Homeಮುಖಪುಟಹೈದರಾಬಾದ್‌ನಲ್ಲಿ ಪೆಟ್ರೋಲ್‌ಗೆ ಮುಗಿಬಿದ್ದ ಜನ: ಕುದುರೆ ಏರಿ ಹೊರಟ ಪುಡ್‌ ಡೆಲಿವರಿ ಬಾಯ್‌

ಹೈದರಾಬಾದ್‌ನಲ್ಲಿ ಪೆಟ್ರೋಲ್‌ಗೆ ಮುಗಿಬಿದ್ದ ಜನ: ಕುದುರೆ ಏರಿ ಹೊರಟ ಪುಡ್‌ ಡೆಲಿವರಿ ಬಾಯ್‌

- Advertisement -
- Advertisement -

ಹಿಟ್‌ ಆಂಡ್‌ ರನ್‌ ಪ್ರಕರಣಗಳಲ್ಲಿ 10 ವರ್ಷಗಳ ಜೈಲು ಶಿಕ್ಷೆ ಮತ್ತು 7 ಲಕ್ಷ ದಂಡವನ್ನು ವಿಧಿಸುವ ಕೇಂದ್ರ ಸರ್ಕಾರದ ಭಾರತೀಯ ನ್ಯಾಯ ಸಂಹಿತಾ ಕಾನೂನಿನ ವಿರುದ್ಧ ದೇಶದ ವಿವಿಧೆಡೆ ಟ್ರಕ್‌ ಚಾಲಕರು ವ್ಯಾಪಕವಾಗಿ ಪ್ರತಿಭಟನೆ ಮಾಡಿದ್ದಾರೆ. ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ಹಿಮಾಚಲ, ರಾಜಸ್ಥಾನ ಮತ್ತು ಬಿಹಾರಗಳಲ್ಲಿ ಪ್ರತಿಭಟನೆ ಜನರ ಮೇಲೆ ವ್ಯಾಪಕವಾದ ಪರಿಣಾಮ ಬೀರಿತ್ತು. ಟ್ರಕ್‌ ಚಾಲಕರ ಪ್ರತಿಭಟನೆಯಿಂದಾಗಿ ಹೈದರಾಬಾದ್‌ನ ಪೆಟ್ರೋಲ್ ಪಂಪ್‌ಗಳಾದ್ಯಂತ ಭಾರಿ ಜನಸಂದಣಿ ಸೇರಿದ್ದರು. ಚಾಲಕರ ವ್ಯಾಪಕ ಪ್ರತಿಭಟನೆಗಳಿಂದ ಇಂಧನ ಪೂರೈಕೆ ಸ್ಥಗಿತದ ಭಯದಿಂದ ಜನರು ಪೆಟ್ರೋಲ್‌ ಪಂಪ್‌ಗಳಲ್ಲಿ ಜಮಾಯಿಸಿದ್ದರು.

ಇದರಿಂದ ಹೈದರಾಬಾದ್‌ನ ಝೊಮಾಟೊ ಡೆಲಿವರಿ ಬಾಯ್‌ ಓರ್ವ ತನ್ನ ದ್ವಿಚಕ್ರ ವಾಹನವನ್ನು ಬಿಟ್ಟು ಕುದುರೆಯಲ್ಲಿ ಪಾರ್ಸೆಲ್‌ ಸಾಗಾಟ ಮಾಡಿದ್ದಾನೆ. ಈ ಕುರಿತ ವಿಡಿಯೋ ವೈರಲ್‌ ಆಗಿದೆ. ‘ಅರ್ಬಾಜ್ ದಿ ಗ್ರೇಟ್’ ಎಂಬ ಎಕ್ಸ್‌ ಖಾತೆಯಲ್ಲಿ ಈ ಕುರಿತು ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಡೆಲಿವರಿ ಏಜೆಂಟ್ ತನ್ನ ಹೆಗಲ ಮೇಲೆ ಡೆಲಿವರಿ ಬ್ಯಾಗ್‌ ಹಾಕಿಕೊಂಡಿದ್ದಾನೆ. ಝೊಮಾಟೊ ಟೀಸರ್ಟ್‌ ಧರಸಿದ್ದ ಯುವಕ ಕುದುರೆಯ ಮೇಲೇರಿ ಜನ ಸಂದಣಿ ಪ್ರದೇಶದಲ್ಲಿ ವಾಹನಗಳ ನಡುವೆ ಪಾರ್ಸೆಲ್‌ ಕೊಂಡೊಯ್ಯುತ್ತಿರುವುದು ಕಂಡು ಬಂದಿದೆ. ಹೈದರಾಬಾದ್‌ನಲ್ಲಿ ಪ್ರತಿಭಟನೆಯಿಂದಾಗಿ ಇಂಧನ ಕೊರತೆಯ ಆತಂಕದಿಂದ ಪೆಟ್ರೋಲ್ ಪಂಪ್‌ಗಳಲ್ಲಿ ಜನರು ಜಮಾಯಿಸಿದ್ದರು. ಉದ್ದವಾದ ಸರತಿ ಸಾಲುಗಳಿದ್ದ ಕಾರಣಕ್ಕೆ ಬೈಕ್‌ ಬದಿಗಿಟ್ಟು, ಕುದುರೆಯ ಮೂಲಕ ಪುಡ್‌ ಡೆಲಿವರಿ ಮಾಡಲಾಗಿದೆ ಎಂದು ಹೇಳಲಾಗಿದೆ.

ಭಾರತೀಯ ನ್ಯಾಯ ಸಂಹಿತಾ ಶಾಸನವನ್ನು ಖಂಡಿಸಿ ಜ.1 ಮತ್ತು 2ರಂದು ನಡೆದ ರಾಷ್ಟ್ರವ್ಯಾಪಿ ಮುಷ್ಕರವು ಇಂಧನ ವಿತರಣೆಯ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರಿದೆ. ಇದು ಗ್ರಾಹಕರಲ್ಲಿ ಇಂಧನದ ಕೊರತೆ ಮತ್ತು ಭೀತಿಗೆ ಕಾರಣವಾಗಿದೆ. ಹೈದರಾಬಾದ್‌ನ ಅಫ್ಜಲ್‌ಗುಂಜ್, ಬಂಜಾರಾ ಹಿಲ್ಸ್, ನಾಂಪಲ್ಲಿ, ಬೇಗಂಪೇಟ್, ಲಂಗರ್ ಹೌಜ್ ಮತ್ತು ಗಚಿಬೌಲಿ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಪೆಟ್ರೋಲ್ ಪಂಪ್‌ಗಳ ಬಳಿ ಜನರ ಸಾಲುಗಳು ನಿಂತುಕೊಂಡಿರುವುದು ಕಂಡು ಬಂದಿತ್ತು.

ಏನಿದು ಪ್ರತಿಭಟನೆ?

ಹೊಸ ಕ್ರಿಮಿನಲ್ ಕಾನೂನಿನಲ್ಲಿ ಹಿಟ್ ಅಂಡ್ ರನ್‌ ಪ್ರಕರಣಗಳ ಜೈಲು ಶಿಕ್ಷೆಯ ಅವಧಿಯನ್ನು ಹೆಚ್ಚಿಸಲಾಗಿದೆ. ಅಪಘಾತದ ಬಳಿಕ ಚಾಲಕರು ಪರಾರಿಯಾಗಲು ಯತ್ನಿಸಿದರೆ ಅಥವಾ ಮಾರಣಾಂತಿಕ ಅಪಘಾತವನ್ನು ಪೊಲೀಸರಿಗೆ ವರದಿ ಮಾಡದಿದ್ದಲ್ಲಿ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 7 ಲಕ್ಷ ರೂಪಾಯಿ ದಂಡ ವಿಧಿಸಬಹುದು. ಈ ಹಿಂದೆ, ಹಿಟ್ ಅಂಡ್‌ ರನ್ ಪ್ರಕರಣಕ್ಕೆ ಐಪಿಸಿಯ ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ 2 ವರ್ಷಗಳವರೆಗೆ ಮಾತ್ರ ಜೈಲು ಶಿಕ್ಷೆ ವಿಧಿಸಬಹುದಾಗಿತ್ತು.

ಯಾರೂ ಉದ್ದೇಶಪೂರ್ವಕವಾಗಿ ಅಪಘಾತವೆಸಗುವುದಿಲ್ಲ. ಹೊಸ ಕಾನೂನಿನ ಪ್ರಕಾರ ಅಪಘಾತ ನಡೆದಾಗ ಘಟನಾ ಸ್ಥಳದಿಂದ ಪಲಾಯಣ ಮಾಡದಿದ್ದರೆ ಆಕ್ರೋಶಿತ ಜನರು ಚಾಲಕರ ಮೇಲೆ ದಾಳಿ ಮಾಡುವ ಸಾಧ್ಯತೆಯಿರುತ್ತದೆ. ತಮ್ಮ ರಕ್ಷಣೆಗೋಸ್ಕರ ಪಲಾಯಣ ಮಾಡುವ ಚಾಲಕರನ್ನು ಹೊಸ ಕಾನೂನು ತಡೆಯುತ್ತದೆ ಎಂದು ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಕೇಂದ್ರ ಗೃಹ ಇಲಾಖೆಯ ಕಾರ್ಯದರ್ಶಿ ಅಜಯ್ ಭಲ್ಲಾ ಅವರೊಂದಿಗಿನ ಸಭೆಯ ನಂತರ ಇಂದು ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್‌ಪೋರ್ಟ್ ಅಸೋಸಿಯೇಷನ್ (ಎಐಎಂಟಿಸಿ) ಮುಷ್ಕರ ಕೊನೆಗೊಳಿಸಲು ನಿರ್ಧರಿಸಿದೆ. ಹೊಸ ಕಾನೂನುಗಳು ಇನ್ನೂ ಜಾರಿಗೆ ಬಂದಿಲ್ಲ. ಎಐಎಂಟಿಸಿಯೊಂದಿಗೆ ಸಮಾಲೋಚನೆ ನಡೆಸಿದ ನಂತರವೇ ಜಾರಿಗೆ ತರಲಾಗುವುದು ಎಂದು ಕೇಂದ್ರ ಸರ್ಕಾರದ ಪರವಾಗಿ ಅಜಯ್‌ ಭಲ್ಲಾ ಅವರು ಸಾರಿಗೆ ಸಂಸ್ಥೆಯ ಸದಸ್ಯರಿಗೆ ಭರವಸೆ ನೀಡಿದ ಹಿನ್ನೆಲೆ, ಮುಷ್ಕರ ಹಿಂಪಡೆಯಲಾಗಿದೆ ಎನ್ನಲಾಗಿದೆ.

ಇದನ್ನು ಓದಿ; ದಲಿತ ರೈತರಿಗೆ ‘ED’ ಸಮನ್ಸ್‌ ಪ್ರಕರಣ: ರಾಷ್ಟ್ರಪತಿಗೆ ಪತ್ರ ಬರೆದ IRS ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...