Homeಮುಖಪುಟಹೈದರಾಬಾದ್: ಮತ್ತಿಬ್ಬರು ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಬೆಳಕಿಗೆ

ಹೈದರಾಬಾದ್: ಮತ್ತಿಬ್ಬರು ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಬೆಳಕಿಗೆ

- Advertisement -
- Advertisement -

ಇತ್ತೀಚೆಗೆ ಜುಬ್ಲಿ ಹಿಲ್ಸ್‌ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆಘಾತದಿಂದ ಚೇತರಿಸಿಕೊಳ್ಳುತ್ತಿರುವ ಹೈದರಾಬಾದ್‌ ನಗರದಲ್ಲಿ ಮತ್ತೆ ಎರಡು ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬಂದಿವೆ.

ಕಳೆದ ಮೇ 31 ರಂದು ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಲಾಗಿದೆ. ಭಾನುವಾರ (ಜೂನ್ 5) ಈ ಎರಡೂ ಪ್ರಕರಣಗಳು ಬೆಳಕಿಗೆ ಬಂದಿವೆ. ಮೊದಲ ಘಟನೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದೇವೆ. ಎರಡನೇ ಪ್ರಕರಣದ ಆರೋಪಿಯನ್ನು ಹುಡುಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತು ಮಾಹಿತಿ ನೀಡಿರುವ ಡೆಪ್ಯುಟಿ ಪೊಲೀಸ್ ಕಮಿಷನರ್ (ದಕ್ಷಿಣ ವಲಯ) ಪಿ.ಸಾಯಿ ಚೈತನ್ಯ, “ಮೇ 31 ರಂದು 12 ವರ್ಷದ ಬಾಲಕಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿರತ್ತು. ಜೂನ್ 1 ರಂದು ಪೊಲೀಸರು ಗಸ್ತು ಹಾಕುವಾಗ ಸುಲ್ತಾನ್‌ಶಾಹಿ ಪ್ರದೇಶದಲ್ಲಿ ಬಾಲಕಿಯನ್ನು ಕಂಡು ಸ್ಥಳೀಯ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಆಂಧ್ರಪ್ರದೇಶ: ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ತಿಂಗಳುಗಳ ಬಳಿಕ ಪ್ರಕರಣ ಬಯಲು

ಮುಂದುವರೆದು, “ಬಾಲಕಿಯ ಹೇಳಿಕೆ ಪ್ರಕಾರ, ಆಕೆ ತನ್ನ ಅಜ್ಜಿಯ ಮನೆಯಿಂದ ತಮ್ಮ ಮನೆಗೆ ಹೋಗುತ್ತಿದ್ದಾಗ ಕ್ಯಾಬ್ ಡ್ರೈವರ್ ಆಕೆಯನ್ನು ಕೊಂಡೂರ್ಗ್ ಗ್ರಾಮದಲ್ಲಿರುವ ತನ್ನ ಸ್ನೇಹಿತನ ಮನೆಗೆ ಕರೆದೊಯ್ದ, ಅಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಜೂನ್ 1 ರ ಮುಂಜಾನೆ ಕ್ಯಾಬ್ ಡ್ರೈವರ್ ಬಾಲಕಿಯನ್ನು ಸುಲ್ತಾನ್‌ಶಾಹಿಯಲ್ಲಿ ಬಿಟ್ಟು ಹೋಗಿದ್ದಾರೆ.”

“ಆರೋಪಿಗಳ ಪತ್ತೆಗೆ ಎರಡು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಜೂನ್ 3 ರಂದು ಪೊಲೀಸರು ಇಬ್ಬರು ಆರೋಪಿಗಳಾದ ಕ್ಯಾಬ್ ಚಾಲಕ ಶೇಕ್ ಕಲೀಮ್ ಅಲಿ (36) ಮತ್ತು ಮೊಹಮ್ಮದ್ ಲುಕ್ಮಾನ್ ಅಹ್ಮದ್ (36) ಅವರನ್ನು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳನ್ನು ಎರಡು ವಾರಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ” ಎಂದು ಡೆಪ್ಯುಟಿ ಪೊಲೀಸ್ ಕಮಿಷನರ್ ಹೇಳಿದ್ದಾರೆ.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 366 (ಎ) (ಅಪಹರಣ), 376 (ಅತ್ಯಾಚಾರ) ಜೊತೆಗೆ ಆರೋಪಿಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ಉದ್ಯೋಗಿಯಾಗಿರುವ ಸೂಫಿಯಾನ್ (21) ಎಂಬಾತ ಚಾರ್ಮಿನಾರ್‌ನ ಜವಳಿ ಅಂಗಡಿಯೊಂದರಲ್ಲಿ ಕೆಲಸ ಮಾಡುವ ಬಾಲಕಿಗೆ ಆಮಿಷ ಒಡ್ಡಿ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಎಸ್.ಸುದರ್ಶನ್ ಹೇಳಿದ್ದಾರೆ.

“ಮರುದಿನ ಬೆಳಿಗ್ಗೆ ಆಕೆಯನ್ನು ಮತ್ತೆ ಅಂಗಡಿ ಬಳಿ ಇಳಿಸಿ, ತನ್ನ ಮೊಬೈಲ್ ನಂಬರ್ ಕೂಡ ಕೊಟ್ಟು ಹೋಗಿದ್ದಾನೆ. ಭಾನುವಾರ ಬೆಳಗ್ಗೆ ಬಾಲಕಿ ತೀವ್ರ ನೋವಿನಿಂದ ಬಳಲುತ್ತಿರುವುದಾಗಿ ತಾಯಿಗೆ ತಿಳಿಸಿದ್ದು, ತಾಯಿ ವಿಚಾರಿಸಿದಾಗ ಘಟನೆ ಬಗ್ಗೆ ವಿವರಿಸಿದ್ದಾರೆ. ತಾಯಿ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯ ವಿರುದ್ಧ ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಪತ್ತೆ ಹಚ್ಚಲಾಗುತ್ತಿದೆ” ಎಂದು ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.

ಇತ್ತೀಚೆಗೆ ಪಬ್‌ಗೆ ತೆರಳಿದ್ದ ಬಾಲಕಿಗೆ ಡ್ರಾಪ್ ಕೊಡುವ ನೆಪದಲ್ಲಿ ಐವರು ಅಪ್ರಾಪ್ತ ಶಾಲಾ ಬಾಲಕರು ಕಾರಿನೊಳಗೆ ಕೂಡಿಹಾಕಿ ಸಾಮೂಹಿಕ ಅತ್ಯಾಚಾರವೆಸಗಿದ್ದರು.

ಅತ್ಯಾಚಾರವೆಂಬದು ಹೀನ ಕುಕೃತ್ಯ. ವಿಕೃತ ಮನಸ್ಸಗಳು ಮಾಡುವ ಘೋರ ಅಪರಾಧ. ಇಂತಹ ಹೀನ ಕೃತ್ಯಕ್ಕೆ ಹೈದರಾಬಾದ್‌ನಲ್ಲಿ ಶಾಲಾ ಬಾಲಕರೂ ಇಳಿದಿರುವುದು ದುರಂತವಾಗಿದೆ. ಈ ಕುರಿತು ಸರ್ಕಾರಗಳು ಗಂಭೀರವಾಗಿ ಚಿಂತಿಸಿ ಮಕ್ಕಳಿಗೆ ಚಿಕ್ಕಂದಿನಲ್ಲಿಯೇ ಅರಿವು ಮೂಡಿಸಬೇಕಿದೆ. ಅತ್ಯಾಚಾರಗಳನ್ನು ತಡೆಯಲು ಗಂಭೀರ ಪ್ರಯತ್ನ ಹಾಕಬೇಕಿದೆ. ಅದು ಘೋರ ಅಪರಾಧ ಎಂದು ಎಲ್ಲರ ಮನಸ್ಸಿನಲ್ಲಿ ಮೂಡುವಂತೆ ಒತ್ತಡ ಹಾಕಬೇಕಿದೆ.


ಇದನ್ನೂ ಓದಿ: ಹೈದರಾಬಾದ್‌ನಲ್ಲಿ ಬಾಲಕಿ ಮೇಲೆ ಅಪ್ರಾಪ್ತ ಬಾಲಕರಿಂದ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...