Homeಅಂಕಣಗಳುಹೈದ್ರಾಬಾದ್ ಫಂಡ್: ಪಾಕಿಸ್ತಾನಕ್ಕೆ ಮುಖಭಂಗ, 306 ಕೋಟಿ ರೂ. ಯಾರ ಪಾಲಾಗಲಿದೆ?

ಹೈದ್ರಾಬಾದ್ ಫಂಡ್: ಪಾಕಿಸ್ತಾನಕ್ಕೆ ಮುಖಭಂಗ, 306 ಕೋಟಿ ರೂ. ಯಾರ ಪಾಲಾಗಲಿದೆ?

- Advertisement -
- Advertisement -

ಇಂಗ್ಲೆಂಡ್ ಅಂಡ್ ವೇಲ್ಸ್ ಹೈಕೋರ್ಟ್ ಇತ್ತೀಚೆಗೆ ಕೊಟ್ಟ ತೀರ್ಪೊಂದು ಎಲ್ಲರ ಗಮನ ಸೆಳೆದಿದೆ. ಲಂಡನ್‍ನ ನ್ಯಾಟ್‍ವೆಸ್ಟ್ ಬ್ಯಾಂಕಿನಲ್ಲಿರುವ 35 ಮಿಲಿಯನ್ ಪೌಂಡ್ ಅಂದರೆ 306 ಕೋಟಿ ರೂಪಾಯಿ ಹಣ ತನಗೆ ಸೇರಬೇಕೆಂದು ಪಾಕಿಸ್ತಾನ ಹೂಡಿದ್ದ ದಾವೆಯನ್ನು ತಳ್ಳಿ ಹಾಕಿರುವ ನ್ಯಾಯಾಲಯ ಭಾರತದ ಪರವಾಗಿ ತೀರ್ಪು ನೀಡಿದೆ. ಆ ಮೂಲಕ ಸುಮಾರು ಏಳು ದಶಕಗಳ ಹಳೆಯ ಪ್ರಕರಣವೊಂದು ಇತ್ಯರ್ಥ ಕಂಡಂತಾಗಿದೆ. ‘ಹೈದ್ರಾಬಾದ್ ಫಂಡ್’ ಎಂತಲೇ ಹೆಸರಾದ ಈ ವಿವಾದ ಕೇವಲ ಹಣದ ಕಾರಣಕ್ಕೆ ಮಾತ್ರವಲ್ಲದೆ ಭಾರತ ಪಾಕಿಸ್ತಾನಗಳ ನಡುವೆ ಪ್ರತಿಷ್ಠೆಯ ವಿಷಯವಾಗಿತ್ತು.

ಏನಿದು ಹೈದ್ರಾಬಾದ್ ಫಂಡ್..?

1948ರ ಸೆಪ್ಟೆಂಬರ್ ನಲ್ಲಿ ಹೈದ್ರಾಬಾದ್‍ನ ಏಳನೇ ನಿಜಾಮನಾಗಿದ್ದ ಮೀರ್ ಒಸ್ಮಾನ್ ಅಲಿ ಖಾನ್, ಇಂಗ್ಲೆಂಡ್‍ನಲ್ಲಿದ್ದ ಪಾಕಿಸ್ತಾನದ ಅಂದಿನ ರಾಯಭಾರಿ ಹಬೀಬ್ ಇಬ್ರಾಹಿಂ ರಹಮತುಲ್ಲಾ ಖಾತೆಗೆ ವರ್ಗಾವಣೆ ಮಾಡಿದ್ದ 1 ಮಿಲಿಯನ್ ಪೌಂಡ್ ಹಣವಿದು. ಅದೀಗ 35 ಮಿಲಿಯನ್‍ನಷ್ಟಾಗಿದೆ. ಆದರೆ ನಂತರ ಕೋರ್ಟ್‍ನಲ್ಲಿ ಹಣಕ್ಕಾಗಿ ದಾವೆ ಹೂಡಿದ ಒಸ್ಮಾನ್ ಅಲಿ ಖಾನ್, ಹಣವನ್ನು ತಾನು ವರ್ಗಾವಣೆ ಮಾಡಿಲ್ಲ, ನನ್ನ ಗಮನಕ್ಕೆ ಬಾರದೆ ಅಂದಿನ ಹೈದ್ರಾಬಾದ್ ಪ್ರಾಂತ್ಯದ ಹಣಕಾಸು ಮತ್ತು ವಿದೇಶಾಂಗ ಸಚಿವನಾಗಿದ್ದ ನವಾಬ್ ಮೊಯಿನ್ ನವಾಜ್ ಜಂಗ್, ವರ್ಗಾವಣೆ ಮಾಡಿದ್ದ ಎಂದು ಹೇಳಿಕೆ ನೀಡಿದ್ದರು. ಆಗ ಪ್ರಕರಣ ಇತ್ಯರ್ಥವಾಗುವವರೆಗೆ ಹಣವನ್ನು ‘ಫ್ರೀಜ್’ ಮಾಡುವಂತೆ ನ್ಯಾಯಾಲಯ ಆದೇಶಿಸಿತ್ತು.

1947ರಲ್ಲಿ ಭಾರತ ವಿಭಜನೆಯಾದಾಗ, ತನ್ನ ಆಳ್ವಿಕೆಯಲ್ಲಿದ್ದ ಹೈದ್ರಾಬಾದ್ ಪ್ರಾಂತ್ಯವನ್ನು ಭಾರತದೊಂದಿಗೆ ವಿಲೀನ ಮಾಡದೆ ಸ್ವತಂತ್ರವಾಗುಳಿಯಲು ನಿಜಾಮ ನಿರ್ಧರಿಸಿದ. ಆಗ ಭಾರತದೊಂದಿಗೆ ಒಂದು ಯಥಾಸ್ಥಿತಿ ಒಪ್ಪಂದಕ್ಕೆ ಸಹಿ ಹಾಕಿದ್ದ. ಅದರ ಪ್ರಕಾರ ಒಂದು ವರ್ಷದ ಕಾಲ ಭಾರತವು ಹೈದ್ರಾಬಾದ್‍ನಲ್ಲಿ ಸೇನೆಯನ್ನು ಜಮಾವಣೆ ಮಾಡದೆ ಯಥಾಸ್ಥಿತಿ ಕಾಪಾಡಬೇಕಿತ್ತು. ಹಾಗಾಗಿ ಸಿಕಂದರಾಬಾದ್‍ನಲ್ಲಿ ಭಾರತೀಯ ಸೇನೆಯನ್ನು ವಾಪಾಸ್ ಕೂಡಾ ಕರೆಸಿಕೊಳ್ಳಲಾಗಿತ್ತು. ಈ ಅವಧಿಯಲ್ಲಿ ನಿಜಾಮನ ‘ರಜಾಕಾರ್’ ಸೈನಿಕರ ಉಪಟಳ ಹೆಚ್ಚಾಗಿತ್ತಲ್ಲದೆ, ನಿಜಾಮ ಪೋರ್ಚುಗೀಸರ ಜತೆ ಒಪ್ಪಂದ ಮಾಡಿಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದರಿಂದ ಭಾರತವು 1948ರ ಸೆಪ್ಟೆಂಬರ್ ನಲ್ಲಿ ‘ಆಪರೇಷನ್ ಪೋಲೊ’ ಹೆಸರಿನ ಸೇನಾ ಕಾರ್ಯಾಚರಣೆ ಮೂಲಕ ಹೈದ್ರಾಬಾದ್ ಅನ್ನು ತನ್ನೊಳಗೆ ವಿಲೀನ ಮಾಡಿಕೊಂಡಿತು. ಅಂತಹ ಯುದ್ಧಮಯ ಸನ್ನಿವೇಶದಲ್ಲೇ ವಿತ್ತ ಸಚಿವ ಹಣವನ್ನು ಪಾಕಿಸ್ತಾನದ ರಾಯಭಾರಿ ಅಕೌಂಟಿಗೆ ವರ್ಗಾಯಿಸಿದ್ದ.

ವಿಲೀನದ ನಂತರ ನಿಜಾಮ ಹಣ ವಾಪಾಸ್ ನೀಡುವಂತೆ ಕೇಳಿದಾಗ ಪಾಕಿಸ್ತಾನ ತಕರಾರು ಮಾಡಿತು. ಹಾಗಾಗಿ ಲಂಡನ್ ಕೋರ್ಟ್‍ನಲ್ಲಿ ದಾವೆ ಹೂಡಿದರು.

ಪಾಕಿಸ್ತಾನದ ವಾದ ಏನಾತ್ತು..?

ಆರಂಭದಲ್ಲಿ ಇದು ಏಳನೇ ನಿಜಾಮ ಮತ್ತು ಪಾಕಿಸ್ತಾನ ನಡುವಿನ ವಿವಾದವಾಗಿತ್ತಷ್ಟೆ. ಆದರೆ 1956ರಲ್ಲಿ ನಿಜಾಮ ಹಣದ ಮೇಲಿನ ದಾವೆ ಹೂಡಿಕೆ ಹಕ್ಕನ್ನು ಭಾರತದ ರಾಷ್ಟ್ರಪತಿಗಳ ಜತೆ ಹಂಚಿಕೊಂಡಾಗ ‘ಹೈದ್ರಾಬಾದ್ ಫಂಡ್’ನ ಮೇಲೆ ಮೂರು ಹಕ್ಕುದಾರರು ಸೃಷ್ಟಿಯಾಗಿದ್ದರು. ಹಣ ತನಗೆ ಸೇರಬೇಕೆಂದು ವಾದಿಸಲು ಪಾಕಿಸ್ತಾನ ಎರಡು ಅಂಶಗಳನ್ನು ಮುಂದಿಡುತ್ತಿತ್ತು. ಮೊದಲನೆಯದು, ಹೈದ್ರಾಬಾದ್ ಪ್ರಾಂತ್ಯವು ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡುವಂತೆ ತನಗೆ ಕೊಟ್ಟಿದ್ದ ಹಣ ಇದು ಎನ್ನುವುದು. ಎರಡನೆಯ ವಾದದಲ್ಲಿ, ಸರ್ಕಾರಿ ಮಾನದಂಡಗಳ ಅನ್ವಯ ವರ್ಗಾವಣೆಯಾದ ಈ ಹಣವನ್ನು ಭಾರತದಿಂದ ‘ಸುರಕ್ಷಿತವಾಗಿಡಲು’ ತನಗೆ ವರ್ಗಾಯಿಸಬೇಕೆಂದು ಹೇಳಿಕೊಂಡಿತ್ತು.

ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ, ದಿವಂಗತ ಮೀರ್ ಒಸ್ಮಾನ್ ಅಲಿ ಖಾನ್‍ನ ಮೊಮ್ಮಕ್ಕಳಾದ ಮುಫ್ಫಖಮ್ ಝಾ ಮತ್ತು ಮುಖ್ಖರ್ರಂ ಝಾ, ವಿದೇಶಾಂಗ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುವ ಪ್ರಯತ್ನಕ್ಕೂ ಮುಂದಾಗಿದ್ದರು. ಆದರೆ 2013ರಲ್ಲಿ ಪಾಕಿಸ್ತಾನ ಇದನ್ನು ಮತ್ತೆ ನ್ಯಾಯಾಲಯದ ಕಟೆಕಟೆ ಹತ್ತಿಸಿತ್ತು. ಈಗ ಅದರ ವಿರುದ್ಧವೇ ತೀರ್ಪು ಹೊರಬಂದಿದೆ.

ಯಾರಿಗೆ ಸೇರಲಿದೆ ಈ ಹಣ..?

ನ್ಯಾಯಾಲಯವು ತನ್ನ ತೀರ್ಪಿನಲ್ಲಿ “ಈ ಹಣದ ಮೇಲೆ ಏಳನೇ ನಿಜಾಮನ ಹಕ್ಕಿದೆ. ಹಾಗಾಗಿ ದಿವಂಗತ ನಿಜಾಮನ ಪರ ವಾದಿಗಳಾದವರಿಗೆ (ಅವರ ಮೊಮ್ಮಕ್ಕಳು ಮತ್ತು ಭಾರತ) ಈ ಹಣ ಸಂದಾಯವಾಗುತ್ತೆ” ಎಂದು ಹೇಳಿದೆ ಮಾತ್ರವಲ್ಲ, “ಅದನ್ನು ಹೇಗೆ ಹಂಚಿಕೊಳ್ಳಬೇಕೆಂಬ ಆಯ್ಕೆಯನ್ನು ಅವರಿಗೇ ಬಿಟ್ಟಿದ್ದೇನೆ. ಆದರೆ ಹಾಗೆ ಹಂಚಿಕೊಳ್ಳುವ ವಿಧಾನ/ನಿಯಮವನ್ನು ನನ್ನ ಮುಂದೆ ಮಂಡಿಸಿ, ಅನುಮೋದನೆ ಪಡೆದುಕೊಳ್ಳಬೇಕು” ಎಂದೂ ಹೇಳಿದೆ.

ನಿಜವಾದ ಪ್ರಶ್ನೆ ಶುರುವಾಗುವುದೇ ಇಲ್ಲಿಂದ. ಯಾಕೆಂದರೆ ನಿಜಾಮನ ಪರವಾಗಿ ಇಬ್ಬರು ಮೊಮ್ಮಕ್ಕಳು ಮಾತ್ರ ದಾವೆಯಲ್ಲಿ ಭಾಗಿಯಾಗಿದ್ದರೂ ಕಾನೂನುಬದ್ಧವಾಗಿ ನಿಜಾಮನ ಪಿತ್ರಾರ್ಜಿತ ಫಲಾನುಭವಿಗಳ ಸಂಖ್ಯೆ 120! ನಿಜಾಮರ ಕುಟುಂಬ ಕಲ್ಯಾಣ ಸಂಘವನ್ನು ಹುಟ್ಟುಹಾಕಿ ಅದರ ಅಧ್ಯಕ್ಷರೂ ಆಗಿರುವ ನಿಜಾಮರ ಮತ್ತೊಬ್ಬ ಮೊಮ್ಮಗ ನಜಾಫ್ ಅಲಿಖಾನ್ ಹೇಳುವಂತೆ, ಬೆರಳೆಣಿಕೆಯ ಮಂದಿ ಬಿಟ್ಟರೆ ಇನ್ನುಳಿದ ನಿಜಾಮನ ವಂಶಸ್ಥರೆಲ್ಲ ಆರ್ಥಿಕ ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ. ಭಾರತ ಸರ್ಕಾರ ಈ ಹಣದ ಮೇಲೆ ಯಾವ ರೀತಿ ಪಾಲನ್ನು ನಿರೀಕ್ಷಿಸಲಿದೆ ಎನ್ನುವುದು ಸದ್ಯಕ್ಕಂತು ನಿಗೂಢವಾಗಿದೆ. ಹಾಗಾಗಿ ಹಂಚಿಕೆಯ ಕಗ್ಗಂಟು ಇನ್ನಷ್ಟು ಮುಂದುವರೆಯಲಿದೆ.

ಅಂದ ಹಾಗೆ, ಸದರಿ ತೀರ್ಪಿನ ಸಾಧಕ ಬಾಧಕಗಳನ್ನು ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಪಾಕಿಸ್ತಾನ ಹೇಳಿದೆ. ಹಾಗೊಮ್ಮೆ ಅದೇನಾದರು ಮೇಲ್ಮನವಿ ಸಲ್ಲಿಸಿದರೆ, ಏಳು ದಶಕಗಳ ಈ ಪ್ರಕರಣ ಇನ್ನೊಂದಷ್ಟು ದಶಕಗಳಿಗೆ ಮುಂದುವರೆದರೆ ಅಚ್ಚರಿಯಿಲ್ಲ. ಒಟ್ಟಿನಲ್ಲಿ, ಈ ತೀರ್ಪಿನಿಂದಾಗಿ ಭಾರತದ ಎದುರು ಪಾಕಿಸ್ತಾನಕ್ಕೆ ದೊಡ್ಡ ಮುಖಭಂಗ ಆಗಿರುವುದು ಮಾತ್ರ ಸತ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...