Homeಮುಖಪುಟಹೈದರಾಬಾದ್ ವಿವಿ ಚುನಾವಣೆ: ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್‌ನ ದಲಿತ ವಿದ್ಯಾರ್ಥಿ ಅಧ್ಯಕ್ಷರಾಗಿ ಆಯ್ಕೆ

ಹೈದರಾಬಾದ್ ವಿವಿ ಚುನಾವಣೆ: ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್‌ನ ದಲಿತ ವಿದ್ಯಾರ್ಥಿ ಅಧ್ಯಕ್ಷರಾಗಿ ಆಯ್ಕೆ

ಲಿಂಗ ಸಂವೇದನೆ ಸಮಿತಿಗೆ ಪ್ರತಿನಿಧಿಯಾಗಿ ಟ್ರಾನ್ಸ್ ಯುವತಿ ಆಯ್ಕೆಯಾಗಿದ್ದಾರೆ.

- Advertisement -
- Advertisement -

ಪರಿಶಿಷ್ಟ ಜಾತಿಯ ಮಹಾರ್ ಸಮುದಾಯಕ್ಕೆ ಸೇರಿದ 24 ವರ್ಷದ ಪ್ರಜ್ವಲ್ ಚಂದ್ರಕಾಂತ್ ಗಾಯಕವಾಡ ಅವರು ಫೆಬ್ರವರಿ 25, ಶನಿವಾರದಂದು ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ  ಆಯ್ಕೆಯಾದರು.

ಪ್ರಜ್ವಲ್ ಅವರು ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್‌ನ ಸಂಚಾಲಕರಾಗಿದ್ದಾರೆ. ಇವರು ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್-ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ-ದಲಿತ್ ಸ್ಟೂಡೆಂಟ್ಸ್ ಯೂನಿಯನ್ (ASA-SFI-DSU) ಪ್ಯಾನೆಲ್‌ನಿಂದ ಸ್ಪರ್ಧಿಸಿ 608 ಮತಗಳ ಅಂತರದಿಂದ ಗೆದ್ದಿದ್ದಾರೆ. ಅವರ ಜೊತೆಗೆ, ಐದು ಇತರ ದಲಿತ ವಿದ್ಯಾರ್ಥಿಗಳು ವಿವಿಧ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ. ಇದು ಹೈದರಾಬಾದ್ ವಿಶ್ವವಿದ್ಯಾನಿಲಯದಲ್ಲಿ ಸಾಮಾಜಿಕ ನ್ಯಾಯದ ಆಂದೋಲನ ಚಾಲ್ತಿಯಲ್ಲಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಪ್ರಜ್ವಲ್ ಹೇಳಿದ್ದಾರೆ.

“ಯಾವುದೇ ಭಾರತೀಯ ವಿಶ್ವವಿದ್ಯಾನಿಲಯದ ಇತಿಹಾಸದಲ್ಲಿ, ಒಂಬತ್ತು ಹುದ್ದೆಗಳಲ್ಲಿ ಆರು ದಲಿತ ವಿದ್ಯಾರ್ಥಿಗಳು ಸ್ಪರ್ಧಿಸಿ ಗೆಲವು ಕಂಡಿಲ್ಲ, ಜಾತಿ ವಿರೋಧಿ ಚಳವಳಿಯ ಇತಿಹಾಸದಲ್ಲಿ ಇದೊಂದು ವಿಜಯದ ಕ್ಷಣವಾಗಿದೆ” ಎಂದು ಪ್ರಜ್ವಲ್ ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಜ್ವಲ್ ಚಂದ್ರಕಾಂತ್ ಗಾಯಕವಾಡ

ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ, ಕ್ರೀಡಾ ಕಾರ್ಯದರ್ಶಿ, ಸಾಂಸ್ಕೃತಿಕ ಕಾರ್ಯದರ್ಶಿ ಮತ್ತು ವಿದ್ಯಾರ್ಥಿಗಳ ಲೈಂಗಿಕ ಕಿರುಕುಳದ ವಿರುದ್ಧ ಲಿಂಗ ಸಂವೇದನೆ ಸಮಿತಿ ಸೇರಿದಂತೆ ವಿದ್ಯಾರ್ಥಿ ಒಕ್ಕೂಟದ ಚುನಾವಣೆಗಳು ಒಂಬತ್ತು ಹುದ್ದೆಗಳಿಗೆ ನಡೆಯುತ್ತವೆ.

ಪ್ರಜ್ವಲ್‌ ಅವರು ಮಹಾರಾಷ್ಟ್ರದ ನಾಸಿಕ್‌ನಿಂದ ಬಂದಿದ್ದು, ಅವರು ಜೆಂಡರ್ ಸ್ಟಡೀಸ್ ವಿಭಾಗದಲ್ಲಿ ಪಿಎಚ್‌ಡಿ ಮಾಡುತ್ತಿದ್ದಾರೆ. ಅವರ ತಂದೆ ತಾಯಿ ಅಂಬೇಡ್ಕರ್‌ವಾದಿಗಳಾಗಿದ್ದು, ಪ್ರಜ್ವಲ್‌ ಕೂಡ ಯಾವಾಗಲೂ ಅಂಬೇಡ್ಕರ್ ಸಿದ್ಧಾಂತದ ಕಡೆಗೆ ಒಲವು ತೋರುತ್ತಿದ್ದರು. ಅವರು ಪುಣೆಯ ಫರ್ಗುಸನ್ ಕಾಲೇಜಿನಲ್ಲಿ ಪದವಿ  ಓದುವ ಸಮಯದಲ್ಲಿ ತಮ್ಮ ವಿದ್ಯಾರ್ಥಿ ರಾಜಕೀಯವನ್ನು ಪ್ರಾರಂಭಿಸಿದರು. ಅಲ್ಲಿ ಅವರು ಅಂಬೇಡ್ಕರ್ ವಿದ್ಯಾರ್ಥಿಗಳ ಸಂಘಟನೆಯ ಸ್ಥಾಪಕ-ಸದಸ್ಯರಾಗಿದ್ದರು.

ಇದನ್ನೂ ಓದಿ: ಹೈದರಾಬಾದ್‌‌ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ವೀಕ್ಷಿಸಿದ ವಿದ್ಯಾರ್ಥಿಗಳು

2019ರಲ್ಲಿ ಪ್ರಜ್ವಲ್ ಅವರು ಹೈದರಾಬಾದ್ ವಿಶ್ವವಿದ್ಯಾನಿಲಯಕ್ಕೆ ಪ್ರವೇಶ ಮಾಡಿದು, ಇತಿಹಾಸದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು. ಈ ವೇಳೆ ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್‌ನೊಂದಿಗೆ ಸಂಬಂಧ ಹೊಂದಿದ್ದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಮೇಲಿನ ತಾರತಮ್ಯದ ವಿರುದ್ಧ ಹಲವು ಹೋರಾಟಗಳನ್ನು ಮುನ್ನಡೆಸಿದ್ದಾರೆ.

”ಸಾಮಾಜಿಕ ನ್ಯಾಯದ ವಿಷಯದಲ್ಲಿ, ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯು ಇತರ ವಿಶ್ವವಿದ್ಯಾಲಯಗಳಿಗಿಂತ ಬಹಳ ಮುಂದಿದೆ. ಮೀಸಲಾತಿಗಳನ್ನು ರಕ್ಷಿಸುವುದಷ್ಟೇ ಅಲ್ಲ, ವಿದ್ಯಾರ್ಥಿಗಳ ಫೆಲೋಶಿಪ್‌ಗಾಗಿ ಹೋರಾಡುವಲ್ಲಿ ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್‌ ಪ್ರಮುಖ ಪಾತ್ರ ವಹಿಸಿದೆ” ಎಂದು ಪ್ರಜ್ವಲ್ ಹೇಳಿದ್ದಾರೆ.

ದಲಿತ ಸಮುದಾಯದ ಅಧ್ಯಕ್ಷರನ್ನು ಹೊಂದುವುದರ ಜೊತೆಗೆ, ವಿದ್ಯಾರ್ಥಿಗಳು ಮೊದಲ ಬಾರಿಗೆ 21 ವರ್ಷದ ಟ್ರಾನ್ಸ್ ಮಹಿಳೆ, ದಲಿತ ಸಮುದಾಯದ ಹೃತಿಕ್ ಲಕ್ಷ್ಮಣ್ ಲಾಲನ್ ಅವರನ್ನು ಲೈಂಗಿಕ ಕಿರುಕುಳದ ವಿರುದ್ಧದ ಲಿಂಗ ಸಂವೇದನೆ ಸಮಿತಿಗೆ ಪ್ರತಿನಿಧಿಯನ್ನಾಗಿ ಆಯ್ಕೆ ಮಾಡಿದ್ದಾರೆ.

ಹೃತಿಕ್ ಲಕ್ಷ್ಮಣ್ ಲಾಲನ್

ಗುಜರಾತ್‌ನ ಕಚ್‌ನಿಂದ ಬಂದಿರುವ ಹೃತಿಕ್ ಅವರು ಸಮಾಜಶಾಸ್ತ್ರದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾರೆ. ಅವರು ಮೇಘವಾಲ್ ಜಾತಿಗೆ ಸೇರಿದವರು. ”ಇದೊಂದು ಐತಿಹಾಸಿಕ ಸಾಧನೆ ಎಂದು ಪುನರುಚ್ಚರಿಸಲಾಗುತ್ತಿದೆ. ವಿದ್ಯಾರ್ಥಿ ಸಮುದಾಯದಿಂದ ನನಗೆ ದೊರೆತಿರುವ ಬೆಂಬಲ ಮತ್ತು ಗೌರವದಿಂದ ನಾನು ತುಂಬಾ ವಿನಮ್ರನಾಗಿದ್ದೇನೆ” ಎಂದು ಅವರು ತಮ್ಮ ಕೃತಜ್ಞತೆ ತಿಳಿಸಿದ್ದಾರೆ.

“ಫಲಿತಾಂಶಗಳು ಪ್ರಕಟವಾದಾಗ ನಾನು 2019 ರಲ್ಲಿ ಟ್ರಾನ್ಸ್ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯಿದೆಯನ್ನು ಅಂಗೀಕರಿಸಿದ ದಿನದ ಬಗ್ಗೆ ಯೋಚಿಸುತ್ತಿದ್ದೆ. ಟ್ರಾನ್ಸ್ ವ್ಯಕ್ತಿಯ ಮೌಖಿಕ ಮತ್ತು ಲೈಂಗಿಕ ನಿಂದನೆಯು ಆರು ತಿಂಗಳಿಂದ ಎರಡು ವರ್ಷಗಳವರೆಗೆ ಜೈಲು ಶಿಕ್ಷೆಗೆ ಕಾರಣವಾಗಬಹುದು ಎಂದು ಅದರ ಷರತ್ತು ಹೇಳುತ್ತದೆ. ಇದು ಮಹಿಳೆಯರ ವಿರುದ್ಧ ಮಾಡಿದ ಅದೇ ಅಪರಾಧಕ್ಕೆ ಹೋಲಿಸಿದರೆ ತೀರಾ ಕಡಿಮೆ. ಬಿಜೆಪಿ ಸರ್ಕಾರದ ಪ್ರತಿಗಾಮಿ ನೀತಿಗೆ ಉತ್ತರವಾಗಿ ನಾನು ಗೆಲುವು ಸಾರ್ಧಿಸಿದ್ದೇನೆ” ಎಂದು ಹೃತಿಕ್ ನೆನಪಿಸಿಕೊಳ್ಳುತ್ತಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಲೈಂಗಿಕ ಅಲ್ಪಸಂಖ್ಯಾತರ ಪರ ಹೋರಾಟಗಾರ್ತಿ ಅಕೈ ಪದ್ಮಶಾಲಿ ಅವರು, ”ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಲೈಂಗಿಕ ಕಿರುಕುಳದ ವಿರುದ್ಧದ ಲಿಂಗ ಸಂವೇದನೆ ಸಮಿತಿಗೆ ಟ್ರಾನ್ಸ್ ಮಹಿಳೆಯನ್ನು ಆಯ್ಕೆ ಮಾಡಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಇದೇ ರೀತಿ ಎಲ್ಲ ವಿಶ್ವವಿದ್ಯಾಲಯಗಳಲ್ಲೂ ಟ್ರಾನ್ಸ್ ಮಹಿಳೆಯರನ್ನು ಗುರುತಿಸುವ ಕೆಲಸ ಆಗಬೇಕಿದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...