Homeಮುಖಪುಟಹೈದರಾಬಾದ್‌ನಲ್ಲಿ ಪೆಟ್ರೋಲ್‌ಗೆ ಮುಗಿಬಿದ್ದ ಜನ: ಕುದುರೆ ಏರಿ ಹೊರಟ ಪುಡ್‌ ಡೆಲಿವರಿ ಬಾಯ್‌

ಹೈದರಾಬಾದ್‌ನಲ್ಲಿ ಪೆಟ್ರೋಲ್‌ಗೆ ಮುಗಿಬಿದ್ದ ಜನ: ಕುದುರೆ ಏರಿ ಹೊರಟ ಪುಡ್‌ ಡೆಲಿವರಿ ಬಾಯ್‌

- Advertisement -
- Advertisement -

ಹಿಟ್‌ ಆಂಡ್‌ ರನ್‌ ಪ್ರಕರಣಗಳಲ್ಲಿ 10 ವರ್ಷಗಳ ಜೈಲು ಶಿಕ್ಷೆ ಮತ್ತು 7 ಲಕ್ಷ ದಂಡವನ್ನು ವಿಧಿಸುವ ಕೇಂದ್ರ ಸರ್ಕಾರದ ಭಾರತೀಯ ನ್ಯಾಯ ಸಂಹಿತಾ ಕಾನೂನಿನ ವಿರುದ್ಧ ದೇಶದ ವಿವಿಧೆಡೆ ಟ್ರಕ್‌ ಚಾಲಕರು ವ್ಯಾಪಕವಾಗಿ ಪ್ರತಿಭಟನೆ ಮಾಡಿದ್ದಾರೆ. ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ಹಿಮಾಚಲ, ರಾಜಸ್ಥಾನ ಮತ್ತು ಬಿಹಾರಗಳಲ್ಲಿ ಪ್ರತಿಭಟನೆ ಜನರ ಮೇಲೆ ವ್ಯಾಪಕವಾದ ಪರಿಣಾಮ ಬೀರಿತ್ತು. ಟ್ರಕ್‌ ಚಾಲಕರ ಪ್ರತಿಭಟನೆಯಿಂದಾಗಿ ಹೈದರಾಬಾದ್‌ನ ಪೆಟ್ರೋಲ್ ಪಂಪ್‌ಗಳಾದ್ಯಂತ ಭಾರಿ ಜನಸಂದಣಿ ಸೇರಿದ್ದರು. ಚಾಲಕರ ವ್ಯಾಪಕ ಪ್ರತಿಭಟನೆಗಳಿಂದ ಇಂಧನ ಪೂರೈಕೆ ಸ್ಥಗಿತದ ಭಯದಿಂದ ಜನರು ಪೆಟ್ರೋಲ್‌ ಪಂಪ್‌ಗಳಲ್ಲಿ ಜಮಾಯಿಸಿದ್ದರು.

ಇದರಿಂದ ಹೈದರಾಬಾದ್‌ನ ಝೊಮಾಟೊ ಡೆಲಿವರಿ ಬಾಯ್‌ ಓರ್ವ ತನ್ನ ದ್ವಿಚಕ್ರ ವಾಹನವನ್ನು ಬಿಟ್ಟು ಕುದುರೆಯಲ್ಲಿ ಪಾರ್ಸೆಲ್‌ ಸಾಗಾಟ ಮಾಡಿದ್ದಾನೆ. ಈ ಕುರಿತ ವಿಡಿಯೋ ವೈರಲ್‌ ಆಗಿದೆ. ‘ಅರ್ಬಾಜ್ ದಿ ಗ್ರೇಟ್’ ಎಂಬ ಎಕ್ಸ್‌ ಖಾತೆಯಲ್ಲಿ ಈ ಕುರಿತು ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಡೆಲಿವರಿ ಏಜೆಂಟ್ ತನ್ನ ಹೆಗಲ ಮೇಲೆ ಡೆಲಿವರಿ ಬ್ಯಾಗ್‌ ಹಾಕಿಕೊಂಡಿದ್ದಾನೆ. ಝೊಮಾಟೊ ಟೀಸರ್ಟ್‌ ಧರಸಿದ್ದ ಯುವಕ ಕುದುರೆಯ ಮೇಲೇರಿ ಜನ ಸಂದಣಿ ಪ್ರದೇಶದಲ್ಲಿ ವಾಹನಗಳ ನಡುವೆ ಪಾರ್ಸೆಲ್‌ ಕೊಂಡೊಯ್ಯುತ್ತಿರುವುದು ಕಂಡು ಬಂದಿದೆ. ಹೈದರಾಬಾದ್‌ನಲ್ಲಿ ಪ್ರತಿಭಟನೆಯಿಂದಾಗಿ ಇಂಧನ ಕೊರತೆಯ ಆತಂಕದಿಂದ ಪೆಟ್ರೋಲ್ ಪಂಪ್‌ಗಳಲ್ಲಿ ಜನರು ಜಮಾಯಿಸಿದ್ದರು. ಉದ್ದವಾದ ಸರತಿ ಸಾಲುಗಳಿದ್ದ ಕಾರಣಕ್ಕೆ ಬೈಕ್‌ ಬದಿಗಿಟ್ಟು, ಕುದುರೆಯ ಮೂಲಕ ಪುಡ್‌ ಡೆಲಿವರಿ ಮಾಡಲಾಗಿದೆ ಎಂದು ಹೇಳಲಾಗಿದೆ.

ಭಾರತೀಯ ನ್ಯಾಯ ಸಂಹಿತಾ ಶಾಸನವನ್ನು ಖಂಡಿಸಿ ಜ.1 ಮತ್ತು 2ರಂದು ನಡೆದ ರಾಷ್ಟ್ರವ್ಯಾಪಿ ಮುಷ್ಕರವು ಇಂಧನ ವಿತರಣೆಯ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರಿದೆ. ಇದು ಗ್ರಾಹಕರಲ್ಲಿ ಇಂಧನದ ಕೊರತೆ ಮತ್ತು ಭೀತಿಗೆ ಕಾರಣವಾಗಿದೆ. ಹೈದರಾಬಾದ್‌ನ ಅಫ್ಜಲ್‌ಗುಂಜ್, ಬಂಜಾರಾ ಹಿಲ್ಸ್, ನಾಂಪಲ್ಲಿ, ಬೇಗಂಪೇಟ್, ಲಂಗರ್ ಹೌಜ್ ಮತ್ತು ಗಚಿಬೌಲಿ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಪೆಟ್ರೋಲ್ ಪಂಪ್‌ಗಳ ಬಳಿ ಜನರ ಸಾಲುಗಳು ನಿಂತುಕೊಂಡಿರುವುದು ಕಂಡು ಬಂದಿತ್ತು.

ಏನಿದು ಪ್ರತಿಭಟನೆ?

ಹೊಸ ಕ್ರಿಮಿನಲ್ ಕಾನೂನಿನಲ್ಲಿ ಹಿಟ್ ಅಂಡ್ ರನ್‌ ಪ್ರಕರಣಗಳ ಜೈಲು ಶಿಕ್ಷೆಯ ಅವಧಿಯನ್ನು ಹೆಚ್ಚಿಸಲಾಗಿದೆ. ಅಪಘಾತದ ಬಳಿಕ ಚಾಲಕರು ಪರಾರಿಯಾಗಲು ಯತ್ನಿಸಿದರೆ ಅಥವಾ ಮಾರಣಾಂತಿಕ ಅಪಘಾತವನ್ನು ಪೊಲೀಸರಿಗೆ ವರದಿ ಮಾಡದಿದ್ದಲ್ಲಿ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 7 ಲಕ್ಷ ರೂಪಾಯಿ ದಂಡ ವಿಧಿಸಬಹುದು. ಈ ಹಿಂದೆ, ಹಿಟ್ ಅಂಡ್‌ ರನ್ ಪ್ರಕರಣಕ್ಕೆ ಐಪಿಸಿಯ ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ 2 ವರ್ಷಗಳವರೆಗೆ ಮಾತ್ರ ಜೈಲು ಶಿಕ್ಷೆ ವಿಧಿಸಬಹುದಾಗಿತ್ತು.

ಯಾರೂ ಉದ್ದೇಶಪೂರ್ವಕವಾಗಿ ಅಪಘಾತವೆಸಗುವುದಿಲ್ಲ. ಹೊಸ ಕಾನೂನಿನ ಪ್ರಕಾರ ಅಪಘಾತ ನಡೆದಾಗ ಘಟನಾ ಸ್ಥಳದಿಂದ ಪಲಾಯಣ ಮಾಡದಿದ್ದರೆ ಆಕ್ರೋಶಿತ ಜನರು ಚಾಲಕರ ಮೇಲೆ ದಾಳಿ ಮಾಡುವ ಸಾಧ್ಯತೆಯಿರುತ್ತದೆ. ತಮ್ಮ ರಕ್ಷಣೆಗೋಸ್ಕರ ಪಲಾಯಣ ಮಾಡುವ ಚಾಲಕರನ್ನು ಹೊಸ ಕಾನೂನು ತಡೆಯುತ್ತದೆ ಎಂದು ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಕೇಂದ್ರ ಗೃಹ ಇಲಾಖೆಯ ಕಾರ್ಯದರ್ಶಿ ಅಜಯ್ ಭಲ್ಲಾ ಅವರೊಂದಿಗಿನ ಸಭೆಯ ನಂತರ ಇಂದು ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್‌ಪೋರ್ಟ್ ಅಸೋಸಿಯೇಷನ್ (ಎಐಎಂಟಿಸಿ) ಮುಷ್ಕರ ಕೊನೆಗೊಳಿಸಲು ನಿರ್ಧರಿಸಿದೆ. ಹೊಸ ಕಾನೂನುಗಳು ಇನ್ನೂ ಜಾರಿಗೆ ಬಂದಿಲ್ಲ. ಎಐಎಂಟಿಸಿಯೊಂದಿಗೆ ಸಮಾಲೋಚನೆ ನಡೆಸಿದ ನಂತರವೇ ಜಾರಿಗೆ ತರಲಾಗುವುದು ಎಂದು ಕೇಂದ್ರ ಸರ್ಕಾರದ ಪರವಾಗಿ ಅಜಯ್‌ ಭಲ್ಲಾ ಅವರು ಸಾರಿಗೆ ಸಂಸ್ಥೆಯ ಸದಸ್ಯರಿಗೆ ಭರವಸೆ ನೀಡಿದ ಹಿನ್ನೆಲೆ, ಮುಷ್ಕರ ಹಿಂಪಡೆಯಲಾಗಿದೆ ಎನ್ನಲಾಗಿದೆ.

ಇದನ್ನು ಓದಿ; ದಲಿತ ರೈತರಿಗೆ ‘ED’ ಸಮನ್ಸ್‌ ಪ್ರಕರಣ: ರಾಷ್ಟ್ರಪತಿಗೆ ಪತ್ರ ಬರೆದ IRS ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...