Homeಮುಖಪುಟಹೈದರಾಬಾದ್‌ನಲ್ಲಿ ಪೆಟ್ರೋಲ್‌ಗೆ ಮುಗಿಬಿದ್ದ ಜನ: ಕುದುರೆ ಏರಿ ಹೊರಟ ಪುಡ್‌ ಡೆಲಿವರಿ ಬಾಯ್‌

ಹೈದರಾಬಾದ್‌ನಲ್ಲಿ ಪೆಟ್ರೋಲ್‌ಗೆ ಮುಗಿಬಿದ್ದ ಜನ: ಕುದುರೆ ಏರಿ ಹೊರಟ ಪುಡ್‌ ಡೆಲಿವರಿ ಬಾಯ್‌

- Advertisement -
- Advertisement -

ಹಿಟ್‌ ಆಂಡ್‌ ರನ್‌ ಪ್ರಕರಣಗಳಲ್ಲಿ 10 ವರ್ಷಗಳ ಜೈಲು ಶಿಕ್ಷೆ ಮತ್ತು 7 ಲಕ್ಷ ದಂಡವನ್ನು ವಿಧಿಸುವ ಕೇಂದ್ರ ಸರ್ಕಾರದ ಭಾರತೀಯ ನ್ಯಾಯ ಸಂಹಿತಾ ಕಾನೂನಿನ ವಿರುದ್ಧ ದೇಶದ ವಿವಿಧೆಡೆ ಟ್ರಕ್‌ ಚಾಲಕರು ವ್ಯಾಪಕವಾಗಿ ಪ್ರತಿಭಟನೆ ಮಾಡಿದ್ದಾರೆ. ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ಹಿಮಾಚಲ, ರಾಜಸ್ಥಾನ ಮತ್ತು ಬಿಹಾರಗಳಲ್ಲಿ ಪ್ರತಿಭಟನೆ ಜನರ ಮೇಲೆ ವ್ಯಾಪಕವಾದ ಪರಿಣಾಮ ಬೀರಿತ್ತು. ಟ್ರಕ್‌ ಚಾಲಕರ ಪ್ರತಿಭಟನೆಯಿಂದಾಗಿ ಹೈದರಾಬಾದ್‌ನ ಪೆಟ್ರೋಲ್ ಪಂಪ್‌ಗಳಾದ್ಯಂತ ಭಾರಿ ಜನಸಂದಣಿ ಸೇರಿದ್ದರು. ಚಾಲಕರ ವ್ಯಾಪಕ ಪ್ರತಿಭಟನೆಗಳಿಂದ ಇಂಧನ ಪೂರೈಕೆ ಸ್ಥಗಿತದ ಭಯದಿಂದ ಜನರು ಪೆಟ್ರೋಲ್‌ ಪಂಪ್‌ಗಳಲ್ಲಿ ಜಮಾಯಿಸಿದ್ದರು.

ಇದರಿಂದ ಹೈದರಾಬಾದ್‌ನ ಝೊಮಾಟೊ ಡೆಲಿವರಿ ಬಾಯ್‌ ಓರ್ವ ತನ್ನ ದ್ವಿಚಕ್ರ ವಾಹನವನ್ನು ಬಿಟ್ಟು ಕುದುರೆಯಲ್ಲಿ ಪಾರ್ಸೆಲ್‌ ಸಾಗಾಟ ಮಾಡಿದ್ದಾನೆ. ಈ ಕುರಿತ ವಿಡಿಯೋ ವೈರಲ್‌ ಆಗಿದೆ. ‘ಅರ್ಬಾಜ್ ದಿ ಗ್ರೇಟ್’ ಎಂಬ ಎಕ್ಸ್‌ ಖಾತೆಯಲ್ಲಿ ಈ ಕುರಿತು ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಡೆಲಿವರಿ ಏಜೆಂಟ್ ತನ್ನ ಹೆಗಲ ಮೇಲೆ ಡೆಲಿವರಿ ಬ್ಯಾಗ್‌ ಹಾಕಿಕೊಂಡಿದ್ದಾನೆ. ಝೊಮಾಟೊ ಟೀಸರ್ಟ್‌ ಧರಸಿದ್ದ ಯುವಕ ಕುದುರೆಯ ಮೇಲೇರಿ ಜನ ಸಂದಣಿ ಪ್ರದೇಶದಲ್ಲಿ ವಾಹನಗಳ ನಡುವೆ ಪಾರ್ಸೆಲ್‌ ಕೊಂಡೊಯ್ಯುತ್ತಿರುವುದು ಕಂಡು ಬಂದಿದೆ. ಹೈದರಾಬಾದ್‌ನಲ್ಲಿ ಪ್ರತಿಭಟನೆಯಿಂದಾಗಿ ಇಂಧನ ಕೊರತೆಯ ಆತಂಕದಿಂದ ಪೆಟ್ರೋಲ್ ಪಂಪ್‌ಗಳಲ್ಲಿ ಜನರು ಜಮಾಯಿಸಿದ್ದರು. ಉದ್ದವಾದ ಸರತಿ ಸಾಲುಗಳಿದ್ದ ಕಾರಣಕ್ಕೆ ಬೈಕ್‌ ಬದಿಗಿಟ್ಟು, ಕುದುರೆಯ ಮೂಲಕ ಪುಡ್‌ ಡೆಲಿವರಿ ಮಾಡಲಾಗಿದೆ ಎಂದು ಹೇಳಲಾಗಿದೆ.

ಭಾರತೀಯ ನ್ಯಾಯ ಸಂಹಿತಾ ಶಾಸನವನ್ನು ಖಂಡಿಸಿ ಜ.1 ಮತ್ತು 2ರಂದು ನಡೆದ ರಾಷ್ಟ್ರವ್ಯಾಪಿ ಮುಷ್ಕರವು ಇಂಧನ ವಿತರಣೆಯ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರಿದೆ. ಇದು ಗ್ರಾಹಕರಲ್ಲಿ ಇಂಧನದ ಕೊರತೆ ಮತ್ತು ಭೀತಿಗೆ ಕಾರಣವಾಗಿದೆ. ಹೈದರಾಬಾದ್‌ನ ಅಫ್ಜಲ್‌ಗುಂಜ್, ಬಂಜಾರಾ ಹಿಲ್ಸ್, ನಾಂಪಲ್ಲಿ, ಬೇಗಂಪೇಟ್, ಲಂಗರ್ ಹೌಜ್ ಮತ್ತು ಗಚಿಬೌಲಿ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಪೆಟ್ರೋಲ್ ಪಂಪ್‌ಗಳ ಬಳಿ ಜನರ ಸಾಲುಗಳು ನಿಂತುಕೊಂಡಿರುವುದು ಕಂಡು ಬಂದಿತ್ತು.

ಏನಿದು ಪ್ರತಿಭಟನೆ?

ಹೊಸ ಕ್ರಿಮಿನಲ್ ಕಾನೂನಿನಲ್ಲಿ ಹಿಟ್ ಅಂಡ್ ರನ್‌ ಪ್ರಕರಣಗಳ ಜೈಲು ಶಿಕ್ಷೆಯ ಅವಧಿಯನ್ನು ಹೆಚ್ಚಿಸಲಾಗಿದೆ. ಅಪಘಾತದ ಬಳಿಕ ಚಾಲಕರು ಪರಾರಿಯಾಗಲು ಯತ್ನಿಸಿದರೆ ಅಥವಾ ಮಾರಣಾಂತಿಕ ಅಪಘಾತವನ್ನು ಪೊಲೀಸರಿಗೆ ವರದಿ ಮಾಡದಿದ್ದಲ್ಲಿ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 7 ಲಕ್ಷ ರೂಪಾಯಿ ದಂಡ ವಿಧಿಸಬಹುದು. ಈ ಹಿಂದೆ, ಹಿಟ್ ಅಂಡ್‌ ರನ್ ಪ್ರಕರಣಕ್ಕೆ ಐಪಿಸಿಯ ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ 2 ವರ್ಷಗಳವರೆಗೆ ಮಾತ್ರ ಜೈಲು ಶಿಕ್ಷೆ ವಿಧಿಸಬಹುದಾಗಿತ್ತು.

ಯಾರೂ ಉದ್ದೇಶಪೂರ್ವಕವಾಗಿ ಅಪಘಾತವೆಸಗುವುದಿಲ್ಲ. ಹೊಸ ಕಾನೂನಿನ ಪ್ರಕಾರ ಅಪಘಾತ ನಡೆದಾಗ ಘಟನಾ ಸ್ಥಳದಿಂದ ಪಲಾಯಣ ಮಾಡದಿದ್ದರೆ ಆಕ್ರೋಶಿತ ಜನರು ಚಾಲಕರ ಮೇಲೆ ದಾಳಿ ಮಾಡುವ ಸಾಧ್ಯತೆಯಿರುತ್ತದೆ. ತಮ್ಮ ರಕ್ಷಣೆಗೋಸ್ಕರ ಪಲಾಯಣ ಮಾಡುವ ಚಾಲಕರನ್ನು ಹೊಸ ಕಾನೂನು ತಡೆಯುತ್ತದೆ ಎಂದು ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಕೇಂದ್ರ ಗೃಹ ಇಲಾಖೆಯ ಕಾರ್ಯದರ್ಶಿ ಅಜಯ್ ಭಲ್ಲಾ ಅವರೊಂದಿಗಿನ ಸಭೆಯ ನಂತರ ಇಂದು ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್‌ಪೋರ್ಟ್ ಅಸೋಸಿಯೇಷನ್ (ಎಐಎಂಟಿಸಿ) ಮುಷ್ಕರ ಕೊನೆಗೊಳಿಸಲು ನಿರ್ಧರಿಸಿದೆ. ಹೊಸ ಕಾನೂನುಗಳು ಇನ್ನೂ ಜಾರಿಗೆ ಬಂದಿಲ್ಲ. ಎಐಎಂಟಿಸಿಯೊಂದಿಗೆ ಸಮಾಲೋಚನೆ ನಡೆಸಿದ ನಂತರವೇ ಜಾರಿಗೆ ತರಲಾಗುವುದು ಎಂದು ಕೇಂದ್ರ ಸರ್ಕಾರದ ಪರವಾಗಿ ಅಜಯ್‌ ಭಲ್ಲಾ ಅವರು ಸಾರಿಗೆ ಸಂಸ್ಥೆಯ ಸದಸ್ಯರಿಗೆ ಭರವಸೆ ನೀಡಿದ ಹಿನ್ನೆಲೆ, ಮುಷ್ಕರ ಹಿಂಪಡೆಯಲಾಗಿದೆ ಎನ್ನಲಾಗಿದೆ.

ಇದನ್ನು ಓದಿ; ದಲಿತ ರೈತರಿಗೆ ‘ED’ ಸಮನ್ಸ್‌ ಪ್ರಕರಣ: ರಾಷ್ಟ್ರಪತಿಗೆ ಪತ್ರ ಬರೆದ IRS ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...