Homeಅಂಕಣಗಳುಹೈದ್ರಾಬಾದ್ ಫಂಡ್: ಪಾಕಿಸ್ತಾನಕ್ಕೆ ಮುಖಭಂಗ, 306 ಕೋಟಿ ರೂ. ಯಾರ ಪಾಲಾಗಲಿದೆ?

ಹೈದ್ರಾಬಾದ್ ಫಂಡ್: ಪಾಕಿಸ್ತಾನಕ್ಕೆ ಮುಖಭಂಗ, 306 ಕೋಟಿ ರೂ. ಯಾರ ಪಾಲಾಗಲಿದೆ?

- Advertisement -
- Advertisement -

ಇಂಗ್ಲೆಂಡ್ ಅಂಡ್ ವೇಲ್ಸ್ ಹೈಕೋರ್ಟ್ ಇತ್ತೀಚೆಗೆ ಕೊಟ್ಟ ತೀರ್ಪೊಂದು ಎಲ್ಲರ ಗಮನ ಸೆಳೆದಿದೆ. ಲಂಡನ್‍ನ ನ್ಯಾಟ್‍ವೆಸ್ಟ್ ಬ್ಯಾಂಕಿನಲ್ಲಿರುವ 35 ಮಿಲಿಯನ್ ಪೌಂಡ್ ಅಂದರೆ 306 ಕೋಟಿ ರೂಪಾಯಿ ಹಣ ತನಗೆ ಸೇರಬೇಕೆಂದು ಪಾಕಿಸ್ತಾನ ಹೂಡಿದ್ದ ದಾವೆಯನ್ನು ತಳ್ಳಿ ಹಾಕಿರುವ ನ್ಯಾಯಾಲಯ ಭಾರತದ ಪರವಾಗಿ ತೀರ್ಪು ನೀಡಿದೆ. ಆ ಮೂಲಕ ಸುಮಾರು ಏಳು ದಶಕಗಳ ಹಳೆಯ ಪ್ರಕರಣವೊಂದು ಇತ್ಯರ್ಥ ಕಂಡಂತಾಗಿದೆ. ‘ಹೈದ್ರಾಬಾದ್ ಫಂಡ್’ ಎಂತಲೇ ಹೆಸರಾದ ಈ ವಿವಾದ ಕೇವಲ ಹಣದ ಕಾರಣಕ್ಕೆ ಮಾತ್ರವಲ್ಲದೆ ಭಾರತ ಪಾಕಿಸ್ತಾನಗಳ ನಡುವೆ ಪ್ರತಿಷ್ಠೆಯ ವಿಷಯವಾಗಿತ್ತು.

ಏನಿದು ಹೈದ್ರಾಬಾದ್ ಫಂಡ್..?

1948ರ ಸೆಪ್ಟೆಂಬರ್ ನಲ್ಲಿ ಹೈದ್ರಾಬಾದ್‍ನ ಏಳನೇ ನಿಜಾಮನಾಗಿದ್ದ ಮೀರ್ ಒಸ್ಮಾನ್ ಅಲಿ ಖಾನ್, ಇಂಗ್ಲೆಂಡ್‍ನಲ್ಲಿದ್ದ ಪಾಕಿಸ್ತಾನದ ಅಂದಿನ ರಾಯಭಾರಿ ಹಬೀಬ್ ಇಬ್ರಾಹಿಂ ರಹಮತುಲ್ಲಾ ಖಾತೆಗೆ ವರ್ಗಾವಣೆ ಮಾಡಿದ್ದ 1 ಮಿಲಿಯನ್ ಪೌಂಡ್ ಹಣವಿದು. ಅದೀಗ 35 ಮಿಲಿಯನ್‍ನಷ್ಟಾಗಿದೆ. ಆದರೆ ನಂತರ ಕೋರ್ಟ್‍ನಲ್ಲಿ ಹಣಕ್ಕಾಗಿ ದಾವೆ ಹೂಡಿದ ಒಸ್ಮಾನ್ ಅಲಿ ಖಾನ್, ಹಣವನ್ನು ತಾನು ವರ್ಗಾವಣೆ ಮಾಡಿಲ್ಲ, ನನ್ನ ಗಮನಕ್ಕೆ ಬಾರದೆ ಅಂದಿನ ಹೈದ್ರಾಬಾದ್ ಪ್ರಾಂತ್ಯದ ಹಣಕಾಸು ಮತ್ತು ವಿದೇಶಾಂಗ ಸಚಿವನಾಗಿದ್ದ ನವಾಬ್ ಮೊಯಿನ್ ನವಾಜ್ ಜಂಗ್, ವರ್ಗಾವಣೆ ಮಾಡಿದ್ದ ಎಂದು ಹೇಳಿಕೆ ನೀಡಿದ್ದರು. ಆಗ ಪ್ರಕರಣ ಇತ್ಯರ್ಥವಾಗುವವರೆಗೆ ಹಣವನ್ನು ‘ಫ್ರೀಜ್’ ಮಾಡುವಂತೆ ನ್ಯಾಯಾಲಯ ಆದೇಶಿಸಿತ್ತು.

1947ರಲ್ಲಿ ಭಾರತ ವಿಭಜನೆಯಾದಾಗ, ತನ್ನ ಆಳ್ವಿಕೆಯಲ್ಲಿದ್ದ ಹೈದ್ರಾಬಾದ್ ಪ್ರಾಂತ್ಯವನ್ನು ಭಾರತದೊಂದಿಗೆ ವಿಲೀನ ಮಾಡದೆ ಸ್ವತಂತ್ರವಾಗುಳಿಯಲು ನಿಜಾಮ ನಿರ್ಧರಿಸಿದ. ಆಗ ಭಾರತದೊಂದಿಗೆ ಒಂದು ಯಥಾಸ್ಥಿತಿ ಒಪ್ಪಂದಕ್ಕೆ ಸಹಿ ಹಾಕಿದ್ದ. ಅದರ ಪ್ರಕಾರ ಒಂದು ವರ್ಷದ ಕಾಲ ಭಾರತವು ಹೈದ್ರಾಬಾದ್‍ನಲ್ಲಿ ಸೇನೆಯನ್ನು ಜಮಾವಣೆ ಮಾಡದೆ ಯಥಾಸ್ಥಿತಿ ಕಾಪಾಡಬೇಕಿತ್ತು. ಹಾಗಾಗಿ ಸಿಕಂದರಾಬಾದ್‍ನಲ್ಲಿ ಭಾರತೀಯ ಸೇನೆಯನ್ನು ವಾಪಾಸ್ ಕೂಡಾ ಕರೆಸಿಕೊಳ್ಳಲಾಗಿತ್ತು. ಈ ಅವಧಿಯಲ್ಲಿ ನಿಜಾಮನ ‘ರಜಾಕಾರ್’ ಸೈನಿಕರ ಉಪಟಳ ಹೆಚ್ಚಾಗಿತ್ತಲ್ಲದೆ, ನಿಜಾಮ ಪೋರ್ಚುಗೀಸರ ಜತೆ ಒಪ್ಪಂದ ಮಾಡಿಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದರಿಂದ ಭಾರತವು 1948ರ ಸೆಪ್ಟೆಂಬರ್ ನಲ್ಲಿ ‘ಆಪರೇಷನ್ ಪೋಲೊ’ ಹೆಸರಿನ ಸೇನಾ ಕಾರ್ಯಾಚರಣೆ ಮೂಲಕ ಹೈದ್ರಾಬಾದ್ ಅನ್ನು ತನ್ನೊಳಗೆ ವಿಲೀನ ಮಾಡಿಕೊಂಡಿತು. ಅಂತಹ ಯುದ್ಧಮಯ ಸನ್ನಿವೇಶದಲ್ಲೇ ವಿತ್ತ ಸಚಿವ ಹಣವನ್ನು ಪಾಕಿಸ್ತಾನದ ರಾಯಭಾರಿ ಅಕೌಂಟಿಗೆ ವರ್ಗಾಯಿಸಿದ್ದ.

ವಿಲೀನದ ನಂತರ ನಿಜಾಮ ಹಣ ವಾಪಾಸ್ ನೀಡುವಂತೆ ಕೇಳಿದಾಗ ಪಾಕಿಸ್ತಾನ ತಕರಾರು ಮಾಡಿತು. ಹಾಗಾಗಿ ಲಂಡನ್ ಕೋರ್ಟ್‍ನಲ್ಲಿ ದಾವೆ ಹೂಡಿದರು.

ಪಾಕಿಸ್ತಾನದ ವಾದ ಏನಾತ್ತು..?

ಆರಂಭದಲ್ಲಿ ಇದು ಏಳನೇ ನಿಜಾಮ ಮತ್ತು ಪಾಕಿಸ್ತಾನ ನಡುವಿನ ವಿವಾದವಾಗಿತ್ತಷ್ಟೆ. ಆದರೆ 1956ರಲ್ಲಿ ನಿಜಾಮ ಹಣದ ಮೇಲಿನ ದಾವೆ ಹೂಡಿಕೆ ಹಕ್ಕನ್ನು ಭಾರತದ ರಾಷ್ಟ್ರಪತಿಗಳ ಜತೆ ಹಂಚಿಕೊಂಡಾಗ ‘ಹೈದ್ರಾಬಾದ್ ಫಂಡ್’ನ ಮೇಲೆ ಮೂರು ಹಕ್ಕುದಾರರು ಸೃಷ್ಟಿಯಾಗಿದ್ದರು. ಹಣ ತನಗೆ ಸೇರಬೇಕೆಂದು ವಾದಿಸಲು ಪಾಕಿಸ್ತಾನ ಎರಡು ಅಂಶಗಳನ್ನು ಮುಂದಿಡುತ್ತಿತ್ತು. ಮೊದಲನೆಯದು, ಹೈದ್ರಾಬಾದ್ ಪ್ರಾಂತ್ಯವು ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡುವಂತೆ ತನಗೆ ಕೊಟ್ಟಿದ್ದ ಹಣ ಇದು ಎನ್ನುವುದು. ಎರಡನೆಯ ವಾದದಲ್ಲಿ, ಸರ್ಕಾರಿ ಮಾನದಂಡಗಳ ಅನ್ವಯ ವರ್ಗಾವಣೆಯಾದ ಈ ಹಣವನ್ನು ಭಾರತದಿಂದ ‘ಸುರಕ್ಷಿತವಾಗಿಡಲು’ ತನಗೆ ವರ್ಗಾಯಿಸಬೇಕೆಂದು ಹೇಳಿಕೊಂಡಿತ್ತು.

ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ, ದಿವಂಗತ ಮೀರ್ ಒಸ್ಮಾನ್ ಅಲಿ ಖಾನ್‍ನ ಮೊಮ್ಮಕ್ಕಳಾದ ಮುಫ್ಫಖಮ್ ಝಾ ಮತ್ತು ಮುಖ್ಖರ್ರಂ ಝಾ, ವಿದೇಶಾಂಗ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುವ ಪ್ರಯತ್ನಕ್ಕೂ ಮುಂದಾಗಿದ್ದರು. ಆದರೆ 2013ರಲ್ಲಿ ಪಾಕಿಸ್ತಾನ ಇದನ್ನು ಮತ್ತೆ ನ್ಯಾಯಾಲಯದ ಕಟೆಕಟೆ ಹತ್ತಿಸಿತ್ತು. ಈಗ ಅದರ ವಿರುದ್ಧವೇ ತೀರ್ಪು ಹೊರಬಂದಿದೆ.

ಯಾರಿಗೆ ಸೇರಲಿದೆ ಈ ಹಣ..?

ನ್ಯಾಯಾಲಯವು ತನ್ನ ತೀರ್ಪಿನಲ್ಲಿ “ಈ ಹಣದ ಮೇಲೆ ಏಳನೇ ನಿಜಾಮನ ಹಕ್ಕಿದೆ. ಹಾಗಾಗಿ ದಿವಂಗತ ನಿಜಾಮನ ಪರ ವಾದಿಗಳಾದವರಿಗೆ (ಅವರ ಮೊಮ್ಮಕ್ಕಳು ಮತ್ತು ಭಾರತ) ಈ ಹಣ ಸಂದಾಯವಾಗುತ್ತೆ” ಎಂದು ಹೇಳಿದೆ ಮಾತ್ರವಲ್ಲ, “ಅದನ್ನು ಹೇಗೆ ಹಂಚಿಕೊಳ್ಳಬೇಕೆಂಬ ಆಯ್ಕೆಯನ್ನು ಅವರಿಗೇ ಬಿಟ್ಟಿದ್ದೇನೆ. ಆದರೆ ಹಾಗೆ ಹಂಚಿಕೊಳ್ಳುವ ವಿಧಾನ/ನಿಯಮವನ್ನು ನನ್ನ ಮುಂದೆ ಮಂಡಿಸಿ, ಅನುಮೋದನೆ ಪಡೆದುಕೊಳ್ಳಬೇಕು” ಎಂದೂ ಹೇಳಿದೆ.

ನಿಜವಾದ ಪ್ರಶ್ನೆ ಶುರುವಾಗುವುದೇ ಇಲ್ಲಿಂದ. ಯಾಕೆಂದರೆ ನಿಜಾಮನ ಪರವಾಗಿ ಇಬ್ಬರು ಮೊಮ್ಮಕ್ಕಳು ಮಾತ್ರ ದಾವೆಯಲ್ಲಿ ಭಾಗಿಯಾಗಿದ್ದರೂ ಕಾನೂನುಬದ್ಧವಾಗಿ ನಿಜಾಮನ ಪಿತ್ರಾರ್ಜಿತ ಫಲಾನುಭವಿಗಳ ಸಂಖ್ಯೆ 120! ನಿಜಾಮರ ಕುಟುಂಬ ಕಲ್ಯಾಣ ಸಂಘವನ್ನು ಹುಟ್ಟುಹಾಕಿ ಅದರ ಅಧ್ಯಕ್ಷರೂ ಆಗಿರುವ ನಿಜಾಮರ ಮತ್ತೊಬ್ಬ ಮೊಮ್ಮಗ ನಜಾಫ್ ಅಲಿಖಾನ್ ಹೇಳುವಂತೆ, ಬೆರಳೆಣಿಕೆಯ ಮಂದಿ ಬಿಟ್ಟರೆ ಇನ್ನುಳಿದ ನಿಜಾಮನ ವಂಶಸ್ಥರೆಲ್ಲ ಆರ್ಥಿಕ ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ. ಭಾರತ ಸರ್ಕಾರ ಈ ಹಣದ ಮೇಲೆ ಯಾವ ರೀತಿ ಪಾಲನ್ನು ನಿರೀಕ್ಷಿಸಲಿದೆ ಎನ್ನುವುದು ಸದ್ಯಕ್ಕಂತು ನಿಗೂಢವಾಗಿದೆ. ಹಾಗಾಗಿ ಹಂಚಿಕೆಯ ಕಗ್ಗಂಟು ಇನ್ನಷ್ಟು ಮುಂದುವರೆಯಲಿದೆ.

ಅಂದ ಹಾಗೆ, ಸದರಿ ತೀರ್ಪಿನ ಸಾಧಕ ಬಾಧಕಗಳನ್ನು ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಪಾಕಿಸ್ತಾನ ಹೇಳಿದೆ. ಹಾಗೊಮ್ಮೆ ಅದೇನಾದರು ಮೇಲ್ಮನವಿ ಸಲ್ಲಿಸಿದರೆ, ಏಳು ದಶಕಗಳ ಈ ಪ್ರಕರಣ ಇನ್ನೊಂದಷ್ಟು ದಶಕಗಳಿಗೆ ಮುಂದುವರೆದರೆ ಅಚ್ಚರಿಯಿಲ್ಲ. ಒಟ್ಟಿನಲ್ಲಿ, ಈ ತೀರ್ಪಿನಿಂದಾಗಿ ಭಾರತದ ಎದುರು ಪಾಕಿಸ್ತಾನಕ್ಕೆ ದೊಡ್ಡ ಮುಖಭಂಗ ಆಗಿರುವುದು ಮಾತ್ರ ಸತ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...