Homeಅಂಕಣಗಳುಹೈದ್ರಾಬಾದ್ ಫಂಡ್: ಪಾಕಿಸ್ತಾನಕ್ಕೆ ಮುಖಭಂಗ, 306 ಕೋಟಿ ರೂ. ಯಾರ ಪಾಲಾಗಲಿದೆ?

ಹೈದ್ರಾಬಾದ್ ಫಂಡ್: ಪಾಕಿಸ್ತಾನಕ್ಕೆ ಮುಖಭಂಗ, 306 ಕೋಟಿ ರೂ. ಯಾರ ಪಾಲಾಗಲಿದೆ?

- Advertisement -
- Advertisement -

ಇಂಗ್ಲೆಂಡ್ ಅಂಡ್ ವೇಲ್ಸ್ ಹೈಕೋರ್ಟ್ ಇತ್ತೀಚೆಗೆ ಕೊಟ್ಟ ತೀರ್ಪೊಂದು ಎಲ್ಲರ ಗಮನ ಸೆಳೆದಿದೆ. ಲಂಡನ್‍ನ ನ್ಯಾಟ್‍ವೆಸ್ಟ್ ಬ್ಯಾಂಕಿನಲ್ಲಿರುವ 35 ಮಿಲಿಯನ್ ಪೌಂಡ್ ಅಂದರೆ 306 ಕೋಟಿ ರೂಪಾಯಿ ಹಣ ತನಗೆ ಸೇರಬೇಕೆಂದು ಪಾಕಿಸ್ತಾನ ಹೂಡಿದ್ದ ದಾವೆಯನ್ನು ತಳ್ಳಿ ಹಾಕಿರುವ ನ್ಯಾಯಾಲಯ ಭಾರತದ ಪರವಾಗಿ ತೀರ್ಪು ನೀಡಿದೆ. ಆ ಮೂಲಕ ಸುಮಾರು ಏಳು ದಶಕಗಳ ಹಳೆಯ ಪ್ರಕರಣವೊಂದು ಇತ್ಯರ್ಥ ಕಂಡಂತಾಗಿದೆ. ‘ಹೈದ್ರಾಬಾದ್ ಫಂಡ್’ ಎಂತಲೇ ಹೆಸರಾದ ಈ ವಿವಾದ ಕೇವಲ ಹಣದ ಕಾರಣಕ್ಕೆ ಮಾತ್ರವಲ್ಲದೆ ಭಾರತ ಪಾಕಿಸ್ತಾನಗಳ ನಡುವೆ ಪ್ರತಿಷ್ಠೆಯ ವಿಷಯವಾಗಿತ್ತು.

ಏನಿದು ಹೈದ್ರಾಬಾದ್ ಫಂಡ್..?

1948ರ ಸೆಪ್ಟೆಂಬರ್ ನಲ್ಲಿ ಹೈದ್ರಾಬಾದ್‍ನ ಏಳನೇ ನಿಜಾಮನಾಗಿದ್ದ ಮೀರ್ ಒಸ್ಮಾನ್ ಅಲಿ ಖಾನ್, ಇಂಗ್ಲೆಂಡ್‍ನಲ್ಲಿದ್ದ ಪಾಕಿಸ್ತಾನದ ಅಂದಿನ ರಾಯಭಾರಿ ಹಬೀಬ್ ಇಬ್ರಾಹಿಂ ರಹಮತುಲ್ಲಾ ಖಾತೆಗೆ ವರ್ಗಾವಣೆ ಮಾಡಿದ್ದ 1 ಮಿಲಿಯನ್ ಪೌಂಡ್ ಹಣವಿದು. ಅದೀಗ 35 ಮಿಲಿಯನ್‍ನಷ್ಟಾಗಿದೆ. ಆದರೆ ನಂತರ ಕೋರ್ಟ್‍ನಲ್ಲಿ ಹಣಕ್ಕಾಗಿ ದಾವೆ ಹೂಡಿದ ಒಸ್ಮಾನ್ ಅಲಿ ಖಾನ್, ಹಣವನ್ನು ತಾನು ವರ್ಗಾವಣೆ ಮಾಡಿಲ್ಲ, ನನ್ನ ಗಮನಕ್ಕೆ ಬಾರದೆ ಅಂದಿನ ಹೈದ್ರಾಬಾದ್ ಪ್ರಾಂತ್ಯದ ಹಣಕಾಸು ಮತ್ತು ವಿದೇಶಾಂಗ ಸಚಿವನಾಗಿದ್ದ ನವಾಬ್ ಮೊಯಿನ್ ನವಾಜ್ ಜಂಗ್, ವರ್ಗಾವಣೆ ಮಾಡಿದ್ದ ಎಂದು ಹೇಳಿಕೆ ನೀಡಿದ್ದರು. ಆಗ ಪ್ರಕರಣ ಇತ್ಯರ್ಥವಾಗುವವರೆಗೆ ಹಣವನ್ನು ‘ಫ್ರೀಜ್’ ಮಾಡುವಂತೆ ನ್ಯಾಯಾಲಯ ಆದೇಶಿಸಿತ್ತು.

1947ರಲ್ಲಿ ಭಾರತ ವಿಭಜನೆಯಾದಾಗ, ತನ್ನ ಆಳ್ವಿಕೆಯಲ್ಲಿದ್ದ ಹೈದ್ರಾಬಾದ್ ಪ್ರಾಂತ್ಯವನ್ನು ಭಾರತದೊಂದಿಗೆ ವಿಲೀನ ಮಾಡದೆ ಸ್ವತಂತ್ರವಾಗುಳಿಯಲು ನಿಜಾಮ ನಿರ್ಧರಿಸಿದ. ಆಗ ಭಾರತದೊಂದಿಗೆ ಒಂದು ಯಥಾಸ್ಥಿತಿ ಒಪ್ಪಂದಕ್ಕೆ ಸಹಿ ಹಾಕಿದ್ದ. ಅದರ ಪ್ರಕಾರ ಒಂದು ವರ್ಷದ ಕಾಲ ಭಾರತವು ಹೈದ್ರಾಬಾದ್‍ನಲ್ಲಿ ಸೇನೆಯನ್ನು ಜಮಾವಣೆ ಮಾಡದೆ ಯಥಾಸ್ಥಿತಿ ಕಾಪಾಡಬೇಕಿತ್ತು. ಹಾಗಾಗಿ ಸಿಕಂದರಾಬಾದ್‍ನಲ್ಲಿ ಭಾರತೀಯ ಸೇನೆಯನ್ನು ವಾಪಾಸ್ ಕೂಡಾ ಕರೆಸಿಕೊಳ್ಳಲಾಗಿತ್ತು. ಈ ಅವಧಿಯಲ್ಲಿ ನಿಜಾಮನ ‘ರಜಾಕಾರ್’ ಸೈನಿಕರ ಉಪಟಳ ಹೆಚ್ಚಾಗಿತ್ತಲ್ಲದೆ, ನಿಜಾಮ ಪೋರ್ಚುಗೀಸರ ಜತೆ ಒಪ್ಪಂದ ಮಾಡಿಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದರಿಂದ ಭಾರತವು 1948ರ ಸೆಪ್ಟೆಂಬರ್ ನಲ್ಲಿ ‘ಆಪರೇಷನ್ ಪೋಲೊ’ ಹೆಸರಿನ ಸೇನಾ ಕಾರ್ಯಾಚರಣೆ ಮೂಲಕ ಹೈದ್ರಾಬಾದ್ ಅನ್ನು ತನ್ನೊಳಗೆ ವಿಲೀನ ಮಾಡಿಕೊಂಡಿತು. ಅಂತಹ ಯುದ್ಧಮಯ ಸನ್ನಿವೇಶದಲ್ಲೇ ವಿತ್ತ ಸಚಿವ ಹಣವನ್ನು ಪಾಕಿಸ್ತಾನದ ರಾಯಭಾರಿ ಅಕೌಂಟಿಗೆ ವರ್ಗಾಯಿಸಿದ್ದ.

ವಿಲೀನದ ನಂತರ ನಿಜಾಮ ಹಣ ವಾಪಾಸ್ ನೀಡುವಂತೆ ಕೇಳಿದಾಗ ಪಾಕಿಸ್ತಾನ ತಕರಾರು ಮಾಡಿತು. ಹಾಗಾಗಿ ಲಂಡನ್ ಕೋರ್ಟ್‍ನಲ್ಲಿ ದಾವೆ ಹೂಡಿದರು.

ಪಾಕಿಸ್ತಾನದ ವಾದ ಏನಾತ್ತು..?

ಆರಂಭದಲ್ಲಿ ಇದು ಏಳನೇ ನಿಜಾಮ ಮತ್ತು ಪಾಕಿಸ್ತಾನ ನಡುವಿನ ವಿವಾದವಾಗಿತ್ತಷ್ಟೆ. ಆದರೆ 1956ರಲ್ಲಿ ನಿಜಾಮ ಹಣದ ಮೇಲಿನ ದಾವೆ ಹೂಡಿಕೆ ಹಕ್ಕನ್ನು ಭಾರತದ ರಾಷ್ಟ್ರಪತಿಗಳ ಜತೆ ಹಂಚಿಕೊಂಡಾಗ ‘ಹೈದ್ರಾಬಾದ್ ಫಂಡ್’ನ ಮೇಲೆ ಮೂರು ಹಕ್ಕುದಾರರು ಸೃಷ್ಟಿಯಾಗಿದ್ದರು. ಹಣ ತನಗೆ ಸೇರಬೇಕೆಂದು ವಾದಿಸಲು ಪಾಕಿಸ್ತಾನ ಎರಡು ಅಂಶಗಳನ್ನು ಮುಂದಿಡುತ್ತಿತ್ತು. ಮೊದಲನೆಯದು, ಹೈದ್ರಾಬಾದ್ ಪ್ರಾಂತ್ಯವು ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡುವಂತೆ ತನಗೆ ಕೊಟ್ಟಿದ್ದ ಹಣ ಇದು ಎನ್ನುವುದು. ಎರಡನೆಯ ವಾದದಲ್ಲಿ, ಸರ್ಕಾರಿ ಮಾನದಂಡಗಳ ಅನ್ವಯ ವರ್ಗಾವಣೆಯಾದ ಈ ಹಣವನ್ನು ಭಾರತದಿಂದ ‘ಸುರಕ್ಷಿತವಾಗಿಡಲು’ ತನಗೆ ವರ್ಗಾಯಿಸಬೇಕೆಂದು ಹೇಳಿಕೊಂಡಿತ್ತು.

ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ, ದಿವಂಗತ ಮೀರ್ ಒಸ್ಮಾನ್ ಅಲಿ ಖಾನ್‍ನ ಮೊಮ್ಮಕ್ಕಳಾದ ಮುಫ್ಫಖಮ್ ಝಾ ಮತ್ತು ಮುಖ್ಖರ್ರಂ ಝಾ, ವಿದೇಶಾಂಗ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುವ ಪ್ರಯತ್ನಕ್ಕೂ ಮುಂದಾಗಿದ್ದರು. ಆದರೆ 2013ರಲ್ಲಿ ಪಾಕಿಸ್ತಾನ ಇದನ್ನು ಮತ್ತೆ ನ್ಯಾಯಾಲಯದ ಕಟೆಕಟೆ ಹತ್ತಿಸಿತ್ತು. ಈಗ ಅದರ ವಿರುದ್ಧವೇ ತೀರ್ಪು ಹೊರಬಂದಿದೆ.

ಯಾರಿಗೆ ಸೇರಲಿದೆ ಈ ಹಣ..?

ನ್ಯಾಯಾಲಯವು ತನ್ನ ತೀರ್ಪಿನಲ್ಲಿ “ಈ ಹಣದ ಮೇಲೆ ಏಳನೇ ನಿಜಾಮನ ಹಕ್ಕಿದೆ. ಹಾಗಾಗಿ ದಿವಂಗತ ನಿಜಾಮನ ಪರ ವಾದಿಗಳಾದವರಿಗೆ (ಅವರ ಮೊಮ್ಮಕ್ಕಳು ಮತ್ತು ಭಾರತ) ಈ ಹಣ ಸಂದಾಯವಾಗುತ್ತೆ” ಎಂದು ಹೇಳಿದೆ ಮಾತ್ರವಲ್ಲ, “ಅದನ್ನು ಹೇಗೆ ಹಂಚಿಕೊಳ್ಳಬೇಕೆಂಬ ಆಯ್ಕೆಯನ್ನು ಅವರಿಗೇ ಬಿಟ್ಟಿದ್ದೇನೆ. ಆದರೆ ಹಾಗೆ ಹಂಚಿಕೊಳ್ಳುವ ವಿಧಾನ/ನಿಯಮವನ್ನು ನನ್ನ ಮುಂದೆ ಮಂಡಿಸಿ, ಅನುಮೋದನೆ ಪಡೆದುಕೊಳ್ಳಬೇಕು” ಎಂದೂ ಹೇಳಿದೆ.

ನಿಜವಾದ ಪ್ರಶ್ನೆ ಶುರುವಾಗುವುದೇ ಇಲ್ಲಿಂದ. ಯಾಕೆಂದರೆ ನಿಜಾಮನ ಪರವಾಗಿ ಇಬ್ಬರು ಮೊಮ್ಮಕ್ಕಳು ಮಾತ್ರ ದಾವೆಯಲ್ಲಿ ಭಾಗಿಯಾಗಿದ್ದರೂ ಕಾನೂನುಬದ್ಧವಾಗಿ ನಿಜಾಮನ ಪಿತ್ರಾರ್ಜಿತ ಫಲಾನುಭವಿಗಳ ಸಂಖ್ಯೆ 120! ನಿಜಾಮರ ಕುಟುಂಬ ಕಲ್ಯಾಣ ಸಂಘವನ್ನು ಹುಟ್ಟುಹಾಕಿ ಅದರ ಅಧ್ಯಕ್ಷರೂ ಆಗಿರುವ ನಿಜಾಮರ ಮತ್ತೊಬ್ಬ ಮೊಮ್ಮಗ ನಜಾಫ್ ಅಲಿಖಾನ್ ಹೇಳುವಂತೆ, ಬೆರಳೆಣಿಕೆಯ ಮಂದಿ ಬಿಟ್ಟರೆ ಇನ್ನುಳಿದ ನಿಜಾಮನ ವಂಶಸ್ಥರೆಲ್ಲ ಆರ್ಥಿಕ ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ. ಭಾರತ ಸರ್ಕಾರ ಈ ಹಣದ ಮೇಲೆ ಯಾವ ರೀತಿ ಪಾಲನ್ನು ನಿರೀಕ್ಷಿಸಲಿದೆ ಎನ್ನುವುದು ಸದ್ಯಕ್ಕಂತು ನಿಗೂಢವಾಗಿದೆ. ಹಾಗಾಗಿ ಹಂಚಿಕೆಯ ಕಗ್ಗಂಟು ಇನ್ನಷ್ಟು ಮುಂದುವರೆಯಲಿದೆ.

ಅಂದ ಹಾಗೆ, ಸದರಿ ತೀರ್ಪಿನ ಸಾಧಕ ಬಾಧಕಗಳನ್ನು ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಪಾಕಿಸ್ತಾನ ಹೇಳಿದೆ. ಹಾಗೊಮ್ಮೆ ಅದೇನಾದರು ಮೇಲ್ಮನವಿ ಸಲ್ಲಿಸಿದರೆ, ಏಳು ದಶಕಗಳ ಈ ಪ್ರಕರಣ ಇನ್ನೊಂದಷ್ಟು ದಶಕಗಳಿಗೆ ಮುಂದುವರೆದರೆ ಅಚ್ಚರಿಯಿಲ್ಲ. ಒಟ್ಟಿನಲ್ಲಿ, ಈ ತೀರ್ಪಿನಿಂದಾಗಿ ಭಾರತದ ಎದುರು ಪಾಕಿಸ್ತಾನಕ್ಕೆ ದೊಡ್ಡ ಮುಖಭಂಗ ಆಗಿರುವುದು ಮಾತ್ರ ಸತ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...