Homeಮುಖಪುಟಹೈದರಾಬಾದ್: ಮತ್ತಿಬ್ಬರು ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಬೆಳಕಿಗೆ

ಹೈದರಾಬಾದ್: ಮತ್ತಿಬ್ಬರು ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಬೆಳಕಿಗೆ

- Advertisement -
- Advertisement -

ಇತ್ತೀಚೆಗೆ ಜುಬ್ಲಿ ಹಿಲ್ಸ್‌ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆಘಾತದಿಂದ ಚೇತರಿಸಿಕೊಳ್ಳುತ್ತಿರುವ ಹೈದರಾಬಾದ್‌ ನಗರದಲ್ಲಿ ಮತ್ತೆ ಎರಡು ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬಂದಿವೆ.

ಕಳೆದ ಮೇ 31 ರಂದು ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಲಾಗಿದೆ. ಭಾನುವಾರ (ಜೂನ್ 5) ಈ ಎರಡೂ ಪ್ರಕರಣಗಳು ಬೆಳಕಿಗೆ ಬಂದಿವೆ. ಮೊದಲ ಘಟನೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದೇವೆ. ಎರಡನೇ ಪ್ರಕರಣದ ಆರೋಪಿಯನ್ನು ಹುಡುಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತು ಮಾಹಿತಿ ನೀಡಿರುವ ಡೆಪ್ಯುಟಿ ಪೊಲೀಸ್ ಕಮಿಷನರ್ (ದಕ್ಷಿಣ ವಲಯ) ಪಿ.ಸಾಯಿ ಚೈತನ್ಯ, “ಮೇ 31 ರಂದು 12 ವರ್ಷದ ಬಾಲಕಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿರತ್ತು. ಜೂನ್ 1 ರಂದು ಪೊಲೀಸರು ಗಸ್ತು ಹಾಕುವಾಗ ಸುಲ್ತಾನ್‌ಶಾಹಿ ಪ್ರದೇಶದಲ್ಲಿ ಬಾಲಕಿಯನ್ನು ಕಂಡು ಸ್ಥಳೀಯ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಆಂಧ್ರಪ್ರದೇಶ: ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ತಿಂಗಳುಗಳ ಬಳಿಕ ಪ್ರಕರಣ ಬಯಲು

ಮುಂದುವರೆದು, “ಬಾಲಕಿಯ ಹೇಳಿಕೆ ಪ್ರಕಾರ, ಆಕೆ ತನ್ನ ಅಜ್ಜಿಯ ಮನೆಯಿಂದ ತಮ್ಮ ಮನೆಗೆ ಹೋಗುತ್ತಿದ್ದಾಗ ಕ್ಯಾಬ್ ಡ್ರೈವರ್ ಆಕೆಯನ್ನು ಕೊಂಡೂರ್ಗ್ ಗ್ರಾಮದಲ್ಲಿರುವ ತನ್ನ ಸ್ನೇಹಿತನ ಮನೆಗೆ ಕರೆದೊಯ್ದ, ಅಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಜೂನ್ 1 ರ ಮುಂಜಾನೆ ಕ್ಯಾಬ್ ಡ್ರೈವರ್ ಬಾಲಕಿಯನ್ನು ಸುಲ್ತಾನ್‌ಶಾಹಿಯಲ್ಲಿ ಬಿಟ್ಟು ಹೋಗಿದ್ದಾರೆ.”

“ಆರೋಪಿಗಳ ಪತ್ತೆಗೆ ಎರಡು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಜೂನ್ 3 ರಂದು ಪೊಲೀಸರು ಇಬ್ಬರು ಆರೋಪಿಗಳಾದ ಕ್ಯಾಬ್ ಚಾಲಕ ಶೇಕ್ ಕಲೀಮ್ ಅಲಿ (36) ಮತ್ತು ಮೊಹಮ್ಮದ್ ಲುಕ್ಮಾನ್ ಅಹ್ಮದ್ (36) ಅವರನ್ನು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳನ್ನು ಎರಡು ವಾರಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ” ಎಂದು ಡೆಪ್ಯುಟಿ ಪೊಲೀಸ್ ಕಮಿಷನರ್ ಹೇಳಿದ್ದಾರೆ.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 366 (ಎ) (ಅಪಹರಣ), 376 (ಅತ್ಯಾಚಾರ) ಜೊತೆಗೆ ಆರೋಪಿಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ಉದ್ಯೋಗಿಯಾಗಿರುವ ಸೂಫಿಯಾನ್ (21) ಎಂಬಾತ ಚಾರ್ಮಿನಾರ್‌ನ ಜವಳಿ ಅಂಗಡಿಯೊಂದರಲ್ಲಿ ಕೆಲಸ ಮಾಡುವ ಬಾಲಕಿಗೆ ಆಮಿಷ ಒಡ್ಡಿ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಎಸ್.ಸುದರ್ಶನ್ ಹೇಳಿದ್ದಾರೆ.

“ಮರುದಿನ ಬೆಳಿಗ್ಗೆ ಆಕೆಯನ್ನು ಮತ್ತೆ ಅಂಗಡಿ ಬಳಿ ಇಳಿಸಿ, ತನ್ನ ಮೊಬೈಲ್ ನಂಬರ್ ಕೂಡ ಕೊಟ್ಟು ಹೋಗಿದ್ದಾನೆ. ಭಾನುವಾರ ಬೆಳಗ್ಗೆ ಬಾಲಕಿ ತೀವ್ರ ನೋವಿನಿಂದ ಬಳಲುತ್ತಿರುವುದಾಗಿ ತಾಯಿಗೆ ತಿಳಿಸಿದ್ದು, ತಾಯಿ ವಿಚಾರಿಸಿದಾಗ ಘಟನೆ ಬಗ್ಗೆ ವಿವರಿಸಿದ್ದಾರೆ. ತಾಯಿ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯ ವಿರುದ್ಧ ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಪತ್ತೆ ಹಚ್ಚಲಾಗುತ್ತಿದೆ” ಎಂದು ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.

ಇತ್ತೀಚೆಗೆ ಪಬ್‌ಗೆ ತೆರಳಿದ್ದ ಬಾಲಕಿಗೆ ಡ್ರಾಪ್ ಕೊಡುವ ನೆಪದಲ್ಲಿ ಐವರು ಅಪ್ರಾಪ್ತ ಶಾಲಾ ಬಾಲಕರು ಕಾರಿನೊಳಗೆ ಕೂಡಿಹಾಕಿ ಸಾಮೂಹಿಕ ಅತ್ಯಾಚಾರವೆಸಗಿದ್ದರು.

ಅತ್ಯಾಚಾರವೆಂಬದು ಹೀನ ಕುಕೃತ್ಯ. ವಿಕೃತ ಮನಸ್ಸಗಳು ಮಾಡುವ ಘೋರ ಅಪರಾಧ. ಇಂತಹ ಹೀನ ಕೃತ್ಯಕ್ಕೆ ಹೈದರಾಬಾದ್‌ನಲ್ಲಿ ಶಾಲಾ ಬಾಲಕರೂ ಇಳಿದಿರುವುದು ದುರಂತವಾಗಿದೆ. ಈ ಕುರಿತು ಸರ್ಕಾರಗಳು ಗಂಭೀರವಾಗಿ ಚಿಂತಿಸಿ ಮಕ್ಕಳಿಗೆ ಚಿಕ್ಕಂದಿನಲ್ಲಿಯೇ ಅರಿವು ಮೂಡಿಸಬೇಕಿದೆ. ಅತ್ಯಾಚಾರಗಳನ್ನು ತಡೆಯಲು ಗಂಭೀರ ಪ್ರಯತ್ನ ಹಾಕಬೇಕಿದೆ. ಅದು ಘೋರ ಅಪರಾಧ ಎಂದು ಎಲ್ಲರ ಮನಸ್ಸಿನಲ್ಲಿ ಮೂಡುವಂತೆ ಒತ್ತಡ ಹಾಕಬೇಕಿದೆ.


ಇದನ್ನೂ ಓದಿ: ಹೈದರಾಬಾದ್‌ನಲ್ಲಿ ಬಾಲಕಿ ಮೇಲೆ ಅಪ್ರಾಪ್ತ ಬಾಲಕರಿಂದ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...