Homeಮುಖಪುಟಹೈದರಾಬಾದ್‌ನಲ್ಲಿ ಪೆಟ್ರೋಲ್‌ಗೆ ಮುಗಿಬಿದ್ದ ಜನ: ಕುದುರೆ ಏರಿ ಹೊರಟ ಪುಡ್‌ ಡೆಲಿವರಿ ಬಾಯ್‌

ಹೈದರಾಬಾದ್‌ನಲ್ಲಿ ಪೆಟ್ರೋಲ್‌ಗೆ ಮುಗಿಬಿದ್ದ ಜನ: ಕುದುರೆ ಏರಿ ಹೊರಟ ಪುಡ್‌ ಡೆಲಿವರಿ ಬಾಯ್‌

- Advertisement -
- Advertisement -

ಹಿಟ್‌ ಆಂಡ್‌ ರನ್‌ ಪ್ರಕರಣಗಳಲ್ಲಿ 10 ವರ್ಷಗಳ ಜೈಲು ಶಿಕ್ಷೆ ಮತ್ತು 7 ಲಕ್ಷ ದಂಡವನ್ನು ವಿಧಿಸುವ ಕೇಂದ್ರ ಸರ್ಕಾರದ ಭಾರತೀಯ ನ್ಯಾಯ ಸಂಹಿತಾ ಕಾನೂನಿನ ವಿರುದ್ಧ ದೇಶದ ವಿವಿಧೆಡೆ ಟ್ರಕ್‌ ಚಾಲಕರು ವ್ಯಾಪಕವಾಗಿ ಪ್ರತಿಭಟನೆ ಮಾಡಿದ್ದಾರೆ. ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ಹಿಮಾಚಲ, ರಾಜಸ್ಥಾನ ಮತ್ತು ಬಿಹಾರಗಳಲ್ಲಿ ಪ್ರತಿಭಟನೆ ಜನರ ಮೇಲೆ ವ್ಯಾಪಕವಾದ ಪರಿಣಾಮ ಬೀರಿತ್ತು. ಟ್ರಕ್‌ ಚಾಲಕರ ಪ್ರತಿಭಟನೆಯಿಂದಾಗಿ ಹೈದರಾಬಾದ್‌ನ ಪೆಟ್ರೋಲ್ ಪಂಪ್‌ಗಳಾದ್ಯಂತ ಭಾರಿ ಜನಸಂದಣಿ ಸೇರಿದ್ದರು. ಚಾಲಕರ ವ್ಯಾಪಕ ಪ್ರತಿಭಟನೆಗಳಿಂದ ಇಂಧನ ಪೂರೈಕೆ ಸ್ಥಗಿತದ ಭಯದಿಂದ ಜನರು ಪೆಟ್ರೋಲ್‌ ಪಂಪ್‌ಗಳಲ್ಲಿ ಜಮಾಯಿಸಿದ್ದರು.

ಇದರಿಂದ ಹೈದರಾಬಾದ್‌ನ ಝೊಮಾಟೊ ಡೆಲಿವರಿ ಬಾಯ್‌ ಓರ್ವ ತನ್ನ ದ್ವಿಚಕ್ರ ವಾಹನವನ್ನು ಬಿಟ್ಟು ಕುದುರೆಯಲ್ಲಿ ಪಾರ್ಸೆಲ್‌ ಸಾಗಾಟ ಮಾಡಿದ್ದಾನೆ. ಈ ಕುರಿತ ವಿಡಿಯೋ ವೈರಲ್‌ ಆಗಿದೆ. ‘ಅರ್ಬಾಜ್ ದಿ ಗ್ರೇಟ್’ ಎಂಬ ಎಕ್ಸ್‌ ಖಾತೆಯಲ್ಲಿ ಈ ಕುರಿತು ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಡೆಲಿವರಿ ಏಜೆಂಟ್ ತನ್ನ ಹೆಗಲ ಮೇಲೆ ಡೆಲಿವರಿ ಬ್ಯಾಗ್‌ ಹಾಕಿಕೊಂಡಿದ್ದಾನೆ. ಝೊಮಾಟೊ ಟೀಸರ್ಟ್‌ ಧರಸಿದ್ದ ಯುವಕ ಕುದುರೆಯ ಮೇಲೇರಿ ಜನ ಸಂದಣಿ ಪ್ರದೇಶದಲ್ಲಿ ವಾಹನಗಳ ನಡುವೆ ಪಾರ್ಸೆಲ್‌ ಕೊಂಡೊಯ್ಯುತ್ತಿರುವುದು ಕಂಡು ಬಂದಿದೆ. ಹೈದರಾಬಾದ್‌ನಲ್ಲಿ ಪ್ರತಿಭಟನೆಯಿಂದಾಗಿ ಇಂಧನ ಕೊರತೆಯ ಆತಂಕದಿಂದ ಪೆಟ್ರೋಲ್ ಪಂಪ್‌ಗಳಲ್ಲಿ ಜನರು ಜಮಾಯಿಸಿದ್ದರು. ಉದ್ದವಾದ ಸರತಿ ಸಾಲುಗಳಿದ್ದ ಕಾರಣಕ್ಕೆ ಬೈಕ್‌ ಬದಿಗಿಟ್ಟು, ಕುದುರೆಯ ಮೂಲಕ ಪುಡ್‌ ಡೆಲಿವರಿ ಮಾಡಲಾಗಿದೆ ಎಂದು ಹೇಳಲಾಗಿದೆ.

ಭಾರತೀಯ ನ್ಯಾಯ ಸಂಹಿತಾ ಶಾಸನವನ್ನು ಖಂಡಿಸಿ ಜ.1 ಮತ್ತು 2ರಂದು ನಡೆದ ರಾಷ್ಟ್ರವ್ಯಾಪಿ ಮುಷ್ಕರವು ಇಂಧನ ವಿತರಣೆಯ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರಿದೆ. ಇದು ಗ್ರಾಹಕರಲ್ಲಿ ಇಂಧನದ ಕೊರತೆ ಮತ್ತು ಭೀತಿಗೆ ಕಾರಣವಾಗಿದೆ. ಹೈದರಾಬಾದ್‌ನ ಅಫ್ಜಲ್‌ಗುಂಜ್, ಬಂಜಾರಾ ಹಿಲ್ಸ್, ನಾಂಪಲ್ಲಿ, ಬೇಗಂಪೇಟ್, ಲಂಗರ್ ಹೌಜ್ ಮತ್ತು ಗಚಿಬೌಲಿ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಪೆಟ್ರೋಲ್ ಪಂಪ್‌ಗಳ ಬಳಿ ಜನರ ಸಾಲುಗಳು ನಿಂತುಕೊಂಡಿರುವುದು ಕಂಡು ಬಂದಿತ್ತು.

ಏನಿದು ಪ್ರತಿಭಟನೆ?

ಹೊಸ ಕ್ರಿಮಿನಲ್ ಕಾನೂನಿನಲ್ಲಿ ಹಿಟ್ ಅಂಡ್ ರನ್‌ ಪ್ರಕರಣಗಳ ಜೈಲು ಶಿಕ್ಷೆಯ ಅವಧಿಯನ್ನು ಹೆಚ್ಚಿಸಲಾಗಿದೆ. ಅಪಘಾತದ ಬಳಿಕ ಚಾಲಕರು ಪರಾರಿಯಾಗಲು ಯತ್ನಿಸಿದರೆ ಅಥವಾ ಮಾರಣಾಂತಿಕ ಅಪಘಾತವನ್ನು ಪೊಲೀಸರಿಗೆ ವರದಿ ಮಾಡದಿದ್ದಲ್ಲಿ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 7 ಲಕ್ಷ ರೂಪಾಯಿ ದಂಡ ವಿಧಿಸಬಹುದು. ಈ ಹಿಂದೆ, ಹಿಟ್ ಅಂಡ್‌ ರನ್ ಪ್ರಕರಣಕ್ಕೆ ಐಪಿಸಿಯ ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ 2 ವರ್ಷಗಳವರೆಗೆ ಮಾತ್ರ ಜೈಲು ಶಿಕ್ಷೆ ವಿಧಿಸಬಹುದಾಗಿತ್ತು.

ಯಾರೂ ಉದ್ದೇಶಪೂರ್ವಕವಾಗಿ ಅಪಘಾತವೆಸಗುವುದಿಲ್ಲ. ಹೊಸ ಕಾನೂನಿನ ಪ್ರಕಾರ ಅಪಘಾತ ನಡೆದಾಗ ಘಟನಾ ಸ್ಥಳದಿಂದ ಪಲಾಯಣ ಮಾಡದಿದ್ದರೆ ಆಕ್ರೋಶಿತ ಜನರು ಚಾಲಕರ ಮೇಲೆ ದಾಳಿ ಮಾಡುವ ಸಾಧ್ಯತೆಯಿರುತ್ತದೆ. ತಮ್ಮ ರಕ್ಷಣೆಗೋಸ್ಕರ ಪಲಾಯಣ ಮಾಡುವ ಚಾಲಕರನ್ನು ಹೊಸ ಕಾನೂನು ತಡೆಯುತ್ತದೆ ಎಂದು ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಕೇಂದ್ರ ಗೃಹ ಇಲಾಖೆಯ ಕಾರ್ಯದರ್ಶಿ ಅಜಯ್ ಭಲ್ಲಾ ಅವರೊಂದಿಗಿನ ಸಭೆಯ ನಂತರ ಇಂದು ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್‌ಪೋರ್ಟ್ ಅಸೋಸಿಯೇಷನ್ (ಎಐಎಂಟಿಸಿ) ಮುಷ್ಕರ ಕೊನೆಗೊಳಿಸಲು ನಿರ್ಧರಿಸಿದೆ. ಹೊಸ ಕಾನೂನುಗಳು ಇನ್ನೂ ಜಾರಿಗೆ ಬಂದಿಲ್ಲ. ಎಐಎಂಟಿಸಿಯೊಂದಿಗೆ ಸಮಾಲೋಚನೆ ನಡೆಸಿದ ನಂತರವೇ ಜಾರಿಗೆ ತರಲಾಗುವುದು ಎಂದು ಕೇಂದ್ರ ಸರ್ಕಾರದ ಪರವಾಗಿ ಅಜಯ್‌ ಭಲ್ಲಾ ಅವರು ಸಾರಿಗೆ ಸಂಸ್ಥೆಯ ಸದಸ್ಯರಿಗೆ ಭರವಸೆ ನೀಡಿದ ಹಿನ್ನೆಲೆ, ಮುಷ್ಕರ ಹಿಂಪಡೆಯಲಾಗಿದೆ ಎನ್ನಲಾಗಿದೆ.

ಇದನ್ನು ಓದಿ; ದಲಿತ ರೈತರಿಗೆ ‘ED’ ಸಮನ್ಸ್‌ ಪ್ರಕರಣ: ರಾಷ್ಟ್ರಪತಿಗೆ ಪತ್ರ ಬರೆದ IRS ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...