Homeಮುಖಪುಟಹೈದರಾಬಾದ್‌: ವಿಶ್ವ ಸುಂದರಿ ಸ್ಪರ್ಧೆಗಾಗಿ ಇಸ್ರೇಲ್ ಧ್ವಜ ಕೆಳಗಿಳಿಸಿದ ಯುವಕ; ಬಂಧನ

ಹೈದರಾಬಾದ್‌: ವಿಶ್ವ ಸುಂದರಿ ಸ್ಪರ್ಧೆಗಾಗಿ ಇಸ್ರೇಲ್ ಧ್ವಜ ಕೆಳಗಿಳಿಸಿದ ಯುವಕ; ಬಂಧನ

- Advertisement -
- Advertisement -

ನವದೆಹಲಿ: 2025ರ ವಿಶ್ವ ಸುಂದರಿ ಸ್ಪರ್ಧೆಗಾಗಿ ಹೈದರಾಬಾದ್‌ನ ಸಚಿವಾಲಯದ ಕಟ್ಟಡದಲ್ಲಿ ಹಾರಿಸಲಾದ ಇಸ್ರೇಲ್ ಧ್ವಜವನ್ನು ಕೆಳಗಿಳಿಸಿದ್ದಕ್ಕಾಗಿ ಮುಸ್ಲಿಂ ಯುವಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ.

ಮೇ 12ರಂದು ಜಾಕೀರ್ ಎಂದು ಗುರುತಿಸಲ್ಪಟ್ಟ ವ್ಯಕ್ತಿ ಇಸ್ರೇಲ್ ಧ್ವಜವನ್ನು ಕೆಳಗಿಳಿಸಿದ್ದಲ್ಲದೆ, ಕೃತ್ಯದ ವೀಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದನು. ವಿಡಿಯೋ ವೈರಲ್ ಆದ ನಂತರ ಪೊಲೀಸರು ಜಾಕೀರ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ ನಂತರ ಅಧಿಕಾರಿಗಳು ಇಸ್ರೇಲ್ ಧ್ವಜವನ್ನು ಪುನಃಸ್ಥಾಪಿಸಿದ್ದಾರೆ.

ಆದಾಗ್ಯೂ, ಶುಕ್ರವಾರ, ಅದೇ ಯುವಕ ಮತ್ತೊಮ್ಮೆ ಇಸ್ರೇಲ್ ಧ್ವಜವನ್ನು ತೆಗೆದುಹಾಕುತ್ತಿರುವುದನ್ನು ನೋಡಲಾಯಿತು, ಘಟನೆಯನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಮತ್ತೆ ಪೋಸ್ಟ್ ಮಾಡಲಾಗಿದೆ. ಇದು ಸಾಮಾಜಿಕ ಮಾಧ್ಯಮದಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಪ್ರತ್ಯಕ್ಷದರ್ಶಿಯೊಬ್ಬರು ಹೈದರಾಬಾದ್ ಪೊಲೀಸ್ ಆಯುಕ್ತ ಸಿ.ವಿ. ಆನಂದ್ ಮತ್ತು ಹೈದರಾಬಾದ್ ನಗರ ಪೊಲೀಸರಿಗೆ ಎಕ್ಸ್ ಪೋಸ್ಟ್ ಅನ್ನು ಟ್ಯಾಗ್ ಮಾಡಿದ್ದಾರೆ. ಅದರಲ್ಲಿ  “ಗೌರವಾನ್ವಿತ ಸರ್ ಸಿ.ವಿ. ಆನಂದ್ ಐಪಿಎಸ್ ಮತ್ತು ಹೈದರಾಬಾದ್ ಪೊಲೀಸರು. ಹೈದರಾಬಾದ್‌ನಲ್ಲಿ ನಡೆಯಲಿರುವ 72ನೇ ವಿಶ್ವ ಸುಂದರಿ-2025 ಸ್ಪರ್ಧೆಯನ್ನು ಗಮನದಲ್ಲಿಟ್ಟುಕೊಂಡು, ಅನೇಕ ದೇಶಗಳು ಮತ್ತು ಅವರ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.” ಸರ್ಕಾರವು ಎಲ್ಲಾ ದೇಶದ ಧ್ವಜಗಳನ್ನು ಅಳವಡಿಸಿದೆ. ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ನಡುವಿನ ಯುದ್ಧದ ಕಾರಣ, ಕೆಲವು ದಿನಗಳಿಂದ, ಕೆಲವು ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ಗಳಲ್ಲಿ ‘ಇಸ್ರೇಲ್ ಧ್ವಜ’ವನ್ನು ತೆಗೆದುಹಾಕುವಂತೆ ಒತ್ತಾಯಿಸಿ ಪೋಸ್ಟ್ ಮಾಡಲಾಗುತ್ತಿದೆ

ಮೂಲಗಳ ಪ್ರಕಾರ, ಸೈಫಾಬಾದ್ ಪೊಲೀಸ್ ಠಾಣೆಯ SHO ಅಪರಾಧ ಸಂಖ್ಯೆಗಳು 138/2025 ಮತ್ತು 141/2025 ರ ಅಡಿಯಲ್ಲಿ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ ಮತ್ತು ಆರೋಪಿಯನ್ನು ಬಂಧಿಸಲಾಗಿದೆ.

ಆದಾಗ್ಯೂ, ಗಾಜಾದಲ್ಲಿ ಅಮಾಯಕ ಪ್ಯಾಲೆಸ್ಟೀನಿಯನ್ನರ ಮೇಲೆ ಇಸ್ರೇಲ್ ನಡೆಸಿದ ದೌರ್ಜನ್ಯಗಳು ಮತ್ತು ದೊಡ್ಡ ಪ್ರಮಾಣದ ಸಾವು ಮತ್ತು ವಿನಾಶಕ್ಕೆ ಕಾರಣವಾದ ಹಿನ್ನೆಲೆಯಲ್ಲಿ, ಮಿಸ್ ವರ್ಲ್ಡ್ 2025ರ ಸ್ಪರ್ಧೆಯ ಸ್ಥಳದಿಂದ ಇಸ್ರೇಲ್ ಧ್ವಜವನ್ನು ತೆಗೆದುಹಾಕುವಂತೆ ಒತ್ತಾಯಿಸುವ ಸಾಮಾಜಿಕ ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳೊಂದಿಗೆ ಈ ಘಟನೆಯನ್ನು ಸಂಬಂಧ ಕಲ್ಪಿಸಲಾಗಿದೆ.

ಮೇ 13ರಂದು ಹೈದರಾಬಾದ್‌ನ ಗಚಿಬೌಲಿ ಕ್ರೀಡಾಂಗಣದಲ್ಲಿ ನಡೆದ ಭವ್ಯ ಮತ್ತು ವರ್ಣರಂಜಿತ ಸಮಾರಂಭದಲ್ಲಿ 72 ನೇ ಮಿಸ್ ವರ್ಲ್ಡ್ 2025ರ ಉದ್ಘಾಟನೆ ನಡೆಯಿತು, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಈ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದರು. ವಿಶ್ವ ಸುಂದರಿ 2025ರ ಗ್ರ್ಯಾಂಡ್ ಫಿನಾಲೆ ಜೂನ್ 1ರಂದು ಹೈಟೆಕ್ಸ್ ಪ್ರದರ್ಶನ ಕೇಂದ್ರದಲ್ಲಿ ನಡೆಯಲಿದೆ.

ಈ ಪ್ರತಿಷ್ಠಿತ ಕಾರ್ಯಕ್ರಮದಲ್ಲಿ ಜಗತ್ತಿನಾದ್ಯಂತ 110ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸುತ್ತಿದ್ದಾರೆ ಮತ್ತು ಮಿಸ್ ಇಂಡಿಯಾ ನಂದಿನಿ ಗುಪ್ತಾ ಆತಿಥೇಯ ರಾಷ್ಟ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಕವಿ ಆಂಡೆ ಶ್ರೀ ಬರೆದ ‘ಜಯ ಜಯ ಹೇ ತೆಲಂಗಾಣ’ ರಾಜ್ಯ ಗೀತೆಯ ಭಾವಪೂರ್ಣ ಗಾಯನದೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಿತ್ತು.

ಹೈದರಾಬಾದ್ ನಲ್ಲಿ ಪ್ರಥಮ ಬಾರಿಗೆ ವಿಶ್ವ ಸುಂದರಿ ಸ್ಪರ್ಧೆಯನ್ನು ಆಯೋಜಿಸುತ್ತಿದ್ದು, ತೆಲಂಗಾಣ ಮುಖ್ಯ ಕಾರ್ಯದರ್ಶಿ ಕೆ. ರಾಮಕೃಷ್ಣ ರಾವ್, ಡಿಜಿಪಿ ಜಿತೇಂದರ್, ಪ್ರವಾಸೋದ್ಯಮ ಇಲಾಖೆಯ ಅಧ್ಯಕ್ಷ ಪಟೇಲ್ ರಮೇಶ್ ರೆಡ್ಡಿ, ಹೈದರಾಬಾದ್ ಮೇಯರ್ ವಿಜಯಲಕ್ಷ್ಮಿ, ವಿಶ್ವ ಸುಂದರಿ ಸಿಇಒ ಜೂಲಿಯಾ ಮಾರ್ಲಿ ಮತ್ತು 2024 ರ ವಿಶ್ವ ಸುಂದರಿ ಕ್ರಿಸ್ಟಿನಾ ಪಿಸ್ಜ್ಕೋವಾ ಸೇರಿದಂತೆ ಹಲವಾರು ಪ್ರಮುಖ ವ್ಯಕ್ತಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು.

ಇದಕ್ಕೂ ಮೊದಲು, ತೆಲಂಗಾಣ ಪ್ರವಾಸೋದ್ಯಮ ಸಚಿವ ಜೂಪಲ್ಲಿ ಕೃಷ್ಣ ರಾವ್ ಅವರು ಈ ವರ್ಷದ ವಿಶ್ವ ಸುಂದರಿ ಸ್ಪರ್ಧೆಯು ಸೌಂದರ್ಯ ಮತ್ತು ಪ್ರತಿಭೆಯನ್ನು ಆಚರಿಸುವುದಲ್ಲದೆ, ಜಾಗತಿಕ ವೇದಿಕೆಯಲ್ಲಿ ರಾಜ್ಯವನ್ನು ಪ್ರಚಾರ ಮಾಡುತ್ತದೆ ಎಂದು ಹೇಳಿದರು.

ಪಾಕಿಸ್ತಾನದ ಪರ ಬೇಹುಗಾರಿಕೆ ಆರೋಪ: ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿ 9 ಮಂದಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...