Homeಮುಖಪುಟನೀತಿ ಆಯೋಗ 'ಅಯೋಗ್ಯ ಸಂಸ್ಥೆ', ಬಿಜೆಪಿಯಿಂದ 'ಬೂಟಾಟಿಕೆ': ಕಾಂಗ್ರೆಸ್ ಟೀಕೆ

ನೀತಿ ಆಯೋಗ ‘ಅಯೋಗ್ಯ ಸಂಸ್ಥೆ’, ಬಿಜೆಪಿಯಿಂದ ‘ಬೂಟಾಟಿಕೆ’: ಕಾಂಗ್ರೆಸ್ ಟೀಕೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆ ಶನಿವಾರ (ಮೇ 24, 2025) ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಲಾಗಿದೆ. ‘ವಿಕಸಿತ ಭಾರತಕ್ಕಾಗಿ ವಿಕಸಿತ ರಾಜ್ಯ @2047’ ಎಂಬ ಘೋಷವಾಕ್ಯದಡಿ ಸಭೆ ನಡೆಯಲಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ನೀತಿ ಆಯೋಗ ಎಂಬುದು ‘ಅಯೋಗ್ಯ ಸಂಸ್ಥೆ’ಯಾಗಿದೆ. ನೀತಿ ಆಯೋಗದ ಸಭೆ ನಡೆಸುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬೂಟಾಟಿಕೆ ಪ್ರದರ್ಶನ ಮಾಡುತ್ತಿದೆ. ಇದು ಜನರ ದಿಕ್ಕು ತಪ್ಪಿಸುವ ಮತ್ತೊಂದು ಕಸರತ್ತು ಎಂದು ಟೀಕಿಸಿದೆ.

ಸಭೆ ಆರಂಭಕ್ಕೂ ಮುನ್ನ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್, “ಇಂದು ನೀತಿ ಆಯೋಗದ ಆಡಳಿತ ಮಂಡಳಿಯು ಪ್ರಧಾನ ಮಂತ್ರಿಯವರ ಅಧ್ಯಕ್ಷತೆಯಲ್ಲಿ ಸಭೆ ಸೇರಲಿದೆ. ಇದು ವಿಕಸಿತ ಭಾರತ ಗುರಿಯ ಪ್ರಗತಿಯನ್ನು ಪರಿಶೀಲಿಸುತ್ತದೆ ಎಂದು ವರದಿಯಾಗಿದೆ. ಅಧಿಕಾರದಲ್ಲಿರುವವರೇ ತಮ್ಮ ದುರುದ್ದೇಶಪೂರಿತ ಮಾತು ಮತ್ತು ಕೃತ್ಯಗಳಿಂದ ಸಾಮಾಜಿಕ ಸಾಮರಸ್ಯದ ಬಂಧಗಳನ್ನು ನಾಶಪಡಿಸಿದರೆ ಅದು ಎಂತಹ ವಿಕಸಿತ ಭಾರತವಾಗಿರುತ್ತದೆ?” ಎಂದು ಪ್ರಶ್ನಿಸಿದ್ದಾರೆ.

“ಅಧಿಕಾರದಲ್ಲಿರುವವರು ತಮ್ಮ ದುಷ್ಟ ಗುರಿಗಳನ್ನು ಪೂರೈಸಲು ಸಂಸತ್ತು, ನ್ಯಾಯಾಂಗ, ವಿಶ್ವವಿದ್ಯಾಲಯಗಳು, ಮಾಧ್ಯಮ ಮತ್ತು ಸಾಂವಿಧಾನಿಕ ಮತ್ತು ಶಾಸನಬದ್ಧ ಸಂಸ್ಥೆಗಳನ್ನು ಬುಡಮೇಲು ಮಾಡಿದರೆ ಅದು ಎಂತಹ ವಿಕಸಿತ ಭಾರತವಾಗಿರುತ್ತದೆ?. ಭಾರತ ಸದಾ ಎತ್ತಿಹಿಡಿದಿರುವ ಮೌಲ್ಯಗಳ ಅತ್ಯಂತ ಬಲವಾಗಿ ಮತ್ತು ವ್ಯವಸ್ಥಿತವಾಗಿ ದಾಳಿ ನಡೆದರೆ ಅದು ಎಂತಹ ವಿಕ್ಷಿಸಿತ ಭಾರತವಾಗಿರುತ್ತದೆ?” ಎಂದು ಕೇಳಿದ್ದಾರೆ.

“ದೇಶದಲ್ಲಿ ಕೆಲವೇ ಕೆಲವು ವ್ಯಕ್ತಿಗಳ ಕೈಯಲ್ಲಿ ಸಂಪತ್ತು ಸಂಗ್ರಹವಾಗುತ್ತಲೇ ಇದೆ. ಆರ್ಥಿಕ ಅಸಮಾನತೆಗಳು ತೀವ್ರಗೊಳ್ಳುತ್ತಿದೆ. ಭಾರತದ ವೈವಿಧ್ಯತೆಗಳನ್ನು ಉದ್ದೇಶಪೂರ್ವಕವಾಗಿ ಅವಮಾನಿಸಲು ಮತ್ತು ಅಳಿಸಿ ಹಾಕಲು ಪ್ರಯತ್ನಿಸಲಾಗುತ್ತಿದೆ” ಎಂದು ಜೈರಾಮ್ ರಮೇಶ್ ಆಕ್ರೋಶ ಹೊರಹಾಕಿದ್ದಾರೆ.

“ಭಾರತದ ಅದ್ಭುತ ವೈವಿಧ್ಯತೆಗಳನ್ನು ಉದ್ದೇಶಪೂರ್ವಕವಾಗಿ ಅವಮಾನಿಸಿ ಅಳಿಸಿಹಾಕಲು ಪ್ರಯತ್ನಿಸಿದರೆ ಅದು ಎಂತಹ ವಿಕಸಿತ ಭಾರತವಾಗಿರುತ್ತದೆ?. ವಾಕ್ ಸ್ವಾತಂತ್ರ್ಯ ಮಾತ್ರವಲ್ಲದೆ, ದೇಶದಲ್ಲಿ ಸ್ವಾತಂತ್ರ್ಯವೂ ಅಪಾಯದಲ್ಲಿದೆ. ಇದು ಯಾವ ರೀತಿಯ ವಿಕಸಿತ ಭಾರತ?” ಎಂದು ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ನೀತಿ ಆಯೋಗದ ಸಭೆಯಲ್ಲಿ ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳು, ಕೇಂದ್ರ ಸರ್ಕಾರದ ಪ್ರಮುಖ ಸಚಿವರು ಮತ್ತು ಉನ್ನತ ಅಧಿಕಾರಿಗಳು ಪಾಲ್ಗೊಳ್ಳಬೇಕಿತ್ತು.

ಆದರೆ, ಕರ್ನಾಟಕದ ಸಿಎಂ ಸಿದ್ದರಾಮಯ್ಯ, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಪುದಚ್ಚೇರಿ ಸಿಎಂ ರಂಗಸಾಮಿ ಸಭೆಗೆ ಹಾಜರಾಗಿಲ್ಲ ಎಂದು ಈ ಸುದ್ದಿ ಬರೆಯು ಹೊತ್ತಿಗೆ ವರದಿಯಾಗಿತ್ತು.

ಹೆದ್ದಾರಿಯ ಮಧ್ಯೆಯೆ ಲೈಂಗಿಕ ಕ್ರಿಯೆ ನಡೆಸಿದ ಬಿಜೆಪಿ ನಾಯಕ; ವಿಡಿಯೊ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...