Homeಮುಖಪುಟನೀತಿ ಆಯೋಗ 'ಅಯೋಗ್ಯ ಸಂಸ್ಥೆ', ಬಿಜೆಪಿಯಿಂದ 'ಬೂಟಾಟಿಕೆ': ಕಾಂಗ್ರೆಸ್ ಟೀಕೆ

ನೀತಿ ಆಯೋಗ ‘ಅಯೋಗ್ಯ ಸಂಸ್ಥೆ’, ಬಿಜೆಪಿಯಿಂದ ‘ಬೂಟಾಟಿಕೆ’: ಕಾಂಗ್ರೆಸ್ ಟೀಕೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆ ಶನಿವಾರ (ಮೇ 24, 2025) ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಲಾಗಿದೆ. ‘ವಿಕಸಿತ ಭಾರತಕ್ಕಾಗಿ ವಿಕಸಿತ ರಾಜ್ಯ @2047’ ಎಂಬ ಘೋಷವಾಕ್ಯದಡಿ ಸಭೆ ನಡೆಯಲಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ನೀತಿ ಆಯೋಗ ಎಂಬುದು ‘ಅಯೋಗ್ಯ ಸಂಸ್ಥೆ’ಯಾಗಿದೆ. ನೀತಿ ಆಯೋಗದ ಸಭೆ ನಡೆಸುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬೂಟಾಟಿಕೆ ಪ್ರದರ್ಶನ ಮಾಡುತ್ತಿದೆ. ಇದು ಜನರ ದಿಕ್ಕು ತಪ್ಪಿಸುವ ಮತ್ತೊಂದು ಕಸರತ್ತು ಎಂದು ಟೀಕಿಸಿದೆ.

ಸಭೆ ಆರಂಭಕ್ಕೂ ಮುನ್ನ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್, “ಇಂದು ನೀತಿ ಆಯೋಗದ ಆಡಳಿತ ಮಂಡಳಿಯು ಪ್ರಧಾನ ಮಂತ್ರಿಯವರ ಅಧ್ಯಕ್ಷತೆಯಲ್ಲಿ ಸಭೆ ಸೇರಲಿದೆ. ಇದು ವಿಕಸಿತ ಭಾರತ ಗುರಿಯ ಪ್ರಗತಿಯನ್ನು ಪರಿಶೀಲಿಸುತ್ತದೆ ಎಂದು ವರದಿಯಾಗಿದೆ. ಅಧಿಕಾರದಲ್ಲಿರುವವರೇ ತಮ್ಮ ದುರುದ್ದೇಶಪೂರಿತ ಮಾತು ಮತ್ತು ಕೃತ್ಯಗಳಿಂದ ಸಾಮಾಜಿಕ ಸಾಮರಸ್ಯದ ಬಂಧಗಳನ್ನು ನಾಶಪಡಿಸಿದರೆ ಅದು ಎಂತಹ ವಿಕಸಿತ ಭಾರತವಾಗಿರುತ್ತದೆ?” ಎಂದು ಪ್ರಶ್ನಿಸಿದ್ದಾರೆ.

“ಅಧಿಕಾರದಲ್ಲಿರುವವರು ತಮ್ಮ ದುಷ್ಟ ಗುರಿಗಳನ್ನು ಪೂರೈಸಲು ಸಂಸತ್ತು, ನ್ಯಾಯಾಂಗ, ವಿಶ್ವವಿದ್ಯಾಲಯಗಳು, ಮಾಧ್ಯಮ ಮತ್ತು ಸಾಂವಿಧಾನಿಕ ಮತ್ತು ಶಾಸನಬದ್ಧ ಸಂಸ್ಥೆಗಳನ್ನು ಬುಡಮೇಲು ಮಾಡಿದರೆ ಅದು ಎಂತಹ ವಿಕಸಿತ ಭಾರತವಾಗಿರುತ್ತದೆ?. ಭಾರತ ಸದಾ ಎತ್ತಿಹಿಡಿದಿರುವ ಮೌಲ್ಯಗಳ ಅತ್ಯಂತ ಬಲವಾಗಿ ಮತ್ತು ವ್ಯವಸ್ಥಿತವಾಗಿ ದಾಳಿ ನಡೆದರೆ ಅದು ಎಂತಹ ವಿಕ್ಷಿಸಿತ ಭಾರತವಾಗಿರುತ್ತದೆ?” ಎಂದು ಕೇಳಿದ್ದಾರೆ.

“ದೇಶದಲ್ಲಿ ಕೆಲವೇ ಕೆಲವು ವ್ಯಕ್ತಿಗಳ ಕೈಯಲ್ಲಿ ಸಂಪತ್ತು ಸಂಗ್ರಹವಾಗುತ್ತಲೇ ಇದೆ. ಆರ್ಥಿಕ ಅಸಮಾನತೆಗಳು ತೀವ್ರಗೊಳ್ಳುತ್ತಿದೆ. ಭಾರತದ ವೈವಿಧ್ಯತೆಗಳನ್ನು ಉದ್ದೇಶಪೂರ್ವಕವಾಗಿ ಅವಮಾನಿಸಲು ಮತ್ತು ಅಳಿಸಿ ಹಾಕಲು ಪ್ರಯತ್ನಿಸಲಾಗುತ್ತಿದೆ” ಎಂದು ಜೈರಾಮ್ ರಮೇಶ್ ಆಕ್ರೋಶ ಹೊರಹಾಕಿದ್ದಾರೆ.

“ಭಾರತದ ಅದ್ಭುತ ವೈವಿಧ್ಯತೆಗಳನ್ನು ಉದ್ದೇಶಪೂರ್ವಕವಾಗಿ ಅವಮಾನಿಸಿ ಅಳಿಸಿಹಾಕಲು ಪ್ರಯತ್ನಿಸಿದರೆ ಅದು ಎಂತಹ ವಿಕಸಿತ ಭಾರತವಾಗಿರುತ್ತದೆ?. ವಾಕ್ ಸ್ವಾತಂತ್ರ್ಯ ಮಾತ್ರವಲ್ಲದೆ, ದೇಶದಲ್ಲಿ ಸ್ವಾತಂತ್ರ್ಯವೂ ಅಪಾಯದಲ್ಲಿದೆ. ಇದು ಯಾವ ರೀತಿಯ ವಿಕಸಿತ ಭಾರತ?” ಎಂದು ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ನೀತಿ ಆಯೋಗದ ಸಭೆಯಲ್ಲಿ ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳು, ಕೇಂದ್ರ ಸರ್ಕಾರದ ಪ್ರಮುಖ ಸಚಿವರು ಮತ್ತು ಉನ್ನತ ಅಧಿಕಾರಿಗಳು ಪಾಲ್ಗೊಳ್ಳಬೇಕಿತ್ತು.

ಆದರೆ, ಕರ್ನಾಟಕದ ಸಿಎಂ ಸಿದ್ದರಾಮಯ್ಯ, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಪುದಚ್ಚೇರಿ ಸಿಎಂ ರಂಗಸಾಮಿ ಸಭೆಗೆ ಹಾಜರಾಗಿಲ್ಲ ಎಂದು ಈ ಸುದ್ದಿ ಬರೆಯು ಹೊತ್ತಿಗೆ ವರದಿಯಾಗಿತ್ತು.

ಹೆದ್ದಾರಿಯ ಮಧ್ಯೆಯೆ ಲೈಂಗಿಕ ಕ್ರಿಯೆ ನಡೆಸಿದ ಬಿಜೆಪಿ ನಾಯಕ; ವಿಡಿಯೊ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...