Homeಮುಖಪುಟಹೈದರಾಬಾದ್ ವಿವಿ ಚುನಾವಣೆ: ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್‌ನ ದಲಿತ ವಿದ್ಯಾರ್ಥಿ ಅಧ್ಯಕ್ಷರಾಗಿ ಆಯ್ಕೆ

ಹೈದರಾಬಾದ್ ವಿವಿ ಚುನಾವಣೆ: ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್‌ನ ದಲಿತ ವಿದ್ಯಾರ್ಥಿ ಅಧ್ಯಕ್ಷರಾಗಿ ಆಯ್ಕೆ

ಲಿಂಗ ಸಂವೇದನೆ ಸಮಿತಿಗೆ ಪ್ರತಿನಿಧಿಯಾಗಿ ಟ್ರಾನ್ಸ್ ಯುವತಿ ಆಯ್ಕೆಯಾಗಿದ್ದಾರೆ.

- Advertisement -
- Advertisement -

ಪರಿಶಿಷ್ಟ ಜಾತಿಯ ಮಹಾರ್ ಸಮುದಾಯಕ್ಕೆ ಸೇರಿದ 24 ವರ್ಷದ ಪ್ರಜ್ವಲ್ ಚಂದ್ರಕಾಂತ್ ಗಾಯಕವಾಡ ಅವರು ಫೆಬ್ರವರಿ 25, ಶನಿವಾರದಂದು ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ  ಆಯ್ಕೆಯಾದರು.

ಪ್ರಜ್ವಲ್ ಅವರು ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್‌ನ ಸಂಚಾಲಕರಾಗಿದ್ದಾರೆ. ಇವರು ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್-ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ-ದಲಿತ್ ಸ್ಟೂಡೆಂಟ್ಸ್ ಯೂನಿಯನ್ (ASA-SFI-DSU) ಪ್ಯಾನೆಲ್‌ನಿಂದ ಸ್ಪರ್ಧಿಸಿ 608 ಮತಗಳ ಅಂತರದಿಂದ ಗೆದ್ದಿದ್ದಾರೆ. ಅವರ ಜೊತೆಗೆ, ಐದು ಇತರ ದಲಿತ ವಿದ್ಯಾರ್ಥಿಗಳು ವಿವಿಧ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ. ಇದು ಹೈದರಾಬಾದ್ ವಿಶ್ವವಿದ್ಯಾನಿಲಯದಲ್ಲಿ ಸಾಮಾಜಿಕ ನ್ಯಾಯದ ಆಂದೋಲನ ಚಾಲ್ತಿಯಲ್ಲಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಪ್ರಜ್ವಲ್ ಹೇಳಿದ್ದಾರೆ.

“ಯಾವುದೇ ಭಾರತೀಯ ವಿಶ್ವವಿದ್ಯಾನಿಲಯದ ಇತಿಹಾಸದಲ್ಲಿ, ಒಂಬತ್ತು ಹುದ್ದೆಗಳಲ್ಲಿ ಆರು ದಲಿತ ವಿದ್ಯಾರ್ಥಿಗಳು ಸ್ಪರ್ಧಿಸಿ ಗೆಲವು ಕಂಡಿಲ್ಲ, ಜಾತಿ ವಿರೋಧಿ ಚಳವಳಿಯ ಇತಿಹಾಸದಲ್ಲಿ ಇದೊಂದು ವಿಜಯದ ಕ್ಷಣವಾಗಿದೆ” ಎಂದು ಪ್ರಜ್ವಲ್ ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಜ್ವಲ್ ಚಂದ್ರಕಾಂತ್ ಗಾಯಕವಾಡ

ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ, ಕ್ರೀಡಾ ಕಾರ್ಯದರ್ಶಿ, ಸಾಂಸ್ಕೃತಿಕ ಕಾರ್ಯದರ್ಶಿ ಮತ್ತು ವಿದ್ಯಾರ್ಥಿಗಳ ಲೈಂಗಿಕ ಕಿರುಕುಳದ ವಿರುದ್ಧ ಲಿಂಗ ಸಂವೇದನೆ ಸಮಿತಿ ಸೇರಿದಂತೆ ವಿದ್ಯಾರ್ಥಿ ಒಕ್ಕೂಟದ ಚುನಾವಣೆಗಳು ಒಂಬತ್ತು ಹುದ್ದೆಗಳಿಗೆ ನಡೆಯುತ್ತವೆ.

ಪ್ರಜ್ವಲ್‌ ಅವರು ಮಹಾರಾಷ್ಟ್ರದ ನಾಸಿಕ್‌ನಿಂದ ಬಂದಿದ್ದು, ಅವರು ಜೆಂಡರ್ ಸ್ಟಡೀಸ್ ವಿಭಾಗದಲ್ಲಿ ಪಿಎಚ್‌ಡಿ ಮಾಡುತ್ತಿದ್ದಾರೆ. ಅವರ ತಂದೆ ತಾಯಿ ಅಂಬೇಡ್ಕರ್‌ವಾದಿಗಳಾಗಿದ್ದು, ಪ್ರಜ್ವಲ್‌ ಕೂಡ ಯಾವಾಗಲೂ ಅಂಬೇಡ್ಕರ್ ಸಿದ್ಧಾಂತದ ಕಡೆಗೆ ಒಲವು ತೋರುತ್ತಿದ್ದರು. ಅವರು ಪುಣೆಯ ಫರ್ಗುಸನ್ ಕಾಲೇಜಿನಲ್ಲಿ ಪದವಿ  ಓದುವ ಸಮಯದಲ್ಲಿ ತಮ್ಮ ವಿದ್ಯಾರ್ಥಿ ರಾಜಕೀಯವನ್ನು ಪ್ರಾರಂಭಿಸಿದರು. ಅಲ್ಲಿ ಅವರು ಅಂಬೇಡ್ಕರ್ ವಿದ್ಯಾರ್ಥಿಗಳ ಸಂಘಟನೆಯ ಸ್ಥಾಪಕ-ಸದಸ್ಯರಾಗಿದ್ದರು.

ಇದನ್ನೂ ಓದಿ: ಹೈದರಾಬಾದ್‌‌ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ವೀಕ್ಷಿಸಿದ ವಿದ್ಯಾರ್ಥಿಗಳು

2019ರಲ್ಲಿ ಪ್ರಜ್ವಲ್ ಅವರು ಹೈದರಾಬಾದ್ ವಿಶ್ವವಿದ್ಯಾನಿಲಯಕ್ಕೆ ಪ್ರವೇಶ ಮಾಡಿದು, ಇತಿಹಾಸದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು. ಈ ವೇಳೆ ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್‌ನೊಂದಿಗೆ ಸಂಬಂಧ ಹೊಂದಿದ್ದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಮೇಲಿನ ತಾರತಮ್ಯದ ವಿರುದ್ಧ ಹಲವು ಹೋರಾಟಗಳನ್ನು ಮುನ್ನಡೆಸಿದ್ದಾರೆ.

”ಸಾಮಾಜಿಕ ನ್ಯಾಯದ ವಿಷಯದಲ್ಲಿ, ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯು ಇತರ ವಿಶ್ವವಿದ್ಯಾಲಯಗಳಿಗಿಂತ ಬಹಳ ಮುಂದಿದೆ. ಮೀಸಲಾತಿಗಳನ್ನು ರಕ್ಷಿಸುವುದಷ್ಟೇ ಅಲ್ಲ, ವಿದ್ಯಾರ್ಥಿಗಳ ಫೆಲೋಶಿಪ್‌ಗಾಗಿ ಹೋರಾಡುವಲ್ಲಿ ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್‌ ಪ್ರಮುಖ ಪಾತ್ರ ವಹಿಸಿದೆ” ಎಂದು ಪ್ರಜ್ವಲ್ ಹೇಳಿದ್ದಾರೆ.

ದಲಿತ ಸಮುದಾಯದ ಅಧ್ಯಕ್ಷರನ್ನು ಹೊಂದುವುದರ ಜೊತೆಗೆ, ವಿದ್ಯಾರ್ಥಿಗಳು ಮೊದಲ ಬಾರಿಗೆ 21 ವರ್ಷದ ಟ್ರಾನ್ಸ್ ಮಹಿಳೆ, ದಲಿತ ಸಮುದಾಯದ ಹೃತಿಕ್ ಲಕ್ಷ್ಮಣ್ ಲಾಲನ್ ಅವರನ್ನು ಲೈಂಗಿಕ ಕಿರುಕುಳದ ವಿರುದ್ಧದ ಲಿಂಗ ಸಂವೇದನೆ ಸಮಿತಿಗೆ ಪ್ರತಿನಿಧಿಯನ್ನಾಗಿ ಆಯ್ಕೆ ಮಾಡಿದ್ದಾರೆ.

ಹೃತಿಕ್ ಲಕ್ಷ್ಮಣ್ ಲಾಲನ್

ಗುಜರಾತ್‌ನ ಕಚ್‌ನಿಂದ ಬಂದಿರುವ ಹೃತಿಕ್ ಅವರು ಸಮಾಜಶಾಸ್ತ್ರದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾರೆ. ಅವರು ಮೇಘವಾಲ್ ಜಾತಿಗೆ ಸೇರಿದವರು. ”ಇದೊಂದು ಐತಿಹಾಸಿಕ ಸಾಧನೆ ಎಂದು ಪುನರುಚ್ಚರಿಸಲಾಗುತ್ತಿದೆ. ವಿದ್ಯಾರ್ಥಿ ಸಮುದಾಯದಿಂದ ನನಗೆ ದೊರೆತಿರುವ ಬೆಂಬಲ ಮತ್ತು ಗೌರವದಿಂದ ನಾನು ತುಂಬಾ ವಿನಮ್ರನಾಗಿದ್ದೇನೆ” ಎಂದು ಅವರು ತಮ್ಮ ಕೃತಜ್ಞತೆ ತಿಳಿಸಿದ್ದಾರೆ.

“ಫಲಿತಾಂಶಗಳು ಪ್ರಕಟವಾದಾಗ ನಾನು 2019 ರಲ್ಲಿ ಟ್ರಾನ್ಸ್ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯಿದೆಯನ್ನು ಅಂಗೀಕರಿಸಿದ ದಿನದ ಬಗ್ಗೆ ಯೋಚಿಸುತ್ತಿದ್ದೆ. ಟ್ರಾನ್ಸ್ ವ್ಯಕ್ತಿಯ ಮೌಖಿಕ ಮತ್ತು ಲೈಂಗಿಕ ನಿಂದನೆಯು ಆರು ತಿಂಗಳಿಂದ ಎರಡು ವರ್ಷಗಳವರೆಗೆ ಜೈಲು ಶಿಕ್ಷೆಗೆ ಕಾರಣವಾಗಬಹುದು ಎಂದು ಅದರ ಷರತ್ತು ಹೇಳುತ್ತದೆ. ಇದು ಮಹಿಳೆಯರ ವಿರುದ್ಧ ಮಾಡಿದ ಅದೇ ಅಪರಾಧಕ್ಕೆ ಹೋಲಿಸಿದರೆ ತೀರಾ ಕಡಿಮೆ. ಬಿಜೆಪಿ ಸರ್ಕಾರದ ಪ್ರತಿಗಾಮಿ ನೀತಿಗೆ ಉತ್ತರವಾಗಿ ನಾನು ಗೆಲುವು ಸಾರ್ಧಿಸಿದ್ದೇನೆ” ಎಂದು ಹೃತಿಕ್ ನೆನಪಿಸಿಕೊಳ್ಳುತ್ತಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಲೈಂಗಿಕ ಅಲ್ಪಸಂಖ್ಯಾತರ ಪರ ಹೋರಾಟಗಾರ್ತಿ ಅಕೈ ಪದ್ಮಶಾಲಿ ಅವರು, ”ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಲೈಂಗಿಕ ಕಿರುಕುಳದ ವಿರುದ್ಧದ ಲಿಂಗ ಸಂವೇದನೆ ಸಮಿತಿಗೆ ಟ್ರಾನ್ಸ್ ಮಹಿಳೆಯನ್ನು ಆಯ್ಕೆ ಮಾಡಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಇದೇ ರೀತಿ ಎಲ್ಲ ವಿಶ್ವವಿದ್ಯಾಲಯಗಳಲ್ಲೂ ಟ್ರಾನ್ಸ್ ಮಹಿಳೆಯರನ್ನು ಗುರುತಿಸುವ ಕೆಲಸ ಆಗಬೇಕಿದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...