Homeಕರ್ನಾಟಕ371J ಹೈದರಾಬಾದ್‌ ಕರ್ನಾಟಕ ಮೀಸಲಾತಿ: ಸಾಧಕ ಬಾಧಕಗಳು - ಡಾ.ರಝಾಕ ಉಸ್ತಾದ

371J ಹೈದರಾಬಾದ್‌ ಕರ್ನಾಟಕ ಮೀಸಲಾತಿ: ಸಾಧಕ ಬಾಧಕಗಳು – ಡಾ.ರಝಾಕ ಉಸ್ತಾದ

ಹೈದ್ರಾಬಾದ ಕರ್ನಾಟಕ ಪ್ರದೇಶವು ಕರ್ನಾಟಕ ರಾಜ್ಯದ ಆಡಳಿತಕ್ಕೆ ಒಳಪಟ್ಟು 70 ವರ್ಷಗಳಾಗುತ್ತ ಬಂದರೂ ಇಂದಿಗೂ ಅಭಿವೃದ್ಧಿ ಮರೀಚಿಕೆಯಾಗಿದೆ. ಈ ಭಾಗವು ವಿಶೇಷವಾಗಿ ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯ, ಸಾರ್ವಜನಿಕ ಸೇವೆಗಳು, ಮಾನವ ಅಭಿವೃದ್ಧಿ ಪೂರಕ ವಾತಾವರಣದಿಂದ ಹಿನ್ನಡೆ ಅನುಭವಿಸಿದೆ.

- Advertisement -
- Advertisement -

ಮೀಸಲಾತಿ ಕಣ್ಣಗಾಯಕ್ಕೊಂದು ಕನ್ನಡಿ

ಸರಣಿ ಸಂಪಾದಕರು: ವಿಕಾಸ್‌ ಆರ್‌ ಮೌರ್ಯ

ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲಿ 560ಕ್ಕೂ ಹೆಚ್ಚು ರಾಜಮಹಾರಾಜರ ಸಂಸ್ಥಾನಗಳನ್ನು ಹೊಂದಿದ್ದ ಈ ದೇಶದಲ್ಲಿ ಭೌತಿಕ ಅಭಿವೃದ್ಧಿಯಾಗಲೀ, ಸಾಮಾಜಿಕ ವ್ಯವಸ್ಥೆಯಾಗಲಿ, ಸಾಂಸ್ಕøತಿಕವಾಗಿಯಾಗಲಿ, ಶೈಕ್ಷಣಿಕವಾಗಿಯಾಗಲಿ ಏಕರೀತಿಯಾಗಿ ಇರಲಿಲ್ಲ. ಈ ವಿಭಿನ್ನ ದೃಷ್ಟಿಕೋನದ ಭಾರತವು ಒಂದು ಮಾನದಂಡದಲ್ಲಿ ಒಂದಾಗುವದು ಭವಿಷ್ಯದ ದೃಷ್ಟಿಯಿಂದ ಅವಶ್ಯಕತೆಯಿದ್ದ ಕಾರಣ ಸಂವಿಧಾನ ನಿರ್ಮಾತೃಗಳು ಸಂವಿಧಾನ ರಚನೆ ಸಂದರ್ಭದಲ್ಲಿ ಯಾವುದೇ ರಾಜ್ಯದಲ್ಲಿ ಒಂದು ಪ್ರದೇಶ ಮತ್ತೊಂದು ಪ್ರದೇಶಕ್ಕಿಂತ ಅಭಿವೃದ್ಧಿಯಲ್ಲಿ, ಶಿಕ್ಷಣದಲ್ಲಿ ವಿಭಿನ್ನವಾಗಿದ್ದರೆ ಅಂತಹ ರಾಜ್ಯಗಳಲ್ಲಿ ಆ ಒಂದು ಪ್ರದೇಶಕ್ಕೆ ವಿಶೇಷ ಕಾನೂನು ರಚನೆ ಮಾಡುವ ಅಧಿಕಾರವನ್ನು ಸಂವಿಧಾನದ ಅನುಚ್ಛೇದ 371 ರಲ್ಲಿ ನೀಡಲಾಗಿದೆ. ಅದರ ಆಧಾರದಲ್ಲಿ ಈಗಾಗಲೇ ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್, ಅಸ್ಸಾಂ, ನಾಗಾಲ್ಯಾಂಡ, ಒಡಿಸ್ಸಾ, ಮಿಜೋರಾಂ, ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯ, ತ್ರಿಪುರಾ ಹಾಗೂ ಗೋವಾ ರಾಜ್ಯಗಳಿಗೆ ಅನುಚ್ಛೇದ 371ರ ಅಡಿಯಲ್ಲಿ ವಿಶೇಷ ಕಾನೂನು ರಚಿಸಲು ಅವಕಾಶ ನೀಡಲಾಗಿದೆ.

ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಮತ್ತು 1956 ರವರೆಗೆ ಹೈದ್ರಾಬಾದ್ ರಾಜ್ಯದ ಅಧೀನದಲ್ಲಿ ಇದ್ದಂತಹ ಹೈದ್ರಾಬಾದ ಕರ್ನಾಟಕ (ಬೀದರ, ಗುಲ್ಬರ್ಗಾ, ಯಾದಗೀರ, ರಾಯಚೂರು ಮತ್ತು ಕೊಪ್ಪಳ) ಪ್ರದೇಶ ರಾಜ್ಯಗಳ ಪುನರ್ವಿಂಗಡನೆಯ ಸಂದರ್ಭದಲ್ಲಿ ಅಂದಿನ ಮೈಸೂರು ರಾಜ್ಯಕ್ಕೆ ಸೇರಿಸಲಾಗಿತ್ತು. ಹೈದ್ರಾಬಾದ ಸಂಸ್ಥಾನದಲ್ಲಿ ಜಾರಿಯಲ್ಲಿದ್ದಂತಹ ಮುಲ್ಕಿ ಕಾನೂನಿನ ಸಂವಿಧಾನದ ಮಾನ್ಯತೆಯನ್ನು ಆಂಧ್ರಪ್ರದೇಶ ರಾಜ್ಯದ ತೆಲಂಗಾಣ ಪ್ರದೇಶಕ್ಕೆ 1957ರಲ್ಲಿ ಸಂವಿಧಾನ ಅನುಚ್ಛೇದ 371(1) ರ ಅಡಿಯಲ್ಲಿ ನೀಡಲಾಗಿತ್ತು, ಅದರಂತೆ, ಹೈದ್ರಾಬಾದ ಸಂಸ್ಥಾನದ ಭಾಗವಾಗಿದ್ದ ಇಂದಿನ ಮಹಾರಾಷ್ಟ್ರದ ಮರಾಠಾವಾಡ ಪ್ರದೇಶವು ಸೇರಿದಂತೆ ವಿದರ್ಭಾ, ಕಚ್, ಸೌರಾಷ್ಟ್ರ ಪ್ರದೇಶಕ್ಕೆ ಅನುಚ್ಛೇದ 371(2) ಅಡಿಯಲ್ಲಿ ಮುಲ್ಕಿ ಕಾನೂನಿನ ಮಾದರಿಯಲ್ಲಿ ವಿಶೇಷ ಕಾನೂನು ರಚನೆ ಅಧಿಕಾರ ನೀಡಲಾಗಿದೆ. ಆದರೆ, 1956ರಲ್ಲಿ ಮೈಸೂರು ರಾಜ್ಯವನ್ನು ಸೇರಿದ ಹೈದ್ರಾಬಾದ ಕರ್ನಾಟಕ ಪ್ರದೇಶಕ್ಕೆ ಮುಲ್ಕಿ ಕಾನೂನಿನ ಸೌಲಭ್ಯ ಸಿಗಲಿಲ್ಲವಾದ್ದರಿಂದ ಈಗ ಅನುಚ್ಛೇದ 371ಜೆ ಅಡಿಯಲ್ಲಿ ಮುಲ್ಕಿ ಕಾನೂನಿನ ಸೌಲಭ್ಯವನ್ನು ವಿಶೇಷ ಕಾನೂನು ಮೂಲಕ ರಚಿಸಲು ಅವಕಾಶ ನೀಡಲಾಗಿದೆ.

ಹೈದ್ರಾಬಾದ ಕರ್ನಾಟಕ ಪ್ರದೇಶವು ಈಗ ಆರು ಜಿಲ್ಲೆಗಳನ್ನೊಳಗೊಂಡ ಕಂದಾಯ ವಿಭಾಗವಾಗಿದ್ದು, ಕರ್ನಾಟಕ ರಾಜ್ಯದ ಆಡಳಿತಕ್ಕೆ ಒಳಪಟ್ಟು 70 ವರ್ಷಗಳಾಗುತ್ತ ಬಂದರೂ ಇಂದಿಗೂ ಅಭಿವೃದ್ದಿ ಮರೀಚಿಕೆಯಾಗಿದೆ. ಈ ಭಾಗವು ವಿಶೇಷವಾಗಿ ಶಿಕ್ಷಣ, ಆರೋಗ್ಯ, ಮೂಲ ಸೌಕರ್ಯ, ಸಾರ್ವಜನಿಕ ಸೇವೆಗಳು, ಮಾನವ ಅಭಿವೃದ್ಧಿ ಪೂರಕ ವಾತಾವರಣದಿಂದ ಹಿನ್ನಡೆ ಅನುಭವಿಸಿದೆ. ಎನ್.ಧರ್ಮಸಿಂಗ ಮುಖ್ಯ ಮಂತ್ರಿಯಾಗುವವರೆಗೆ ಹೈ-ಕ ಪ್ರದೇಶದಲ್ಲಿ ಒಂದೇ ಒಂದು ಸರಕಾರಿ ಮೆಡಿಕಲ್ ಕಾಲೇಜು, ಸರಕಾರಿ ಇಂಜಿನಿಯರಿಂಗ್ ಕಾಲೇಜು ಇರಲಿಲ್ಲ. ಇಂದಿಗೂ ಇಡೀ ಪ್ರದೇಶದಲ್ಲಿ ಒಂದೇ ಒಂದು ಕಾನೂನು ಮಹಾವಿದ್ಯಾಲಯವಿಲ್ಲ, ಯಾವುದೇ ವೃತ್ತಿಪರ ತಾಂತ್ರಿಕ ಅಥವಾ ಕೌಶಲ್ಯ ಅಭಿವೃದ್ಧಿ ಸಂಸ್ಥೆಗಳಿಲ್ಲ.

2011 ರವರೆಗೆ ಕೇವಲ ಒಂದೇ ವಿಶ್ವವಿದ್ಯಾಲಯ ಅದು ಗುಲ್ಬರ್ಗಾ ವಿಶ್ವವಿದ್ಯಾಲಯ ಈ ಭಾಗದ ಉನ್ನತ ಶಿಕ್ಷಣ ಪೂರೈಸುವ ಸಂಸ್ಥೆಯಾಗಿತ್ತು. 2015 ರವರೆಗೆ ಈ ಭಾಗದಲ್ಲಿ ಇರುವ ಪದವಿ ಮಹಾವಿದ್ಯಾಲಯಗಳಲ್ಲಿ ಶೇ 50 ರಷ್ಟು ಹುದ್ದೆಗಳು ಖಾಲಿ ಇದ್ದವು. ಗ್ರಾಮೀಣ ಭಾಗದ ಯಾವ ಪದವಿ ಪೂರ್ವ ಕಾಲೇಜುಗಳಲ್ಲಿಯೂ ಇಂದಿಗೂ ಪೂರ್ಣ ಪ್ರಮಾಣದ ಉಪನ್ಯಾಸಕರಿಲ್ಲ. 371ಜೆ ಕಾನೂನು ಜಾರಿಯಾಗಿ ಆರು ವರ್ಷವಾದರೂ ಹೈ-ಕ ಪ್ರದೇಶದಲ್ಲಿ 12,000 ಪ್ರಾಥಮಿಕ ಶಾಲಾಶಿಕ್ಷಕರ ಹುದ್ದೆಗಳು ಖಾಲಿ ಇವೆ, 2000 ಪ್ರೌಢಶಾಲಾ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಶೈಕ್ಷಣಿಕ ವ್ಯವಸ್ಥೆ ಇದ್ದೂ ಇಲ್ಲದಂತಾಗಿರುವದು ಈ ಭಾಗದ ದುರಂತವೇ ಸರಿ. ಇಂತಹ ವ್ಯವಸ್ಥೆಯಲ್ಲಿ ಓದಿದಂತಹ ಈ ಭಾಗದ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಾವ ರೀತಿ ಭಾಗವಹಿಸಲು ಸಾಧ್ಯ?

ಹೈದ್ರಾಬಾದ ಕರ್ನಾಟಕ ಪ್ರದೇಶದಲ್ಲಿ ಇರುವಂತಹ ಬಡತನ, ನಿರುದ್ಯೋಗ ಮತ್ತು ಉದ್ಯೋಗ ಅವಕಾಶ ಇಲ್ಲದಿರುವ ಕಾರಣದಿಂದ ಬಹುತೇಕ ಗ್ರಾಮೀಣ ಭಾಗದ ಜನ ಪ್ರತಿವರ್ಷ ಮಹಾನಗರಗಳಿಗೆ ಕುಟುಂಬ ಸಮೇತ ಗುಳೆ ಹೋಗುವ ಪರಿಸ್ಥಿತಿ ಇದೆ. ಈ ಗುಳೆ ಹೋಗುವ ಕಾರಣಕ್ಕೆ ತಮ್ಮ ಜೊತೆಗೆ ಪಾಲಕರು ತಮ್ಮ ಮಕ್ಕಳನ್ನು ಕರೆದುಕೊಂಡು ಹೋಗುವುದರಿಂದ ಶಾಲೆ ಬಿಟ್ಟ ಮಕ್ಕಳ ಸಂಖ್ಯೆ, ಶಾಲೆಯಿಂದ ಹೊರಗುಳಿದ ಮಕ್ಕಳು, ಉನ್ನತ ಶಿಕ್ಷಣದಿಂದ ವಂಚಿತರಾಗುವ ಮಕ್ಕಳ ಸಂಖ್ಯೆ ಜಾಸ್ತಿಯಾಗುತ್ತ ಬಂದಿದೆ. ಇತ್ತೀಚಿಗೆ ಬಂದ 2018-19ನೇ ಸಾಲಿನ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ವರದಿಯ ಪ್ರಕಾರ ದೇಶದ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ಅನುಪಾತ (Gross Enrollment Ratio) ಶೇ 26.3 ರಷ್ಟಿದೆ, ರಾಜ್ಯದ ಉಇಖ ಸರಾಸರಿ ಅನುಪಾತ ಶೇ 28.2 ರಷ್ಟಿದೆ. ಅದೇರೀತಿ ಹೈದ್ರಾಬಾದ ಕರ್ನಾಟಕದ ಈ ಆರು ಜಿಲ್ಲೆಗಳ ಉಇಖ ಕೇವಲ ಶೇ 10.14 ಎಂದು ವರದಿಯಾಗಿದೆ. ಅದರಲ್ಲಿಯೂ ಯಾದಗೀರಿ ಜಿಲ್ಲೆಯ ಉಇಖ ರಾಷ್ಟ್ರಮಟ್ಟದಲ್ಲಿಯೇ ಅತ್ಯಂತ ಕಡಿಮೆ ಅಂದರೆ ಕೇವಲ ಶೇ 4.07 ಇರುವುದು ಸರಕಾರದ ನಡೆಗೆ ಹಿಡಿದ ಕನ್ನಡಿಯಾಗಿದೆ.

ಇದನ್ನೂ ಓದಿ: ಮೀಸಲಾತಿ ಮತ್ತು ಆರ್ಥಿಕತೆ : ಡಾ. ಬಿ.ಸಿ ಬಸವರಾಜ್

ಹೈದ್ರಾಬಾದ ಕರ್ನಾಟಕ ಪ್ರದೇಶದಲ್ಲಿ ಮಾನವ ಆರೋಗ್ಯ ಮತ್ತು ಪಶು ಆರೋಗ್ಯ ಸೇವೆಗಳ ಪರಿಸ್ಥಿತಿ ಭಿನ್ನವಾಗಿಲ್ಲ. ಕನಿಷ್ಠ ತಾಲ್ಲೂಕು ಆಸ್ಪತ್ರೆಯಲ್ಲಿಯೂ ಕೂಡ ವೈದ್ಯರಿಲ್ಲದ ಪರಿಸ್ಥಿತಿಯಿದೆ. ಗ್ರಾಮೀಣ ಭಾಗದಲ್ಲಿ ಸ್ಟಾಫ್ ನರ್ಸ್‍ಗಳೇ ವೈದ್ಯರಾಗಿ ಸೇವೆ ಸಲ್ಲಿಸುವಂತಹ ಪರಿಸ್ಥಿತಿಯಿದೆ. ಒಟ್ಟಾರೆಯಾಗಿ ಆರೋಗ್ಯ ಸೇವೆ ಅತ್ಯಂತ ಕೆಳಮಟ್ಟದಲ್ಲಿವೆ ಎಂದು ಹಲವಾರು ವರದಿಗಳು ಸರಕಾರಕ್ಕೆ ಹೇಳಿವೆಯಾದರೂ ಸರಕಾರ ಯಾವುದೇ ಕ್ರಮ ಕೈಗೊಂಡಿರುವ ಉದಾಹರಣೆ ಇಲ್ಲ. ತಾಲ್ಲೂಕು ಕೇಂದ್ರದಲ್ಲಿ ಮಾತ್ರ ಹೆರಿಗೆ ಆಸ್ಪತ್ರೆಯಿರುವುದರಿಂದ ಶೇ.70ರಷ್ಟು ಹೆರಿಗೆಗಳು ಈ ಭಾಗದಲ್ಲಿ ಅಸುರಕ್ಷಿತವಾಗಿ ನಡೆಯುತ್ತಿವೆ ಎಂದು ಹೇಳಲಾಗಿದೆ. ಬಡತನ, ಅನಕ್ಷರತೆ ಕಾರಣದಿಂದ ಶೇ.57ರಷ್ಟು ತಾಯಂದಿರು ಹಾಗೂ ಶೇ.65ರಷ್ಟು ಮಕ್ಕಳು ಅಪೌಷ್ಠಿಕಾಂಶದಿಂದ ಬಳಲುತ್ತಿದ್ದಾರೆ. ಇಂತಹ ಸ್ಥಿತಿ ಇದ್ದಾಗಲೂ ಕರ್ನಾಟಕ ರಾಜ್ಯದ ಘನ ಸರಕಾರ ಯಾವುದೇ ದೂರದೃಷ್ಟಿಯುಳ್ಳ ಕಾರ್ಯಕ್ರಮ, ಯೋಜನೆಗಳನ್ನು ರೂಪಿಸಲಿಲ್ಲ.

ಹೈದ್ರಾಬಾದ ಕರ್ನಾಟಕ ಪ್ರದೇಶವು ನೈಸರ್ಗಿಕವಾಗಿ ಅತ್ಯಂತ ಸಂಪದ್ಭರಿತ ಪ್ರದೇಶವಾಗಿದೆ, ಇಲ್ಲಿ ನೈಸರ್ಗಿಕವಾಗಿ ಸಿಗುವ ಖನಿಜ ಸಂಪತ್ತು ವಿಶೇಷವಾಗಿ ಕಬ್ಬಿಣದ ಅದಿರು, ತಾಮ್ರದ ಅದಿರು, ರಾಜ್ಯದಲ್ಲಿ ಚಿನ್ನದ ಅದಿರು ಸಿಗುವ ಏಕೈಕ ಗಣಿ ಪ್ರದೇಶ ಹಟ್ಟಿ ಚಿನ್ನದ ಗಣಿ, ಗುಲ್ಬರ್ಗಾ ಜಿಲ್ಲೆಯಲ್ಲಿ ಸುಣ್ಣದ ಕಲ್ಲು, ಇತ್ತೀಚಿಗೆ ಶಹಾಪುರ ತಾಲ್ಲೂಕಿನ ಗೋಗಿಯಲ್ಲಿ ಯುರೇನಿಯಂ ಅದಿರು ಸಿಗುತ್ತಿದೆ ಎನ್ನಲಾಗಿದೆ. ಅದೇರೀತಿ ಅತೀಹೆಚ್ಚು ನದಿಗಳು ಈ ಭಾಗದಲ್ಲಿವೆ. ಈ ಪ್ರದೇಶವು ಕೃಷ್ಣ ಮತ್ತು ಗೋದಾವರಿ ನದಿ ಪಾತ್ರ ಹೊಂದಿದ್ದು ಸಾಕಷ್ಟು ನೀರು ಪ್ರತಿವರ್ಷ ಹರಿಯುತ್ತದೆ. ಆದರೆ, ಈ ನೀರು ರೈತರ ಹೊಲಗಳಿಗೆ ಹರಿಯುವಂತಹ ಯೋಜನೆಗಳ ಕುರಿತು ರಾಜಕೀಯ ಪಕ್ಷಗಳು ಮಾತನಾಡುತ್ತವೆ ಹೊರತು ಕಾರ್ಯರೂಪಕ್ಕೆ ತರುವುದಿಲ್ಲ. ಮಳೆಗಾಲದಲ್ಲಿ ಸಾವಿರಾರು ಟಿ.ಎಂ.ಸಿ. ಅಡಿ ನೀರು ನದಿಗಳಲ್ಲಿ ಹರಿಯುವುದನ್ನು ನೋಡಿ ಯಾರಿಗಾದರೂ ಹೊಟ್ಟೆಗೆ ಬೆಂಕಿ ಬೀಳದೆ ಇರಲಿಕ್ಕೆ ಸಾಧ್ಯವಿಲ್ಲ. ಯಾಕೆಂದರೆ ರಾಜ್ಯದ ಇತರೆ ಪ್ರದೇಶದಲ್ಲಿ ಕೇವಲ ಒಂದು-ಎರಡು ಟಿ.ಎಂ.ಸಿ. ಅಡಿ ನೀರಿಗೆ ರಕ್ತಸಿಕ್ತ ಹೋರಾಟ ಮಾಡಿದ್ದನ್ನು ನೋಡಿದ್ದೇವೆ. ಕೃಷ್ಣ ಬಿ-ಸ್ಕೀಂ ಅಡಿಯಲ್ಲಿ 170 ಟಿ.ಎಂ.ಸಿ. ಅಡಿ ನೀರು ಕರ್ನಾಟಕ ರಾಜ್ಯಕ್ಕೆ ಹಂಚಿಕೆ ಮಾಡಿ ತೀರ್ಪು ಪ್ರಕಟವಾಗಿ ದಶಕವಾಗುತ್ತ ಬಂದರೂ ಅದನ್ನು ಗೆಜೆಟ್‍ನಲ್ಲಿ ಇಲ್ಲಿಯವರೆಗೂ ಪ್ರಕಟಿಸದೇ ಇರುವದರಿಂದ ಕೃಷ್ಣ ನದಿ ನೀರು ಬಳಕೆ ಮಾಡಲು ಈ ಭಾಗಕ್ಕೆ ಸಾಧ್ಯವಾಗಿಲ್ಲ.

ರಾಜ್ಯ ಸರಕಾರ ನಿರ್ದಿಷ್ಟ ಯೋಜನೆಯೊಂದನ್ನು ರೂಪಿಸಿ ಇಲ್ಲಿ ಸಿಗುವ ನೈಸರ್ಗಿಕ ಸಂಪನ್ಮೂಲವನ್ನೇ ಸಮರ್ಪಕವಾಗಿ ಬಳಕೆ ಮಾಡಿ ಉದ್ಯೋಗ ಸೃಷ್ಟಿ ಮಾಡಿದಲ್ಲಿ ಗುಳೆ ಹೋಗುವ ವ್ಯವಸ್ಥೆಯನ್ನು ತಡೆಯಬಹುದು, ಅದೇರೀತಿ ಈ ಭಾಗದಲ್ಲಿ ಲಭ್ಯವಿರುವ ನೀರನ್ನು ವಿವಿಧ ನೀರಾವರಿ ಯೋಜನೆಗಳ ಮೂಲಕ ಕಾಲಮಿತಿಯೊಳಗೆ ಪೂರ್ಣಗೊಳಿಸಿದಲ್ಲಿ ರಾಜ್ಯಕ್ಕೆ, ದೇಶಕ್ಕೆ ಆಹಾರ ಉತ್ಪಾದಿಸುವ ಕಣಜವಾಗಿ ಈ ಪ್ರದೇಶ ಬದಲಾಗುವದರ ಜೊತೆಗೆ ಜನರ ಜೀವನಮಟ್ಟ ಸುಧಾರಣೆಯಾಗುವದರಲ್ಲಿ ಸಂಶಯವಿಲ್ಲ.

ಹೈದ್ರಾಬಾದ ಕರ್ನಾಟಕ ಭಾಗದಲ್ಲಿ ಸರಕಾರ ಹಲವಾರು ಸರಕಾರಿ ಸೌಮ್ಯದ ಕಾರ್ಖಾನೆಗಳನ್ನು ಸ್ಥಾಪಿಸಿದೆ. ಅವುಗಳಲ್ಲಿ ವಿಶೇಷವಾಗಿ ಹಟ್ಟಿ ಚಿನ್ನದ ಗಣಿ, ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರ, ಯರಮರಸ್ ಶಾಖೋತ್ಪನ್ನ ವಿದ್ಯುತ ಕೇಂದ್ರ, ಬಳ್ಳಾರಿ ಶಾಖೋತ್ಪನ್ನ ವಿದ್ಯುತ ಕೇಂದ್ರಗಳಿದ್ದು, ಈ ಕೈಗಾರಿಕೆಗಳಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿದ್ದರೂ ಬೇರೆ ರಾಜ್ಯ, ಬೇರೆ ಭಾಗದಿಂದ ಬಂದವರಿಗೆ ಇಲ್ಲಿ ಉದ್ಯೋಗ ನೀಡಿರುವುದರಿಂದ ಸ್ಥಳೀಯರೂ ಜಮೀನು, ನೀರು, ವಾತಾವರಣ ಕಳೆದುಕೊಂಡು ಕೂಡುವಂತಾಗಿದೆ. ಹಲವಾರು ಖಾಸಗಿ ಕೈಗಾರಿಕೆಗಳು ಈ ಭಾಗದಲ್ಲಿದ್ದರೂ ಅವುಗಳಲ್ಲಿಯೂ ಕೇವಲ ದಿನಗೂಲಿ ಅಥವಾ ಡಿ-ಗ್ರೂಪ್ ಹುದ್ದೆಗಳಿಗೆ ಮಾತ್ರ ಸ್ಥಳೀಯರಿಗೆ ಅದೂ ಕಡಿಮೆ ಅವಕಾಶ ನೀಡಲಾಗಿದೆ. ಹೀಗಾಗಿ ಉದ್ಯೋಗಾವಕಾಶ ಇಲ್ಲದೇ ಸಾಕಷ್ಟು ಜನ ವಿದ್ಯಾವಂತರೂ ಸಹ ಗುಳೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ.

ಈ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಮಂಜೂರಾಗಿರುವ ಸರಕಾರಿ ಹುದ್ದೆಗಳು ಸಹ ಬೇರೆ ಭಾಗದವರ ಪಾಲಾಗಿರುವುದು ಸತ್ಯ. ಪ್ರಾಥಮಿಕ ಶಾಲಾಶಿಕ್ಷಕರ ಹುದ್ದೆಗಳಲ್ಲಿ ಶೇ.80ರಷ್ಟು ಶಿಕ್ಷಕರು, ಪ್ರೌಢ ಶಾಲಾ ವಿಭಾಗದಲ್ಲಿ ಶೇ 51 ರಷ್ಟು ಶಿಕ್ಷಕರು, ವಿಶ್ವವಿದ್ಯಾಲಯಗಳಲ್ಲಿ ಶೇ 75 ರಷ್ಟು ಹುದ್ದೆಗಳು, ಬಹುತೇಕ ಇಲಾಖೆಗಳ ಅಧಿಕಾರಿಗಳು ಬೇರೆ ಭಾಗದವರೇ ಇಲ್ಲಿ ಕೆಲಸ ಮಾಡುತ್ತ ಬಂದಿದ್ದಾರೆ. 2014ಕ್ಕಿಂತ ಮುಂಚೆ ಕರ್ನಾಟಕ ಸರಕಾರದಿಂದ ನೇರವಾಗಿ ಕೆ.ಎ.ಎಸ್ ಪರೀಕ್ಷೆ ಬರೆದು ಕಂದಾಯ ಇಲಾಖೆಯಲ್ಲಿ ತಹಸೀಲ್ದಾರ, ಸಹಾಯಕ ಆಯುಕ್ತ, ಅಪರ ಜಿಲ್ಲಾಧಿಕಾರಿ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಹೈ-ಕ ಪ್ರದೇಶದ ಅಧಿಕಾರಿಗಳು ಕೇವಲ 19 ಜನ ಮಾತ್ರ, ಅದೇ ಸಂದರ್ಭದಲ್ಲಿ ಚಿತ್ರದುರ್ಗ ಒಂದು ಜಿಲ್ಲೆಯಿಂದ 21 ಜನ ಅಧಿಕಾರಿಗಳು ಕಂದಾಯ ಇಲಾಖೆಯಲ್ಲಿ ನೇರ ನೇಮಕಾತಿ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವದು ಕಂಡುಬಂದಿದೆ. ಅಂದರೆ, ಕಳೆದ 70 ವರ್ಷಗಳಿಂದ ಈ ಭಾಗ ಎಷ್ಟೊಂದು ನಲುಗಿ ಹೋಗಿದೆ ಎನ್ನುವದಕ್ಕೆ ಇದೊಂದು ಉದಾಹರಣೆ.

ಅದೇರೀತಿ ಕರ್ನಾಟಕ ರಾಜ್ಯದ ಆಡಳಿತ ಕೇಂದ್ರವಾಗಿರುವ ವಿಧಾನಸೌಧ, ವಿಕಾಸಸೌಧ, ಬಹುಮಹಡಿಗಳ ಕಟ್ಟಡ ಇತ್ಯಾದಿ ಸಚಿವಾಲಯಗಳಲ್ಲಿ ಕೆಲಸ ಮಾಡುತ್ತಿರುವ ಒಟ್ಟು ಸಿಬ್ಬಂದಿಗಳ ಸಂಖ್ಯೆ 3885 ಜನ, ಅದರಲ್ಲಿ ಕೇವಲ 37 ಜನ ಮಾತ್ರ ಹೈ-ಕ ಪ್ರದೇಶದ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಅಂದರೆ, ಶೆ 1 ಕ್ಕಿಂತ ಕಡಿಮೆ ನೌಕರರು ಹೈ-ಕ ಭಾಗದವರು. ಈ ಎಲ್ಲ ಕಾರಣಗಳಿಂದಾಗಿ ಸಂವಿಧಾನದ ಅನುಚ್ಛೇದ 371 ತಿದ್ದುಪಡಿಗಾಗಿ ಬಹುದಿನಗಳ ಕಾಲ ಸುದೀರ್ಘ ಹೋರಾಟ ನಡೆದು, ಕೊನೆಗೂ ಡಿಸೆಂಬರ್ 2012ರಲ್ಲಿ ಅನುಚ್ಛೇದ 371ರ ತಿದ್ದುಪಡಿಯ ಮೂಲಕ ಹೈದ್ರಾಬಾದ ಕರ್ನಾಟಕವನ್ನು ಸಂವಿಧಾನದ ಅನುಚ್ಛೇದ 371ಜೆ ಅಡಿಯಲ್ಲಿ ಸೇರಿಸಲಾಯಿತು.

ಕಳೆದ ಆರು ವರ್ಷಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಸಾಕಷ್ಟು ಬದಲಾವಣೆಗಳು ಆಗಿವೆ, ಅದರಂತೆ ಹೈದ್ರಾಬಾದ ಕರ್ನಾಟಕದಲ್ಲಿಯೂ ಬದಲಾವಣೆಗಳಾಗುತ್ತಿವೆ. ಆದರೆ, ಅನುಚ್ಛೇದ 371ಜೆ ಈ ಭಾಗಕ್ಕೆ ಬಂದಿರುವ ಸಂವಿಧಾನಬದ್ದ ಹಕ್ಕು ಎನ್ನುವುದನ್ನು ಮರೆತಿರುವ ಸರಕಾರ ಮತ್ತು ನಾವು ಬಂದಷ್ಟು ಬಂತು ಪಂಚಾಮೃತವೆಂದು ಬಳಸುತ್ತಿದ್ದೇವೆ. ಕನಿಷ್ಠ ಒಂದು 371ಜೆ ಅರ್ಹತಾ ಪ್ರಮಾಣಪತ್ರವೂ ಸಹ ಹಕ್ಕುಬದ್ಧವಾಗಿ ಪಡೆಯಲು ಸಾಧ್ಯವಾಗದೇ ಕಚೇರಿಯಿಂದ ಕಚೇರಿಗೆ ಅಲೆಯುತ್ತ ಮೂರು-ಮೂರು ತಿಂಗಳಾದರೂ ಪಡೆಯದೇ ಕೊರಗುವಂತಾಗಿದೆ ನಮ್ಮ ಪರಿಸ್ಥಿತಿ. ಇದಕ್ಕೆ ಮೂಲಕಾರಣ, ನಮ್ಮ ಭಾಗದ ವಿದ್ಯಾವಂತ ಜನ 371ಜೆ ಕಾನೂನನ್ನು ಅರ್ಥಮಾಡಿಕೊಳ್ಳಲು ವಿಫಲವಾಗಿರುವುದು ಮತ್ತು ಯಾವುದೇ ಕಾನೂನು ನಮ್ಮ ದೇಶದಲ್ಲಿ ಸಮರ್ಪಕವಾಗಿ ಜಾರಿಯಾಗಬೇಕೆಂದರೆ ಅದನ್ನು ಸರಿಯಾಗಿ ಅರ್ಥಮಾಡಿಕೊಳ್ಳಬೇಕು. ಅದರಲ್ಲಿರುವ ಪ್ರತಿಯೊಂದು ಅಂಶವೂ ಮನವರಿಕೆ ಮಾಡಿಕೊಂಡಾಗ ಮಾತ್ರ ಸಾಧ್ಯವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...

ಲೆಬನಾನ್ ಮೇಲೆ ದಾಳಿ ಮುಂದುವರಿಸಿದ ಇಸ್ರೇಲ್ : 2 ಸಾವಿರ ದಾಟಿದ ಮೃತರ ಸಂಖ್ಯೆ

ಮಾರ್ಚ್ 2ರಿಂದ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 2,020 ಜನರು ಸಾವನ್ನಪ್ಪಿದ್ದಾರೆ ಮತ್ತು 6,436 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಸಾವನ್ನಪ್ಪಿದವರಲ್ಲಿ 165 ಮಕ್ಕಳು, 248 ಮಹಿಳೆಯರು ಮತ್ತು 85...

ಪ. ಬಂಗಾಳ ಚುನಾವಣೆ | ಭವಾನಿಪುರದಲ್ಲಿ ನನ್ನ ನಾಮಪತ್ರ ರದ್ದತಿಗೆ ಪಿತೂರಿ ನಡೆದಿತ್ತು : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ನಾಮಪತ್ರವನ್ನು ರದ್ದುಗೊಳಿಸಲು ಉದ್ದೇಶಪೂರ್ವಕ ಪಿತೂರಿ ನಡೆದಿತ್ತು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. "ನಮ್ಮ ಹೋರಾಟ ಬಿಜೆಪಿ ವಿರುದ್ಧವಲ್ಲ; ವ್ಯವಸ್ಥೆಯಲ್ಲಿರುವ ದೋಷಗಳ ವಿರುದ್ಧ. ನನ್ನ ಸ್ವಂತ...

ಇಸ್ರೇಲ್‌ನಾದ್ಯಂತ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತ ವಿರುದ್ಧ ಬೀದಿಗಿಳಿದ ಜನ

ಗಾಝಾದಲ್ಲಿ ಸುಮಾರು 80 ಸಾವಿರದಷ್ಟು ಜನರನ್ನು ಹತ್ಯೆಗೈದ ಬಳಿಕ, ಈಗ ಲೆಬನಾನ್ ಮತ್ತು ಇರಾನ್ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್‌ನ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಅಲ್ಲಿನ ನಾಗರಿಕರು ಬೀದಿಗಿಳಿದಿದ್ದಾರೆ. ನೆತನ್ಯಾಹು ಆಡಳಿತದ...