Homeಮುಖಪುಟಹೈದರಾಬಾದ್‌: ವಿಶ್ವ ಸುಂದರಿ ಸ್ಪರ್ಧೆಗಾಗಿ ಇಸ್ರೇಲ್ ಧ್ವಜ ಕೆಳಗಿಳಿಸಿದ ಯುವಕ; ಬಂಧನ

ಹೈದರಾಬಾದ್‌: ವಿಶ್ವ ಸುಂದರಿ ಸ್ಪರ್ಧೆಗಾಗಿ ಇಸ್ರೇಲ್ ಧ್ವಜ ಕೆಳಗಿಳಿಸಿದ ಯುವಕ; ಬಂಧನ

- Advertisement -
- Advertisement -

ನವದೆಹಲಿ: 2025ರ ವಿಶ್ವ ಸುಂದರಿ ಸ್ಪರ್ಧೆಗಾಗಿ ಹೈದರಾಬಾದ್‌ನ ಸಚಿವಾಲಯದ ಕಟ್ಟಡದಲ್ಲಿ ಹಾರಿಸಲಾದ ಇಸ್ರೇಲ್ ಧ್ವಜವನ್ನು ಕೆಳಗಿಳಿಸಿದ್ದಕ್ಕಾಗಿ ಮುಸ್ಲಿಂ ಯುವಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ.

ಮೇ 12ರಂದು ಜಾಕೀರ್ ಎಂದು ಗುರುತಿಸಲ್ಪಟ್ಟ ವ್ಯಕ್ತಿ ಇಸ್ರೇಲ್ ಧ್ವಜವನ್ನು ಕೆಳಗಿಳಿಸಿದ್ದಲ್ಲದೆ, ಕೃತ್ಯದ ವೀಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದನು. ವಿಡಿಯೋ ವೈರಲ್ ಆದ ನಂತರ ಪೊಲೀಸರು ಜಾಕೀರ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ ನಂತರ ಅಧಿಕಾರಿಗಳು ಇಸ್ರೇಲ್ ಧ್ವಜವನ್ನು ಪುನಃಸ್ಥಾಪಿಸಿದ್ದಾರೆ.

ಆದಾಗ್ಯೂ, ಶುಕ್ರವಾರ, ಅದೇ ಯುವಕ ಮತ್ತೊಮ್ಮೆ ಇಸ್ರೇಲ್ ಧ್ವಜವನ್ನು ತೆಗೆದುಹಾಕುತ್ತಿರುವುದನ್ನು ನೋಡಲಾಯಿತು, ಘಟನೆಯನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಮತ್ತೆ ಪೋಸ್ಟ್ ಮಾಡಲಾಗಿದೆ. ಇದು ಸಾಮಾಜಿಕ ಮಾಧ್ಯಮದಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಪ್ರತ್ಯಕ್ಷದರ್ಶಿಯೊಬ್ಬರು ಹೈದರಾಬಾದ್ ಪೊಲೀಸ್ ಆಯುಕ್ತ ಸಿ.ವಿ. ಆನಂದ್ ಮತ್ತು ಹೈದರಾಬಾದ್ ನಗರ ಪೊಲೀಸರಿಗೆ ಎಕ್ಸ್ ಪೋಸ್ಟ್ ಅನ್ನು ಟ್ಯಾಗ್ ಮಾಡಿದ್ದಾರೆ. ಅದರಲ್ಲಿ  “ಗೌರವಾನ್ವಿತ ಸರ್ ಸಿ.ವಿ. ಆನಂದ್ ಐಪಿಎಸ್ ಮತ್ತು ಹೈದರಾಬಾದ್ ಪೊಲೀಸರು. ಹೈದರಾಬಾದ್‌ನಲ್ಲಿ ನಡೆಯಲಿರುವ 72ನೇ ವಿಶ್ವ ಸುಂದರಿ-2025 ಸ್ಪರ್ಧೆಯನ್ನು ಗಮನದಲ್ಲಿಟ್ಟುಕೊಂಡು, ಅನೇಕ ದೇಶಗಳು ಮತ್ತು ಅವರ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.” ಸರ್ಕಾರವು ಎಲ್ಲಾ ದೇಶದ ಧ್ವಜಗಳನ್ನು ಅಳವಡಿಸಿದೆ. ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ನಡುವಿನ ಯುದ್ಧದ ಕಾರಣ, ಕೆಲವು ದಿನಗಳಿಂದ, ಕೆಲವು ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ಗಳಲ್ಲಿ ‘ಇಸ್ರೇಲ್ ಧ್ವಜ’ವನ್ನು ತೆಗೆದುಹಾಕುವಂತೆ ಒತ್ತಾಯಿಸಿ ಪೋಸ್ಟ್ ಮಾಡಲಾಗುತ್ತಿದೆ

ಮೂಲಗಳ ಪ್ರಕಾರ, ಸೈಫಾಬಾದ್ ಪೊಲೀಸ್ ಠಾಣೆಯ SHO ಅಪರಾಧ ಸಂಖ್ಯೆಗಳು 138/2025 ಮತ್ತು 141/2025 ರ ಅಡಿಯಲ್ಲಿ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ ಮತ್ತು ಆರೋಪಿಯನ್ನು ಬಂಧಿಸಲಾಗಿದೆ.

ಆದಾಗ್ಯೂ, ಗಾಜಾದಲ್ಲಿ ಅಮಾಯಕ ಪ್ಯಾಲೆಸ್ಟೀನಿಯನ್ನರ ಮೇಲೆ ಇಸ್ರೇಲ್ ನಡೆಸಿದ ದೌರ್ಜನ್ಯಗಳು ಮತ್ತು ದೊಡ್ಡ ಪ್ರಮಾಣದ ಸಾವು ಮತ್ತು ವಿನಾಶಕ್ಕೆ ಕಾರಣವಾದ ಹಿನ್ನೆಲೆಯಲ್ಲಿ, ಮಿಸ್ ವರ್ಲ್ಡ್ 2025ರ ಸ್ಪರ್ಧೆಯ ಸ್ಥಳದಿಂದ ಇಸ್ರೇಲ್ ಧ್ವಜವನ್ನು ತೆಗೆದುಹಾಕುವಂತೆ ಒತ್ತಾಯಿಸುವ ಸಾಮಾಜಿಕ ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳೊಂದಿಗೆ ಈ ಘಟನೆಯನ್ನು ಸಂಬಂಧ ಕಲ್ಪಿಸಲಾಗಿದೆ.

ಮೇ 13ರಂದು ಹೈದರಾಬಾದ್‌ನ ಗಚಿಬೌಲಿ ಕ್ರೀಡಾಂಗಣದಲ್ಲಿ ನಡೆದ ಭವ್ಯ ಮತ್ತು ವರ್ಣರಂಜಿತ ಸಮಾರಂಭದಲ್ಲಿ 72 ನೇ ಮಿಸ್ ವರ್ಲ್ಡ್ 2025ರ ಉದ್ಘಾಟನೆ ನಡೆಯಿತು, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಈ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದರು. ವಿಶ್ವ ಸುಂದರಿ 2025ರ ಗ್ರ್ಯಾಂಡ್ ಫಿನಾಲೆ ಜೂನ್ 1ರಂದು ಹೈಟೆಕ್ಸ್ ಪ್ರದರ್ಶನ ಕೇಂದ್ರದಲ್ಲಿ ನಡೆಯಲಿದೆ.

ಈ ಪ್ರತಿಷ್ಠಿತ ಕಾರ್ಯಕ್ರಮದಲ್ಲಿ ಜಗತ್ತಿನಾದ್ಯಂತ 110ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸುತ್ತಿದ್ದಾರೆ ಮತ್ತು ಮಿಸ್ ಇಂಡಿಯಾ ನಂದಿನಿ ಗುಪ್ತಾ ಆತಿಥೇಯ ರಾಷ್ಟ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಕವಿ ಆಂಡೆ ಶ್ರೀ ಬರೆದ ‘ಜಯ ಜಯ ಹೇ ತೆಲಂಗಾಣ’ ರಾಜ್ಯ ಗೀತೆಯ ಭಾವಪೂರ್ಣ ಗಾಯನದೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಿತ್ತು.

ಹೈದರಾಬಾದ್ ನಲ್ಲಿ ಪ್ರಥಮ ಬಾರಿಗೆ ವಿಶ್ವ ಸುಂದರಿ ಸ್ಪರ್ಧೆಯನ್ನು ಆಯೋಜಿಸುತ್ತಿದ್ದು, ತೆಲಂಗಾಣ ಮುಖ್ಯ ಕಾರ್ಯದರ್ಶಿ ಕೆ. ರಾಮಕೃಷ್ಣ ರಾವ್, ಡಿಜಿಪಿ ಜಿತೇಂದರ್, ಪ್ರವಾಸೋದ್ಯಮ ಇಲಾಖೆಯ ಅಧ್ಯಕ್ಷ ಪಟೇಲ್ ರಮೇಶ್ ರೆಡ್ಡಿ, ಹೈದರಾಬಾದ್ ಮೇಯರ್ ವಿಜಯಲಕ್ಷ್ಮಿ, ವಿಶ್ವ ಸುಂದರಿ ಸಿಇಒ ಜೂಲಿಯಾ ಮಾರ್ಲಿ ಮತ್ತು 2024 ರ ವಿಶ್ವ ಸುಂದರಿ ಕ್ರಿಸ್ಟಿನಾ ಪಿಸ್ಜ್ಕೋವಾ ಸೇರಿದಂತೆ ಹಲವಾರು ಪ್ರಮುಖ ವ್ಯಕ್ತಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು.

ಇದಕ್ಕೂ ಮೊದಲು, ತೆಲಂಗಾಣ ಪ್ರವಾಸೋದ್ಯಮ ಸಚಿವ ಜೂಪಲ್ಲಿ ಕೃಷ್ಣ ರಾವ್ ಅವರು ಈ ವರ್ಷದ ವಿಶ್ವ ಸುಂದರಿ ಸ್ಪರ್ಧೆಯು ಸೌಂದರ್ಯ ಮತ್ತು ಪ್ರತಿಭೆಯನ್ನು ಆಚರಿಸುವುದಲ್ಲದೆ, ಜಾಗತಿಕ ವೇದಿಕೆಯಲ್ಲಿ ರಾಜ್ಯವನ್ನು ಪ್ರಚಾರ ಮಾಡುತ್ತದೆ ಎಂದು ಹೇಳಿದರು.

ಪಾಕಿಸ್ತಾನದ ಪರ ಬೇಹುಗಾರಿಕೆ ಆರೋಪ: ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿ 9 ಮಂದಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...