Homeಮುಖಪುಟಹೈದರಾಬಾದ್ ವಿವಿ ಚುನಾವಣೆ: ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್‌ನ ದಲಿತ ವಿದ್ಯಾರ್ಥಿ ಅಧ್ಯಕ್ಷರಾಗಿ ಆಯ್ಕೆ

ಹೈದರಾಬಾದ್ ವಿವಿ ಚುನಾವಣೆ: ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್‌ನ ದಲಿತ ವಿದ್ಯಾರ್ಥಿ ಅಧ್ಯಕ್ಷರಾಗಿ ಆಯ್ಕೆ

ಲಿಂಗ ಸಂವೇದನೆ ಸಮಿತಿಗೆ ಪ್ರತಿನಿಧಿಯಾಗಿ ಟ್ರಾನ್ಸ್ ಯುವತಿ ಆಯ್ಕೆಯಾಗಿದ್ದಾರೆ.

- Advertisement -
- Advertisement -

ಪರಿಶಿಷ್ಟ ಜಾತಿಯ ಮಹಾರ್ ಸಮುದಾಯಕ್ಕೆ ಸೇರಿದ 24 ವರ್ಷದ ಪ್ರಜ್ವಲ್ ಚಂದ್ರಕಾಂತ್ ಗಾಯಕವಾಡ ಅವರು ಫೆಬ್ರವರಿ 25, ಶನಿವಾರದಂದು ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ  ಆಯ್ಕೆಯಾದರು.

ಪ್ರಜ್ವಲ್ ಅವರು ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್‌ನ ಸಂಚಾಲಕರಾಗಿದ್ದಾರೆ. ಇವರು ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್-ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ-ದಲಿತ್ ಸ್ಟೂಡೆಂಟ್ಸ್ ಯೂನಿಯನ್ (ASA-SFI-DSU) ಪ್ಯಾನೆಲ್‌ನಿಂದ ಸ್ಪರ್ಧಿಸಿ 608 ಮತಗಳ ಅಂತರದಿಂದ ಗೆದ್ದಿದ್ದಾರೆ. ಅವರ ಜೊತೆಗೆ, ಐದು ಇತರ ದಲಿತ ವಿದ್ಯಾರ್ಥಿಗಳು ವಿವಿಧ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ. ಇದು ಹೈದರಾಬಾದ್ ವಿಶ್ವವಿದ್ಯಾನಿಲಯದಲ್ಲಿ ಸಾಮಾಜಿಕ ನ್ಯಾಯದ ಆಂದೋಲನ ಚಾಲ್ತಿಯಲ್ಲಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಪ್ರಜ್ವಲ್ ಹೇಳಿದ್ದಾರೆ.

“ಯಾವುದೇ ಭಾರತೀಯ ವಿಶ್ವವಿದ್ಯಾನಿಲಯದ ಇತಿಹಾಸದಲ್ಲಿ, ಒಂಬತ್ತು ಹುದ್ದೆಗಳಲ್ಲಿ ಆರು ದಲಿತ ವಿದ್ಯಾರ್ಥಿಗಳು ಸ್ಪರ್ಧಿಸಿ ಗೆಲವು ಕಂಡಿಲ್ಲ, ಜಾತಿ ವಿರೋಧಿ ಚಳವಳಿಯ ಇತಿಹಾಸದಲ್ಲಿ ಇದೊಂದು ವಿಜಯದ ಕ್ಷಣವಾಗಿದೆ” ಎಂದು ಪ್ರಜ್ವಲ್ ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಜ್ವಲ್ ಚಂದ್ರಕಾಂತ್ ಗಾಯಕವಾಡ

ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ, ಕ್ರೀಡಾ ಕಾರ್ಯದರ್ಶಿ, ಸಾಂಸ್ಕೃತಿಕ ಕಾರ್ಯದರ್ಶಿ ಮತ್ತು ವಿದ್ಯಾರ್ಥಿಗಳ ಲೈಂಗಿಕ ಕಿರುಕುಳದ ವಿರುದ್ಧ ಲಿಂಗ ಸಂವೇದನೆ ಸಮಿತಿ ಸೇರಿದಂತೆ ವಿದ್ಯಾರ್ಥಿ ಒಕ್ಕೂಟದ ಚುನಾವಣೆಗಳು ಒಂಬತ್ತು ಹುದ್ದೆಗಳಿಗೆ ನಡೆಯುತ್ತವೆ.

ಪ್ರಜ್ವಲ್‌ ಅವರು ಮಹಾರಾಷ್ಟ್ರದ ನಾಸಿಕ್‌ನಿಂದ ಬಂದಿದ್ದು, ಅವರು ಜೆಂಡರ್ ಸ್ಟಡೀಸ್ ವಿಭಾಗದಲ್ಲಿ ಪಿಎಚ್‌ಡಿ ಮಾಡುತ್ತಿದ್ದಾರೆ. ಅವರ ತಂದೆ ತಾಯಿ ಅಂಬೇಡ್ಕರ್‌ವಾದಿಗಳಾಗಿದ್ದು, ಪ್ರಜ್ವಲ್‌ ಕೂಡ ಯಾವಾಗಲೂ ಅಂಬೇಡ್ಕರ್ ಸಿದ್ಧಾಂತದ ಕಡೆಗೆ ಒಲವು ತೋರುತ್ತಿದ್ದರು. ಅವರು ಪುಣೆಯ ಫರ್ಗುಸನ್ ಕಾಲೇಜಿನಲ್ಲಿ ಪದವಿ  ಓದುವ ಸಮಯದಲ್ಲಿ ತಮ್ಮ ವಿದ್ಯಾರ್ಥಿ ರಾಜಕೀಯವನ್ನು ಪ್ರಾರಂಭಿಸಿದರು. ಅಲ್ಲಿ ಅವರು ಅಂಬೇಡ್ಕರ್ ವಿದ್ಯಾರ್ಥಿಗಳ ಸಂಘಟನೆಯ ಸ್ಥಾಪಕ-ಸದಸ್ಯರಾಗಿದ್ದರು.

ಇದನ್ನೂ ಓದಿ: ಹೈದರಾಬಾದ್‌‌ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ವೀಕ್ಷಿಸಿದ ವಿದ್ಯಾರ್ಥಿಗಳು

2019ರಲ್ಲಿ ಪ್ರಜ್ವಲ್ ಅವರು ಹೈದರಾಬಾದ್ ವಿಶ್ವವಿದ್ಯಾನಿಲಯಕ್ಕೆ ಪ್ರವೇಶ ಮಾಡಿದು, ಇತಿಹಾಸದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು. ಈ ವೇಳೆ ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್‌ನೊಂದಿಗೆ ಸಂಬಂಧ ಹೊಂದಿದ್ದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಮೇಲಿನ ತಾರತಮ್ಯದ ವಿರುದ್ಧ ಹಲವು ಹೋರಾಟಗಳನ್ನು ಮುನ್ನಡೆಸಿದ್ದಾರೆ.

”ಸಾಮಾಜಿಕ ನ್ಯಾಯದ ವಿಷಯದಲ್ಲಿ, ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯು ಇತರ ವಿಶ್ವವಿದ್ಯಾಲಯಗಳಿಗಿಂತ ಬಹಳ ಮುಂದಿದೆ. ಮೀಸಲಾತಿಗಳನ್ನು ರಕ್ಷಿಸುವುದಷ್ಟೇ ಅಲ್ಲ, ವಿದ್ಯಾರ್ಥಿಗಳ ಫೆಲೋಶಿಪ್‌ಗಾಗಿ ಹೋರಾಡುವಲ್ಲಿ ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್‌ ಪ್ರಮುಖ ಪಾತ್ರ ವಹಿಸಿದೆ” ಎಂದು ಪ್ರಜ್ವಲ್ ಹೇಳಿದ್ದಾರೆ.

ದಲಿತ ಸಮುದಾಯದ ಅಧ್ಯಕ್ಷರನ್ನು ಹೊಂದುವುದರ ಜೊತೆಗೆ, ವಿದ್ಯಾರ್ಥಿಗಳು ಮೊದಲ ಬಾರಿಗೆ 21 ವರ್ಷದ ಟ್ರಾನ್ಸ್ ಮಹಿಳೆ, ದಲಿತ ಸಮುದಾಯದ ಹೃತಿಕ್ ಲಕ್ಷ್ಮಣ್ ಲಾಲನ್ ಅವರನ್ನು ಲೈಂಗಿಕ ಕಿರುಕುಳದ ವಿರುದ್ಧದ ಲಿಂಗ ಸಂವೇದನೆ ಸಮಿತಿಗೆ ಪ್ರತಿನಿಧಿಯನ್ನಾಗಿ ಆಯ್ಕೆ ಮಾಡಿದ್ದಾರೆ.

ಹೃತಿಕ್ ಲಕ್ಷ್ಮಣ್ ಲಾಲನ್

ಗುಜರಾತ್‌ನ ಕಚ್‌ನಿಂದ ಬಂದಿರುವ ಹೃತಿಕ್ ಅವರು ಸಮಾಜಶಾಸ್ತ್ರದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾರೆ. ಅವರು ಮೇಘವಾಲ್ ಜಾತಿಗೆ ಸೇರಿದವರು. ”ಇದೊಂದು ಐತಿಹಾಸಿಕ ಸಾಧನೆ ಎಂದು ಪುನರುಚ್ಚರಿಸಲಾಗುತ್ತಿದೆ. ವಿದ್ಯಾರ್ಥಿ ಸಮುದಾಯದಿಂದ ನನಗೆ ದೊರೆತಿರುವ ಬೆಂಬಲ ಮತ್ತು ಗೌರವದಿಂದ ನಾನು ತುಂಬಾ ವಿನಮ್ರನಾಗಿದ್ದೇನೆ” ಎಂದು ಅವರು ತಮ್ಮ ಕೃತಜ್ಞತೆ ತಿಳಿಸಿದ್ದಾರೆ.

“ಫಲಿತಾಂಶಗಳು ಪ್ರಕಟವಾದಾಗ ನಾನು 2019 ರಲ್ಲಿ ಟ್ರಾನ್ಸ್ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯಿದೆಯನ್ನು ಅಂಗೀಕರಿಸಿದ ದಿನದ ಬಗ್ಗೆ ಯೋಚಿಸುತ್ತಿದ್ದೆ. ಟ್ರಾನ್ಸ್ ವ್ಯಕ್ತಿಯ ಮೌಖಿಕ ಮತ್ತು ಲೈಂಗಿಕ ನಿಂದನೆಯು ಆರು ತಿಂಗಳಿಂದ ಎರಡು ವರ್ಷಗಳವರೆಗೆ ಜೈಲು ಶಿಕ್ಷೆಗೆ ಕಾರಣವಾಗಬಹುದು ಎಂದು ಅದರ ಷರತ್ತು ಹೇಳುತ್ತದೆ. ಇದು ಮಹಿಳೆಯರ ವಿರುದ್ಧ ಮಾಡಿದ ಅದೇ ಅಪರಾಧಕ್ಕೆ ಹೋಲಿಸಿದರೆ ತೀರಾ ಕಡಿಮೆ. ಬಿಜೆಪಿ ಸರ್ಕಾರದ ಪ್ರತಿಗಾಮಿ ನೀತಿಗೆ ಉತ್ತರವಾಗಿ ನಾನು ಗೆಲುವು ಸಾರ್ಧಿಸಿದ್ದೇನೆ” ಎಂದು ಹೃತಿಕ್ ನೆನಪಿಸಿಕೊಳ್ಳುತ್ತಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಲೈಂಗಿಕ ಅಲ್ಪಸಂಖ್ಯಾತರ ಪರ ಹೋರಾಟಗಾರ್ತಿ ಅಕೈ ಪದ್ಮಶಾಲಿ ಅವರು, ”ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಲೈಂಗಿಕ ಕಿರುಕುಳದ ವಿರುದ್ಧದ ಲಿಂಗ ಸಂವೇದನೆ ಸಮಿತಿಗೆ ಟ್ರಾನ್ಸ್ ಮಹಿಳೆಯನ್ನು ಆಯ್ಕೆ ಮಾಡಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಇದೇ ರೀತಿ ಎಲ್ಲ ವಿಶ್ವವಿದ್ಯಾಲಯಗಳಲ್ಲೂ ಟ್ರಾನ್ಸ್ ಮಹಿಳೆಯರನ್ನು ಗುರುತಿಸುವ ಕೆಲಸ ಆಗಬೇಕಿದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...