು 131 ಜನರು ಗಾಯಗೊಂಡಿದ್ದರು. ಮೊದಲ ಸ್ಫೋಟ ಸಂಜೆ 7 ಗಂಟೆ ಸುಮಾರಿಗೆ ದಿಲ್‌ಸುಖ್‌ನಗರದ 107 ಬಸ್ ನಿಲ್ದಾಣದ ಬಳಿ ಸಂಭವಿಸಿತ್ತು. ಇದಾಗಿ, ಕೆಲವು ಸೆಕೆಂಡುಗಳ ನಂತರ ಎರಡನೇ ಸ್ಫೋಟ ದಿಲ್‌ಸುಖ್‌ನಗರದ ಎ -1 ಮಿರ್ಚಿ ಸೆಂಟರ್ ಅಂಗಡಿಯ ಬಳಿ ಸಂಭವಿಸಿತ್ತು.

ಈ ಕುರಿತ ತನಿಖೆಯಲ್ಲಿ ಬಾಂಬ್ ಸ್ಫೋಟಗಳು ಮತ್ತು ಆರೋಪಿಗಳ ನಡುವೆ ಸಂಪರ್ಕವಿದೆ ಎಂದು ಅಧಿಕಾರಿಗಳು ಹೇಳಿದ್ದರು. ಹೆಚ್ಚುವರಿಯಾಗಿ, ತನಿಖಾಧಿಕಾರಿಗಳು ಅಮೋನಿಯಂ ನೈಟ್ರೇಟ್, ಡಯೋಡ್‌ಗಳು, ಸಂಪರ್ಕಿತ ತಂತಿಗಳು, ಟೈಮರ್‌ಗಳು, ಬ್ಯಾಟರಿಗಳು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಇವುಗಳನ್ನು ಬಳಸಿ ಹೆಚ್ಚಿನ ದಾಳಿ ನಡೆಸುವ ಸಾಧ್ಯತೆ ಇತ್ತು ಎಂದಿದ್ದರು.

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮದರಸಾ ಶಿಕ್ಷಕನಿಗೆ 187 ವರ್ಷಗಳ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...