Homeಕರ್ನಾಟಕ371J ಹೈದರಾಬಾದ್‌ ಕರ್ನಾಟಕ ಮೀಸಲಾತಿ: ಸಾಧಕ ಬಾಧಕಗಳು - ಡಾ.ರಝಾಕ ಉಸ್ತಾದ

371J ಹೈದರಾಬಾದ್‌ ಕರ್ನಾಟಕ ಮೀಸಲಾತಿ: ಸಾಧಕ ಬಾಧಕಗಳು – ಡಾ.ರಝಾಕ ಉಸ್ತಾದ

ಹೈದ್ರಾಬಾದ ಕರ್ನಾಟಕ ಪ್ರದೇಶವು ಕರ್ನಾಟಕ ರಾಜ್ಯದ ಆಡಳಿತಕ್ಕೆ ಒಳಪಟ್ಟು 70 ವರ್ಷಗಳಾಗುತ್ತ ಬಂದರೂ ಇಂದಿಗೂ ಅಭಿವೃದ್ಧಿ ಮರೀಚಿಕೆಯಾಗಿದೆ. ಈ ಭಾಗವು ವಿಶೇಷವಾಗಿ ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯ, ಸಾರ್ವಜನಿಕ ಸೇವೆಗಳು, ಮಾನವ ಅಭಿವೃದ್ಧಿ ಪೂರಕ ವಾತಾವರಣದಿಂದ ಹಿನ್ನಡೆ ಅನುಭವಿಸಿದೆ.

- Advertisement -
- Advertisement -

ಮೀಸಲಾತಿ ಕಣ್ಣಗಾಯಕ್ಕೊಂದು ಕನ್ನಡಿ

ಸರಣಿ ಸಂಪಾದಕರು: ವಿಕಾಸ್‌ ಆರ್‌ ಮೌರ್ಯ

ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲಿ 560ಕ್ಕೂ ಹೆಚ್ಚು ರಾಜಮಹಾರಾಜರ ಸಂಸ್ಥಾನಗಳನ್ನು ಹೊಂದಿದ್ದ ಈ ದೇಶದಲ್ಲಿ ಭೌತಿಕ ಅಭಿವೃದ್ಧಿಯಾಗಲೀ, ಸಾಮಾಜಿಕ ವ್ಯವಸ್ಥೆಯಾಗಲಿ, ಸಾಂಸ್ಕøತಿಕವಾಗಿಯಾಗಲಿ, ಶೈಕ್ಷಣಿಕವಾಗಿಯಾಗಲಿ ಏಕರೀತಿಯಾಗಿ ಇರಲಿಲ್ಲ. ಈ ವಿಭಿನ್ನ ದೃಷ್ಟಿಕೋನದ ಭಾರತವು ಒಂದು ಮಾನದಂಡದಲ್ಲಿ ಒಂದಾಗುವದು ಭವಿಷ್ಯದ ದೃಷ್ಟಿಯಿಂದ ಅವಶ್ಯಕತೆಯಿದ್ದ ಕಾರಣ ಸಂವಿಧಾನ ನಿರ್ಮಾತೃಗಳು ಸಂವಿಧಾನ ರಚನೆ ಸಂದರ್ಭದಲ್ಲಿ ಯಾವುದೇ ರಾಜ್ಯದಲ್ಲಿ ಒಂದು ಪ್ರದೇಶ ಮತ್ತೊಂದು ಪ್ರದೇಶಕ್ಕಿಂತ ಅಭಿವೃದ್ಧಿಯಲ್ಲಿ, ಶಿಕ್ಷಣದಲ್ಲಿ ವಿಭಿನ್ನವಾಗಿದ್ದರೆ ಅಂತಹ ರಾಜ್ಯಗಳಲ್ಲಿ ಆ ಒಂದು ಪ್ರದೇಶಕ್ಕೆ ವಿಶೇಷ ಕಾನೂನು ರಚನೆ ಮಾಡುವ ಅಧಿಕಾರವನ್ನು ಸಂವಿಧಾನದ ಅನುಚ್ಛೇದ 371 ರಲ್ಲಿ ನೀಡಲಾಗಿದೆ. ಅದರ ಆಧಾರದಲ್ಲಿ ಈಗಾಗಲೇ ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್, ಅಸ್ಸಾಂ, ನಾಗಾಲ್ಯಾಂಡ, ಒಡಿಸ್ಸಾ, ಮಿಜೋರಾಂ, ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯ, ತ್ರಿಪುರಾ ಹಾಗೂ ಗೋವಾ ರಾಜ್ಯಗಳಿಗೆ ಅನುಚ್ಛೇದ 371ರ ಅಡಿಯಲ್ಲಿ ವಿಶೇಷ ಕಾನೂನು ರಚಿಸಲು ಅವಕಾಶ ನೀಡಲಾಗಿದೆ.

ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಮತ್ತು 1956 ರವರೆಗೆ ಹೈದ್ರಾಬಾದ್ ರಾಜ್ಯದ ಅಧೀನದಲ್ಲಿ ಇದ್ದಂತಹ ಹೈದ್ರಾಬಾದ ಕರ್ನಾಟಕ (ಬೀದರ, ಗುಲ್ಬರ್ಗಾ, ಯಾದಗೀರ, ರಾಯಚೂರು ಮತ್ತು ಕೊಪ್ಪಳ) ಪ್ರದೇಶ ರಾಜ್ಯಗಳ ಪುನರ್ವಿಂಗಡನೆಯ ಸಂದರ್ಭದಲ್ಲಿ ಅಂದಿನ ಮೈಸೂರು ರಾಜ್ಯಕ್ಕೆ ಸೇರಿಸಲಾಗಿತ್ತು. ಹೈದ್ರಾಬಾದ ಸಂಸ್ಥಾನದಲ್ಲಿ ಜಾರಿಯಲ್ಲಿದ್ದಂತಹ ಮುಲ್ಕಿ ಕಾನೂನಿನ ಸಂವಿಧಾನದ ಮಾನ್ಯತೆಯನ್ನು ಆಂಧ್ರಪ್ರದೇಶ ರಾಜ್ಯದ ತೆಲಂಗಾಣ ಪ್ರದೇಶಕ್ಕೆ 1957ರಲ್ಲಿ ಸಂವಿಧಾನ ಅನುಚ್ಛೇದ 371(1) ರ ಅಡಿಯಲ್ಲಿ ನೀಡಲಾಗಿತ್ತು, ಅದರಂತೆ, ಹೈದ್ರಾಬಾದ ಸಂಸ್ಥಾನದ ಭಾಗವಾಗಿದ್ದ ಇಂದಿನ ಮಹಾರಾಷ್ಟ್ರದ ಮರಾಠಾವಾಡ ಪ್ರದೇಶವು ಸೇರಿದಂತೆ ವಿದರ್ಭಾ, ಕಚ್, ಸೌರಾಷ್ಟ್ರ ಪ್ರದೇಶಕ್ಕೆ ಅನುಚ್ಛೇದ 371(2) ಅಡಿಯಲ್ಲಿ ಮುಲ್ಕಿ ಕಾನೂನಿನ ಮಾದರಿಯಲ್ಲಿ ವಿಶೇಷ ಕಾನೂನು ರಚನೆ ಅಧಿಕಾರ ನೀಡಲಾಗಿದೆ. ಆದರೆ, 1956ರಲ್ಲಿ ಮೈಸೂರು ರಾಜ್ಯವನ್ನು ಸೇರಿದ ಹೈದ್ರಾಬಾದ ಕರ್ನಾಟಕ ಪ್ರದೇಶಕ್ಕೆ ಮುಲ್ಕಿ ಕಾನೂನಿನ ಸೌಲಭ್ಯ ಸಿಗಲಿಲ್ಲವಾದ್ದರಿಂದ ಈಗ ಅನುಚ್ಛೇದ 371ಜೆ ಅಡಿಯಲ್ಲಿ ಮುಲ್ಕಿ ಕಾನೂನಿನ ಸೌಲಭ್ಯವನ್ನು ವಿಶೇಷ ಕಾನೂನು ಮೂಲಕ ರಚಿಸಲು ಅವಕಾಶ ನೀಡಲಾಗಿದೆ.

ಹೈದ್ರಾಬಾದ ಕರ್ನಾಟಕ ಪ್ರದೇಶವು ಈಗ ಆರು ಜಿಲ್ಲೆಗಳನ್ನೊಳಗೊಂಡ ಕಂದಾಯ ವಿಭಾಗವಾಗಿದ್ದು, ಕರ್ನಾಟಕ ರಾಜ್ಯದ ಆಡಳಿತಕ್ಕೆ ಒಳಪಟ್ಟು 70 ವರ್ಷಗಳಾಗುತ್ತ ಬಂದರೂ ಇಂದಿಗೂ ಅಭಿವೃದ್ದಿ ಮರೀಚಿಕೆಯಾಗಿದೆ. ಈ ಭಾಗವು ವಿಶೇಷವಾಗಿ ಶಿಕ್ಷಣ, ಆರೋಗ್ಯ, ಮೂಲ ಸೌಕರ್ಯ, ಸಾರ್ವಜನಿಕ ಸೇವೆಗಳು, ಮಾನವ ಅಭಿವೃದ್ಧಿ ಪೂರಕ ವಾತಾವರಣದಿಂದ ಹಿನ್ನಡೆ ಅನುಭವಿಸಿದೆ. ಎನ್.ಧರ್ಮಸಿಂಗ ಮುಖ್ಯ ಮಂತ್ರಿಯಾಗುವವರೆಗೆ ಹೈ-ಕ ಪ್ರದೇಶದಲ್ಲಿ ಒಂದೇ ಒಂದು ಸರಕಾರಿ ಮೆಡಿಕಲ್ ಕಾಲೇಜು, ಸರಕಾರಿ ಇಂಜಿನಿಯರಿಂಗ್ ಕಾಲೇಜು ಇರಲಿಲ್ಲ. ಇಂದಿಗೂ ಇಡೀ ಪ್ರದೇಶದಲ್ಲಿ ಒಂದೇ ಒಂದು ಕಾನೂನು ಮಹಾವಿದ್ಯಾಲಯವಿಲ್ಲ, ಯಾವುದೇ ವೃತ್ತಿಪರ ತಾಂತ್ರಿಕ ಅಥವಾ ಕೌಶಲ್ಯ ಅಭಿವೃದ್ಧಿ ಸಂಸ್ಥೆಗಳಿಲ್ಲ.

2011 ರವರೆಗೆ ಕೇವಲ ಒಂದೇ ವಿಶ್ವವಿದ್ಯಾಲಯ ಅದು ಗುಲ್ಬರ್ಗಾ ವಿಶ್ವವಿದ್ಯಾಲಯ ಈ ಭಾಗದ ಉನ್ನತ ಶಿಕ್ಷಣ ಪೂರೈಸುವ ಸಂಸ್ಥೆಯಾಗಿತ್ತು. 2015 ರವರೆಗೆ ಈ ಭಾಗದಲ್ಲಿ ಇರುವ ಪದವಿ ಮಹಾವಿದ್ಯಾಲಯಗಳಲ್ಲಿ ಶೇ 50 ರಷ್ಟು ಹುದ್ದೆಗಳು ಖಾಲಿ ಇದ್ದವು. ಗ್ರಾಮೀಣ ಭಾಗದ ಯಾವ ಪದವಿ ಪೂರ್ವ ಕಾಲೇಜುಗಳಲ್ಲಿಯೂ ಇಂದಿಗೂ ಪೂರ್ಣ ಪ್ರಮಾಣದ ಉಪನ್ಯಾಸಕರಿಲ್ಲ. 371ಜೆ ಕಾನೂನು ಜಾರಿಯಾಗಿ ಆರು ವರ್ಷವಾದರೂ ಹೈ-ಕ ಪ್ರದೇಶದಲ್ಲಿ 12,000 ಪ್ರಾಥಮಿಕ ಶಾಲಾಶಿಕ್ಷಕರ ಹುದ್ದೆಗಳು ಖಾಲಿ ಇವೆ, 2000 ಪ್ರೌಢಶಾಲಾ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಶೈಕ್ಷಣಿಕ ವ್ಯವಸ್ಥೆ ಇದ್ದೂ ಇಲ್ಲದಂತಾಗಿರುವದು ಈ ಭಾಗದ ದುರಂತವೇ ಸರಿ. ಇಂತಹ ವ್ಯವಸ್ಥೆಯಲ್ಲಿ ಓದಿದಂತಹ ಈ ಭಾಗದ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಾವ ರೀತಿ ಭಾಗವಹಿಸಲು ಸಾಧ್ಯ?

ಹೈದ್ರಾಬಾದ ಕರ್ನಾಟಕ ಪ್ರದೇಶದಲ್ಲಿ ಇರುವಂತಹ ಬಡತನ, ನಿರುದ್ಯೋಗ ಮತ್ತು ಉದ್ಯೋಗ ಅವಕಾಶ ಇಲ್ಲದಿರುವ ಕಾರಣದಿಂದ ಬಹುತೇಕ ಗ್ರಾಮೀಣ ಭಾಗದ ಜನ ಪ್ರತಿವರ್ಷ ಮಹಾನಗರಗಳಿಗೆ ಕುಟುಂಬ ಸಮೇತ ಗುಳೆ ಹೋಗುವ ಪರಿಸ್ಥಿತಿ ಇದೆ. ಈ ಗುಳೆ ಹೋಗುವ ಕಾರಣಕ್ಕೆ ತಮ್ಮ ಜೊತೆಗೆ ಪಾಲಕರು ತಮ್ಮ ಮಕ್ಕಳನ್ನು ಕರೆದುಕೊಂಡು ಹೋಗುವುದರಿಂದ ಶಾಲೆ ಬಿಟ್ಟ ಮಕ್ಕಳ ಸಂಖ್ಯೆ, ಶಾಲೆಯಿಂದ ಹೊರಗುಳಿದ ಮಕ್ಕಳು, ಉನ್ನತ ಶಿಕ್ಷಣದಿಂದ ವಂಚಿತರಾಗುವ ಮಕ್ಕಳ ಸಂಖ್ಯೆ ಜಾಸ್ತಿಯಾಗುತ್ತ ಬಂದಿದೆ. ಇತ್ತೀಚಿಗೆ ಬಂದ 2018-19ನೇ ಸಾಲಿನ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ವರದಿಯ ಪ್ರಕಾರ ದೇಶದ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ಅನುಪಾತ (Gross Enrollment Ratio) ಶೇ 26.3 ರಷ್ಟಿದೆ, ರಾಜ್ಯದ ಉಇಖ ಸರಾಸರಿ ಅನುಪಾತ ಶೇ 28.2 ರಷ್ಟಿದೆ. ಅದೇರೀತಿ ಹೈದ್ರಾಬಾದ ಕರ್ನಾಟಕದ ಈ ಆರು ಜಿಲ್ಲೆಗಳ ಉಇಖ ಕೇವಲ ಶೇ 10.14 ಎಂದು ವರದಿಯಾಗಿದೆ. ಅದರಲ್ಲಿಯೂ ಯಾದಗೀರಿ ಜಿಲ್ಲೆಯ ಉಇಖ ರಾಷ್ಟ್ರಮಟ್ಟದಲ್ಲಿಯೇ ಅತ್ಯಂತ ಕಡಿಮೆ ಅಂದರೆ ಕೇವಲ ಶೇ 4.07 ಇರುವುದು ಸರಕಾರದ ನಡೆಗೆ ಹಿಡಿದ ಕನ್ನಡಿಯಾಗಿದೆ.

ಇದನ್ನೂ ಓದಿ: ಮೀಸಲಾತಿ ಮತ್ತು ಆರ್ಥಿಕತೆ : ಡಾ. ಬಿ.ಸಿ ಬಸವರಾಜ್

ಹೈದ್ರಾಬಾದ ಕರ್ನಾಟಕ ಪ್ರದೇಶದಲ್ಲಿ ಮಾನವ ಆರೋಗ್ಯ ಮತ್ತು ಪಶು ಆರೋಗ್ಯ ಸೇವೆಗಳ ಪರಿಸ್ಥಿತಿ ಭಿನ್ನವಾಗಿಲ್ಲ. ಕನಿಷ್ಠ ತಾಲ್ಲೂಕು ಆಸ್ಪತ್ರೆಯಲ್ಲಿಯೂ ಕೂಡ ವೈದ್ಯರಿಲ್ಲದ ಪರಿಸ್ಥಿತಿಯಿದೆ. ಗ್ರಾಮೀಣ ಭಾಗದಲ್ಲಿ ಸ್ಟಾಫ್ ನರ್ಸ್‍ಗಳೇ ವೈದ್ಯರಾಗಿ ಸೇವೆ ಸಲ್ಲಿಸುವಂತಹ ಪರಿಸ್ಥಿತಿಯಿದೆ. ಒಟ್ಟಾರೆಯಾಗಿ ಆರೋಗ್ಯ ಸೇವೆ ಅತ್ಯಂತ ಕೆಳಮಟ್ಟದಲ್ಲಿವೆ ಎಂದು ಹಲವಾರು ವರದಿಗಳು ಸರಕಾರಕ್ಕೆ ಹೇಳಿವೆಯಾದರೂ ಸರಕಾರ ಯಾವುದೇ ಕ್ರಮ ಕೈಗೊಂಡಿರುವ ಉದಾಹರಣೆ ಇಲ್ಲ. ತಾಲ್ಲೂಕು ಕೇಂದ್ರದಲ್ಲಿ ಮಾತ್ರ ಹೆರಿಗೆ ಆಸ್ಪತ್ರೆಯಿರುವುದರಿಂದ ಶೇ.70ರಷ್ಟು ಹೆರಿಗೆಗಳು ಈ ಭಾಗದಲ್ಲಿ ಅಸುರಕ್ಷಿತವಾಗಿ ನಡೆಯುತ್ತಿವೆ ಎಂದು ಹೇಳಲಾಗಿದೆ. ಬಡತನ, ಅನಕ್ಷರತೆ ಕಾರಣದಿಂದ ಶೇ.57ರಷ್ಟು ತಾಯಂದಿರು ಹಾಗೂ ಶೇ.65ರಷ್ಟು ಮಕ್ಕಳು ಅಪೌಷ್ಠಿಕಾಂಶದಿಂದ ಬಳಲುತ್ತಿದ್ದಾರೆ. ಇಂತಹ ಸ್ಥಿತಿ ಇದ್ದಾಗಲೂ ಕರ್ನಾಟಕ ರಾಜ್ಯದ ಘನ ಸರಕಾರ ಯಾವುದೇ ದೂರದೃಷ್ಟಿಯುಳ್ಳ ಕಾರ್ಯಕ್ರಮ, ಯೋಜನೆಗಳನ್ನು ರೂಪಿಸಲಿಲ್ಲ.

ಹೈದ್ರಾಬಾದ ಕರ್ನಾಟಕ ಪ್ರದೇಶವು ನೈಸರ್ಗಿಕವಾಗಿ ಅತ್ಯಂತ ಸಂಪದ್ಭರಿತ ಪ್ರದೇಶವಾಗಿದೆ, ಇಲ್ಲಿ ನೈಸರ್ಗಿಕವಾಗಿ ಸಿಗುವ ಖನಿಜ ಸಂಪತ್ತು ವಿಶೇಷವಾಗಿ ಕಬ್ಬಿಣದ ಅದಿರು, ತಾಮ್ರದ ಅದಿರು, ರಾಜ್ಯದಲ್ಲಿ ಚಿನ್ನದ ಅದಿರು ಸಿಗುವ ಏಕೈಕ ಗಣಿ ಪ್ರದೇಶ ಹಟ್ಟಿ ಚಿನ್ನದ ಗಣಿ, ಗುಲ್ಬರ್ಗಾ ಜಿಲ್ಲೆಯಲ್ಲಿ ಸುಣ್ಣದ ಕಲ್ಲು, ಇತ್ತೀಚಿಗೆ ಶಹಾಪುರ ತಾಲ್ಲೂಕಿನ ಗೋಗಿಯಲ್ಲಿ ಯುರೇನಿಯಂ ಅದಿರು ಸಿಗುತ್ತಿದೆ ಎನ್ನಲಾಗಿದೆ. ಅದೇರೀತಿ ಅತೀಹೆಚ್ಚು ನದಿಗಳು ಈ ಭಾಗದಲ್ಲಿವೆ. ಈ ಪ್ರದೇಶವು ಕೃಷ್ಣ ಮತ್ತು ಗೋದಾವರಿ ನದಿ ಪಾತ್ರ ಹೊಂದಿದ್ದು ಸಾಕಷ್ಟು ನೀರು ಪ್ರತಿವರ್ಷ ಹರಿಯುತ್ತದೆ. ಆದರೆ, ಈ ನೀರು ರೈತರ ಹೊಲಗಳಿಗೆ ಹರಿಯುವಂತಹ ಯೋಜನೆಗಳ ಕುರಿತು ರಾಜಕೀಯ ಪಕ್ಷಗಳು ಮಾತನಾಡುತ್ತವೆ ಹೊರತು ಕಾರ್ಯರೂಪಕ್ಕೆ ತರುವುದಿಲ್ಲ. ಮಳೆಗಾಲದಲ್ಲಿ ಸಾವಿರಾರು ಟಿ.ಎಂ.ಸಿ. ಅಡಿ ನೀರು ನದಿಗಳಲ್ಲಿ ಹರಿಯುವುದನ್ನು ನೋಡಿ ಯಾರಿಗಾದರೂ ಹೊಟ್ಟೆಗೆ ಬೆಂಕಿ ಬೀಳದೆ ಇರಲಿಕ್ಕೆ ಸಾಧ್ಯವಿಲ್ಲ. ಯಾಕೆಂದರೆ ರಾಜ್ಯದ ಇತರೆ ಪ್ರದೇಶದಲ್ಲಿ ಕೇವಲ ಒಂದು-ಎರಡು ಟಿ.ಎಂ.ಸಿ. ಅಡಿ ನೀರಿಗೆ ರಕ್ತಸಿಕ್ತ ಹೋರಾಟ ಮಾಡಿದ್ದನ್ನು ನೋಡಿದ್ದೇವೆ. ಕೃಷ್ಣ ಬಿ-ಸ್ಕೀಂ ಅಡಿಯಲ್ಲಿ 170 ಟಿ.ಎಂ.ಸಿ. ಅಡಿ ನೀರು ಕರ್ನಾಟಕ ರಾಜ್ಯಕ್ಕೆ ಹಂಚಿಕೆ ಮಾಡಿ ತೀರ್ಪು ಪ್ರಕಟವಾಗಿ ದಶಕವಾಗುತ್ತ ಬಂದರೂ ಅದನ್ನು ಗೆಜೆಟ್‍ನಲ್ಲಿ ಇಲ್ಲಿಯವರೆಗೂ ಪ್ರಕಟಿಸದೇ ಇರುವದರಿಂದ ಕೃಷ್ಣ ನದಿ ನೀರು ಬಳಕೆ ಮಾಡಲು ಈ ಭಾಗಕ್ಕೆ ಸಾಧ್ಯವಾಗಿಲ್ಲ.

ರಾಜ್ಯ ಸರಕಾರ ನಿರ್ದಿಷ್ಟ ಯೋಜನೆಯೊಂದನ್ನು ರೂಪಿಸಿ ಇಲ್ಲಿ ಸಿಗುವ ನೈಸರ್ಗಿಕ ಸಂಪನ್ಮೂಲವನ್ನೇ ಸಮರ್ಪಕವಾಗಿ ಬಳಕೆ ಮಾಡಿ ಉದ್ಯೋಗ ಸೃಷ್ಟಿ ಮಾಡಿದಲ್ಲಿ ಗುಳೆ ಹೋಗುವ ವ್ಯವಸ್ಥೆಯನ್ನು ತಡೆಯಬಹುದು, ಅದೇರೀತಿ ಈ ಭಾಗದಲ್ಲಿ ಲಭ್ಯವಿರುವ ನೀರನ್ನು ವಿವಿಧ ನೀರಾವರಿ ಯೋಜನೆಗಳ ಮೂಲಕ ಕಾಲಮಿತಿಯೊಳಗೆ ಪೂರ್ಣಗೊಳಿಸಿದಲ್ಲಿ ರಾಜ್ಯಕ್ಕೆ, ದೇಶಕ್ಕೆ ಆಹಾರ ಉತ್ಪಾದಿಸುವ ಕಣಜವಾಗಿ ಈ ಪ್ರದೇಶ ಬದಲಾಗುವದರ ಜೊತೆಗೆ ಜನರ ಜೀವನಮಟ್ಟ ಸುಧಾರಣೆಯಾಗುವದರಲ್ಲಿ ಸಂಶಯವಿಲ್ಲ.

ಹೈದ್ರಾಬಾದ ಕರ್ನಾಟಕ ಭಾಗದಲ್ಲಿ ಸರಕಾರ ಹಲವಾರು ಸರಕಾರಿ ಸೌಮ್ಯದ ಕಾರ್ಖಾನೆಗಳನ್ನು ಸ್ಥಾಪಿಸಿದೆ. ಅವುಗಳಲ್ಲಿ ವಿಶೇಷವಾಗಿ ಹಟ್ಟಿ ಚಿನ್ನದ ಗಣಿ, ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರ, ಯರಮರಸ್ ಶಾಖೋತ್ಪನ್ನ ವಿದ್ಯುತ ಕೇಂದ್ರ, ಬಳ್ಳಾರಿ ಶಾಖೋತ್ಪನ್ನ ವಿದ್ಯುತ ಕೇಂದ್ರಗಳಿದ್ದು, ಈ ಕೈಗಾರಿಕೆಗಳಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿದ್ದರೂ ಬೇರೆ ರಾಜ್ಯ, ಬೇರೆ ಭಾಗದಿಂದ ಬಂದವರಿಗೆ ಇಲ್ಲಿ ಉದ್ಯೋಗ ನೀಡಿರುವುದರಿಂದ ಸ್ಥಳೀಯರೂ ಜಮೀನು, ನೀರು, ವಾತಾವರಣ ಕಳೆದುಕೊಂಡು ಕೂಡುವಂತಾಗಿದೆ. ಹಲವಾರು ಖಾಸಗಿ ಕೈಗಾರಿಕೆಗಳು ಈ ಭಾಗದಲ್ಲಿದ್ದರೂ ಅವುಗಳಲ್ಲಿಯೂ ಕೇವಲ ದಿನಗೂಲಿ ಅಥವಾ ಡಿ-ಗ್ರೂಪ್ ಹುದ್ದೆಗಳಿಗೆ ಮಾತ್ರ ಸ್ಥಳೀಯರಿಗೆ ಅದೂ ಕಡಿಮೆ ಅವಕಾಶ ನೀಡಲಾಗಿದೆ. ಹೀಗಾಗಿ ಉದ್ಯೋಗಾವಕಾಶ ಇಲ್ಲದೇ ಸಾಕಷ್ಟು ಜನ ವಿದ್ಯಾವಂತರೂ ಸಹ ಗುಳೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ.

ಈ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಮಂಜೂರಾಗಿರುವ ಸರಕಾರಿ ಹುದ್ದೆಗಳು ಸಹ ಬೇರೆ ಭಾಗದವರ ಪಾಲಾಗಿರುವುದು ಸತ್ಯ. ಪ್ರಾಥಮಿಕ ಶಾಲಾಶಿಕ್ಷಕರ ಹುದ್ದೆಗಳಲ್ಲಿ ಶೇ.80ರಷ್ಟು ಶಿಕ್ಷಕರು, ಪ್ರೌಢ ಶಾಲಾ ವಿಭಾಗದಲ್ಲಿ ಶೇ 51 ರಷ್ಟು ಶಿಕ್ಷಕರು, ವಿಶ್ವವಿದ್ಯಾಲಯಗಳಲ್ಲಿ ಶೇ 75 ರಷ್ಟು ಹುದ್ದೆಗಳು, ಬಹುತೇಕ ಇಲಾಖೆಗಳ ಅಧಿಕಾರಿಗಳು ಬೇರೆ ಭಾಗದವರೇ ಇಲ್ಲಿ ಕೆಲಸ ಮಾಡುತ್ತ ಬಂದಿದ್ದಾರೆ. 2014ಕ್ಕಿಂತ ಮುಂಚೆ ಕರ್ನಾಟಕ ಸರಕಾರದಿಂದ ನೇರವಾಗಿ ಕೆ.ಎ.ಎಸ್ ಪರೀಕ್ಷೆ ಬರೆದು ಕಂದಾಯ ಇಲಾಖೆಯಲ್ಲಿ ತಹಸೀಲ್ದಾರ, ಸಹಾಯಕ ಆಯುಕ್ತ, ಅಪರ ಜಿಲ್ಲಾಧಿಕಾರಿ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಹೈ-ಕ ಪ್ರದೇಶದ ಅಧಿಕಾರಿಗಳು ಕೇವಲ 19 ಜನ ಮಾತ್ರ, ಅದೇ ಸಂದರ್ಭದಲ್ಲಿ ಚಿತ್ರದುರ್ಗ ಒಂದು ಜಿಲ್ಲೆಯಿಂದ 21 ಜನ ಅಧಿಕಾರಿಗಳು ಕಂದಾಯ ಇಲಾಖೆಯಲ್ಲಿ ನೇರ ನೇಮಕಾತಿ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವದು ಕಂಡುಬಂದಿದೆ. ಅಂದರೆ, ಕಳೆದ 70 ವರ್ಷಗಳಿಂದ ಈ ಭಾಗ ಎಷ್ಟೊಂದು ನಲುಗಿ ಹೋಗಿದೆ ಎನ್ನುವದಕ್ಕೆ ಇದೊಂದು ಉದಾಹರಣೆ.

ಅದೇರೀತಿ ಕರ್ನಾಟಕ ರಾಜ್ಯದ ಆಡಳಿತ ಕೇಂದ್ರವಾಗಿರುವ ವಿಧಾನಸೌಧ, ವಿಕಾಸಸೌಧ, ಬಹುಮಹಡಿಗಳ ಕಟ್ಟಡ ಇತ್ಯಾದಿ ಸಚಿವಾಲಯಗಳಲ್ಲಿ ಕೆಲಸ ಮಾಡುತ್ತಿರುವ ಒಟ್ಟು ಸಿಬ್ಬಂದಿಗಳ ಸಂಖ್ಯೆ 3885 ಜನ, ಅದರಲ್ಲಿ ಕೇವಲ 37 ಜನ ಮಾತ್ರ ಹೈ-ಕ ಪ್ರದೇಶದ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಅಂದರೆ, ಶೆ 1 ಕ್ಕಿಂತ ಕಡಿಮೆ ನೌಕರರು ಹೈ-ಕ ಭಾಗದವರು. ಈ ಎಲ್ಲ ಕಾರಣಗಳಿಂದಾಗಿ ಸಂವಿಧಾನದ ಅನುಚ್ಛೇದ 371 ತಿದ್ದುಪಡಿಗಾಗಿ ಬಹುದಿನಗಳ ಕಾಲ ಸುದೀರ್ಘ ಹೋರಾಟ ನಡೆದು, ಕೊನೆಗೂ ಡಿಸೆಂಬರ್ 2012ರಲ್ಲಿ ಅನುಚ್ಛೇದ 371ರ ತಿದ್ದುಪಡಿಯ ಮೂಲಕ ಹೈದ್ರಾಬಾದ ಕರ್ನಾಟಕವನ್ನು ಸಂವಿಧಾನದ ಅನುಚ್ಛೇದ 371ಜೆ ಅಡಿಯಲ್ಲಿ ಸೇರಿಸಲಾಯಿತು.

ಕಳೆದ ಆರು ವರ್ಷಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಸಾಕಷ್ಟು ಬದಲಾವಣೆಗಳು ಆಗಿವೆ, ಅದರಂತೆ ಹೈದ್ರಾಬಾದ ಕರ್ನಾಟಕದಲ್ಲಿಯೂ ಬದಲಾವಣೆಗಳಾಗುತ್ತಿವೆ. ಆದರೆ, ಅನುಚ್ಛೇದ 371ಜೆ ಈ ಭಾಗಕ್ಕೆ ಬಂದಿರುವ ಸಂವಿಧಾನಬದ್ದ ಹಕ್ಕು ಎನ್ನುವುದನ್ನು ಮರೆತಿರುವ ಸರಕಾರ ಮತ್ತು ನಾವು ಬಂದಷ್ಟು ಬಂತು ಪಂಚಾಮೃತವೆಂದು ಬಳಸುತ್ತಿದ್ದೇವೆ. ಕನಿಷ್ಠ ಒಂದು 371ಜೆ ಅರ್ಹತಾ ಪ್ರಮಾಣಪತ್ರವೂ ಸಹ ಹಕ್ಕುಬದ್ಧವಾಗಿ ಪಡೆಯಲು ಸಾಧ್ಯವಾಗದೇ ಕಚೇರಿಯಿಂದ ಕಚೇರಿಗೆ ಅಲೆಯುತ್ತ ಮೂರು-ಮೂರು ತಿಂಗಳಾದರೂ ಪಡೆಯದೇ ಕೊರಗುವಂತಾಗಿದೆ ನಮ್ಮ ಪರಿಸ್ಥಿತಿ. ಇದಕ್ಕೆ ಮೂಲಕಾರಣ, ನಮ್ಮ ಭಾಗದ ವಿದ್ಯಾವಂತ ಜನ 371ಜೆ ಕಾನೂನನ್ನು ಅರ್ಥಮಾಡಿಕೊಳ್ಳಲು ವಿಫಲವಾಗಿರುವುದು ಮತ್ತು ಯಾವುದೇ ಕಾನೂನು ನಮ್ಮ ದೇಶದಲ್ಲಿ ಸಮರ್ಪಕವಾಗಿ ಜಾರಿಯಾಗಬೇಕೆಂದರೆ ಅದನ್ನು ಸರಿಯಾಗಿ ಅರ್ಥಮಾಡಿಕೊಳ್ಳಬೇಕು. ಅದರಲ್ಲಿರುವ ಪ್ರತಿಯೊಂದು ಅಂಶವೂ ಮನವರಿಕೆ ಮಾಡಿಕೊಂಡಾಗ ಮಾತ್ರ ಸಾಧ್ಯವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...