Homeಅಂಕಣಗಳುಹೈದ್ರಾಬಾದ್ ಫಂಡ್: ಪಾಕಿಸ್ತಾನಕ್ಕೆ ಮುಖಭಂಗ, 306 ಕೋಟಿ ರೂ. ಯಾರ ಪಾಲಾಗಲಿದೆ?

ಹೈದ್ರಾಬಾದ್ ಫಂಡ್: ಪಾಕಿಸ್ತಾನಕ್ಕೆ ಮುಖಭಂಗ, 306 ಕೋಟಿ ರೂ. ಯಾರ ಪಾಲಾಗಲಿದೆ?

- Advertisement -
- Advertisement -

ಇಂಗ್ಲೆಂಡ್ ಅಂಡ್ ವೇಲ್ಸ್ ಹೈಕೋರ್ಟ್ ಇತ್ತೀಚೆಗೆ ಕೊಟ್ಟ ತೀರ್ಪೊಂದು ಎಲ್ಲರ ಗಮನ ಸೆಳೆದಿದೆ. ಲಂಡನ್‍ನ ನ್ಯಾಟ್‍ವೆಸ್ಟ್ ಬ್ಯಾಂಕಿನಲ್ಲಿರುವ 35 ಮಿಲಿಯನ್ ಪೌಂಡ್ ಅಂದರೆ 306 ಕೋಟಿ ರೂಪಾಯಿ ಹಣ ತನಗೆ ಸೇರಬೇಕೆಂದು ಪಾಕಿಸ್ತಾನ ಹೂಡಿದ್ದ ದಾವೆಯನ್ನು ತಳ್ಳಿ ಹಾಕಿರುವ ನ್ಯಾಯಾಲಯ ಭಾರತದ ಪರವಾಗಿ ತೀರ್ಪು ನೀಡಿದೆ. ಆ ಮೂಲಕ ಸುಮಾರು ಏಳು ದಶಕಗಳ ಹಳೆಯ ಪ್ರಕರಣವೊಂದು ಇತ್ಯರ್ಥ ಕಂಡಂತಾಗಿದೆ. ‘ಹೈದ್ರಾಬಾದ್ ಫಂಡ್’ ಎಂತಲೇ ಹೆಸರಾದ ಈ ವಿವಾದ ಕೇವಲ ಹಣದ ಕಾರಣಕ್ಕೆ ಮಾತ್ರವಲ್ಲದೆ ಭಾರತ ಪಾಕಿಸ್ತಾನಗಳ ನಡುವೆ ಪ್ರತಿಷ್ಠೆಯ ವಿಷಯವಾಗಿತ್ತು.

ಏನಿದು ಹೈದ್ರಾಬಾದ್ ಫಂಡ್..?

1948ರ ಸೆಪ್ಟೆಂಬರ್ ನಲ್ಲಿ ಹೈದ್ರಾಬಾದ್‍ನ ಏಳನೇ ನಿಜಾಮನಾಗಿದ್ದ ಮೀರ್ ಒಸ್ಮಾನ್ ಅಲಿ ಖಾನ್, ಇಂಗ್ಲೆಂಡ್‍ನಲ್ಲಿದ್ದ ಪಾಕಿಸ್ತಾನದ ಅಂದಿನ ರಾಯಭಾರಿ ಹಬೀಬ್ ಇಬ್ರಾಹಿಂ ರಹಮತುಲ್ಲಾ ಖಾತೆಗೆ ವರ್ಗಾವಣೆ ಮಾಡಿದ್ದ 1 ಮಿಲಿಯನ್ ಪೌಂಡ್ ಹಣವಿದು. ಅದೀಗ 35 ಮಿಲಿಯನ್‍ನಷ್ಟಾಗಿದೆ. ಆದರೆ ನಂತರ ಕೋರ್ಟ್‍ನಲ್ಲಿ ಹಣಕ್ಕಾಗಿ ದಾವೆ ಹೂಡಿದ ಒಸ್ಮಾನ್ ಅಲಿ ಖಾನ್, ಹಣವನ್ನು ತಾನು ವರ್ಗಾವಣೆ ಮಾಡಿಲ್ಲ, ನನ್ನ ಗಮನಕ್ಕೆ ಬಾರದೆ ಅಂದಿನ ಹೈದ್ರಾಬಾದ್ ಪ್ರಾಂತ್ಯದ ಹಣಕಾಸು ಮತ್ತು ವಿದೇಶಾಂಗ ಸಚಿವನಾಗಿದ್ದ ನವಾಬ್ ಮೊಯಿನ್ ನವಾಜ್ ಜಂಗ್, ವರ್ಗಾವಣೆ ಮಾಡಿದ್ದ ಎಂದು ಹೇಳಿಕೆ ನೀಡಿದ್ದರು. ಆಗ ಪ್ರಕರಣ ಇತ್ಯರ್ಥವಾಗುವವರೆಗೆ ಹಣವನ್ನು ‘ಫ್ರೀಜ್’ ಮಾಡುವಂತೆ ನ್ಯಾಯಾಲಯ ಆದೇಶಿಸಿತ್ತು.

1947ರಲ್ಲಿ ಭಾರತ ವಿಭಜನೆಯಾದಾಗ, ತನ್ನ ಆಳ್ವಿಕೆಯಲ್ಲಿದ್ದ ಹೈದ್ರಾಬಾದ್ ಪ್ರಾಂತ್ಯವನ್ನು ಭಾರತದೊಂದಿಗೆ ವಿಲೀನ ಮಾಡದೆ ಸ್ವತಂತ್ರವಾಗುಳಿಯಲು ನಿಜಾಮ ನಿರ್ಧರಿಸಿದ. ಆಗ ಭಾರತದೊಂದಿಗೆ ಒಂದು ಯಥಾಸ್ಥಿತಿ ಒಪ್ಪಂದಕ್ಕೆ ಸಹಿ ಹಾಕಿದ್ದ. ಅದರ ಪ್ರಕಾರ ಒಂದು ವರ್ಷದ ಕಾಲ ಭಾರತವು ಹೈದ್ರಾಬಾದ್‍ನಲ್ಲಿ ಸೇನೆಯನ್ನು ಜಮಾವಣೆ ಮಾಡದೆ ಯಥಾಸ್ಥಿತಿ ಕಾಪಾಡಬೇಕಿತ್ತು. ಹಾಗಾಗಿ ಸಿಕಂದರಾಬಾದ್‍ನಲ್ಲಿ ಭಾರತೀಯ ಸೇನೆಯನ್ನು ವಾಪಾಸ್ ಕೂಡಾ ಕರೆಸಿಕೊಳ್ಳಲಾಗಿತ್ತು. ಈ ಅವಧಿಯಲ್ಲಿ ನಿಜಾಮನ ‘ರಜಾಕಾರ್’ ಸೈನಿಕರ ಉಪಟಳ ಹೆಚ್ಚಾಗಿತ್ತಲ್ಲದೆ, ನಿಜಾಮ ಪೋರ್ಚುಗೀಸರ ಜತೆ ಒಪ್ಪಂದ ಮಾಡಿಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದರಿಂದ ಭಾರತವು 1948ರ ಸೆಪ್ಟೆಂಬರ್ ನಲ್ಲಿ ‘ಆಪರೇಷನ್ ಪೋಲೊ’ ಹೆಸರಿನ ಸೇನಾ ಕಾರ್ಯಾಚರಣೆ ಮೂಲಕ ಹೈದ್ರಾಬಾದ್ ಅನ್ನು ತನ್ನೊಳಗೆ ವಿಲೀನ ಮಾಡಿಕೊಂಡಿತು. ಅಂತಹ ಯುದ್ಧಮಯ ಸನ್ನಿವೇಶದಲ್ಲೇ ವಿತ್ತ ಸಚಿವ ಹಣವನ್ನು ಪಾಕಿಸ್ತಾನದ ರಾಯಭಾರಿ ಅಕೌಂಟಿಗೆ ವರ್ಗಾಯಿಸಿದ್ದ.

ವಿಲೀನದ ನಂತರ ನಿಜಾಮ ಹಣ ವಾಪಾಸ್ ನೀಡುವಂತೆ ಕೇಳಿದಾಗ ಪಾಕಿಸ್ತಾನ ತಕರಾರು ಮಾಡಿತು. ಹಾಗಾಗಿ ಲಂಡನ್ ಕೋರ್ಟ್‍ನಲ್ಲಿ ದಾವೆ ಹೂಡಿದರು.

ಪಾಕಿಸ್ತಾನದ ವಾದ ಏನಾತ್ತು..?

ಆರಂಭದಲ್ಲಿ ಇದು ಏಳನೇ ನಿಜಾಮ ಮತ್ತು ಪಾಕಿಸ್ತಾನ ನಡುವಿನ ವಿವಾದವಾಗಿತ್ತಷ್ಟೆ. ಆದರೆ 1956ರಲ್ಲಿ ನಿಜಾಮ ಹಣದ ಮೇಲಿನ ದಾವೆ ಹೂಡಿಕೆ ಹಕ್ಕನ್ನು ಭಾರತದ ರಾಷ್ಟ್ರಪತಿಗಳ ಜತೆ ಹಂಚಿಕೊಂಡಾಗ ‘ಹೈದ್ರಾಬಾದ್ ಫಂಡ್’ನ ಮೇಲೆ ಮೂರು ಹಕ್ಕುದಾರರು ಸೃಷ್ಟಿಯಾಗಿದ್ದರು. ಹಣ ತನಗೆ ಸೇರಬೇಕೆಂದು ವಾದಿಸಲು ಪಾಕಿಸ್ತಾನ ಎರಡು ಅಂಶಗಳನ್ನು ಮುಂದಿಡುತ್ತಿತ್ತು. ಮೊದಲನೆಯದು, ಹೈದ್ರಾಬಾದ್ ಪ್ರಾಂತ್ಯವು ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡುವಂತೆ ತನಗೆ ಕೊಟ್ಟಿದ್ದ ಹಣ ಇದು ಎನ್ನುವುದು. ಎರಡನೆಯ ವಾದದಲ್ಲಿ, ಸರ್ಕಾರಿ ಮಾನದಂಡಗಳ ಅನ್ವಯ ವರ್ಗಾವಣೆಯಾದ ಈ ಹಣವನ್ನು ಭಾರತದಿಂದ ‘ಸುರಕ್ಷಿತವಾಗಿಡಲು’ ತನಗೆ ವರ್ಗಾಯಿಸಬೇಕೆಂದು ಹೇಳಿಕೊಂಡಿತ್ತು.

ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ, ದಿವಂಗತ ಮೀರ್ ಒಸ್ಮಾನ್ ಅಲಿ ಖಾನ್‍ನ ಮೊಮ್ಮಕ್ಕಳಾದ ಮುಫ್ಫಖಮ್ ಝಾ ಮತ್ತು ಮುಖ್ಖರ್ರಂ ಝಾ, ವಿದೇಶಾಂಗ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುವ ಪ್ರಯತ್ನಕ್ಕೂ ಮುಂದಾಗಿದ್ದರು. ಆದರೆ 2013ರಲ್ಲಿ ಪಾಕಿಸ್ತಾನ ಇದನ್ನು ಮತ್ತೆ ನ್ಯಾಯಾಲಯದ ಕಟೆಕಟೆ ಹತ್ತಿಸಿತ್ತು. ಈಗ ಅದರ ವಿರುದ್ಧವೇ ತೀರ್ಪು ಹೊರಬಂದಿದೆ.

ಯಾರಿಗೆ ಸೇರಲಿದೆ ಈ ಹಣ..?

ನ್ಯಾಯಾಲಯವು ತನ್ನ ತೀರ್ಪಿನಲ್ಲಿ “ಈ ಹಣದ ಮೇಲೆ ಏಳನೇ ನಿಜಾಮನ ಹಕ್ಕಿದೆ. ಹಾಗಾಗಿ ದಿವಂಗತ ನಿಜಾಮನ ಪರ ವಾದಿಗಳಾದವರಿಗೆ (ಅವರ ಮೊಮ್ಮಕ್ಕಳು ಮತ್ತು ಭಾರತ) ಈ ಹಣ ಸಂದಾಯವಾಗುತ್ತೆ” ಎಂದು ಹೇಳಿದೆ ಮಾತ್ರವಲ್ಲ, “ಅದನ್ನು ಹೇಗೆ ಹಂಚಿಕೊಳ್ಳಬೇಕೆಂಬ ಆಯ್ಕೆಯನ್ನು ಅವರಿಗೇ ಬಿಟ್ಟಿದ್ದೇನೆ. ಆದರೆ ಹಾಗೆ ಹಂಚಿಕೊಳ್ಳುವ ವಿಧಾನ/ನಿಯಮವನ್ನು ನನ್ನ ಮುಂದೆ ಮಂಡಿಸಿ, ಅನುಮೋದನೆ ಪಡೆದುಕೊಳ್ಳಬೇಕು” ಎಂದೂ ಹೇಳಿದೆ.

ನಿಜವಾದ ಪ್ರಶ್ನೆ ಶುರುವಾಗುವುದೇ ಇಲ್ಲಿಂದ. ಯಾಕೆಂದರೆ ನಿಜಾಮನ ಪರವಾಗಿ ಇಬ್ಬರು ಮೊಮ್ಮಕ್ಕಳು ಮಾತ್ರ ದಾವೆಯಲ್ಲಿ ಭಾಗಿಯಾಗಿದ್ದರೂ ಕಾನೂನುಬದ್ಧವಾಗಿ ನಿಜಾಮನ ಪಿತ್ರಾರ್ಜಿತ ಫಲಾನುಭವಿಗಳ ಸಂಖ್ಯೆ 120! ನಿಜಾಮರ ಕುಟುಂಬ ಕಲ್ಯಾಣ ಸಂಘವನ್ನು ಹುಟ್ಟುಹಾಕಿ ಅದರ ಅಧ್ಯಕ್ಷರೂ ಆಗಿರುವ ನಿಜಾಮರ ಮತ್ತೊಬ್ಬ ಮೊಮ್ಮಗ ನಜಾಫ್ ಅಲಿಖಾನ್ ಹೇಳುವಂತೆ, ಬೆರಳೆಣಿಕೆಯ ಮಂದಿ ಬಿಟ್ಟರೆ ಇನ್ನುಳಿದ ನಿಜಾಮನ ವಂಶಸ್ಥರೆಲ್ಲ ಆರ್ಥಿಕ ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ. ಭಾರತ ಸರ್ಕಾರ ಈ ಹಣದ ಮೇಲೆ ಯಾವ ರೀತಿ ಪಾಲನ್ನು ನಿರೀಕ್ಷಿಸಲಿದೆ ಎನ್ನುವುದು ಸದ್ಯಕ್ಕಂತು ನಿಗೂಢವಾಗಿದೆ. ಹಾಗಾಗಿ ಹಂಚಿಕೆಯ ಕಗ್ಗಂಟು ಇನ್ನಷ್ಟು ಮುಂದುವರೆಯಲಿದೆ.

ಅಂದ ಹಾಗೆ, ಸದರಿ ತೀರ್ಪಿನ ಸಾಧಕ ಬಾಧಕಗಳನ್ನು ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಪಾಕಿಸ್ತಾನ ಹೇಳಿದೆ. ಹಾಗೊಮ್ಮೆ ಅದೇನಾದರು ಮೇಲ್ಮನವಿ ಸಲ್ಲಿಸಿದರೆ, ಏಳು ದಶಕಗಳ ಈ ಪ್ರಕರಣ ಇನ್ನೊಂದಷ್ಟು ದಶಕಗಳಿಗೆ ಮುಂದುವರೆದರೆ ಅಚ್ಚರಿಯಿಲ್ಲ. ಒಟ್ಟಿನಲ್ಲಿ, ಈ ತೀರ್ಪಿನಿಂದಾಗಿ ಭಾರತದ ಎದುರು ಪಾಕಿಸ್ತಾನಕ್ಕೆ ದೊಡ್ಡ ಮುಖಭಂಗ ಆಗಿರುವುದು ಮಾತ್ರ ಸತ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...